Homeಮುಖಪುಟಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ಪಿತೂರಿ ನಡೆದಿರಬಹುದು ಎಂದ ಸುಪ್ರೀಂ

ಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ಪಿತೂರಿ ನಡೆದಿರಬಹುದು ಎಂದ ಸುಪ್ರೀಂ

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಪಿತೂರಿ ನಡೆದಿದ್ದ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಹೇಳಿದ್ದು, ಲೈಂಗಿಕ ಕಿರುಕುಳದ ಆರೋಪದ ನಂತರ ಆರಂಭಿಸಲಾಗಿದ್ದ ತನಿಖೆಯನ್ನು ಮುಕ್ತಾಯಗೊಳಿಸಿದೆ.

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕುರಿತ ಅವರ ಅಭಿಪ್ರಾಯಗಳು ಮತ್ತು ಸುಪ್ರೀಂ ಕೋರ್ಟ್ ನೋಂದಾವಣೆಯನ್ನು ಸುವ್ಯವಸ್ಥಿತಗೊಳಿಸುವ ಅವರ ಪ್ರಯತ್ನಗಳು ಸೇರಿದಂತೆ ನ್ಯಾಯಮೂರ್ತಿ ಗೊಗೊಯ್ ಅವರ ಕಠಿಣ ನಿರ್ಧಾರಗಳ ಕಾರಣದಿಂದ ಇಂತಹ ಪಿತೂರಿ ಸಂಭವಿಸಿರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಾಜಿ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್ ಅವರ ವರದಿಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ವಕೀಲ ಉತ್ಸವ್ ಬೈನ್ಸ್ ಅವರು 2019 ರಲ್ಲಿ ಹೊರಬಂದ ಲೈಂಗಿಕ ಕಿರುಕುಳ ಆರೋಪದ ಹಿಂದೆ ಪಿತೂರಿಯ ಸಾಧ್ಯತೆಯನ್ನು ಎತ್ತಿದ ನಂತರ ಮಾಜಿ ನ್ಯಾಯಮೂರ್ತಿ ಪಟ್ನಾಯಕ್ ಅವರಿಗೆ ಈ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.

“ಅಸಮಾಧಾನಗೊಂಡ ನ್ಯಾಯಾಲಯದ ಅಧಿಕಾರಿಗಳೊಂದಿಗೆ ಕೆಲಸ ಮಾಡುವ ಮಧ್ಯವರ್ತಿಗಳು ಮತ್ತು ಫಿಕ್ಸರ್‌ಗಳು ಗೊಗೊಯ್ ವಿರುದ್ಧ ಪಿತೂರಿ ಮಾಡಿದ್ದರೆ’ ಎಂಬುದರ ಕುರಿತು ಪಟ್ನಾಯಕ್ ತನಿಖೆ ಮಾಡಿ ಸಲ್ಲಿಸಿದ ವರದಿಯ ಆಧಾರದಲ್ಲಿ ಸುಪ್ರೀಂಕೋರ್ಟ್ ಇಂದಿನ ತೀರ್ಪು ನೀಡಿದೆ.

“ನ್ಯಾಯಮೂರ್ತಿ ಪಟ್ನಾಯಕ್ ವರದಿಯು ಮಾಜಿ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಪಿತೂರಿ ಅಸ್ತಿತ್ವದಲ್ಲಿತ್ತು ಎಂದು ಒಪ್ಪಿಕೊಂಡಿದೆ ಮತ್ತು ಅದನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಈ ಸಮಿತಿಯು ಎಲೆಕ್ಟ್ರಾನಿಕ್ ದಾಖಲೆಗಳನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ಕೋರ್ಟ್ ಹೇಳಿದೆ.

“ನೋಂದಾವಣೆ (ರಿಜಿಸ್ಟ್ರಿ)ಯಲ್ಲಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕೆಲವು ಕಠಿಣ ಆಡಳಿತಾತ್ಮಕ ನಿರ್ಧಾರಗಳನ್ನು ಗೊಗೊಯ್ ತೆಗೆದುಕೊಂಡಿದ್ದರು’ ಎಂದು ಸುಪ್ರೀಂ ಹೇಳಿದೆ.
ಎನ್‌ಆರ್‌ಸಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಮೂರ್ತಿ ಗೊಗೊಯ್ ಗಂಭೀರ ದೃಷ್ಟಿಕೋನವನ್ನು ತೆಗೆದುಕೊಂಡಿದ್ದಾರೆ ಮತ್ತು “ಕೆಲವರು ಈ ನಿರ್ಧಾರದಿಂದ ಅಸಮಾಧಾನ ಹೊಂದಿದ್ದಾರೆಂದು ನಂಬಲು ಬಲವಾದ ಕಾರಣಗಳಿವೆ” ಎಂದು ಗುಪ್ತಚರ ಬ್ಯೂರೋ ನಿರ್ದೇಶಕರು ವರದಿಯಲ್ಲಿ ಹೇಳಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣವನ್ನು ಮುಕ್ತಾಯಗೊಳಿಸಿದ ನ್ಯಾಯಾಲಯವು ಹೀಗೆ ಹೇಳಿದೆ: “ಇದರಿಂದ ಯಾವುದೇ ನಿಜವಾದ ಉದ್ದೇಶವನ್ನು ಪೂರೈಸಲಾಗುವುದಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. ವಾದಗಳನ್ನು ಇಲ್ಲಿಗೆ ನಿಲ್ಲಿಸಲಾಗಿದೆ ಮತ್ತು ಸು-ಮೊಟೊ ಅನ್ನು ವಿಲೇವಾರಿ ಮಾಡಲಾಗಿದೆ. ವರದಿಯನ್ನು ಮೊಹರು ಮಾಡಿ ಕವರ್‌ನಲ್ಲಿ ಇಡಲಾಗಿದೆ.”

ಮುಖ್ಯ ನ್ಯಾಯಾಧೀಶರ ವಿರುದ್ಧದ ಆರೋಪಗಳನ್ನು ವಿಚಾರಿಸಲು ಸಮಿತಿಯನ್ನು ರಚಿಸಲಾಗಿರಲಿಲ್ಲ. ಆದರೆ ನ್ಯಾಯಾಧೀಶರನ್ನು ಸಿಕ್ಕಿಸುವ ದೊಡ್ಡ ಪಿತೂರಿಯ ಬಗ್ಗೆ ಮಾತ್ರ ತನಿಖೆ ನಡೆಸಲು ಸೂಚಿಸಲಾಗಿತ್ತು ಎಂದು ನ್ಯಾಯಾಧೀಶರು ಸ್ಪಷ್ಟಪಡಿಸಿದರು.

ದಾಖಲೆಗಳಿಗೆ ಸೀಮಿತ ಲಭ್ಯತೆ ಮತ್ತು ಸಾಕ್ಷ್ಯಗಳು ಮತ್ತು ವಸ್ತುಗಳ ಆಧಾರದ ಮೇಲೆ, ಆರೋಪಗಳಿಗೆ ದೃಢೀಕರಣ ಕಂಡುಹಿಡಿಯಲು ಸಹ ಸಾಧ್ಯವಾಗಲಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ಆದಾಗ್ಯೂ, ಸುಪ್ರೀಂ ಕೋರ್ಟಿನ 2019 ರ ಆದೇಶವನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಂಗದ ಕುರಿತ ಮುಖ್ಯ ನ್ಯಾಯಾಧೀಶರ ತೀರ್ಪುಗಳು ಅವರ ವಿರುದ್ಧದ ಪಿತೂರಿಯನ್ನು ನಿಜವಾಗಿಯೂ ಪ್ರಚೋದಿಸಿದೆಯೇ ಎಂದು ನಿರೂಪಿಸಲು ಸಾಧ್ಯವಾಗಿಲ್ಲ ಎಂದು ವರದಿ ಹೇಳುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ಹಿನ್ನೆಲೆ

ಏಪ್ರಿಲ್ 19, 2019 ರಂದು ಕಿರಿಯ ನ್ಯಾಯಾಲಯದ ಮಾಜಿ ಅಧಿಕಾರಿಣಿಯೊಬ್ಬರು ಭಾರತದ (ಅಂದಿನ) ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಅವರು ತಮ್ಮ ಅಪಾದನೆಗಳನ್ನು ದೃಢಿಕರಿಸುವ ದಾಖಲೆಗಳನ್ನು ಸಲ್ಲಿಸಿ, ಏ. 22 ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು.


ಇದನ್ನೂ ಓದಿ; ಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...