Homeಮುಖಪುಟಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

ಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

- Advertisement -
- Advertisement -

ಸಾಕೇತ್ ಗೋಖಲೆ ಎಂಬ ಮಾಜಿ ಪತ್ರಕರ್ತ ನಿನ್ನೆಯೇ ತನ್ನ ಫೇಸ್‌ಬುಕ್‌ನಲ್ಲಿ ಇಂದು ಮೋದಿಯವರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಲಿದ್ದೇನೆಂದು ಹೇಳಿದ್ದರು. ಅದರಲ್ಲಿ ಏನಿರುತ್ತದೆಂಬುದರ ಬಗ್ಗೆ ಕುತೂಹಲ ಮೂಡಿತ್ತು. ಇಂದು ಅದನ್ನು ದಾಖಲಿಸಿ ವಿವರಗಳನ್ನು ಹಂಚಿಕೊಂಡಿದ್ದಾರೆ. ವಿವರ ಇಂತಿದೆ.

ನಾನು ಕೊನೆಗೂ ಸುಪ್ರೀಮ್ ಕೋರ್ಟಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪಿಐಎಲ್ ದಾಖಲಿಸುವಲ್ಲಿ ಯಶಸ್ವಿಯಾದೆ. ಇದು ಸಾಧ್ಯವಾಗಿದ್ದು ಎರಡು ತಿಂಗಳ ಕಠಿಣ ತನಿಖೆ ಮತ್ತು ಆಳವಾಗಿ ಅಗೆಯುವಿಕೆಯ ನಂತರ.

ಇದು ಪ್ರಧಾನಿ ಮೋದಿಯವರ ಅಫಿಡವಿಟ್‌ಗೆ ಸಂಬಂಧಿಸಿದ್ದು. ಅವರ ಅಫಿಡವಿಟ್ ಅತ್ಯಂತ ಗಂಭೀರವಾದ ಲೋಪಗಳಿಂದ ಕೂಡಿದೆ. 2012ರ ನಂತರ ಅವರ ಪ್ರಕಟಣೆಯಿಂದ ಕೋಟ್ಯಾಂತರ ರೂ. ಬೆಲೆಯ ಭೂಮಿಯು ಕಾಣೆಯಾಗಿದೆ.

ಮೇಲ್ನೋಟಕ್ಕೆ ಕಾಣುವುದೇನೆಂದರೆ, ಇದೊಂದು ದೊಡ್ಡ ಭೂಹಗರಣ ಆಗಿರುವ ಸಾಧ್ಯತೆ ಇದೆ, ಅದೂ ಚೌಕಿದಾರನೇ ಎಲ್ಲವನ್ನೂ ನೋಡಿಕೊಳ್ಳುತ್ತಿರುವಾಗ.

ಇದರ ಕೆಲವು ಸಂಕ್ಷಿಪ್ತ ಸತ್ಯಾಸತ್ಯತೆಗಳು ಇಂತಿವೆ.

2002ರಲ್ಲಿ ಗುಜರಾತಿನ ಆಗಿನ ಮುಖ್ಯಮಂತ್ರಿಯಾದ ನರೇಂದ್ರ ಮೋದಿ ಅವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಅಂದರೆ, 1.3 ಲಕ್ಷ ರೂಪಾಯಿಗೆ ಒಂದು ಪ್ಲಾಟ್ ನೀಡಲಾಗಿತ್ತು; ಪ್ಲಾಟ್ ನಂಬರ್ 411, ಸೆಕ್ಟರ್ 1, ಗಾಂಧಿನಗರ. ಆ ಪ್ಲಾಟ್‌ನ ಅಳತೆ 330 ಚದರ ಮೀಟರ್‌ಗಳು.

2007ರಲ್ಲಿ ತಮ್ಮ ಅಫಿಡವಿಟ್‌ನಲ್ಲಿ ನರೇಂದ್ರ ಮೋದಿಯವರು ಇದನ್ನು ಪ್ರಕಟಿಸಿದರು.

ಆದರೆ 2012ರ ನಂತರ ಏನಾಯಿತೋ, ಆ ಪ್ಲಾಟ್ ಅನ್ನು ತಮ್ಮ ಅಫಿಡವಿಟ್‌ನಲ್ಲಿ ಹೆಸರಿಸುವುದನ್ನು ಕೈಬಿಟ್ಟರು. ಅದರ ಬದಲಿಗೆ, 401/ಏ, ಸೆಕ್ಟರ್ 1, ಗಾಂಧಿನಗರದ ಪ್ಲಾಟ್‌ನ ಕಾಲು ಭಾಗದಷ್ಟು ತಾವು ಹೊಂದಿರುವುದಾಗಿ ಘೋಷಿಸಿದರು.

ಪ್ರಾಸಂಗಿಕವಾಗಿ ಹೇಳಬೇಕಾದ್ದೆಂದರೆ, ಹಣಕಾಸು ಸಚಿವ ಅರುಣ್ ಜೇಟ್ಲಿ ಕೂಡ ಅದೇ ಪ್ಲಾಟ್ 401/ಏ ನಲ್ಲಿ ಕಾಲು ಭಾಗವನ್ನು ಹೊಂದಿದ್ದಾರೆ.

ಕುತೂಹಲಕಾರಿಯಾದ ಸಂಗತಿಯೆಂದರೆ, ಭೂದಾಖಲೆಗಳಲ್ಲಿ 401/ಏ ಪ್ಲಾಟ್ ಅಸ್ತಿತ್ವದಲ್ಲಿಯೇ ಇಲ್ಲ. ದಾಖಲೆಗಳ ಪ್ರಕಾರ ಪ್ಲಾಟ್ ನಂಬರ್ 411 ಸಂಪೂರ್ಣವಾಗಿ ಪ್ರಧಾನಿ ಮೋದಿಯವರ ಆಸ್ತಿ ಎಂದು ಹೇಳುತ್ತವೆ.

ಇನ್ನೂ ಅತ್ಯಂತ ಕುತೂಹಲಕಾರಿಯಾದ ಸಂಗತಿಯೆಂದರೆ, ಆ ಸ್ಥಳಕ್ಕೆ ಭೇಟಿ ನೀಡಿದಾಗ ಕಾಣುವುದೇನೆಂದರೆ, ಆ ಸ್ಥಳದ ಅಕ್ಕಪಕ್ಕದ 8 ಪ್ಲಾಟ್‌ಗಳನ್ನು ಮತ್ತು ಒಂದು ಸರಕಾರಿ ಮೈದಾನವನ್ನು ಸೇರಿಸಿ, ಒಂದು ಬೌಂಡರಿ ಗೋಡೆಯನ್ನು ನಿರ್ಮಿಸಿ, ಪ್ಲಾಟ್ 411 ಎಂಬ ಒಂದೇ ಕಂಪೌಂಡ್ ಕಾಣಸಿಗುತ್ತದೆ.

ಮಾನ್ಯ ಸುಪ್ರೀಮ್ ಕೋರ್ಟಿಗೆ ನನ್ನ ವಿನಂತಿಯೇನೆಂದರೆ, ಸಂಶಯಕ್ಕೀಡು ಮಾಡುತ್ತಿರುವ ಒಂದು ಸಲ ಕಾಣಿಸಿಕೊಳ್ಳುವ ಇನ್ನೊಂದು ಸಲ ಕಣ್ಮರೆಯಾಗುವ ಈ ಆಸ್ತಿಯ ಬಗ್ಗೆ ಎಸ್‌ಐಟಿ ತನಿಖೆ ಆಗಬೇಕು ಮತ್ತು ಇದೊಂದು ಸಂಘಟಿತ ಭೂಹಗರಣವಾಗಿದೆಯೋ ಇಲ್ಲವೋ ಎನ್ನುವುದನ್ನು ತನಿಖೆ ಮಾಡಬೇಕು.

ಈ ರೀತಿ ವಶಪಡಿಸಿಕೊಳ್ಳಲಾದ ಪ್ಲಾಟ್‌ಗಳ ಒಟ್ಟಾರೆ ಮೊತ್ತ 15 ಕೋಟಿಗಳಿಗಿಂತಲೂ ಹೆಚ್ಚು.

ಲೋಕ್ ಪ್ರಹಾರಿ ವರ್ಸಸ್ ಯುನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಮಾನ್ಯ ಸುಪ್ರೀಮ್ ಕೋರ್ಟು ಆರ್ಥಿಕ ಆಸ್ತಿಯನ್ನು ಬಚ್ಚಿಡುವುದು ಒಬ್ಬ ಅಭ್ಯರ್ಥಿಯನ್ನು ಅನರ್ಹಗೊಳಿಸಲು ಖಂಡಿತವಾಗಿಯೂ ಪರಿಗಣಿಸಬಹುದು ಎಂದು ಹೇಳಿದೆ.

ಪ್ರಧಾನ ಮಂತ್ರಿ ಮೋದಿ 411 ಪ್ಲಾಟ್‌ನ ಒಡೆತನವನ್ನು 7 ವರ್ಷಗಳ ಕಾಲ ಬಚ್ಚಿಟ್ಟಿದ್ದೇಕೆ? 401/ಏ ಪ್ಲಾಟ್‌ನ ಭೂದಾಖಲೆಗಳು ಎಲ್ಲಿವೆ? ಹಾಗೂ ಮೋದಿ ಮತ್ತು ಜೇಟ್ಲಿ ಅವರೊಂದಿಗೆ ಇನ್ಯಾರು ಆ ಪ್ಲಾಟ್‌ನ ಒಡೆತನದಲ್ಲಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಆಸ್ತಿಯಲ್ಲಿ ಮತ್ತು ಗ್ರೌಂಡಿನಲ್ಲಿ ಪರಿಸ್ಥಿತಿಯ ನಡುವೆ ಇಂತಹ ವ್ಯತ್ಯಾಸ ಏಕೆ ಕಾಣುತ್ತಿದೆ?

ಇದಿಷ್ಟು ಕೇಸಿನ ಸಾರಾಂಶ. ಸುಪ್ರೀಂಕೋರ್ಟು ಈ ಕುರಿತು ಏನು ಹೇಳಲಿದೆ? ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸುವಾಗ ಮೋದಿಯವರು ಯಾವ ಆಸ್ತಿಯ ಕುರಿತು ಅಫಿಡವಿಟ್ ಸಲ್ಲಿಸುತ್ತಾರೆ? ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...