ಮಂಡ್ಯ ತಾಲ್ಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ‘ತನ್ನ ಅಂತ್ಯಕ್ರಿಯೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ನಟ ಯಶ್ ಬರಬೇಕು’ ಎಂದು ಆತ್ಮಹತ್ಯೆ ನೋಟ್ ಬರೆದಿಟ್ಟು ಸಾವನಪ್ಪಿದ್ದ 25 ವರ್ಷದ ಯುವಕನ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.
ಯಾರ ಅಭಿಮಾನಿಯೇ ಆಗಲಿ, ಯಾವ ಧರ್ಮ – ಸಿದ್ಧಾಂತವೇ ಇರಲಿ, ಆತ್ಮಹತ್ಯೆ ಮಾಡಿಕೊಳ್ಳುವಂತಹ ದುಡುಕಿನ ನಿರ್ಧಾರ ಬೇಡ. ಪ್ರತೀ ಜೀವವೂ ಅಮೂಲ್ಯ. ಕತ್ತಲು ಕಳೆದ ನಂತರ ಬೆಳಕು ಬಂದಂತೆ, ಕಷ್ಟಗಳು ದೂರಾಗಲೇಬೇಕು. ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ ಎಂದು ನಂತರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ಆತ್ನಹತ್ಯೆಗೆ ಶರಣಾದ ಕೃಷ್ಣ ಎಂಬ ಯುವಕನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದೆ.
ಆತ್ಮಹತ್ಯೆಗೂ ಮುನ್ನ ಹುಡುಗ ತನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತ ಬರೆದಿಟ್ಟಿದ್ದ, ಆ ಕಾರಣ ಅತ್ಯಂತ ದುಃಖದಿಂದ ಆತನ ಕೊನೆ ಆಸೆ ಈಡೇರಿಸಿದ್ದೇನೆ. 1/5 pic.twitter.com/5CkznIfy27— Siddaramaiah (@siddaramaiah) February 18, 2021
ಈ ಕುರಿತು ಸರಣಿ ಟ್ವೀಟ್ಗಳನ್ನು ಮಾಡಿರುವ ಅವರು, ‘ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ಆತ್ನಹತ್ಯೆಗೆ ಶರಣಾದ ಕೃಷ್ಣ ಎಂಬ ಯುವಕನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದೆ. ಆತ್ಮಹತ್ಯೆಗೂ ಮುನ್ನ ಹುಡುಗ ತನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತ ಬರೆದಿಟ್ಟಿದ್ದ, ಆ ಕಾರಣ ಅತ್ಯಂತ ದುಃಖದಿಂದ ಆತನ ಕೊನೆ ಆಸೆ ಈಡೇರಿಸಿದ್ದೇನೆ’ ಎಂದು ತಿಳಿಸಿದ್ದಾರೆ.
ಸಮಸ್ಯೆಗಳಿಗೆ ಸಾವು ಎಂದಿಗೂ ಪರಿಹಾರವಲ್ಲ. ಸಮಸ್ಯೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಎಂದರೆ ತಮ್ಮ ಸಮಸ್ಯೆಯನ್ನು ಬೇರೊಬ್ಬರ ಹೆಗಲಿಗೆ ವರ್ಗಾಯಿಸಿದಂತೆ. ಸಾವಿನ ನಂತರವೂ ಸಮಸ್ಯೆ ಹಾಗೆಯೇ ಉಳಿಯುತ್ತೆ, ಆದರೆ ಅಮೂಲ್ಯ ಬದುಕೊಂದು ನಷ್ಟವಾಗುತ್ತೆ. ಕಷ್ಟಗಳು ಬಂದಾಗ ಎದುರಿಸುವ ಗಟ್ಟಿತನ ಪ್ರತಿಯೊಬ್ಬರಲ್ಲೂ ಬರಬೇಕು. ನೆನಪಿರಲಿ, ಸಮಸ್ಯೆಗಳು ತಾತ್ಕಾಲಿಕ, ಆದರೆ ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು ಶಾಶ್ವತ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಯಾರ ಅಭಿಮಾನಿಯೇ ಆಗಲಿ, ಯಾವ ಧರ್ಮ – ಸಿದ್ಧಾಂತವೇ ಇರಲಿ, ಆತ್ಮಹತ್ಯೆ ಮಾಡಿಕೊಳ್ಳುವಂತಹ ದುಡುಕಿನ ನಿರ್ಧಾರ ಬೇಡ. ಪ್ರತೀ ಜೀವವೂ ಅಮೂಲ್ಯ. ಕತ್ತಲು ಕಳೆದ ನಂತರ ಬೆಳಕು ಬಂದಂತೆ, ಕಷ್ಟಗಳು ದೂರಾಗಲೇಬೇಕು.
ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ. 5/5
— Siddaramaiah (@siddaramaiah) February 18, 2021
ಸಮಸ್ಯೆಯನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಂಡಾಗ ಇವನು ನನ್ನ ಅಭಿಮಾನಿ ಎಂದು ಹೇಳಲು ನಮಗೂ ಹೆಮ್ಮೆಯಾಗುತ್ತೆ. ಅಭಿಮಾನಿಯೊಬ್ಬನ ಸಾವು ಎಷ್ಟು ನೋವು ಕೊಡುತ್ತದೋ, ಆತ್ಮಹತ್ಯೆ ಅದರ ಎರಡು ಪಟ್ಟು ಕಾಡುತ್ತದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ.
ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ ಎಂಬಾತ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದನು. ತನ್ನ ಸಾವಿಗೂ ಮುನ್ನ ಆತ್ಮಹತ್ಯೆ ನೋಟ್ ಬರೆದಿಟ್ಟಿದ್ದು, ನನ್ನನ್ನ ಎಲ್ಲರೂ ದಯವಿಟ್ಟು ಕ್ಷಮಿಸಿ. ನಿಮಗೆಲ್ಲಾ ತುಂಬಾ ನೋವು ಕೊಟ್ಟಿದ್ದೇನೆ. ನನ್ನಿಂದ ಅಮ್ಮ-ಅಪ್ಪ-ಸ್ನೇಹಿತರಿರೊಂದಿಗೆ ಉತ್ತಮನಾಗಿ ಇರಲು ಸಾಧ್ಯವಾಗಲಿಲ್ಲ. ತನ್ನ ಪ್ರೇಯಸಿಯೊಂದಿಗೂ ಬದುಕಲು ಆಗಲಿಲ್ಲ. ಹಾಗಾಗಿ ಎಲ್ಲರಿಂದಲೂ ದೂವಾಗುತ್ತಿದ್ದೇನೆ ಎಂದು ಬರೆದಿದ್ದ.
ಅಲ್ಲದೆ, ತನ್ನ ಕೊನೆಯ ಅಸೆಯನ್ನೂ ಬರೆದಿರುವ ಕೃಷ್ಣ, ನಾನು ಸಿದ್ದರಾಮಯ್ಯ ಹಾಗೂ ಯಶ್ ಅವರ ಅಪ್ಪಟ ಅಭಿಮಾನಿ. ನನ್ನ ಅಂತ್ಯಕ್ರಿಯೆಗೆ ಅವರಿಬ್ಬರೂ ಬರಬೇಕು. ದಯವಿಟ್ಟು ನನ್ನ ಕೊನೆ ಆಸೆ ಈಡೇರಿಸಿ ಎಂದು ಬರೆದಿದ್ದನು.
ಇದನ್ನೂ ಓದಿ: ಧರ್ಮೇಗೌಡರ ಸಾವಿನಿಂದ ತೆರವಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ನಿಗದಿ


