Homeಮುಖಪುಟಪಂಜಾಬ್ ಚುನಾವಣೆ: ನನ್ನ ಕುಟುಂಬದವರ ಮತವೇ ನನಗೆ ಬಿದ್ದಿಲ್ಲ ಎಂದ ಬಿಜೆಪಿ ಅಭ್ಯರ್ಥಿ!

ಪಂಜಾಬ್ ಚುನಾವಣೆ: ನನ್ನ ಕುಟುಂಬದವರ ಮತವೇ ನನಗೆ ಬಿದ್ದಿಲ್ಲ ಎಂದ ಬಿಜೆಪಿ ಅಭ್ಯರ್ಥಿ!

"ಇದು ಕೃಷಿ ಕಾನೂನುಗಳ ಪರಿಣಾಮ. ಹಾಗಾಗಿ ಯಾವೊಬ್ಬ ವ್ಯಕ್ತಿಯೂ ಬಿಜೆಪಿಯ ಪರವಾಗಿದ್ದರೆ, ಆ ವ್ಯಕ್ತಿಯ ಕುಟುಂಬಸ್ಥರೇ ಅವರನ್ನು ನಿರಾಕರಿಸುತ್ತಾರೆ ಎಂಬುದಕ್ಕೆ ಇದು ಉದಾಹರಣೆ" ಎಂದು ಕೆಲವರು ಹೇಳಿದ್ದಾರೆ.

- Advertisement -
- Advertisement -

“ನನ್ನ ಕುಟುಂಬದಲ್ಲಿ 15-20 ಜನರಿದ್ದಾರೆ. ಆದರೆ ಚುನಾವಣೆಯಲ್ಲಿ ನನಗೆ ಕೇವಲ 9 ಮತಗಳು ಮಾತ್ರ ಸಿಕ್ಕಿವೆ”- ಇದು ಪಂಜಾಬ್ ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿಯ ಅಭ್ಯರ್ಥಿ ಕಿರಣ್ ಕೌರ್ ಅವರ ಅಳಲು.

ಪಂಜಾಬ್‌ನಲ್ಲಿ ಫೆಬ್ರವರಿ 14 ರಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾನ ನಡೆದಿತ್ತು. ಇದರ ಫಲಿತಾಂಶ ನಿನ್ನೆ (ಫೆ. 17) ಹೊರಬಿದ್ದಿತ್ತು. ಈ ಫಲಿತಾಂಶದಿಂದ ಗುರುದಾಸ್‌ಪುರ ಮುನ್ಸಿಪಲ್ ಕೌನ್ಸಿಲ್‌ನ 12 ನೇ ವಾರ್ಡ್‌ನ ಬಿಜೆಪಿ ಕಿರಣ್ ಕೌರ್ ಆಘಾತಕ್ಕೊಳಗಾಗಿದ್ದು, ಚುನಾವಣೆಯ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

“ನನ್ನ ಕುಟುಂಬದ 15-20 ಜನರು ನನಗೆ ಮತ ಚಲಾಯಿಸಿದ್ದಾರೆ. ಆದರೆ ನನಗೆ ಕೇವಲ 9 ಮತಗಳು ಮಾತ್ರ ಬಿದ್ದಿವೆ. ಮತ ಚಲಾವಣೆಯ ನಂತರ ಕಾಂಗ್ರೆಸ್ ಕಾರ್ಯಕರ್ತರು ಇವಿಎಂ ಅನ್ನು ಬದಲಾಯಿಸಿದ್ದಾರೆ. ನನ್ನ ಏರಿಯಾದ ಜನರೆಲ್ಲಾ ನನಗೆ ಭರವಸೆ ನೀಡಿದ್ದರು. ನಾನು ಚುನಾವಣೆಯಲ್ಲಿ ಗೆದ್ದಿದ್ದೇನೆ. ಆದರೆ ಅವರ ಮತಗಳು ನನಗೆ ಬಿದ್ದಿಲ್ಲ. ಕಾಂಗ್ರೆಸ್ ನನಗೆ ದ್ರೋಹ ಬಗೆದಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ಈ ಕುರಿತು ಕಿರಣ್ ಕೌರ್ ಮಾತನಾಡಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ, “ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಜಾಣತನದಿಂದ ಕೆಲಸ ಮಾಡಿದೆ. ಇತರೆ ಅಭ್ಯರ್ಥಿಗಳಿಗೆ ಕಿರುಕುಳ ನೀಡುತ್ತಿದೆ. ಇವಿಎಂ ಯಂತ್ರಗಳನ್ನು ಬದಲಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

“ಈ ಹಿಂದೆ ಹಲವು ಬಾರಿ 12 ನೇ ವಾರ್ಡ್‌ನಿಂದ ಗೆದ್ದಿದ್ದರೂ ಸಹ, ಈ ಬಾರಿ ಕೇವಲ ಒಂಬತ್ತು ಮತಗಳನ್ನು ಪಡೆದಿದ್ದೇನೆ. ಇದನ್ನು ನಂಬಲು ಸಾಧ್ಯವಿಲ್ಲ. ನಮಗೆ ಕಾಂಗ್ರೆಸ್ ಸಾಕಷ್ಟು ಕಿರುಕುಳ ನೀಡಿದೆ. ನಾನು ಪಾಠ ಮಾಡುತ್ತಿದ್ದ ಶಾಲೆ ನನ್ನನ್ನು ಕೆಲಸದಿಂದ ತೆಗೆದಿದೆ” ಎಂದು ಮುಂತಾದ ಆರೋಪಗಳನ್ನು ಮಾಡಿರುವುದನ್ನು ವೀಡಿಯೋದಲ್ಲಿ ಕಾಣಬಹುದು.

ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಇವರ ಆರೋಪವನ್ನು ಕೆಲವರು ಅಲ್ಲಗಳೆದಿದ್ದಾರೆ. “ಇದು ಕೃಷಿ ಕಾನೂನುಗಳ ಪರಿಣಾಮ. ಹಾಗಾಗಿ ಯಾವೊಬ್ಬ ವ್ಯಕ್ತಿಯೂ ಬಿಜೆಪಿಯ ಪರವಾಗಿದ್ದರೆ, ಆ ವ್ಯಕ್ತಿಯ ಕುಟುಂಬಸ್ಥರೇ ಅವರನ್ನು ನಿರಾಕರಿಸುತ್ತಾರೆ ಎಂಬುದಕ್ಕೆ ಇದು ಉದಾಹರಣೆ” ಎಂದಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಇವರಲ್ಲಿ ಬಹುಪಾಲು ರೈತರು ಪಂಜಾಬ್ ಮತ್ತು ಹರಿಯಾಣದವರಾಗಿದ್ದಾರೆ. ಹಾಗಾಗಿ ಈ ಎರಡೂ ರಾಜ್ಯಗಳಲ್ಲಿ ಬಿಜೆಪಿಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದರ ನಡುವೆಯೇ ಪಂಜಾಬ್‌ ನಲ್ಲಿ ಸ್ಥಳೀಯ ಚುನಾವಣೆ ನಡೆದಿದೆ. 8 ಕ್ಕೆ 8 ಮುನಿಸಿಪಲ್ ಕಾರ್ಪೋರೇಷನ್‌ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅಲ್ಲದೆ 109 ಮುನಿಸಿಪಲ್ ಕೌನ್ಸಿಲ್‌ಗಳಲ್ಲಿ‌ ಬಹುತೇಕ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದಿದೆ. ಬಿಜೆಪಿಗೆ ಹೀನಾಯ ಸೋಲುಂಟಾಗಿದೆ. ಇದು ರೈತರ ಆಕ್ರೋಶಕ್ಕೆ ಸ್ಪಷ್ಟ ಉದಾಹರಣೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್: ರೈತಹೋರಾಟದ ತವರು ಪಂಜಾಬ್‌ನಲ್ಲಿ ತೀವ್ರಗೊಳ್ಳುತ್ತಿರುವ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...