Homeಕರ್ನಾಟಕಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

ಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

15 ವರ್ಷಗಳಿಂದ ತೆರೆದೇ ಇದ್ದರೂ ಜನಸಾಮಾನ್ಯರ ಪಾಲಿಗೆ ಎಟುಕದ ‘ಅಂಗಡಿ’ಗೆ ಈ ಸಲ ಬೀಗ ಬೀಳಬಹುದೇ? ಎಂಬ ಮಾತುಗಳು ಬೆಳಗಾವಿ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ.

ಮೂರು ಸಲ ಬಿಜೆಪಿಯಿಂದ ಸಂಸದರಾಗಿರುವ ಸುರೇಶ ಅಂಗಡಿ ವಿರುದ್ಧ ಸಹಜವಾಗಿಯೇ ಆಡಳಿತ ವಿರೋಧಿ ಅಲೆ ಇದ್ದೇ ಇದೆ. ಕಳೆದ ಸಲವೇ ಸೋಲಬೇಕಿದ್ದ ಅವರಿಗೆ ಸೃಷ್ಟಿತ ಮೋದಿ ಹವಾ ನೆರವಿಗೆ ಬಂದಿತ್ತು. 15 ವರ್ಷ ಸಂಸದರಾದ ಮೇಲೂ, ಈಗಲೂ ಅವರು ಮೋದಿ ಮುಖ ತೋರಿಸಿ ಮತ ಕೇಳುತ್ತಿರುವುದೇ ಅವರ ‘ವೀಕ್’ ಪಾಯಿಂಟ್. ಅಷ್ಟರಮಟ್ಟಿಗೆ ಆಡಳಿತ ವಿರೋಧಿ ಅಲೆ ಜೋರಾಗಿದೆ.


ಬೆಳಗಾವಿಯ ಕಾಂಗ್ರೆಸ್ 15 ವರ್ಷಗಳಿಂದ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ ಕುರುಹುಗಳಿಲ್ಲ. ಆದರೆ, ಈ ಸಲ ಇಲ್ಲಿ ಕಾಂಗ್ರೆಸ್ ಎಚ್ಚೆತ್ತುಕೊಂಡಿದೆ. ಬೆಳಗಾವಿ ಸೀಟನ್ನು ಗೆಲ್ಲಿಸಿಕೊಡಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕಾಂಗ್ರೆಸ್ ತಾಕೀತು ಮಾಡಿದೆಯಂತೆ. ಸತೀಶ್ ಇಲ್ಲಿ ಸಕ್ರಿಯರಾಗಿದ್ದು, ‘ಅಂಗಡಿ’ಗೆ ಬೀಗ ಜಡಿಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೆ ಅವರ ಸಹೋದರ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಚುನಾವಣೆಯಿಂದ ಅಂತರ ಕಾಯ್ದುಕೊಂಡಿರುವುದು ಕಾಂಗ್ರೆಸ್‍ಗೆ ತಲೆನೋವಾಗಿದೆ.

ಕಾಂಗ್ರೆಸ್‍ನಿಂದ ಡಾ. ವಿರುಪಾಕ್ಷಪ್ಪ ಸಾಧುನವರ್‍ಗೆ ಟಿಕೆಟ್ ನೀಡಲಾಗಿದೆ. ಹಿಂದೊಮ್ಮೆ ಕಾಂಗ್ರೆಸ್‍ನಿಂದ ಬಂಡಾಯವೆದ್ದು ಎಂಎಲ್‍ಸಿ ಸೀಟಿಗೆ ಸ್ಪರ್ಧಿಸಿದ್ದ ಸಾಧುನವರ್‍ಗೆ ಈಗ ಸತೀಶ ಜಾರಕಿಹೊಳಿಯ ಸಪೋರ್ಟಿದೆ. ಜಾರಕಿಹೊಳಿಯ ಶಿಫಾರಸಿನ ಮೂಲಕವೇ ಸಾಧುನವರ್ ಟಿಕೆಟ್ ಪಡೆದಿದ್ದಾರೆ. ಬೈಲಹೊಂಗಲದ ಭಾಗದಲ್ಲಿ ಹಲವಾರು ಶೈಕ್ಷಣಿಕ ಸಂಸ್ಥೆಗಳನ್ನು, ಸಹಕಾರಿ ಬ್ಯಾಂಕುಗಳನ್ನು ನಡೆಸುತ್ತಿರುವ ಸಾಧುನವರ್ ಪಂಚಮಸಾಲಿ ಸಮುದಾಯಕ್ಕೆ ಸೇರಿದವರು.


8 ವಿಧಾನಸಭಾ ಕೇತ್ರಗಳನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಐವರು ಬಿಜೆಪಿ ಶಾಸಕರು, ಮೂವರು ಕಾಂಗ್ರೆಸ್ ಶಾಸಕರಿದ್ದಾರೆ. ಸತೀಶ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರ ಚಿಕ್ಕೋಡಿ ವ್ಯಾಪ್ತಿಗೆ ಬಂದರೆ ಅವರ ಸಹೋದರ ರಮೇಶರ ಗೋಕಾಕ್ ಕ್ಷೇತ್ರ ಬೆಳಗಾವಿಯ ವ್ಯಾಪ್ತಿಗೆ ಬರುತ್ತದೆ.

ಸಂಖ್ಯೆಯ ಆಧಾರದಲ್ಲಿ ಕ್ರಮವಾಗಿ ಲಿಂಗಾಯತರು, ಮರಾಠರು ಮತ್ತು ದಲಿತರಿದ್ದಾರೆ. ಇಲ್ಲಿವರೆಗೆ ಬಿಜೆಪಿಯ ಅಂಗಡಿಯವರ ಕೈ ಹಿಡಿದದ್ದು ಲಿಂಗಾಯತ ಮತ್ತು ಮರಾಠ ಮತಗಳು. ಅಂಗಡಿ ಬಣಜಿಗ ಸಮುದಾಯಕ್ಕೆ ಸೇರಿದ್ದು, ಈಗ ಕಾಂಗ್ರೆಸ್‍ನಿಂದ ಸ್ಪರ್ಧಿಸಿರುವ ಸಾಧುನವರ್ ಪಂಚಮಸಾಲಿ ಸಮುದಾಯದವರು. ಲಿಂಗಾಯತರಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿಗಳು ಜಾತಿಪ್ರೀತಿಗಾಗಿ ಸಾಧುನವರ್ ಪರ ನಿಲ್ಲುವ ಸಾಧ್ಯತೆಗಳಿವೆ.

ಕಳೆದ ಸಲದ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರವು ಕಾಂಗ್ರೆಸ್ ಗೆ 50 ಸಾವಿರದಷ್ಟು ಲೀಡ್ ಕೊಟ್ಟಿತ್ತು. ಈ ಸಲ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ತಟಸ್ಥರಾಗಿ ಉಳಿದಿದ್ದು, ಅವರು ಸಕ್ರಿಯವಾಗಿತೊಡಗಿಕೊಂಡರೆ ಕಾಂಗ್ರೆಸ್ ಮುನ್ನಡೆಗೆ ಅನುಕೂಲ. ಆದರೆ ಅವರ ಇನ್ನೊರ್ವ ಸಹೋದರ ಲಖನ್ ಜಾರಕಿಹೊಳಿ ಕಾಂಗ್ರೆಸ್ ಪರ ಫೀಲ್ಡಿಗಿಳಿದಿದ್ದಾರೆ. ಅಣ್ಣ ಸತೀಶ್ ಜಾರಕಿಹೊಳಿಯ ಮೇಲಿನ ಗೌರವದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕೆಂಬ ಉಮೇದಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಕಳೆದ ಸಲ ಲೋಕಸಭೆಯಲ್ಲಿ ಅಂಗಡಿ ವಿರುದ್ಧ ಸ್ಪರ್ಧಿಸಿ 60 ಸಾವಿರ ಚಿಲ್ಲರೆ ಮತಗಳಿಂದ ಸೋಲುಂಡಿದ್ದ ಹಾಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಾಧುನವರ್ ಪರವಾಗಿ ಬಿರುಸಾದ ಪ್ರಚಾರ ನಡೆಸುತ್ತಿದ್ದಾರೆ. ಸತೀಶ ಜಾರಕಿಹೊಳಿ ತಂತ್ರಗಳು ಜಾರಿಗೆ ಬರುತ್ತಿವೆ. ಇನ್ನೊಂದು ಕಡೆ ಸುರೇಶ ಅಂಗಡಿ ಮೋದಿ ಮುಖ ತೋರಿಸಿ ಮತ ಬೇಡುತ್ತಿದ್ದಾರೆ.
ಬೆಳಗಾವಿ ಅಚ್ಚರಿಯ ಫಲಿತಾಂಶ ನೀಡುವ ಸಾಧ್ಯತೆ ಇವೆ. ಹಾಗೇ ಆದರೆ ಬಿಜೆಪಿ ‘ಅಂಗಡಿಗೆ ಬೀಗ ಬೀಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...