Homeಕರ್ನಾಟಕಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

ಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

15 ವರ್ಷಗಳಿಂದ ತೆರೆದೇ ಇದ್ದರೂ ಜನಸಾಮಾನ್ಯರ ಪಾಲಿಗೆ ಎಟುಕದ ‘ಅಂಗಡಿ’ಗೆ ಈ ಸಲ ಬೀಗ ಬೀಳಬಹುದೇ? ಎಂಬ ಮಾತುಗಳು ಬೆಳಗಾವಿ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ.

ಮೂರು ಸಲ ಬಿಜೆಪಿಯಿಂದ ಸಂಸದರಾಗಿರುವ ಸುರೇಶ ಅಂಗಡಿ ವಿರುದ್ಧ ಸಹಜವಾಗಿಯೇ ಆಡಳಿತ ವಿರೋಧಿ ಅಲೆ ಇದ್ದೇ ಇದೆ. ಕಳೆದ ಸಲವೇ ಸೋಲಬೇಕಿದ್ದ ಅವರಿಗೆ ಸೃಷ್ಟಿತ ಮೋದಿ ಹವಾ ನೆರವಿಗೆ ಬಂದಿತ್ತು. 15 ವರ್ಷ ಸಂಸದರಾದ ಮೇಲೂ, ಈಗಲೂ ಅವರು ಮೋದಿ ಮುಖ ತೋರಿಸಿ ಮತ ಕೇಳುತ್ತಿರುವುದೇ ಅವರ ‘ವೀಕ್’ ಪಾಯಿಂಟ್. ಅಷ್ಟರಮಟ್ಟಿಗೆ ಆಡಳಿತ ವಿರೋಧಿ ಅಲೆ ಜೋರಾಗಿದೆ.


ಬೆಳಗಾವಿಯ ಕಾಂಗ್ರೆಸ್ 15 ವರ್ಷಗಳಿಂದ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ ಕುರುಹುಗಳಿಲ್ಲ. ಆದರೆ, ಈ ಸಲ ಇಲ್ಲಿ ಕಾಂಗ್ರೆಸ್ ಎಚ್ಚೆತ್ತುಕೊಂಡಿದೆ. ಬೆಳಗಾವಿ ಸೀಟನ್ನು ಗೆಲ್ಲಿಸಿಕೊಡಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕಾಂಗ್ರೆಸ್ ತಾಕೀತು ಮಾಡಿದೆಯಂತೆ. ಸತೀಶ್ ಇಲ್ಲಿ ಸಕ್ರಿಯರಾಗಿದ್ದು, ‘ಅಂಗಡಿ’ಗೆ ಬೀಗ ಜಡಿಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೆ ಅವರ ಸಹೋದರ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಚುನಾವಣೆಯಿಂದ ಅಂತರ ಕಾಯ್ದುಕೊಂಡಿರುವುದು ಕಾಂಗ್ರೆಸ್‍ಗೆ ತಲೆನೋವಾಗಿದೆ.

ಕಾಂಗ್ರೆಸ್‍ನಿಂದ ಡಾ. ವಿರುಪಾಕ್ಷಪ್ಪ ಸಾಧುನವರ್‍ಗೆ ಟಿಕೆಟ್ ನೀಡಲಾಗಿದೆ. ಹಿಂದೊಮ್ಮೆ ಕಾಂಗ್ರೆಸ್‍ನಿಂದ ಬಂಡಾಯವೆದ್ದು ಎಂಎಲ್‍ಸಿ ಸೀಟಿಗೆ ಸ್ಪರ್ಧಿಸಿದ್ದ ಸಾಧುನವರ್‍ಗೆ ಈಗ ಸತೀಶ ಜಾರಕಿಹೊಳಿಯ ಸಪೋರ್ಟಿದೆ. ಜಾರಕಿಹೊಳಿಯ ಶಿಫಾರಸಿನ ಮೂಲಕವೇ ಸಾಧುನವರ್ ಟಿಕೆಟ್ ಪಡೆದಿದ್ದಾರೆ. ಬೈಲಹೊಂಗಲದ ಭಾಗದಲ್ಲಿ ಹಲವಾರು ಶೈಕ್ಷಣಿಕ ಸಂಸ್ಥೆಗಳನ್ನು, ಸಹಕಾರಿ ಬ್ಯಾಂಕುಗಳನ್ನು ನಡೆಸುತ್ತಿರುವ ಸಾಧುನವರ್ ಪಂಚಮಸಾಲಿ ಸಮುದಾಯಕ್ಕೆ ಸೇರಿದವರು.


8 ವಿಧಾನಸಭಾ ಕೇತ್ರಗಳನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಐವರು ಬಿಜೆಪಿ ಶಾಸಕರು, ಮೂವರು ಕಾಂಗ್ರೆಸ್ ಶಾಸಕರಿದ್ದಾರೆ. ಸತೀಶ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರ ಚಿಕ್ಕೋಡಿ ವ್ಯಾಪ್ತಿಗೆ ಬಂದರೆ ಅವರ ಸಹೋದರ ರಮೇಶರ ಗೋಕಾಕ್ ಕ್ಷೇತ್ರ ಬೆಳಗಾವಿಯ ವ್ಯಾಪ್ತಿಗೆ ಬರುತ್ತದೆ.

ಸಂಖ್ಯೆಯ ಆಧಾರದಲ್ಲಿ ಕ್ರಮವಾಗಿ ಲಿಂಗಾಯತರು, ಮರಾಠರು ಮತ್ತು ದಲಿತರಿದ್ದಾರೆ. ಇಲ್ಲಿವರೆಗೆ ಬಿಜೆಪಿಯ ಅಂಗಡಿಯವರ ಕೈ ಹಿಡಿದದ್ದು ಲಿಂಗಾಯತ ಮತ್ತು ಮರಾಠ ಮತಗಳು. ಅಂಗಡಿ ಬಣಜಿಗ ಸಮುದಾಯಕ್ಕೆ ಸೇರಿದ್ದು, ಈಗ ಕಾಂಗ್ರೆಸ್‍ನಿಂದ ಸ್ಪರ್ಧಿಸಿರುವ ಸಾಧುನವರ್ ಪಂಚಮಸಾಲಿ ಸಮುದಾಯದವರು. ಲಿಂಗಾಯತರಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿಗಳು ಜಾತಿಪ್ರೀತಿಗಾಗಿ ಸಾಧುನವರ್ ಪರ ನಿಲ್ಲುವ ಸಾಧ್ಯತೆಗಳಿವೆ.

ಕಳೆದ ಸಲದ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರವು ಕಾಂಗ್ರೆಸ್ ಗೆ 50 ಸಾವಿರದಷ್ಟು ಲೀಡ್ ಕೊಟ್ಟಿತ್ತು. ಈ ಸಲ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ತಟಸ್ಥರಾಗಿ ಉಳಿದಿದ್ದು, ಅವರು ಸಕ್ರಿಯವಾಗಿತೊಡಗಿಕೊಂಡರೆ ಕಾಂಗ್ರೆಸ್ ಮುನ್ನಡೆಗೆ ಅನುಕೂಲ. ಆದರೆ ಅವರ ಇನ್ನೊರ್ವ ಸಹೋದರ ಲಖನ್ ಜಾರಕಿಹೊಳಿ ಕಾಂಗ್ರೆಸ್ ಪರ ಫೀಲ್ಡಿಗಿಳಿದಿದ್ದಾರೆ. ಅಣ್ಣ ಸತೀಶ್ ಜಾರಕಿಹೊಳಿಯ ಮೇಲಿನ ಗೌರವದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕೆಂಬ ಉಮೇದಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಕಳೆದ ಸಲ ಲೋಕಸಭೆಯಲ್ಲಿ ಅಂಗಡಿ ವಿರುದ್ಧ ಸ್ಪರ್ಧಿಸಿ 60 ಸಾವಿರ ಚಿಲ್ಲರೆ ಮತಗಳಿಂದ ಸೋಲುಂಡಿದ್ದ ಹಾಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಾಧುನವರ್ ಪರವಾಗಿ ಬಿರುಸಾದ ಪ್ರಚಾರ ನಡೆಸುತ್ತಿದ್ದಾರೆ. ಸತೀಶ ಜಾರಕಿಹೊಳಿ ತಂತ್ರಗಳು ಜಾರಿಗೆ ಬರುತ್ತಿವೆ. ಇನ್ನೊಂದು ಕಡೆ ಸುರೇಶ ಅಂಗಡಿ ಮೋದಿ ಮುಖ ತೋರಿಸಿ ಮತ ಬೇಡುತ್ತಿದ್ದಾರೆ.
ಬೆಳಗಾವಿ ಅಚ್ಚರಿಯ ಫಲಿತಾಂಶ ನೀಡುವ ಸಾಧ್ಯತೆ ಇವೆ. ಹಾಗೇ ಆದರೆ ಬಿಜೆಪಿ ‘ಅಂಗಡಿಗೆ ಬೀಗ ಬೀಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...