Homeಮುಖಪುಟದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

ದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

- Advertisement -
- Advertisement -

ಖಾಸಗಿ ಟಿವಿ ಚಾನೆಲ್‌ಗಳು ತನ್ನ ವಾಟ್ಸಾಪ್ ಸಂಭಾಷಣೆಯ ವಿಷಯಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕೆಂದು ಕೋರಿದ್ದ ಪರಿಸರ ಕಾರ್ಯಕರ್ತೆ ದಿಶಾರವರ ಮನವಿಯ ವಿಚಾರಣೆಯನ್ನು ಇಂದು ನಡೆಸಿದ ದೆಹಲಿ ಹೈಕೋರ್ಟ್ ಹಲವಾರು ಚಾನೆಲ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದು, ನಾಳೆ ವಿಚಾರಣೆ ಮುಂದುವರೆಯಲಿದೆ.

ಬೆಂಗಳೂರು ಪರಿಸರ ಕಾರ್ಯಕರ್ತೆ ದಿಶಾ ರವಿ ಅವರು ತಮ್ಮ ಖಾಸಗಿ ಚಾಟ್‌ಗಳ ವಿಷಯಗಳು ಸೇರಿದಂತೆ ತನಿಖಾ ಸಾಮಗ್ರಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರೈತರ ಪ್ರತಿಭಟನೆಯ ಮಧ್ಯೆ “ಟೂಲ್‌ಕಿಟ್ ಪ್ರಕರಣ”ಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಅವರು, ಖಾಸಗಿ ಟಿವಿ ಚಾನೆಲ್‌ಗಳು ತನ್ನ ವಾಟ್ಸಾಪ್ ಸಂಭಾಷಣೆಯ ವಿಷಯಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕೆಂದು ಕೋರಿದ್ದಾರೆ.

ಟೆಲಿವಿಷನ್ ಚಾನೆಲ್‌ಗಳಾದ ನ್ಯೂಸ್ 18, ಇಂಡಿಯಾ ಟುಡೆ ಮತ್ತು ಟೈಮ್ಸ್ ನೌ ಚಾನೆಲ್‌ಗಳು ಮೂರನೇ ವ್ಯಕ್ತಿಯೊಂದಿಗೆ ತನ್ನ ಖಾಸಗಿ ಚಾಟ್‌ಗಳ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಕೇಬಲ್ ಟಿವಿ ನೆಟ್‌ವರ್ಕ್ ನಿಯಮಗಳನ್ನು ಉಲ್ಲಂಘಿಸಿವೆ ಎಂದು ದಿಶಾ ಆರೋಪಿಸಿದ್ದಾರೆ.

ಇದನ್ನೂ ಓದಿ: ನಿರ್ಲಕ್ಷ್ಯಕ್ಕೆ ಒಳಗಾಗಿದ್ದೇವೆ ಎಂದು ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ: ಉಪ ಮುಖ್ಯಮಂತ್ರಿ ಸವದಿ

ನ್ಯಾಯಯುತ ವಿಚಾರಣೆಯ ಹಕ್ಕುಗಳು ಮತ್ತು ತನ್ನ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುವ ರೀತಿಯಲ್ಲಿ ವರದಿ ಮಾಡಿದ ಮೇಲಿನ ಮೂರು ಚಾನೆಲ್‌ಗಳು ಮತ್ತು ಅಂತಹ ಇತರ ಖಾಸಗಿ ಚಾನೆಲ್‌ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ದಿಶಾ ನ್ಯಾಯಾಲಯವನ್ನು ಕೋರಿದ್ದಾರೆ.

ವಿಚಾರಣೆಯ ಮುಕ್ತಾಯದವರೆಗೂ ತನ್ನ ಯಾವುದೇ ಖಾಸಗಿ ವಾಟ್ಸಾಪ್ ಸಂದೇಶಗಳು ಅಥವಾ ಯಾವುದೇ ಖಾಸಗಿ ಸಂಭಾಷಣೆಗಳನ್ನು ಪ್ರಸಾರ ಮಾಡುವುದನ್ನು ತಡೆಯುವಂತೆ ನಿರ್ದೇಶನ ನೀಡಲು ಅವರು ಕೋರಿದ್ದಾರೆ.

“ತನಿಖಾ ಸಾಮಗ್ರಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವುದು ಕಾನೂನುಬಾಹಿರವಾಗಿದೆ, ಅದು ಗೌಪ್ಯತೆ ಮತ್ತು ಘನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ನ್ಯಾಯಯುತ ವಿಚಾರಣೆಯ ಹಕ್ಕನ್ನು ಗಮನಾರ್ಹವಾಗಿ ಪೂರ್ವಾಗ್ರಹಿಸುತ್ತದೆ. ದೆಹಲಿ ಪೊಲೀಸರ ಕ್ರಮಗಳು ಹೀಗೆ ಸಂವಿಧಾನದ 21 ನೇ ವಿಧಿಯನ್ನು ಉಲ್ಲಂಘಿಸುತ್ತವೆ ಎಂದು ಅವರು ಹೇಳಿದ್ದಾರೆ.

“ಕೆ.ಎಸ್.ಪುಟ್ಟಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ” ಪ್ರಕರಣದಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು, ಫೋನ್‌ನಲ್ಲಿನ ಸಂಭಾಷಣೆಗಳು ನಿಕಟ ಮತ್ತು ಗೌಪ್ಯ ಸ್ವರೂಪದ್ದಾಗಿವೆ ಎಂದು ಗುರುತಿಸಿತ್ತು ಮತ್ತು ಆರ್ಟಿಕಲ್ 21 ಸೂಚಿಸುವಂತೆ, ವ್ಯಕ್ತಿಯ ಗೌಪ್ಯತೆಯನ್ನು ಮೂಲಭೂತ ಹಕ್ಕಿನಡಿಯಲ್ಲಿ ರಕ್ಷಿಸಬೇಕು ಎಂದು ಆದೇಶಿಸಿತ್ತು.

ಇದನ್ನೂ ಓದಿ: ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

ಅದೇ ರೀತಿ, ಗೌರವಾನ್ವಿತ ಸುಪ್ರೀಂ ಕೋರ್ಟ್ “ಸುಬ್ರಮಣ್ಯಂ ಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ” ಪ್ರಕರಣದಲ್ಲಿ, 21ನೆ ಆರ್ಟಿಕಲ್‌ನ ಮಹತ್ವವನ್ನು ಎತ್ತಿ ಹಿಡಿದಿತ್ತು ಎಂದು ದಿಶಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ದಿಶಾ ಪರವಾಗಿ ಹಾಜರಾದ ಹಿರಿಯ ವಕೀಲ ಅಖಿಲ್ ಸಿಬಲ್, ಬಂಧನದ ಒಂದು ದಿನದ ನಂತರ, ಟಿವಿ ಚಾನೆಲ್‌ಗಳು ಆಪಾದಿತ ಚಾಟ್‌ಗಳ ಕುರಿತು ವರದಿ ಮಾಡುತ್ತಿವೆ. “ನಾನು ಚಾನೆಲ್‌ಗಳೊಂದಿಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ ಎಂದು ದಿಶಾ ಹೇಳಿದ್ದಾರೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ದೆಹಲಿ ಪೊಲೀಸ್ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದಿಶಾ ಅವರ ಮನವಿಯು ಮಾಧ್ಯಮಗಳ ಗಮನ ಸೆಳೆಯುವ ಉದ್ದೇಶ ಹೊಂದಿದೆ. ಪೊಲೀಸರ ಕಡೆಯಿಂದ ಯಾವುದೇ ಸೋರಿಕೆ ಸಂಭವಿಸಿಲ್ಲ ಎಂದು ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ್ದಾರೆ.

ಟೆಲಿವಿಷನ್ ಚಾನೆಲ್‌ಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಾಲಯ, ನಾಳೆ ಈ ವಿಷಯವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ದಿಶಾ ಅವರನ್ನು ಟೂಲ್‌ಕಿಟ್ ಪ್ರಕರಣದಲ್ಲಿ ಭಾನುವಾರ ಅವರ ಬೆಂಗಳೂರು ಮನೆಯಿಂದ ಬಂಧಿಸಲಾಗಿದ್ದು, ಅಂದಿನಿಂದ ದೆಹಲಿ ಪೊಲೀಸರ ವಶದಲ್ಲಿದ್ದಾರೆ.


ಇದನ್ನೂ ಓದಿ: ‘ಫಾಸ್ಟ್ಯಾಗ್’ ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...