Homeಮುಖಪುಟದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

ದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

- Advertisement -
- Advertisement -

ಖಾಸಗಿ ಟಿವಿ ಚಾನೆಲ್‌ಗಳು ತನ್ನ ವಾಟ್ಸಾಪ್ ಸಂಭಾಷಣೆಯ ವಿಷಯಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕೆಂದು ಕೋರಿದ್ದ ಪರಿಸರ ಕಾರ್ಯಕರ್ತೆ ದಿಶಾರವರ ಮನವಿಯ ವಿಚಾರಣೆಯನ್ನು ಇಂದು ನಡೆಸಿದ ದೆಹಲಿ ಹೈಕೋರ್ಟ್ ಹಲವಾರು ಚಾನೆಲ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದು, ನಾಳೆ ವಿಚಾರಣೆ ಮುಂದುವರೆಯಲಿದೆ.

ಬೆಂಗಳೂರು ಪರಿಸರ ಕಾರ್ಯಕರ್ತೆ ದಿಶಾ ರವಿ ಅವರು ತಮ್ಮ ಖಾಸಗಿ ಚಾಟ್‌ಗಳ ವಿಷಯಗಳು ಸೇರಿದಂತೆ ತನಿಖಾ ಸಾಮಗ್ರಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರೈತರ ಪ್ರತಿಭಟನೆಯ ಮಧ್ಯೆ “ಟೂಲ್‌ಕಿಟ್ ಪ್ರಕರಣ”ಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಅವರು, ಖಾಸಗಿ ಟಿವಿ ಚಾನೆಲ್‌ಗಳು ತನ್ನ ವಾಟ್ಸಾಪ್ ಸಂಭಾಷಣೆಯ ವಿಷಯಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕೆಂದು ಕೋರಿದ್ದಾರೆ.

ಟೆಲಿವಿಷನ್ ಚಾನೆಲ್‌ಗಳಾದ ನ್ಯೂಸ್ 18, ಇಂಡಿಯಾ ಟುಡೆ ಮತ್ತು ಟೈಮ್ಸ್ ನೌ ಚಾನೆಲ್‌ಗಳು ಮೂರನೇ ವ್ಯಕ್ತಿಯೊಂದಿಗೆ ತನ್ನ ಖಾಸಗಿ ಚಾಟ್‌ಗಳ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಕೇಬಲ್ ಟಿವಿ ನೆಟ್‌ವರ್ಕ್ ನಿಯಮಗಳನ್ನು ಉಲ್ಲಂಘಿಸಿವೆ ಎಂದು ದಿಶಾ ಆರೋಪಿಸಿದ್ದಾರೆ.

ಇದನ್ನೂ ಓದಿ: ನಿರ್ಲಕ್ಷ್ಯಕ್ಕೆ ಒಳಗಾಗಿದ್ದೇವೆ ಎಂದು ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ: ಉಪ ಮುಖ್ಯಮಂತ್ರಿ ಸವದಿ

ನ್ಯಾಯಯುತ ವಿಚಾರಣೆಯ ಹಕ್ಕುಗಳು ಮತ್ತು ತನ್ನ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುವ ರೀತಿಯಲ್ಲಿ ವರದಿ ಮಾಡಿದ ಮೇಲಿನ ಮೂರು ಚಾನೆಲ್‌ಗಳು ಮತ್ತು ಅಂತಹ ಇತರ ಖಾಸಗಿ ಚಾನೆಲ್‌ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ದಿಶಾ ನ್ಯಾಯಾಲಯವನ್ನು ಕೋರಿದ್ದಾರೆ.

ವಿಚಾರಣೆಯ ಮುಕ್ತಾಯದವರೆಗೂ ತನ್ನ ಯಾವುದೇ ಖಾಸಗಿ ವಾಟ್ಸಾಪ್ ಸಂದೇಶಗಳು ಅಥವಾ ಯಾವುದೇ ಖಾಸಗಿ ಸಂಭಾಷಣೆಗಳನ್ನು ಪ್ರಸಾರ ಮಾಡುವುದನ್ನು ತಡೆಯುವಂತೆ ನಿರ್ದೇಶನ ನೀಡಲು ಅವರು ಕೋರಿದ್ದಾರೆ.

“ತನಿಖಾ ಸಾಮಗ್ರಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವುದು ಕಾನೂನುಬಾಹಿರವಾಗಿದೆ, ಅದು ಗೌಪ್ಯತೆ ಮತ್ತು ಘನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ನ್ಯಾಯಯುತ ವಿಚಾರಣೆಯ ಹಕ್ಕನ್ನು ಗಮನಾರ್ಹವಾಗಿ ಪೂರ್ವಾಗ್ರಹಿಸುತ್ತದೆ. ದೆಹಲಿ ಪೊಲೀಸರ ಕ್ರಮಗಳು ಹೀಗೆ ಸಂವಿಧಾನದ 21 ನೇ ವಿಧಿಯನ್ನು ಉಲ್ಲಂಘಿಸುತ್ತವೆ ಎಂದು ಅವರು ಹೇಳಿದ್ದಾರೆ.

“ಕೆ.ಎಸ್.ಪುಟ್ಟಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ” ಪ್ರಕರಣದಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು, ಫೋನ್‌ನಲ್ಲಿನ ಸಂಭಾಷಣೆಗಳು ನಿಕಟ ಮತ್ತು ಗೌಪ್ಯ ಸ್ವರೂಪದ್ದಾಗಿವೆ ಎಂದು ಗುರುತಿಸಿತ್ತು ಮತ್ತು ಆರ್ಟಿಕಲ್ 21 ಸೂಚಿಸುವಂತೆ, ವ್ಯಕ್ತಿಯ ಗೌಪ್ಯತೆಯನ್ನು ಮೂಲಭೂತ ಹಕ್ಕಿನಡಿಯಲ್ಲಿ ರಕ್ಷಿಸಬೇಕು ಎಂದು ಆದೇಶಿಸಿತ್ತು.

ಇದನ್ನೂ ಓದಿ: ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

ಅದೇ ರೀತಿ, ಗೌರವಾನ್ವಿತ ಸುಪ್ರೀಂ ಕೋರ್ಟ್ “ಸುಬ್ರಮಣ್ಯಂ ಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ” ಪ್ರಕರಣದಲ್ಲಿ, 21ನೆ ಆರ್ಟಿಕಲ್‌ನ ಮಹತ್ವವನ್ನು ಎತ್ತಿ ಹಿಡಿದಿತ್ತು ಎಂದು ದಿಶಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ದಿಶಾ ಪರವಾಗಿ ಹಾಜರಾದ ಹಿರಿಯ ವಕೀಲ ಅಖಿಲ್ ಸಿಬಲ್, ಬಂಧನದ ಒಂದು ದಿನದ ನಂತರ, ಟಿವಿ ಚಾನೆಲ್‌ಗಳು ಆಪಾದಿತ ಚಾಟ್‌ಗಳ ಕುರಿತು ವರದಿ ಮಾಡುತ್ತಿವೆ. “ನಾನು ಚಾನೆಲ್‌ಗಳೊಂದಿಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ ಎಂದು ದಿಶಾ ಹೇಳಿದ್ದಾರೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ದೆಹಲಿ ಪೊಲೀಸ್ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದಿಶಾ ಅವರ ಮನವಿಯು ಮಾಧ್ಯಮಗಳ ಗಮನ ಸೆಳೆಯುವ ಉದ್ದೇಶ ಹೊಂದಿದೆ. ಪೊಲೀಸರ ಕಡೆಯಿಂದ ಯಾವುದೇ ಸೋರಿಕೆ ಸಂಭವಿಸಿಲ್ಲ ಎಂದು ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ್ದಾರೆ.

ಟೆಲಿವಿಷನ್ ಚಾನೆಲ್‌ಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಾಲಯ, ನಾಳೆ ಈ ವಿಷಯವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ದಿಶಾ ಅವರನ್ನು ಟೂಲ್‌ಕಿಟ್ ಪ್ರಕರಣದಲ್ಲಿ ಭಾನುವಾರ ಅವರ ಬೆಂಗಳೂರು ಮನೆಯಿಂದ ಬಂಧಿಸಲಾಗಿದ್ದು, ಅಂದಿನಿಂದ ದೆಹಲಿ ಪೊಲೀಸರ ವಶದಲ್ಲಿದ್ದಾರೆ.


ಇದನ್ನೂ ಓದಿ: ‘ಫಾಸ್ಟ್ಯಾಗ್’ ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...