Homeಮುಖಪುಟದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

ದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

- Advertisement -
- Advertisement -

ಖಾಸಗಿ ಟಿವಿ ಚಾನೆಲ್‌ಗಳು ತನ್ನ ವಾಟ್ಸಾಪ್ ಸಂಭಾಷಣೆಯ ವಿಷಯಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕೆಂದು ಕೋರಿದ್ದ ಪರಿಸರ ಕಾರ್ಯಕರ್ತೆ ದಿಶಾರವರ ಮನವಿಯ ವಿಚಾರಣೆಯನ್ನು ಇಂದು ನಡೆಸಿದ ದೆಹಲಿ ಹೈಕೋರ್ಟ್ ಹಲವಾರು ಚಾನೆಲ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದು, ನಾಳೆ ವಿಚಾರಣೆ ಮುಂದುವರೆಯಲಿದೆ.

ಬೆಂಗಳೂರು ಪರಿಸರ ಕಾರ್ಯಕರ್ತೆ ದಿಶಾ ರವಿ ಅವರು ತಮ್ಮ ಖಾಸಗಿ ಚಾಟ್‌ಗಳ ವಿಷಯಗಳು ಸೇರಿದಂತೆ ತನಿಖಾ ಸಾಮಗ್ರಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರೈತರ ಪ್ರತಿಭಟನೆಯ ಮಧ್ಯೆ “ಟೂಲ್‌ಕಿಟ್ ಪ್ರಕರಣ”ಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಅವರು, ಖಾಸಗಿ ಟಿವಿ ಚಾನೆಲ್‌ಗಳು ತನ್ನ ವಾಟ್ಸಾಪ್ ಸಂಭಾಷಣೆಯ ವಿಷಯಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕೆಂದು ಕೋರಿದ್ದಾರೆ.

ಟೆಲಿವಿಷನ್ ಚಾನೆಲ್‌ಗಳಾದ ನ್ಯೂಸ್ 18, ಇಂಡಿಯಾ ಟುಡೆ ಮತ್ತು ಟೈಮ್ಸ್ ನೌ ಚಾನೆಲ್‌ಗಳು ಮೂರನೇ ವ್ಯಕ್ತಿಯೊಂದಿಗೆ ತನ್ನ ಖಾಸಗಿ ಚಾಟ್‌ಗಳ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಕೇಬಲ್ ಟಿವಿ ನೆಟ್‌ವರ್ಕ್ ನಿಯಮಗಳನ್ನು ಉಲ್ಲಂಘಿಸಿವೆ ಎಂದು ದಿಶಾ ಆರೋಪಿಸಿದ್ದಾರೆ.

ಇದನ್ನೂ ಓದಿ: ನಿರ್ಲಕ್ಷ್ಯಕ್ಕೆ ಒಳಗಾಗಿದ್ದೇವೆ ಎಂದು ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ: ಉಪ ಮುಖ್ಯಮಂತ್ರಿ ಸವದಿ

ನ್ಯಾಯಯುತ ವಿಚಾರಣೆಯ ಹಕ್ಕುಗಳು ಮತ್ತು ತನ್ನ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುವ ರೀತಿಯಲ್ಲಿ ವರದಿ ಮಾಡಿದ ಮೇಲಿನ ಮೂರು ಚಾನೆಲ್‌ಗಳು ಮತ್ತು ಅಂತಹ ಇತರ ಖಾಸಗಿ ಚಾನೆಲ್‌ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ದಿಶಾ ನ್ಯಾಯಾಲಯವನ್ನು ಕೋರಿದ್ದಾರೆ.

ವಿಚಾರಣೆಯ ಮುಕ್ತಾಯದವರೆಗೂ ತನ್ನ ಯಾವುದೇ ಖಾಸಗಿ ವಾಟ್ಸಾಪ್ ಸಂದೇಶಗಳು ಅಥವಾ ಯಾವುದೇ ಖಾಸಗಿ ಸಂಭಾಷಣೆಗಳನ್ನು ಪ್ರಸಾರ ಮಾಡುವುದನ್ನು ತಡೆಯುವಂತೆ ನಿರ್ದೇಶನ ನೀಡಲು ಅವರು ಕೋರಿದ್ದಾರೆ.

“ತನಿಖಾ ಸಾಮಗ್ರಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವುದು ಕಾನೂನುಬಾಹಿರವಾಗಿದೆ, ಅದು ಗೌಪ್ಯತೆ ಮತ್ತು ಘನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ನ್ಯಾಯಯುತ ವಿಚಾರಣೆಯ ಹಕ್ಕನ್ನು ಗಮನಾರ್ಹವಾಗಿ ಪೂರ್ವಾಗ್ರಹಿಸುತ್ತದೆ. ದೆಹಲಿ ಪೊಲೀಸರ ಕ್ರಮಗಳು ಹೀಗೆ ಸಂವಿಧಾನದ 21 ನೇ ವಿಧಿಯನ್ನು ಉಲ್ಲಂಘಿಸುತ್ತವೆ ಎಂದು ಅವರು ಹೇಳಿದ್ದಾರೆ.

“ಕೆ.ಎಸ್.ಪುಟ್ಟಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ” ಪ್ರಕರಣದಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು, ಫೋನ್‌ನಲ್ಲಿನ ಸಂಭಾಷಣೆಗಳು ನಿಕಟ ಮತ್ತು ಗೌಪ್ಯ ಸ್ವರೂಪದ್ದಾಗಿವೆ ಎಂದು ಗುರುತಿಸಿತ್ತು ಮತ್ತು ಆರ್ಟಿಕಲ್ 21 ಸೂಚಿಸುವಂತೆ, ವ್ಯಕ್ತಿಯ ಗೌಪ್ಯತೆಯನ್ನು ಮೂಲಭೂತ ಹಕ್ಕಿನಡಿಯಲ್ಲಿ ರಕ್ಷಿಸಬೇಕು ಎಂದು ಆದೇಶಿಸಿತ್ತು.

ಇದನ್ನೂ ಓದಿ: ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

ಅದೇ ರೀತಿ, ಗೌರವಾನ್ವಿತ ಸುಪ್ರೀಂ ಕೋರ್ಟ್ “ಸುಬ್ರಮಣ್ಯಂ ಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ” ಪ್ರಕರಣದಲ್ಲಿ, 21ನೆ ಆರ್ಟಿಕಲ್‌ನ ಮಹತ್ವವನ್ನು ಎತ್ತಿ ಹಿಡಿದಿತ್ತು ಎಂದು ದಿಶಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ದಿಶಾ ಪರವಾಗಿ ಹಾಜರಾದ ಹಿರಿಯ ವಕೀಲ ಅಖಿಲ್ ಸಿಬಲ್, ಬಂಧನದ ಒಂದು ದಿನದ ನಂತರ, ಟಿವಿ ಚಾನೆಲ್‌ಗಳು ಆಪಾದಿತ ಚಾಟ್‌ಗಳ ಕುರಿತು ವರದಿ ಮಾಡುತ್ತಿವೆ. “ನಾನು ಚಾನೆಲ್‌ಗಳೊಂದಿಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ ಎಂದು ದಿಶಾ ಹೇಳಿದ್ದಾರೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ದೆಹಲಿ ಪೊಲೀಸ್ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದಿಶಾ ಅವರ ಮನವಿಯು ಮಾಧ್ಯಮಗಳ ಗಮನ ಸೆಳೆಯುವ ಉದ್ದೇಶ ಹೊಂದಿದೆ. ಪೊಲೀಸರ ಕಡೆಯಿಂದ ಯಾವುದೇ ಸೋರಿಕೆ ಸಂಭವಿಸಿಲ್ಲ ಎಂದು ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ್ದಾರೆ.

ಟೆಲಿವಿಷನ್ ಚಾನೆಲ್‌ಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಾಲಯ, ನಾಳೆ ಈ ವಿಷಯವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ದಿಶಾ ಅವರನ್ನು ಟೂಲ್‌ಕಿಟ್ ಪ್ರಕರಣದಲ್ಲಿ ಭಾನುವಾರ ಅವರ ಬೆಂಗಳೂರು ಮನೆಯಿಂದ ಬಂಧಿಸಲಾಗಿದ್ದು, ಅಂದಿನಿಂದ ದೆಹಲಿ ಪೊಲೀಸರ ವಶದಲ್ಲಿದ್ದಾರೆ.


ಇದನ್ನೂ ಓದಿ: ‘ಫಾಸ್ಟ್ಯಾಗ್’ ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...