Homeಕರ್ನಾಟಕ’ನಮ್ಮ ಮಕ್ಕಳನ್ನು ಕೂಡಾ ಇದೇ ರೀತಿ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದೆ’

’ನಮ್ಮ ಮಕ್ಕಳನ್ನು ಕೂಡಾ ಇದೇ ರೀತಿ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದೆ’

ದಿಶಾ ರವಿ ಬಂಧನ ಖಂಡಿಸಿ, ಮಕ್ಕಳ ಸ್ವಾತಂತ್ಯ್ರ, ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಸರ್ಕಾರಕ್ಕೆ ಪತ್ರ ಬರೆದ ಪೋಷಕರು

- Advertisement -
- Advertisement -

ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಟೂಲ್ಕಿಟ್ ಪ್ರಕರಣದಲ್ಲಿ ದಿಶಾ ರವಿಯನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಯುವಜನರು ಮತ್ತು ಮಕ್ಕಳನ್ನು ಹೊಂದಿರುವ ಪೋಷಕರು ಖಂಡಿಸಿದ್ದು, ಮಕ್ಕಳ ಸ್ವಾತಂತ್ಯ್ರ, ಸುರಕ್ಷತೆಯ ಬಗ್ಗೆ ಖಚಿತ ಪಡಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, “ದೆಹಲಿ ಪೊಲೀಸರು ದಿಶಾ ಅವರನ್ನು ಮನೆಯಿಂದ ಬಂಧಿಸಿ ದೆಹಲಿಗೆ ಕರೆದೊಯ್ದರು. ಅವರನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿಲ್ಲ ಮತ್ತು ತಮ್ಮ ವಕೀಲರನ್ನು ಸಂಪರ್ಕಿಸಲು ಸಹ ಅವಕಾಶ ಮಾಡಿಕೊಡಲಿಲ್ಲ. ಸಾಂವಿಧಾನಿಕ ಮತ್ತು ಕ್ರಿಮಿನಲ್‌ ಕಾನೂನಿನಲ್ಲಿ ಸ್ಥಾಪಿಸಲಾದ ಕಾರ್ಯವಿಧಾನಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ಬಂಧನವನ್ನು ನಡೆಸಲಾಗಿದೆ. ಭಾನುವಾರ ಮಧ್ಯಾಹ್ನ ದೆಹಲಿಯ ಮ್ಯಾಜಿಸ್ಟ್ರೇಟ್‌ ಎದುರು ಹಾಜರಾಗುವವರೆಗೂ ದಿಶಾ ಕುಟುಂಬಕ್ಕೆ ಅವರು ಇರುವ ಸ್ಥಳದ ಬಗ್ಗೆ ಯಾವುದೆ ಮಾಹಿತಿ ನೀಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

“ಅವರು ಮಾಡಿರುವ ಅಪರಾಧವೆಂದರೆ, ರೈತರ ಪ್ರತಿಭಟನೆಯ ಬಗ್ಗೆ ಒಂದು ಟೂಲ್‌ ಕಿಟ್‌ ತನ್ನ ಸಾಮಾಜಿಕ ಮಾಧ್ಯಮಗಳ‌ ಮೂಲಕ ಹಂಚಿದ್ದು, ಅದರಲ್ಲಿ ಸ್ವಲ್ಪ ತಿದ್ದುಪಡಿ ಮಾಡಿದ್ದು. ಈ ‘ಟೂಲ್ಕಿಟ್‌’ – ದೇಶದ್ರೋಹದ ಪಿತೂರಿಯ ಭಾಗವಾಗಿದೆ ಎಂದು ಪೊಲೀಸರು ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಇದು ಕೆಲವು ಲೇಖಕನಗಳು, ಸಾಮಾಜಿಕ ಮಾಧ್ಯಮಗಳು ಮತ್ತು ರೈತರ ಪ್ರತಿಭಟನೆಯ ಮಾಹಿತಿಯನ್ನು ಒಂದು ಕಡೆ ಸಂಗ್ರಹ ಮಾಡುವ ಒಂದು ಡಾಕ್ಯುಮೆಂಟ್‌. ಈ ವಿಷಯದ ಬಗ್ಗೆ ಕಲಿಯಲು ಬಯಸುವ ಯಾರಿಗಾದರು ಸುಲಭವಾಗಿ ಮಾಹಿತಿ ಹಂಚಲು ಒಂದು ಗೈಡ್‌ ಅಷ್ಟೆ” ಎಂದ ಪತ್ರದಲ್ಲಿ ಪೋಷಕರು ಸರ್ಕಾರಕ್ಕೆ ತಿಳಿಸಿದ್ದಾರೆ.

“ಟೂಲ್ಕಿಟ್‌ ಅನ್ನು ಪರಿಶೀಲಿಸಿದ ವಕೀಲರು ಮತ್ತು ತಜ್ಞರು ಇದು ಅಹಿಂಸಾತ್ಮಕ ಪ್ರತಿಭಟನೆಯ ವಿವಿಧ ವಿಧಾನಗಳೆಂದು ಹೇಳಿದ್ದು, ಅದರಲ್ಲಿ ಕಾನೂನುಬಾಹಿರ ಏನೂ ಇಲ್ಲ ಎಂದಿದ್ದಾರೆ. ಹಾಗೆಯೇ ಟೂಲ್‌‌ಕಿಟ್‌ನಲ್ಲಿ ನಮೂದಿಸಿದ ‘ಟ್ವೀಟ್‌ ಬಿರುಗಾಳಿಗಳು’ (ಟ್ವಿಟ್ಟರ್‌ ಸ್ಟಾರ್ಮ್‌) ವೈವಿಧ್ಯಮಯ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತೊಡಗಿಸಿಕೊಳ್ಳುವ ಒಂದು ಸಾಮಾನ್ಯ ರೂಪವಾಗಿದೆ” ಎಂದು ಹೇಳಿದ್ದಾರೆ.

ಮಕ್ಕಳ, ಯುವಜನರ ಪೋಷಕರಾದ ನಾವು ಈ ಬಂಧನದಿಂದ ಆಘಾತಕ್ಕೊಳಗಾಗಿದ್ದೇವೆ ಎಂದಿರುವ ಪೋಷಕರು, ಸರ್ಕಾರ ಮತ್ತು ಸಾಮಾಜಿಕ ಚಳುವಳಿಗಳು ಬಳಸುವ ಸಾಮಾನ್ಯ ಸಾಧನವನ್ನು (ಟೂಲ್‌ ಕಿಟ್‌) ಅಪರಾಧೀಕರಿಸುವ ಈ ಪ್ರಕರಣದಲ್ಲಿ ಯುವಕರು ಮತ್ತು ಪೋಷಕರಲ್ಲಿ ಭೀತಿ ಉಂಟು ಮಾಡಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಮಹಾತ್ಮಾ ಗಾಂಧಿ ಮೊಮ್ಮಗಳ ಬೆಂಬಲ: ಅವರು ಹೇಳಿದ್ದೇನು?

“ಕಾನೂನು ಬಾಹಿರವಾಗಿ ದಿಶಾ ಅವರನ್ನು ಬಂಧಿಸಿಲಾಗಿ, ಬೇರೆ ನಗರಕ್ಕೆ ಕರೆದೊಯ್ಯಲಾಯಿತು ಮತ್ತು ಪೊಲೀಸ್‌ ಕಸ್ಟಡಿಯಲ್ಲಿ ಇರಿಸಲಾಯಿತು ಎಂದು ನಮಗೆ ಆಕ್ರೋಶ ಮತ್ತು ಆತಂಕವಿದೆ. ಅವರ ಬಂಧನದ ಬಗ್ಗೆ ಸಂವಹನ ನಡೆಸಲು ಯಾವುದೇ ಅವಕಾಶವನ್ನು ಅವರ ಕುಟುಂಬಕ್ಕೆ ನೀಡಲಾಗಿಲ್ಲ. ನಮ್ಮ ಮಕ್ಕಳನ್ನು ಸಹ ಇದೇ ರೀತಿಯಲ್ಲಿ, ಕಾನೂನು ಬಾಹಿರವಾಗಿ ಯಾರಾದರೂ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದ್ದು, ನ್ಯಾಯಕ್ಕಾಗಿ ಹೋರಾಡುತ್ತಿರುವ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಧ್ವನಿ ಎತ್ತಿರುವ ಹಲವು ಸಾಮಾಜಕ ಕಾರ್ಯಕರ್ತರನ್ನು ಸರ್ಕಾರ ಬಂಧಿಸಿದೆ’’ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೇ ಅಲ್ಲದೆ, ದಿಶಾರನ್ನು ಕೊಲೆ ಮಾಡಲು ಹರ್ಯಾಣದ ಮಂತ್ರಿಗಳೊಬ್ಬರು ಕರೆ ನೀಡಿರುವುದು ಮಾತ್ರವಲ್ಲದೆ, ಅವರನ್ನು ಭಯೋತ್ಪಾದರಿಗೆ ಹೋಲಿಸಿರುವುದು ನಮ್ಮಲ್ಲಿ ಗಾಬರಿ ಉಂಟು ಮಾಡಿದೆ ಎಂದು ಪೋಷಕರು ಹೇಳಿದ್ದಾರೆ.

ಸಾಮಾಜಿಕವಾಗಿ ಧ್ವನಿ ಎತ್ತಿರುವ ಹಲವು ಯುವತಿಯರನ್ನು ಬಂಧಿಸಿರುವುದನ್ನು ಖಂಡಿಸುರುವ ಪತ್ರವು, “ಮಕ್ಕಳ ಸಂಪೂರ್ಣ ಅಭಿವೃದ್ಧಿಗೆ ಅವರ ಹಲವು ವಿಭಿನ್ನ ದೃಷ್ಟಿಕೋನಗಳನ್ನು ಸ್ವಾಗತಿಸಬೇಕು, ಅದರ ಬಗ್ಗೆ ಆತ್ಮಾವಲೋಕನ ಮಾಡಬೇಕು. ಮಕ್ಕಳನ್ನು ಬರೀ ಅವರ ವಿಧ್ಯಾಭ್ಯಾಸದ ಮೇಲೆ ಅಸಕ್ತಿ ತೋರಿಸಬೇಕೆಂದು ಒತ್ತಾಯಿಸುವ ಮನೋಭಾವ ಅಪಾಯಕಾರಿಯಾಗಿದೆ. ಇದರಿಂದ ಸಮ್ಮಮಕ್ಕಳು ಕೇವಲ ಪುಸ್ತಕದ ಬದನೆಕಾಯಿಗಲಾಗುವ, ಕೂಪದ ಮಂಡೂಕಗಳಾಗುವ ಸಾಧ್ಯತೆಗಳೇ ಹೆಚ್ಚು” ಎಂದು ಪತ್ರವು ಹೇಳಿದೆ.

ಇದನ್ನೂ ಓದಿ: ’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

ಯುವಜನರ ಮಾತನ್ನು, ಅವರ ಅಭಿಪ್ರಾಯ-ಅನಿಸಿಕೆಗಳನ್ನು ಅಪರಾಧೀಕರಿಸುವುದರಿಂದ, ಅವರ ಭವಿಷ್ಯವನ್ನು ಅವರಿಂದ ಕದ್ದಂತಾಗುತ್ತದೆ. ನಮ್ಮ ಮಕ್ಕಳನ್ನು ರಕ್ಷಿಸುವದರಲ್ಲಿ ನಮಗೆ ಸಹಾಯ ಮಾಡಬೇಕಾದ ನಮ್ಮ ಸರ್ಕಾರ ಮತ್ತು ನಮ್ಮ ಕಾನೂನು ವ್ಯವಸ್ಥೆಯು ಅವರನ್ನು ಮಾರಣಾಂತಿಕ ಅಪಾಯಕ್ಕೆ ಸಿಲುಕಿಸಿವೆ ಎಂದಿರುವ ಪೋಷಕರು, ಮೂರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.

  1. ಯುವ ವಯಸ್ಕರ ಕಾನೂನಾತ್ಮಕ ಅಭಿವ್ಯಕ್ತಿ ಹಕ್ಕನ್ನು ಹತ್ತಿಕ್ಕುವ ಈ ಅಸಂಬದ್ಧ ತನಿಖೆಯನ್ನು ದಿಲ್ಲಿ ಪೊಲೀಸ್‌ ಕೈಬಿಟ್ಟು ದಿಶಾ ರವಿ ಅವರನ್ನು ಬಿಡುಗಡೆ ಮಾಡಬೇಕು.
  2. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಮತ್ತು ರಾಜದ್ರೋಹ (ಸೆಡಿಶನ್‌) ಕಾನೂನನ್ನು ಸಂಸತ್ತು ರದ್ದುಪಡಿಸಬೇಕು
  3. ಕರ್ನಾಟಕ ಸರ್ಕಾರವು ಈ ವಿಷಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ದಿಲ್ಲಿ ಪೊಲೀಸ್‌‌ನ ಈ ಕಾರ್ಯಾಚರಣೆ ಸಾಂವಿಧಾನಿಕ ಮತ್ತು ಕ್ರಿಮಿನಲ್‌ ಕಾನೂನಿನಲ್ಲಿ ಸ್ಥಾಪಿಸಲಾದ ಕಾರ್ಯ ವಿಧಾನಗಳು ಬದ್ಧವಾಗಿತ್ತೆ ಎಂದು ಖಚಿತಪಡಿಸಬೇಕು, ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...