Homeಕರ್ನಾಟಕ’ನಮ್ಮ ಮಕ್ಕಳನ್ನು ಕೂಡಾ ಇದೇ ರೀತಿ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದೆ’

’ನಮ್ಮ ಮಕ್ಕಳನ್ನು ಕೂಡಾ ಇದೇ ರೀತಿ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದೆ’

ದಿಶಾ ರವಿ ಬಂಧನ ಖಂಡಿಸಿ, ಮಕ್ಕಳ ಸ್ವಾತಂತ್ಯ್ರ, ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಸರ್ಕಾರಕ್ಕೆ ಪತ್ರ ಬರೆದ ಪೋಷಕರು

- Advertisement -
- Advertisement -

ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಟೂಲ್ಕಿಟ್ ಪ್ರಕರಣದಲ್ಲಿ ದಿಶಾ ರವಿಯನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಯುವಜನರು ಮತ್ತು ಮಕ್ಕಳನ್ನು ಹೊಂದಿರುವ ಪೋಷಕರು ಖಂಡಿಸಿದ್ದು, ಮಕ್ಕಳ ಸ್ವಾತಂತ್ಯ್ರ, ಸುರಕ್ಷತೆಯ ಬಗ್ಗೆ ಖಚಿತ ಪಡಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, “ದೆಹಲಿ ಪೊಲೀಸರು ದಿಶಾ ಅವರನ್ನು ಮನೆಯಿಂದ ಬಂಧಿಸಿ ದೆಹಲಿಗೆ ಕರೆದೊಯ್ದರು. ಅವರನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿಲ್ಲ ಮತ್ತು ತಮ್ಮ ವಕೀಲರನ್ನು ಸಂಪರ್ಕಿಸಲು ಸಹ ಅವಕಾಶ ಮಾಡಿಕೊಡಲಿಲ್ಲ. ಸಾಂವಿಧಾನಿಕ ಮತ್ತು ಕ್ರಿಮಿನಲ್‌ ಕಾನೂನಿನಲ್ಲಿ ಸ್ಥಾಪಿಸಲಾದ ಕಾರ್ಯವಿಧಾನಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ಬಂಧನವನ್ನು ನಡೆಸಲಾಗಿದೆ. ಭಾನುವಾರ ಮಧ್ಯಾಹ್ನ ದೆಹಲಿಯ ಮ್ಯಾಜಿಸ್ಟ್ರೇಟ್‌ ಎದುರು ಹಾಜರಾಗುವವರೆಗೂ ದಿಶಾ ಕುಟುಂಬಕ್ಕೆ ಅವರು ಇರುವ ಸ್ಥಳದ ಬಗ್ಗೆ ಯಾವುದೆ ಮಾಹಿತಿ ನೀಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

“ಅವರು ಮಾಡಿರುವ ಅಪರಾಧವೆಂದರೆ, ರೈತರ ಪ್ರತಿಭಟನೆಯ ಬಗ್ಗೆ ಒಂದು ಟೂಲ್‌ ಕಿಟ್‌ ತನ್ನ ಸಾಮಾಜಿಕ ಮಾಧ್ಯಮಗಳ‌ ಮೂಲಕ ಹಂಚಿದ್ದು, ಅದರಲ್ಲಿ ಸ್ವಲ್ಪ ತಿದ್ದುಪಡಿ ಮಾಡಿದ್ದು. ಈ ‘ಟೂಲ್ಕಿಟ್‌’ – ದೇಶದ್ರೋಹದ ಪಿತೂರಿಯ ಭಾಗವಾಗಿದೆ ಎಂದು ಪೊಲೀಸರು ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಇದು ಕೆಲವು ಲೇಖಕನಗಳು, ಸಾಮಾಜಿಕ ಮಾಧ್ಯಮಗಳು ಮತ್ತು ರೈತರ ಪ್ರತಿಭಟನೆಯ ಮಾಹಿತಿಯನ್ನು ಒಂದು ಕಡೆ ಸಂಗ್ರಹ ಮಾಡುವ ಒಂದು ಡಾಕ್ಯುಮೆಂಟ್‌. ಈ ವಿಷಯದ ಬಗ್ಗೆ ಕಲಿಯಲು ಬಯಸುವ ಯಾರಿಗಾದರು ಸುಲಭವಾಗಿ ಮಾಹಿತಿ ಹಂಚಲು ಒಂದು ಗೈಡ್‌ ಅಷ್ಟೆ” ಎಂದ ಪತ್ರದಲ್ಲಿ ಪೋಷಕರು ಸರ್ಕಾರಕ್ಕೆ ತಿಳಿಸಿದ್ದಾರೆ.

“ಟೂಲ್ಕಿಟ್‌ ಅನ್ನು ಪರಿಶೀಲಿಸಿದ ವಕೀಲರು ಮತ್ತು ತಜ್ಞರು ಇದು ಅಹಿಂಸಾತ್ಮಕ ಪ್ರತಿಭಟನೆಯ ವಿವಿಧ ವಿಧಾನಗಳೆಂದು ಹೇಳಿದ್ದು, ಅದರಲ್ಲಿ ಕಾನೂನುಬಾಹಿರ ಏನೂ ಇಲ್ಲ ಎಂದಿದ್ದಾರೆ. ಹಾಗೆಯೇ ಟೂಲ್‌‌ಕಿಟ್‌ನಲ್ಲಿ ನಮೂದಿಸಿದ ‘ಟ್ವೀಟ್‌ ಬಿರುಗಾಳಿಗಳು’ (ಟ್ವಿಟ್ಟರ್‌ ಸ್ಟಾರ್ಮ್‌) ವೈವಿಧ್ಯಮಯ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತೊಡಗಿಸಿಕೊಳ್ಳುವ ಒಂದು ಸಾಮಾನ್ಯ ರೂಪವಾಗಿದೆ” ಎಂದು ಹೇಳಿದ್ದಾರೆ.

ಮಕ್ಕಳ, ಯುವಜನರ ಪೋಷಕರಾದ ನಾವು ಈ ಬಂಧನದಿಂದ ಆಘಾತಕ್ಕೊಳಗಾಗಿದ್ದೇವೆ ಎಂದಿರುವ ಪೋಷಕರು, ಸರ್ಕಾರ ಮತ್ತು ಸಾಮಾಜಿಕ ಚಳುವಳಿಗಳು ಬಳಸುವ ಸಾಮಾನ್ಯ ಸಾಧನವನ್ನು (ಟೂಲ್‌ ಕಿಟ್‌) ಅಪರಾಧೀಕರಿಸುವ ಈ ಪ್ರಕರಣದಲ್ಲಿ ಯುವಕರು ಮತ್ತು ಪೋಷಕರಲ್ಲಿ ಭೀತಿ ಉಂಟು ಮಾಡಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಮಹಾತ್ಮಾ ಗಾಂಧಿ ಮೊಮ್ಮಗಳ ಬೆಂಬಲ: ಅವರು ಹೇಳಿದ್ದೇನು?

“ಕಾನೂನು ಬಾಹಿರವಾಗಿ ದಿಶಾ ಅವರನ್ನು ಬಂಧಿಸಿಲಾಗಿ, ಬೇರೆ ನಗರಕ್ಕೆ ಕರೆದೊಯ್ಯಲಾಯಿತು ಮತ್ತು ಪೊಲೀಸ್‌ ಕಸ್ಟಡಿಯಲ್ಲಿ ಇರಿಸಲಾಯಿತು ಎಂದು ನಮಗೆ ಆಕ್ರೋಶ ಮತ್ತು ಆತಂಕವಿದೆ. ಅವರ ಬಂಧನದ ಬಗ್ಗೆ ಸಂವಹನ ನಡೆಸಲು ಯಾವುದೇ ಅವಕಾಶವನ್ನು ಅವರ ಕುಟುಂಬಕ್ಕೆ ನೀಡಲಾಗಿಲ್ಲ. ನಮ್ಮ ಮಕ್ಕಳನ್ನು ಸಹ ಇದೇ ರೀತಿಯಲ್ಲಿ, ಕಾನೂನು ಬಾಹಿರವಾಗಿ ಯಾರಾದರೂ ಕರೆದುಕೊಂಡು ಹೋಗಬಹುದು ಎಂಬ ಆತಂಕವಿದ್ದು, ನ್ಯಾಯಕ್ಕಾಗಿ ಹೋರಾಡುತ್ತಿರುವ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಧ್ವನಿ ಎತ್ತಿರುವ ಹಲವು ಸಾಮಾಜಕ ಕಾರ್ಯಕರ್ತರನ್ನು ಸರ್ಕಾರ ಬಂಧಿಸಿದೆ’’ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೇ ಅಲ್ಲದೆ, ದಿಶಾರನ್ನು ಕೊಲೆ ಮಾಡಲು ಹರ್ಯಾಣದ ಮಂತ್ರಿಗಳೊಬ್ಬರು ಕರೆ ನೀಡಿರುವುದು ಮಾತ್ರವಲ್ಲದೆ, ಅವರನ್ನು ಭಯೋತ್ಪಾದರಿಗೆ ಹೋಲಿಸಿರುವುದು ನಮ್ಮಲ್ಲಿ ಗಾಬರಿ ಉಂಟು ಮಾಡಿದೆ ಎಂದು ಪೋಷಕರು ಹೇಳಿದ್ದಾರೆ.

ಸಾಮಾಜಿಕವಾಗಿ ಧ್ವನಿ ಎತ್ತಿರುವ ಹಲವು ಯುವತಿಯರನ್ನು ಬಂಧಿಸಿರುವುದನ್ನು ಖಂಡಿಸುರುವ ಪತ್ರವು, “ಮಕ್ಕಳ ಸಂಪೂರ್ಣ ಅಭಿವೃದ್ಧಿಗೆ ಅವರ ಹಲವು ವಿಭಿನ್ನ ದೃಷ್ಟಿಕೋನಗಳನ್ನು ಸ್ವಾಗತಿಸಬೇಕು, ಅದರ ಬಗ್ಗೆ ಆತ್ಮಾವಲೋಕನ ಮಾಡಬೇಕು. ಮಕ್ಕಳನ್ನು ಬರೀ ಅವರ ವಿಧ್ಯಾಭ್ಯಾಸದ ಮೇಲೆ ಅಸಕ್ತಿ ತೋರಿಸಬೇಕೆಂದು ಒತ್ತಾಯಿಸುವ ಮನೋಭಾವ ಅಪಾಯಕಾರಿಯಾಗಿದೆ. ಇದರಿಂದ ಸಮ್ಮಮಕ್ಕಳು ಕೇವಲ ಪುಸ್ತಕದ ಬದನೆಕಾಯಿಗಲಾಗುವ, ಕೂಪದ ಮಂಡೂಕಗಳಾಗುವ ಸಾಧ್ಯತೆಗಳೇ ಹೆಚ್ಚು” ಎಂದು ಪತ್ರವು ಹೇಳಿದೆ.

ಇದನ್ನೂ ಓದಿ: ’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

ಯುವಜನರ ಮಾತನ್ನು, ಅವರ ಅಭಿಪ್ರಾಯ-ಅನಿಸಿಕೆಗಳನ್ನು ಅಪರಾಧೀಕರಿಸುವುದರಿಂದ, ಅವರ ಭವಿಷ್ಯವನ್ನು ಅವರಿಂದ ಕದ್ದಂತಾಗುತ್ತದೆ. ನಮ್ಮ ಮಕ್ಕಳನ್ನು ರಕ್ಷಿಸುವದರಲ್ಲಿ ನಮಗೆ ಸಹಾಯ ಮಾಡಬೇಕಾದ ನಮ್ಮ ಸರ್ಕಾರ ಮತ್ತು ನಮ್ಮ ಕಾನೂನು ವ್ಯವಸ್ಥೆಯು ಅವರನ್ನು ಮಾರಣಾಂತಿಕ ಅಪಾಯಕ್ಕೆ ಸಿಲುಕಿಸಿವೆ ಎಂದಿರುವ ಪೋಷಕರು, ಮೂರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.

  1. ಯುವ ವಯಸ್ಕರ ಕಾನೂನಾತ್ಮಕ ಅಭಿವ್ಯಕ್ತಿ ಹಕ್ಕನ್ನು ಹತ್ತಿಕ್ಕುವ ಈ ಅಸಂಬದ್ಧ ತನಿಖೆಯನ್ನು ದಿಲ್ಲಿ ಪೊಲೀಸ್‌ ಕೈಬಿಟ್ಟು ದಿಶಾ ರವಿ ಅವರನ್ನು ಬಿಡುಗಡೆ ಮಾಡಬೇಕು.
  2. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಮತ್ತು ರಾಜದ್ರೋಹ (ಸೆಡಿಶನ್‌) ಕಾನೂನನ್ನು ಸಂಸತ್ತು ರದ್ದುಪಡಿಸಬೇಕು
  3. ಕರ್ನಾಟಕ ಸರ್ಕಾರವು ಈ ವಿಷಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ದಿಲ್ಲಿ ಪೊಲೀಸ್‌‌ನ ಈ ಕಾರ್ಯಾಚರಣೆ ಸಾಂವಿಧಾನಿಕ ಮತ್ತು ಕ್ರಿಮಿನಲ್‌ ಕಾನೂನಿನಲ್ಲಿ ಸ್ಥಾಪಿಸಲಾದ ಕಾರ್ಯ ವಿಧಾನಗಳು ಬದ್ಧವಾಗಿತ್ತೆ ಎಂದು ಖಚಿತಪಡಿಸಬೇಕು, ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...