Homeಮುಖಪುಟರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ರಿಲಯನ್ಸ್ ಕಂಪನಿಗೆ ಕಾರ್ಪೊರೇಟ್ ಫಾರ್ಮಿಂಗ್, ಕಂಟ್ರ್ಯಾಕ್ಟ್ ಫಾರ್ಮಿಂಗ್ ಮಾಡಲು ಅನುಕೂಲವಾಗುವಂತೆ ಕೃಷಿ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

- Advertisement -
- Advertisement -

2020 ರ ಡಿಸೆಂಬರ್‌ನಲ್ಲಿ ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋನ ವೈರ್‌ಲೆಸ್ ಚಂದಾದಾರರ ಸಂಖ್ಯೆ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಭಾರೀ ಕುಸಿತ ಕಂಡಿದೆ. ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಂದ ಅದರ ಮೂಲ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಎದುರಿಸುತ್ತಿರುವ ವಿರೋಧ ಇದಕ್ಕೆ ಕಾರಣವಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ರಿಲಯನ್ಸ್ ಕಂಪನಿಗೆ ಕಾರ್ಪೋರೇಟ್ ಫಾರ್ಮಿಂಗ್ ಮತ್ತು ಕಂಟ್ರ್ಯಾಕ್ಟ್ ಫಾರ್ಮಿಂಗ್ ಮಾಡಲು ಅನುಕೂಲವಾಗುವ ರೀತಿಯಲ್ಲಿ ಹೊಸ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ರೈತ ಸಂಘಟನೆಗಳು ಆರೋಪ ಮಾಡಿವೆ.

ಜನವರಿ-ಫೆಬ್ರುವರಿಯಲ್ಲಿ ಈ ಕುಸಿತ ಇನ್ನಷ್ಟು ಹೆಚ್ಚಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಭಾರತೀಯ ದೂರಸಂಪರ್ಕ ನಿಯಂತ್ರಣ ನಿಗಮ) ಬಿಡುಗಡೆ ಮಾಡಿದ ಡಿಸೆಂಬರ್ 2020 ರ ಅಂಕಿ ಅಂಶಗಳ ಪ್ರಕಾರ, ಪಂಜಾಬ್ ಮತ್ತು ಹರಿಯಾಣಗಳಲ್ಲಿ ರಿಲಯನ್ಸ್ ಜಿಯೋ ಡಿಸೆಂಬರ್ ತಿಂಗಳಲ್ಲಿ ಲಕ್ಷಾಂತರ ಚಂದಾದಾರರನ್ನು ಕಳೆದುಕೊಂಡಿದೆ. ಅಲ್ಲದೆ, ಡಿಸೆಂಬರ್ ಅವಧಿಯಲ್ಲಿ, ಈ ಎರಡು ರಾಜ್ಯಗಳಲ್ಲಿ ಚಂದಾದಾರರನ್ನು ಕಳೆದುಕೊಂಡ ಏಕೈಕ ಪ್ರಮುಖ ಆಪರೇಟರ್ ಜಿಯೋ ಆಗಿದೆ.

ಪಂಜಾಬ್‌ನಲ್ಲಿ, ಡಿಸೆಂಬರ್ ಅಂತ್ಯದ ವೇಳೆಗೆ ಜಿಯೋ 1.25 ಕೋಟಿ ಚಂದಾದಾರರನ್ನು ಹೊಂದಿದ್ದು, ಹಿಂದಿನ 18 ತಿಂಗಳಲ್ಲಿ ಇದು ಅತ್ಯಂತ ಕಡಿಮೆಯಾಗಿದೆ. ಇದು 2020 ರ ನವೆಂಬರ್ ವೇಳೆಗೆ 1.40 ಕೋಟಿ ಚಂದಾದಾರರನ್ನು ಹೊಂದಿತ್ತು. ಅಂದರೆ ಡಿಸೆಂಬರ್ ತಿಂಗಳೊಂದರಲ್ಲೇ ಪಂಜಾಬಿನಲ್ಲಿ 15 ಲಕ್ಷ ಚಂದಾದಾರರು ಜಿಯೋ ತೊರೆದಿದ್ದಾರೆ.

ಹರಿಯಾಣದಲ್ಲಿ, ಜಿಯೋ ವೈರ್‌ಲೆಸ್ ಚಂದಾದಾರರ ಸಂಖ್ಯೆ 2020 ರ ನವೆಂಬರ್‌ನಲ್ಲಿ 94.48 ಲಕ್ಷದಿಂದ 2020 ರ ಡಿಸೆಂಬರ್‌ನಲ್ಲಿ 89.87 ಲಕ್ಷಕ್ಕೆ ಇಳಿದಿದೆ. ಇದು 2016 ರ ಸೆಪ್ಟೆಂಬರ್‌ನಲ್ಲಿ ಹರಿಯಾಣದಲ್ಲಿ ಜಿಯೋ ಪ್ರಾರಂಭವಾದ ನಂತರ ಕಂಡ ದೊಡ್ಡ ಕುಸಿತವಾಗಿದೆ.
ಇಂಡಿಯನ್ ಎಕ್ಸ್‌ಪ್ರೆಸ್‌ ಇದಕ್ಕೆ ಪ್ರತಿಕ್ರಿಯೆ ಕೋರಿ ರಿಲಯನ್ಸ್ ಜಿಯೋಗೆ ಕಳುಹಿಸಿದ ಇ-ಮೇಲ್ ಪ್ರಶ್ನೆಗೆ ಉತ್ತರ ಬಂದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ಅಖಿಲ ಭಾರತ ಮಟ್ಟದಲ್ಲೂ ಜಿಯೋ ಸಾಧನೆ ಹೇಳಿಕೊಳ್ಳುವಂತಿಲ್ಲ. 2020 ರ ಡಿಸೆಂಬರ್‌ನ ಟೆಲಿಕಾಂ ನಿಗಮ ನೀಡಿದ ದತ್ತಾಂಶದ ಪ್ರಕಾರ, ಇಡೀ ದೇಶದಲ್ಲಿ ರಿಲಯನ್ಸ್ ಜಿಯೋ 4.78 ಲಕ್ಷ ಹೊಸ ಬಳಕೆದಾರರನ್ನು ಪಡೆದಿದ್ದರೆ, ಭಾರ್ತಿ ಏರ್‌ಟೆಲ್ 40.51 ಲಕ್ಷ ಹೊಸ ಬಳಕೆದಾರರನ್ನು ಪಡೆದುಕೊಂಡಿದೆ. ಆದರೆ ವೊಡಾಫೋನ್ ಐಡಿಯಾ 56.9 ಲಕ್ಷ ಬಳಕೆದಾರರನ್ನು ಕಳೆದುಕೊಂಡಿದೆ.

ನವೆಂಬರ್ ಅಂತ್ಯದ ವೇಳೆಗೆ ದೆಹಲಿಯ ಹೊರಗಿನ ಗಡಿಗಳಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆ ತೀವ್ರಗೊಂಡಿತು. ಸ್ವಲ್ಪ ಸಮಯದ ನಂತರ ಜಿಯೋ ಪೋರ್ಟ್-ಔಟ್ ವಿನಂತಿಗಳನ್ನು ಸ್ವೀಕರಿಸಲು ಪ್ರಾರಂಭಿಸಿತು. ಡಿಸೆಂಬರ್ 11 ರಂದು, ಜಿಯೋ ತನ್ನ ಪ್ರತಿಸ್ಪರ್ಧಿಗಳಾದ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾವು “ತನ್ನ ವಿರುದ್ಧ ದುರುದ್ದೇಶಪೂರಿತ ಅಭಿಯಾನಗಳನ್ನು” ನಡೆಸುತ್ತಿದೆ ಎಂದು ದೂರಿತ್ತು. ಈ ಆರೋಪಗಳನ್ನು ಪ್ರತಿಸ್ಪರ್ಧಿಗಳು ನಿರಾಕರಿಸಿದ್ದರು.

ನಂತರ, ಈ ಎರಡು ರಾಜ್ಯಗಳಲ್ಲಿ ಜಿಯೋ ಬಳಕೆಯಲ್ಲಿರುವ ಹಲವಾರು ಟೆಲಿಕಾಂ ಟವರ್‌ಗಳು ಮತ್ತು ಫೈಬರ್ ಕೇಬಲ್‌ಗಳನ್ನು ಹಲವು ಪ್ರತಿಭಟನಾಕಾರರು ನಾಶ ಮಾಡಿದ್ದಾಗಿ ವರದಿಯಾಗಿತ್ತು.


ಇದನ್ನೂ ಓದಿ: ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...