Homeಮುಖಪುಟಸಚಿನ್ ಮಗನನ್ನು ಖರೀದಿಸಿದ ಮುಂಬೈ ಇಂಡಿಯನ್ಸ್: ಮ್ಯಾನೇಜ್‌ಮೆಂಟ್ ಕೋಟಾ ಎಂದ ನೆಟ್ಟಿಗರು!

ಸಚಿನ್ ಮಗನನ್ನು ಖರೀದಿಸಿದ ಮುಂಬೈ ಇಂಡಿಯನ್ಸ್: ಮ್ಯಾನೇಜ್‌ಮೆಂಟ್ ಕೋಟಾ ಎಂದ ನೆಟ್ಟಿಗರು!

- Advertisement -
- Advertisement -

ನಿನ್ನೆಯ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಭಾರತದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್‌ರವರ ಮಗನ ಅರ್ಜುನ್ ತೆಂಡೂಲ್ಕರ್‌ರವರನ್ನು 20 ಲಕ್ಷ ಮೂಲಬೆಲೆಗೆ ಖರೀದಿಸಿದೆ. ಈ ಕುರಿತು ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಇದು ಸ್ವಜನಪಕ್ಷಪಾತವಲ್ಲವೇ? ಆತನಿಗಿಂತಲೂ ಪ್ರತಿಭಾವಂತರು ಇದ್ದರೂ ಅವರನ್ನೇಕೆ ಖರೀದಿಸಿಲ್ಲ? ಸಚಿನ್ ಪ್ರತಿನಿಧಿಸುತ್ತಿದ್ದ ಮುಂಬೈ ತಂಡವೇ ಆತನನ್ನು ಕೊಳ್ಳಲು ಕಾರಣವೇನು? ಇದು ಮ್ಯಾಜೇನ್‌ಮೆಂಟ್ ಕೋಟಾದಲ್ಲಿ ಸೇರಿಸಿಕೊಂಡಂತೆ ಅಲ್ಲವೇ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಅದೇ ರೀತಿ ಅರ್ಜುನ್ ತೆಂಡೂಲ್ಕರ್ ನಿಜಕ್ಕೂ ಪ್ರತಿಭಾವಂತ ಎಂದಿರುವ ಹಲವರು ಆತನ ಪ್ರದರ್ಶನದ ವಿಡಿಯೋಗಳನ್ನು ಹಾಕಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಸಾಕಷ್ಟು ಟ್ರೋಲ್‌ಗಳು ವ್ಯಕ್ತವಾದ ಬೆನ್ನಲ್ಲೆ ಮುಂಬೈ ಇಂಡಿಯನ್ಸ್ ತಂಡದ ಕೋಚ್ ಮಹೇಲ ಜಯವರ್ಧನೆ ಸ್ಪಷ್ಟನೆ ನೀಡಿದ್ದು, “ಆತನ ಕೌಶಲ್ಯ ಮತ್ತು ಪ್ರತಿಭೆಯ ಆಧಾರದಲ್ಲಿಯೇ ಅರ್ಜುನ್‌ ಕೊಂಡುಕೊಳ್ಳಲಾಗಿದೆ. ಇದು ಅರ್ಜುನ್‌ಗೆ ಕಲಿಕೆಯ ಪ್ರಕ್ರಿಯೆಯಾಗಲಿದೆ ಎಂದು ನಾನು ಭಾವಿಸುತ್ತೇನೆ. ಆತ ಮುಂಬೈ ಪರವಾಗಿ ಆಡಲು ಆರಂಭಿಸಿದ ಮತ್ತು ಈಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಪಾಲಾಗಿದ್ದಾನೆ. ಆತ ವಿಕಾಸಗೊಳ್ಳುತ್ತಾನೆ, ಇನ್ನು ಚಿಕ್ಕ ವಯಸ್ಸಾದರೂ, ಫೋಕಸ್ ಉಳ್ಳವನಾಗಿದ್ದಾನೆ” ಎಂದಿದ್ದಾರೆ.

ಆದರೆ ಟ್ವಿಟರ್‌ನಲ್ಲಿ ಮಾತ್ರ ಅರ್ಜುನ್ ಕಾಲೆಳೆದು ಟ್ರೋಲ್ ಮಾಡಲಾಗುತ್ತಿದೆ. ಇತ್ತೀಚೆಗೆ ರೈತ ಹೋರಾಟದ ವಿರುದ್ಧ ಮತ್ತು ಬಿಜೆಪಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿದ ಸೆಲೆಬ್ರಿಟಿಗಳಲ್ಲಿ ಸಚಿನ್ ಕೂಡ ಒಬ್ಬರಾಗಿದ್ದರು. ಈ ಹಿನ್ನೆಲೆಯಲ್ಲಿಯೂ ಸಹ ಅವರ ಮಗನನ್ನು ಟ್ರೋಲ್ ಮಾಡಲಾಗುತ್ತಿದೆ. ಅವುಗಳಲ್ಲಿ ಕೆಲವನ್ನು ಇಲ್ಲಿ ನೀಡಲಾಗಿದೆ. ಅಜಯ್ ಧುಮಲ್ ಎಂಬುವವರು ಟ್ವೀಟ್ ಮಾಡಿ ನೀವು ಮ್ಯಾನೇಜ್‌ಮೆಂಟ್ ಕೋಟಾದಡಿ ಪ್ರವೇಶ ಪಡೆದರೆ ಹೇಗೆ ಎಂದು ಅರ್ಜುನ್ ತೆಂಡೂಲ್ಕರ್‌ರವರನ್ನು ಉಲ್ಲೇಖಸಿದ್ದಾರೆ.

“ಅರ್ಜುನ್ ತೆಂಡೂಲ್ಕರ್ ಸ್ವಜನಪಕ್ಷಪಾತತ ಅತಿ ಕೆಟ್ಟ ಉತ್ಪನ್ನ ಎಂದು ಈಗ ಕಂಗನಾ ಕರೆಯುತ್ತಾರೆಯೇ? ಅವರಿನ್ನು ಜಯ್ ಶಾ ಕುರಿತು ಮಾತನಾಡಬೇಕಿದೆ” ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತುವಾರಿ ಶ್ರೀವತ್ಸ ಟ್ವೀಟ್ ಮಾಡಿದ್ದಾರೆ.

ಸಚಿನ್ ತೆಂಡೂಲ್ಕರ್‌ರನ್ನು ಬಿಜೆಪಿ ಖರೀದಿಸಿದೆ, ಅವರ ಮಗನನ್ನು ಅಂಬಾನಿ ಖರೀದಿಸಿದ್ದಾರೆ ಎಂದು ದಿ ಬ್ಯಾಡ್ ಇಂಜಿನಿಯರ್ ಎಂಬುವವರು ಟ್ರೋಲ್ ಮಾಡಿದ್ದಾರೆ.

ಸ್ವಜನಪಕ್ಷಪಾತ ಎಂದು ಕಿರುಚುತ್ತಿದ್ದವರು ಈಗ ಎಲ್ಲಿದ್ದಾರೆ? ಎಂದು ರಿಯಾ ಆಂದೋಲನ್‌ಜೀವಿ ಟ್ವೀಟ್ ಮಾಡಿದ್ದಾರೆ.

ಹಿರಿಯ ಪತ್ರಕರ್ತ ರಾಜ್‌ದೀಪ್‌ ಸರ್ದೇಸಾಯಿ ಟ್ವೀಟ್ ಮಾಡಿ “ವಂಶಪಾರಂಪರ್ಯ ಅಥವಾ ರಕ್ತಗುಣದಿಂದ ಕ್ರಿಕೆಟ್ ಆಡಲಾಗುವುದಿಲ್ಲ, ಹಾಗಾಗಿ ನಾನು ಅರ್ಜುನ್ ತೆಂಡೂಲ್ಕರ್ ಪರ ತಿಂತುಕೊಳ್ಳುತ್ತೇನೆ. ಏಕೆಂದರೆ ಆತನನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿಲ್ಲ ಬದಲಿಗೆ ಮುಂಬೈ ಇಂಡಿಯನ್‌ನಂತಹ ಖಾಸಗಿ ತಂಡ ಕೊಂಡುಕೊಂಡಿದೆ. ಅಂತಿಮವಾಗಿ ಆತ ಮೈದಾನದಲ್ಲಿ ತನ್ನ ಸಾಮರ್ಥ್ಯ ಸಾಬೀತುಪಡಿಸಬೇಕಿದೆ. ಕ್ರೀಡೆಗಳಲ್ಲಿ ಶಾರ್ಟ್‌ಕಟ್ ಇರುವುದಿಲ್ಲ, ಅಂತಿಮವಾಗಿ ಪ್ರತಿಭೆಯೊಂದೇ ಉಳಿಯುವುದು” ಎಂದಿದ್ದಾರೆ.


ಇದನ್ನೂ ಓದಿ: ಕನ್ನಡದ ಹುಡುಗನಿಗೆ ಅಚ್ಚರಿಯ ಡಿಮ್ಯಾಂಡ್: ಐಪಿಎಲ್‌ನಲ್ಲಿ ಕೆ.ಗೌತಮ್ ಮೌಲ್ಯ 9.25 ಕೋಟಿ ರೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...