Homeಮುಖಪುಟಸಚಿನ್ ಮಗನನ್ನು ಖರೀದಿಸಿದ ಮುಂಬೈ ಇಂಡಿಯನ್ಸ್: ಮ್ಯಾನೇಜ್‌ಮೆಂಟ್ ಕೋಟಾ ಎಂದ ನೆಟ್ಟಿಗರು!

ಸಚಿನ್ ಮಗನನ್ನು ಖರೀದಿಸಿದ ಮುಂಬೈ ಇಂಡಿಯನ್ಸ್: ಮ್ಯಾನೇಜ್‌ಮೆಂಟ್ ಕೋಟಾ ಎಂದ ನೆಟ್ಟಿಗರು!

- Advertisement -
- Advertisement -

ನಿನ್ನೆಯ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಭಾರತದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್‌ರವರ ಮಗನ ಅರ್ಜುನ್ ತೆಂಡೂಲ್ಕರ್‌ರವರನ್ನು 20 ಲಕ್ಷ ಮೂಲಬೆಲೆಗೆ ಖರೀದಿಸಿದೆ. ಈ ಕುರಿತು ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಇದು ಸ್ವಜನಪಕ್ಷಪಾತವಲ್ಲವೇ? ಆತನಿಗಿಂತಲೂ ಪ್ರತಿಭಾವಂತರು ಇದ್ದರೂ ಅವರನ್ನೇಕೆ ಖರೀದಿಸಿಲ್ಲ? ಸಚಿನ್ ಪ್ರತಿನಿಧಿಸುತ್ತಿದ್ದ ಮುಂಬೈ ತಂಡವೇ ಆತನನ್ನು ಕೊಳ್ಳಲು ಕಾರಣವೇನು? ಇದು ಮ್ಯಾಜೇನ್‌ಮೆಂಟ್ ಕೋಟಾದಲ್ಲಿ ಸೇರಿಸಿಕೊಂಡಂತೆ ಅಲ್ಲವೇ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಅದೇ ರೀತಿ ಅರ್ಜುನ್ ತೆಂಡೂಲ್ಕರ್ ನಿಜಕ್ಕೂ ಪ್ರತಿಭಾವಂತ ಎಂದಿರುವ ಹಲವರು ಆತನ ಪ್ರದರ್ಶನದ ವಿಡಿಯೋಗಳನ್ನು ಹಾಕಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಸಾಕಷ್ಟು ಟ್ರೋಲ್‌ಗಳು ವ್ಯಕ್ತವಾದ ಬೆನ್ನಲ್ಲೆ ಮುಂಬೈ ಇಂಡಿಯನ್ಸ್ ತಂಡದ ಕೋಚ್ ಮಹೇಲ ಜಯವರ್ಧನೆ ಸ್ಪಷ್ಟನೆ ನೀಡಿದ್ದು, “ಆತನ ಕೌಶಲ್ಯ ಮತ್ತು ಪ್ರತಿಭೆಯ ಆಧಾರದಲ್ಲಿಯೇ ಅರ್ಜುನ್‌ ಕೊಂಡುಕೊಳ್ಳಲಾಗಿದೆ. ಇದು ಅರ್ಜುನ್‌ಗೆ ಕಲಿಕೆಯ ಪ್ರಕ್ರಿಯೆಯಾಗಲಿದೆ ಎಂದು ನಾನು ಭಾವಿಸುತ್ತೇನೆ. ಆತ ಮುಂಬೈ ಪರವಾಗಿ ಆಡಲು ಆರಂಭಿಸಿದ ಮತ್ತು ಈಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಪಾಲಾಗಿದ್ದಾನೆ. ಆತ ವಿಕಾಸಗೊಳ್ಳುತ್ತಾನೆ, ಇನ್ನು ಚಿಕ್ಕ ವಯಸ್ಸಾದರೂ, ಫೋಕಸ್ ಉಳ್ಳವನಾಗಿದ್ದಾನೆ” ಎಂದಿದ್ದಾರೆ.

ಆದರೆ ಟ್ವಿಟರ್‌ನಲ್ಲಿ ಮಾತ್ರ ಅರ್ಜುನ್ ಕಾಲೆಳೆದು ಟ್ರೋಲ್ ಮಾಡಲಾಗುತ್ತಿದೆ. ಇತ್ತೀಚೆಗೆ ರೈತ ಹೋರಾಟದ ವಿರುದ್ಧ ಮತ್ತು ಬಿಜೆಪಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿದ ಸೆಲೆಬ್ರಿಟಿಗಳಲ್ಲಿ ಸಚಿನ್ ಕೂಡ ಒಬ್ಬರಾಗಿದ್ದರು. ಈ ಹಿನ್ನೆಲೆಯಲ್ಲಿಯೂ ಸಹ ಅವರ ಮಗನನ್ನು ಟ್ರೋಲ್ ಮಾಡಲಾಗುತ್ತಿದೆ. ಅವುಗಳಲ್ಲಿ ಕೆಲವನ್ನು ಇಲ್ಲಿ ನೀಡಲಾಗಿದೆ. ಅಜಯ್ ಧುಮಲ್ ಎಂಬುವವರು ಟ್ವೀಟ್ ಮಾಡಿ ನೀವು ಮ್ಯಾನೇಜ್‌ಮೆಂಟ್ ಕೋಟಾದಡಿ ಪ್ರವೇಶ ಪಡೆದರೆ ಹೇಗೆ ಎಂದು ಅರ್ಜುನ್ ತೆಂಡೂಲ್ಕರ್‌ರವರನ್ನು ಉಲ್ಲೇಖಸಿದ್ದಾರೆ.

“ಅರ್ಜುನ್ ತೆಂಡೂಲ್ಕರ್ ಸ್ವಜನಪಕ್ಷಪಾತತ ಅತಿ ಕೆಟ್ಟ ಉತ್ಪನ್ನ ಎಂದು ಈಗ ಕಂಗನಾ ಕರೆಯುತ್ತಾರೆಯೇ? ಅವರಿನ್ನು ಜಯ್ ಶಾ ಕುರಿತು ಮಾತನಾಡಬೇಕಿದೆ” ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತುವಾರಿ ಶ್ರೀವತ್ಸ ಟ್ವೀಟ್ ಮಾಡಿದ್ದಾರೆ.

ಸಚಿನ್ ತೆಂಡೂಲ್ಕರ್‌ರನ್ನು ಬಿಜೆಪಿ ಖರೀದಿಸಿದೆ, ಅವರ ಮಗನನ್ನು ಅಂಬಾನಿ ಖರೀದಿಸಿದ್ದಾರೆ ಎಂದು ದಿ ಬ್ಯಾಡ್ ಇಂಜಿನಿಯರ್ ಎಂಬುವವರು ಟ್ರೋಲ್ ಮಾಡಿದ್ದಾರೆ.

ಸ್ವಜನಪಕ್ಷಪಾತ ಎಂದು ಕಿರುಚುತ್ತಿದ್ದವರು ಈಗ ಎಲ್ಲಿದ್ದಾರೆ? ಎಂದು ರಿಯಾ ಆಂದೋಲನ್‌ಜೀವಿ ಟ್ವೀಟ್ ಮಾಡಿದ್ದಾರೆ.

ಹಿರಿಯ ಪತ್ರಕರ್ತ ರಾಜ್‌ದೀಪ್‌ ಸರ್ದೇಸಾಯಿ ಟ್ವೀಟ್ ಮಾಡಿ “ವಂಶಪಾರಂಪರ್ಯ ಅಥವಾ ರಕ್ತಗುಣದಿಂದ ಕ್ರಿಕೆಟ್ ಆಡಲಾಗುವುದಿಲ್ಲ, ಹಾಗಾಗಿ ನಾನು ಅರ್ಜುನ್ ತೆಂಡೂಲ್ಕರ್ ಪರ ತಿಂತುಕೊಳ್ಳುತ್ತೇನೆ. ಏಕೆಂದರೆ ಆತನನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿಲ್ಲ ಬದಲಿಗೆ ಮುಂಬೈ ಇಂಡಿಯನ್‌ನಂತಹ ಖಾಸಗಿ ತಂಡ ಕೊಂಡುಕೊಂಡಿದೆ. ಅಂತಿಮವಾಗಿ ಆತ ಮೈದಾನದಲ್ಲಿ ತನ್ನ ಸಾಮರ್ಥ್ಯ ಸಾಬೀತುಪಡಿಸಬೇಕಿದೆ. ಕ್ರೀಡೆಗಳಲ್ಲಿ ಶಾರ್ಟ್‌ಕಟ್ ಇರುವುದಿಲ್ಲ, ಅಂತಿಮವಾಗಿ ಪ್ರತಿಭೆಯೊಂದೇ ಉಳಿಯುವುದು” ಎಂದಿದ್ದಾರೆ.


ಇದನ್ನೂ ಓದಿ: ಕನ್ನಡದ ಹುಡುಗನಿಗೆ ಅಚ್ಚರಿಯ ಡಿಮ್ಯಾಂಡ್: ಐಪಿಎಲ್‌ನಲ್ಲಿ ಕೆ.ಗೌತಮ್ ಮೌಲ್ಯ 9.25 ಕೋಟಿ ರೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...