Homeಚಳವಳಿಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ 9ನೇ ದಿನಕ್ಕೆ

ಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ 9ನೇ ದಿನಕ್ಕೆ

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ 177 ಗ್ರಾಮಗಳ ಪಟ್ಟಿ ಮಾಡಿ ಅಬಕಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ.

- Advertisement -
- Advertisement -

ಅಕ್ರಮ ಮದ್ಯ ಮಾರಾಟ ನಿಷೇಧ ಮಾಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಬೇಕು ಎಂದು ಆಗ್ರಹಿಸಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ವತಿಯಿಂದ ರಾಯಚೂರಿನಲ್ಲಿ ಸತ್ಯಾಗ್ರಹಿಗಳು ನಡೆಸುತ್ತಿರುವ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಇಂದಿಗೆ 9 ನೇ ದಿನಕ್ಕೆ ಕಾಲಿಟ್ಟಿದೆ.

ಫೆಬ್ರವರಿ 11 ರಂದು ಗಾಂಧಿ ಪ್ರತಿಮೆಯ ಮುಂಭಾಗ ಹೋರಾಟ ನಡೆಸಲು ಮುಂದಾದಾಗ ರಾಯಚೂರು ಪೊಲೀಸರು ಅವರಿಗೆ ಅನುಮತಿ ನೀಡಿರಲಿಲ್ಲ. ಇದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂದಿರುವ ಉದ್ಯಾನದಲ್ಲಿ ಧರಣಿ ನಡೆಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಇದಕ್ಕೆ ಸ್ಪಂದಿಸದಿದ್ದಾಗ ಪಟ್ಟು ಬಿಡದ ಹೋರಾಟಗಾರರು ಜಿಲ್ಲಾಧಿಕಾರಿಯ ಕಚೇರಿಯ ದ್ವಾರದ ಬಳಿ ರಸ್ತೆಯಲ್ಲೇ ಹೋರಾಟಕ್ಕೆ ಇಳಿದಿದ್ದಾರೆ.

ಫೆಬ್ರವರಿ 12 ರ ಶುಕ್ರವಾರದಂದೂ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟವನ್ನು ಮುಂದುವರೆಸಿದ್ದರು. ಕೊನೆಗೂ ಹೋರಾಟಗಾರರಿಗೆ ಮಣಿದ ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಪತ್ರವನ್ನು ಸ್ವೀಕರಿಸಿ, ಗಾಂಧಿ ಪ್ರತಿಮೆಯ ಬಳಿ ಹೋರಾಟ ನಡೆಸಲು ಅನುಮತಿ ನೀಡಿದ್ದರು. ಅಂದಿನಿಂದ ಗಾಂಧಿ ಪ್ರತಿಮೆಯ ಬಳಿ ಸತ್ಯಾಗ್ರಹಿಗಳು ಅನಿರ್ದಿಷ್ಟಾವಧಿ ಹೋರಾಟವನ್ನು ನಡೆಸುತ್ತಿದ್ದಾರೆ.

ರಾಜ್ಯ ಹೈಕೋರ್ಟ್ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸುವಂತೆ ಸರಕಾರಕ್ಕೆ ಆದೇಶವನ್ನು ನೀಡಿತ್ತು. ಈ ಆದೇಶದ ಹಿನ್ನಲೆಯಲ್ಲಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’  ಜನವರಿ 27 ರಂದು ರಾಜ್ಯದ 21 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕೋರ್ಟಿನ ಈ  ಆದೇಶವನ್ನು ಜಾರಿಗೊಳಿಸುವಂತೆ ಮನವಿಯನ್ನು ಸಲ್ಲಿಸಿತ್ತು.

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ 177 ಗ್ರಾಮಗಳ ಪಟ್ಟಿ ಮಾಡಿ ಅಬಕಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಈ ರೀತಿ ಪಟ್ಟಿ ಮಾಡಿ ಸ್ವೀಕೃತಿ ಪಡೆದುಕೊಂಡಲ್ಲಿ ಮುಂದಿನ ದಿನಗಳಲ್ಲಿ ಅವರ ಮೇಲೆ ಯಾವುದೇ ಕ್ರಮ ಜರುಗಿಸದೇ ಇದ್ದರೆ ಮತ್ತೆ ನಾವು ಕೋರ್ಟಿಗೆ ಹೋಗಲು ಸಹಾಯಕವಾಗಲಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಈ ಕ್ರಮಕ್ಕೆ ಮುಂದಾಗಿ ಎಂದು ಆಂದೋಲನದ ಬಸವರಾಜ್ ಕರೆನೀಡಿದ್ದಾರೆ.

ಮದ್ಯ ನಿಷೇಧ ಆಂದೋಲನದ ಸಂಚಾಲಕರಾದ ಸ್ವರ್ಣ ಭಟ್‌ರವರು ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ನಾವು 2015 ರಿಂದಲೂ ಸಂಪೂರ್ಣ ಮದ್ಯ ನಿಷೇಧಕ್ಕೆ ಹೋರಾಟ ನಡೆಸುತ್ತಲೆ ಬಂದಿದ್ದೇವೆ. ಪ್ರಸ್ತುತ ನಮ್ಮ ಹೋರಾಟ ತಕ್ಷಣಕ್ಕೆ ಅಕ್ರಮ ಮದ್ಯ ಮಾರಾಟ ನಿಲ್ಲಬೇಕು. ಇದನ್ನು ತಡೆಯಲು ನಾವು ಕಾನೂನು ಹೋರಾಟ ನಡೆಸಿ, ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದಿದೆ. ಈ ಆದೇಶದಲ್ಲಿ ಅಕ್ರಮ ಮದ್ಯವನ್ನು ತಡೆಗಟ್ಟಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೇಳಿದೆ. ಡಿಸೆಂಬರ್‌ ಒಂದಕ್ಕೆ ಈ ತೀರ್ಪು ಬಂದರೂ ಇವತ್ತಿನವರೆಗೂ ಸರ್ಕಾರ ಯಾವುದೆ ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾವ ಊರಲ್ಲಿ ಯಾರು ಅಕ್ರಮ ಮದ್ಯ ಮಾರಾಟ ಮಾಡುತ್ತಾರೆ ಎಂದು ಸಾಕ್ಷಿ ಸಮೇತ ಎರೆಡೆರೆಡು ಬಾರಿ ದೂರು ನೀಡಿದ್ದೇವೆ. ಆದರೆ ಸರ್ಕಾರ ಯಾವುದಕ್ಕೂ ಸರ್ಕಾರ ಕಿವಿ ಗೊಡುತ್ತಿಲ್ಲ. ಕಳೆದ ಸೋಮವಾರ ಕೂಡಾ ಎಲ್ಲಾ ಜಿಲ್ಲೆಗಳಲ್ಲಿ ಯಾರ್‍ಯಾರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ನೆನಪಿಸಿದ್ದೇವೆ. ಇದನ್ನೂ ಸರ್ಕಾರ ಗಣನೆಗೆ ತೆಗೆದುಕೊಂಡಿಲ್ಲ. ಇದಕ್ಕಾಗಿ ನಾವು ರಾಯಚೂರಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದೇವೆ. ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ನಾವು ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ, ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಮಹಿಳೆಯರ ನಿಯೋಗವನ್ನು ಭೇಟಿಯಾಗಬೇಕು ಎಂದು ಸ್ವರ್ಣ ಭಟ್ ಒತ್ತಾಯಿಸಿದ್ದಾರೆ.

“ಹೈಕೋರ್ಟ್ ಆದೇಶದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಮಹಿಳಾ ಸಂಘಟನೆಗಳು ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಲು 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ 15 ದಿನಗಳು ಮುಗಿದರೂ ಸರಕಾರ ಈ ಆದೇಶವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಸರಕಾರ ಉಚ್ಛ ನ್ಯಾಯಾಲಯದ ಆದೇಶವನ್ನು ಸಂಪೂರ್ಣ ನಿರ್ಲಕ್ಷ ಮಾಡಿದೆ. ಹಾಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಆಕ್ರೋಶ ವ್ಯಕ್ತಪಡಿಸಿದೆ.

ಆಂದೋಲನವು, “ಹೈಕೋರ್ಟ್ ಆದೇಶದಂತೆ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸಬೇಕು. ಅಕ್ರಮ ಮದ್ಯ ಮಾರಾಟದ ನಿಯಂತ್ರಣಕ್ಕೆ ಪ್ರತಿ ಹಳ್ಳಿಯಲ್ಲಿ 5 ಜನ ಮಹಿಳೆಯರನ್ನೊಳಗೊಂಡ ಕಾವಲು ಸಮಿತಿ ರಚಿಸಬೇಕು ಮತ್ತು ಆ ಸಮಿತಿಗೆ ಅರೆ ನ್ಯಾಯಾಂಗ ಅಧಿಕಾರ ನೀಡಬೇಕು” ಎಂದು ಆಗ್ರಹಿಸಿದೆ.

ಈಗಾಗಲೆ ಕರ್ನಾಟಕ ಪಾನ ನಿಷೇಧ ಕಾಯ್ದೆ 1961 ರ, 2 ನೇ ಅಧ್ಯಾಯ ಕ್ರಮ ಸಂಖ್ಯೆ 8 ಪ್ರಕಾರ ಸಾಮಾನ್ಯ ಸರಕಾರಿ ಆದೇಶ (G.O) ದಲ್ಲಿ ಈ ಅಧಿಕಾರವನ್ನು ನೀಡಬಹುದಾಗಿದೆ ಎಂದು ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಹೇಳಿದೆ.

“ಮಹಾರಾಷ್ಟ್ರ ಪಾನ ನಿಷೇಧ ಕಾಯ್ದೆಯಲ್ಲಿರುವಂತೆ ಕರ್ನಾಟಕದಲ್ಲೂ ಕನಿಷ್ಟ 10% ಸದಸ್ಯರು ಆಯಾ ಹಳ್ಳಿಯ ಸರಹದ್ದಿನಲ್ಲಿ ಮದ್ಯಮಾರಾಟಕ್ಕೆ ಪರವಾನಿಗೆ ನೀಡಲು ನಿರಾಕರಿಸಿದರೆ ಅಲ್ಲಿ ಪರವಾನಿಗೆ ಕೊಡಬಾರದು. ಈ ಅಂಶಗಳನ್ನು ಕರ್ನಾಟಕ ಪಾನ ನಿಷೇಧ ಕಾಯ್ದೆ ಅಧ್ಯಾಯ 3 ರಲ್ಲಿ ಸರಕಾರ ಸೇರಿಸಬೇಕು” ಎಂದು ಆಂದೋಲನವು ಒತ್ತಾಯಿಸಿದೆ.

ಅಲ್ಲದೆ ರಾಜ್ಯ ಸರ್ಕಾರವು ಆನ್‍ಲೈನ್ ಮದ್ಯಮಾರಾಟದ ಚಿಂತನೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಸತ್ಯಾಗ್ರಹಿಗಳು ಒತ್ತಾಯಿಸಿದ್ದು, ಈ ಹಕ್ಕೊತ್ತಾಯಗಳನ್ನು ಚರ್ಚಿಸಲು ಮುಖ್ಯಮಂತ್ರಿಗಳು ಮಹಿಳೆಯರ ನಿಯೋಗದೊಂದಿಗೆ ತಕ್ಷಣ ಮಾತುಕತೆ ನಡೆಸಬೇಕು. ತಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದ್ದು, ರಾಜ್ಯದ ಎಲ್ಲ ಜಿಲ್ಲೆಯ ಸಾವಿರಾರು ಮಹಿಳೆಯರು ಈ ಸತ್ಯಾಗ್ರಹವನ್ನು ಮುನ್ನಡೆಸಲಿದ್ದಾರೆ ಎಂದು ಹೋರಾಟಗಾರರು ಹೇಳಿದ್ದಾರೆ.


ಇದನ್ನೂ ಓದಿ: ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...