Homeಅಂಕಣಗಳುನೂರರ ನೋಟ: ಸಾಕಿನ್ನು ನಿರಂಕುಶಪ್ರಭುತ್ವ ರೈತರ ಬೇಡಿಕೆಗಳನ್ನು ಪೂರೈಸಿ, ಗೌರವಿಸಿ

ನೂರರ ನೋಟ: ಸಾಕಿನ್ನು ನಿರಂಕುಶಪ್ರಭುತ್ವ ರೈತರ ಬೇಡಿಕೆಗಳನ್ನು ಪೂರೈಸಿ, ಗೌರವಿಸಿ

- Advertisement -
- Advertisement -

ಮೋದಿಯವರ ನಿರಂಕುಶಪ್ರಭುತ್ವ ಕೊರೊನಾವನ್ನು ಅಸ್ತ್ರವಾಗಿ ದುರ್ಬಳಕೆ ಮಾಡಿಕೊಂಡು, ತನ್ನನ್ನು ವಿರೋಧಿಸುವವರನ್ನು ದಮನ ಮಾಡಲು ತೊಡಗಿದೆ. ಪ್ರಜೆಗಳ ಹಕ್ಕುಗಳನ್ನು ಕಸಿಯಲು ತೊಡಗಿದೆ. ತೋರಿಕೆಯ ತಿದ್ದುಪಡಿಗಳನ್ನು ತಂದು ಭ್ರಮೆ ಉಂಟುಮಾಡುತ್ತದೆ. ಈ ಮೂಲಕ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ರೈತ ಸಮೂಹದ ಭವಿಷ್ಯವನ್ನೇ ಹಾಳು ಮಾಡುವ ಕಾರ್ಯದಲ್ಲಿ ತೊಡಗಿದೆ. ಮೋದಿ ಸರ್ಕಾರ ರೈತರ ಹಿತಾಸಕ್ತಿಗೆ ಧಕ್ಕೆ ತರುವ ಕಾಯ್ದೆಯನ್ನು ಯಾವ ಅಡೆತಡೆ ಇಲ್ಲದೆ ಅಂಗೀಕಾರ ಪಡೆಯಬಹುದೆಂದು ಭಾವಿಸಿತ್ತು. ಈಗ ಸರ್ಕಾರಕ್ಕೆ ಮನವರಿಕೆಯಾಗಿದೆ ತಾನು ಅಂದುಕೊಂಡಷ್ಟು ಸುಲಭವಾಗಿ ರೈತ ವಿರೋಧಿ ಕಾನೂನನ್ನು ಜಾರಿಗೆ ತರುವುದು ಆಗದ ಕೆಲಸ ಎಂದು. ’ಸ್ವಾವಲಂಬಿ ರೈತರನ್ನು ನಿರ್ನಾಮ ಮಾಡಿ ಅವರನ್ನು ಎಂಎನ್‌ಸಿಗಳಿಗೆ ಶರಣಾಗುವಂತೆ ಮಾಡುವುದು ಮೋದಿಯವರ ಉದ್ದೇಶವಾಗಿತ್ತು’ ಎನ್ನುತ್ತಾರೆ ದೆಹಲಿಯಲ್ಲಿ ಬೀಡು ಬಿಟ್ಟಿರುವ ರೈತ ಮುಖಂಡರು.

ಕಳೆದ 15 ವರ್ಷಗಳಿಂದಲೂ ರೈತರು ಈ ಸುಧಾರಣೆಗಳಿಗಾಗಿ ಹೋರಾಡಿದ್ದಲ್ಲ. ರೈತರ ಹಿತರಕ್ಷಣೆಗಾಗಿ ಸುಧಾರಣೆ ಕೇಳುತ್ತಿದ್ದೆವೇ ಹೊರತು ಈ ಕರಾಳ ಶಾಸನದ ಜಾರಿಗಾಗಲ್ಲ. ನಾವು ಬೆಳೆದ ಬೆಲೆಗೆ ನ್ಯಾಯಯುತ ವೈಜ್ಞಾನಿಕ ಬೆಲೆ ದೊರೆಯುತ್ತಿಲ್ಲ. ರೈತರ ಆತ್ಮಹತ್ಯೆ ತಡೆಗಟ್ಟಲು ಸುಧಾರಣೆಗಳಾಗುತ್ತಿಲ್ಲ. WTO ಷರತ್ತುಗಳನ್ನು ನಮ್ಮ ಮೇಲೆ ಹೊರೆಸಲು ಈ ಮಸೂದೆ ಜಾರಿಗೆ ತಂದಿರುವುದಲ್ಲವೇ?

ಜನರ ಸಮಸ್ಯೆಗಳನ್ನು ಕೂಲಂಕುಷವಾಗಿ ಚರ್ಚಿಸಿ, ಅವರ ಬವಣೆಯನ್ನು ಪರಿಹರಿಸುವ ಸಲುವಾಗಿ ಮಂಡಿಸಲಾದ ಮಸೂದೆಯನ್ನು ಗಂಭೀರವಾಗಿ ಪರಗಣಿಸಿ, ಗಂಟೆಗಟ್ಟಲೆ ವಿಶ್ಲೇಷಣೆಗೆ ಒಳಪಡಿಸುವ, ಆನಂತರ ಮಸೂದೆಯ ಪರಿಶೀಲನೆಗಾಗಿ ಸೆಲೆಕ್ಟ್ ಕಮಿಟಿಗೆ ವಹಿಸುವ ಸತ್‌ಸಂಪ್ರದಾಯ ಇತ್ತು. ಇದರಿಂದ ದೋಷರಹಿತವಾದ ಎಲ್ಲರಿಗೂ ಒಪ್ಪಿಗೆಯಾಗುವ ಕಾನೂನು ಜಾರಿಗೆ ಬರುತ್ತಿತ್ತು. ವರ್ಷದಲ್ಲಿ 60-90 ದಿವಸಗಳ ಕಾಲ ಕೂರುತ್ತಿದ್ದ ಲೋಕಸಭೆ ಈಗ ವರ್ಷದಲ್ಲಿ ಹತ್ತು, ಹದಿನೈದು ದಿನಗಳಿಗೆ ಸೀಮಿತವಾಗಿದೆ. ಈ ಕಾಟಾಚಾರದ ಲೋಕಸಭೆ ನಮಗೆ ಬೇಕೆ? ಪಾರ್ಲಿಮೆಂಟಿನ ಕಲಾಪದಲ್ಲಿ ಭಾಗವಹಿಸುವ ಕೆಲ ಮಂತ್ರಿಗಳು ಮಾತನಾಡುವ ಧಾಟಿ ಅಸಹ್ಯಕರವಾಗಿರುತ್ತದೆ. ಉತ್ತಮ ಅಭಿರುಚಿಯ ಅಭಾವ ಎದ್ದು ಕಾಣುತ್ತದೆ. ಸಂಯಮ ರಹಿತವಾದ ಈ ಮಾತಿನ ವೈಖರಿ ವಾಕರಿಕೆ ಹುಟ್ಟಿಸುವಂಥದ್ದು. ವಿರೋಧ ಪಕ್ಷಗಳ ಕಠಿಣ ಮಾತುಗಳಿಗೆ ಸಹನೆ ಕಳೆದುಕೊಳ್ಳುವ ಆಡಳಿತ ಪಕ್ಷದ ಶಾಸಕರು ಮಂತ್ರಿಗಳು ತಲಹರಟೆ ಮಾತುಗಳನ್ನಾಡುತ್ತಾರೆ.

ಎಂಪಿಗಳಿಗೆ ಮತ್ತು ಎಂಎಲ್‌ಎಗಳಿಗೆ ತಮ್ಮ ತಮ್ಮ ಶಾಸನಸಭೆಗಳಲ್ಲಿ ತಮ್ಮ ಮನಬಂದಂತೆ ಮಾತನಾಡುವ ಅಧಿಕಾರವನ್ನು ನಮ್ಮ ರಾಜ್ಯಾಂಗ ಒದಗಿಸಿದೆ. ಈ ವಾಕ್‌ಸ್ವಾತಂತ್ರ್ಯವನ್ನು ಕ್ರಿಮಿನಲ್ ಅಥವಾ ಸಿವಿಲ್ ನ್ಯಾಯಾಲಯಗಳು ಪ್ರಶ್ನಿಸುವಂತಿಲ್ಲ. ಪ್ರಜೆಗೂ ವಾಕ್‌ಸ್ವಾತಂತ್ರ್ಯವನ್ನು ನೀಡಿರುವ ರಾಜ್ಯಾಂಗ, ಪ್ರಜೆ ಮಾತನಾಡುವಾಗ ಇತರರ ಮೂಲಭೂತ ಹಕ್ಕುಗಳಿಗೆ ಚ್ಯುತಿ ಬರುವಂತೆ ಮಾತನಾಡುವ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿದೆ. ಪ್ರಜೆಯ ಮಾತನಾಡುವ ಹಕ್ಕನ್ನು ಶಾಸನಾಂಗ ಬ್ರೀಚ್ ಆಫ್ ಪ್ರಿವಿಲೆಜ್ ನೆಪ ಒಡ್ಡಿ ಮೊಟಕುಗೊಳಿಸುವುದಕ್ಕೆ ಸಂವಿಧಾನದಲ್ಲಿ ಎಡೆಯಿಲ್ಲ. ಇದರಂತೆಯೇ ಪ್ರಜೆಯ ವಾಕ್‌ಸ್ವಾತಂತ್ರ್ಯವನ್ನು ನ್ಯಾಯಾಲಯವಾಗಲಿ, ಪ್ರಾಸಿಕ್ಯೂಶನ್‌ನವರಾಗಲಿ ಪ್ರಶ್ನಿಸುವ ಅಧಿಕಾರ ಇಲ್ಲ.

ಕೇಂದ್ರ ಸರ್ಕಾರದ ಈ ವರ್ಷದ ಹಣಕಾಸಿನ ಪರಿಸ್ಥಿತಿ ತಿಳಿಯಬೇಕು. ಆರ್ಥಿಕ ಸ್ಥಿತಿ ಬಹಳ ಬಿಗಡಾಯಿಸಿದೆ. ಹಣಕಾಸಿನ ಸಚಿವಾಲಯದ ಮಾತನ್ನು ನಂಬುವುದಾದರೆ ಆಹಾರ ಧಾನ್ಯಗಳನ್ನು ಕೊಳ್ಳಲು ಸರ್ಕಾರದ ಬಳಿ ಹಣವಿಲ್ಲ. ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾಗೆ ಈಗಾಗಲೇ ಕೊಟ್ಟಿರುವ ಸಾಲದ ಮೊತ್ತ 2.65 ಲಕ್ಷ ಕೋಟಿ ರೂ. ಅಂದರೆ 2014ರಿಂದ ಈಚೆಗೆ ಈ ಸಾಲ ಶೇಕಡ 190ರಷ್ಟು ಅಧಿಕವಾಗಿದೆ. ಆದರೆ ಜನರಿಗೆ ಆಹಾರ ಒದಗಿಸುವುದು ಕಾನೂನುರೀತ್ಯಾ ಸರ್ಕಾರದ ಜವಬ್ದಾರಿ. ಹಣದ ಕೊರತೆ ಇದೆ ಎಂದು ಈ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವೇ ಇಲ್ಲ. ಈ ಕಾಯ್ದೆಗಳಿಂದ ಸರ್ಕಾರದ ಬದ್ಧ ಜವಾಬ್ದಾರಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ, ಖಾಸಗಿಯವರಿಗೆ ವಹಿಸಿಕೊಡಲು ಬರುವುದೇ? ಗಂಭೀರವಾಗಿ ವಿಚಾರ ಮಾಡಬೇಕಾದ ಜಟಿಲ ಪ್ರಶ್ನೆ ಇದು.

ಪಾರ್ಲಿಮೆಂಟ್ ಈಗ ದುರ್ಬಲವಾಗಿದೆ. ಸರ್ಕಾರ ಪಾರ್ಲಿಮೆಂಟ್‌ನ್ನು ಕಡೆಗಣಿಸುತ್ತಿದೆ. ಚರ್ಚೆ, ಪ್ರಶ್ನೋತ್ತರ ಮಸೂದೆಯನ್ನು ಸೆಲೆಕ್ಟ್ ಕಮಿಟಿಗೆ ಒಪ್ಪಿಸುವುದು, ಮತ ಎಣಿಕೆ ಎಲ್ಲಕ್ಕೂ ವಿದಾಯ ಹೇಳಿದೆ. ಆದ್ದರಿಂದ ಜನರ ನಿಜವಾದ ಪಾರ್ಲಿಮೆಂಟ್ ಅಸ್ತಿತ್ವಕ್ಕೆ ಬರಬೇಕಾಗಿದೆ. ಆ ಕೆಲಸ ಈಗಾಗಲೇ ಪಂಜಾಬ್, ಹರಿಯಾಣ ರೈತರಿಂದ ಆರಂಭವಾಗಿದೆ. ರೈತರಿಂದ ಪ್ರಾರಂಭವಾಗಿರುವ ಈ ಜನತಾ ಪಾರ್ಲಿಮೆಂಟ್ ವಿಸ್ತಾರಗೊಳ್ಳಬೇಕಾಗಿದೆ. ಕಾರ್ಮಿಕರು, ನಿರುದ್ಯೋಗಿಗಳು, ವಲಸೆ ಕಾರ್ಮಿಕರು, ದಲಿತರು ಜಾಗೃತ ನಾಗರಿಕರು ಪ್ರಜಾಪ್ರಭುತ್ವವನ್ನು ರಕ್ಷಿಸುವ ಮೂಲಕ ನಿರಂಕುಶಪ್ರಭುತ್ವವನ್ನು ಎದುರಿಸುವ ಇಚ್ಛೆಯುಳ್ಳ ಎಲ್ಲರೂ ಕೂಡಿಕೊಂಡು ಒಂದು ವಿಸ್ತರಿತ ಜನತಾ ಪಾರ್ಲಿಮೆಂಟ್ ಒಂದನ್ನು ತುರ್ತಾಗಿ ಅಸ್ತಿತ್ವಕ್ಕೆ ತರಬೇಕಾಗಿದೆ. ಜಮೀನು ಮತ್ತು ವ್ಯವಸಾಯ ಕ್ಷೇತ್ರಗಳನ್ನು ರೈತರಿಗೇ ಬಿಟ್ಟುಕೊಟ್ಟು, ವಿಚಿತ್ರ ರೀತಿಯ ಸುಧಾರಣೆಗಳನ್ನು ನುಸುಳಿಸುವ ಸರ್ಕಾರದ ಉಸಾಬರಿಯನ್ನೇ ಕೈ ಬಿಡಬೇಕೆಂದು ಎಚ್ಚರಿಕೆ ನೀಡಬೇಕಾಗಿದೆ. ಆ ಕಾರಣದಿಂದಲೆ ರೈತರಿಗೂ ಸರ್ಕಾರಕ್ಕೂ ಮನಸ್ತಾಪ ಏರ್ಪಟ್ಟಿರುವುದು.

ಸರ್ವೋಚ್ಚ ನ್ಯಾಯಾಲಯ ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ, ಒಂದು ಸಮಿತಿ ರಚಿಸುವ ಮೂಲಕ ರೈತರ ಬೇಡಿಕೆಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಡಿ ಎಂದು ಮೋದಿ ಸರ್ಕಾರಕ್ಕೆ ಸಲಹೆಕೊಟ್ಟಿದೆ. ಸಮಿತಿ ರಚಿಸುವುದರಿಂದ ಈ ಜಟಿಲ ಪ್ರಶ್ನೆ ಬಗೆಹರಿಯುವಂತೆ ಕಾಣುತ್ತಿಲ್ಲ. ರೈತರು ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿದೆ, ಆದರೆ ಇದಕ್ಕೆ ರೈತರು ವಿರೋಧ ತೋರಿಸಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ. ಆರ್‌ಎಸ್‌ಎಸ್‌ನ ಭಾರತ ಕಿಸಾನ್ ಸಂಘ ತಾನು ರೈತರ ಪರ ಎಂದು ಘೋಷಣೆ ಮಾಡಿ, ಇಂತಹ ಘೋರ ಕಾನೂನುಗಳನ್ನು ರಚಿಸುತ್ತಿರುವುದನ್ನು ವಿರೋಧ ಮಾಡದೆ ಇರುವುದು ಪ್ರಪಂಚಕ್ಕೇ ಗೊತ್ತಿದೆ.

ಮೋದಿಯವರ ಸರ್ಕಾರ, ಜಮೀನು, ವ್ಯವಸಾಯ ಮತ್ತು ಮಾರುಕಟ್ಟೆಗೆ ಸಂಬಂಧಪಟ್ಟಂತೆ 3 ಕರಾಳ ಕಾನೂನುಗಳನ್ನು ಆರ್ಡಿನೈಸ್ ಮುಖಾಂತರ ಜಾರಿಗೆ ತಂದು, ಆ ನಂತರ ಪಾರ್ಲಿಮೆಂಟಲ್ಲಿ ಕಾನೂನುಕಟ್ಟಲೆಗಳನ್ನು ಧಿಕ್ಕರಿಸಿ, ಇವನ್ನು ಕಾನೂನುಗಳಾಗಿ ಪರಿವರ್ತಿಸಿತು. ವ್ಯವಸಾಯ ಭೂಮಿಯನ್ನು ಕಾರ್ಪೊರೇಟ್ ಕಂಪನಿಗಳ ವಶ ಮಾಡುವುದು, ರೈತರನ್ನು ಕೂಲಿಗಳಾಗಿ ಮಾರ್ಪಡಿಸಿ ತಮಗೆ ಬೇಕಾದ ಬೆಳೆ ಬೆಳೆದುಕೊಡಲು ಈ ಕಾನೂನುಗಳಲ್ಲಿ ಪರೋಕ್ಷವಾಗಿ ಅವಕಾಶ ಮಾಡಿಕೊಡಲಾಗಿದೆ. ರೈತರ ಹಿತದೃಷ್ಟಿಯಿಂದ ರಚಿಸುವ ಮಾರ್ಕೆಟ್ ಯಾರ್ಡ್‌ಗಳನ್ನೂ ಮುಚ್ಚಿಸುವುದು, ರೈತರು ಕೂಲಿಯಾಳುಗಳನ್ನಾಗಿಸಿ, ಅವರು ಬೆಳೆದ ಬೆಳೆಯನ್ನೆಲ್ಲ ವಶಕ್ಕೆ ತೆಗೆದುಕೊಳ್ಳುವುದು, ರೈಲ್ವೆ ನಿಲ್ದಾಣಗಳ ಸಮೀಪ ಗೋಡೌನ್‌ಗಳನ್ನು ಮಾಡಿಕೊಂಡು ಗೂಡ್ಸ್ ರೈಲಿನ ಮೂಲಕ ಅವುಗಳನ್ನು ತಮಗೆ ಬೇಕಾದಂತೆ ಮಾರುಕಟ್ಟೆ ಇರುವ ಸ್ಥಳಗಳಿಗೆ ರವಾನಿಸುವುದು, ಅವುಗಳನ್ನು ದುಬಾರಿ ಬೆಲೆಗೆ ಮಾರಿಕೊಳ್ಳುವುದು ಇವಕ್ಕೆಲ್ಲಾ ಅವಕಾಶ ಕಲ್ಪಿಸುವುದಕ್ಕೋಸ್ಕರ ಮಾಡಿರುವ ಕಾನೂನುಗಳನ್ನು ಹಿಂಪಡೆಯುವುದರ ಮೂಲಕ ಈ ದೇಶದ ರೈತರನ್ನು ಸರ್ಕಾರ ಗೌರವಿಸಬೇಕಿದೆ.


ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...