Homeಚಳವಳಿರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಒಪ್ಪಂದ ಎಂಬುದು ಯಾವಾಗಲೂ ಇಬ್ಬರು ಸಮಾನರ ನಡುವೆ ನಡೆಯುವಂತಹದ್ದು. ಆದರೆ ನಮ್ಮ ಮತ್ತು ಕಾರ್ಪೊರೇಟ್‌ಗಳ ಮಧ್ಯೆ ಸಮಾನವಾದದ್ದು ಯಾವುದು ಇಲ್ಲ. ಹಾಗಾಗಿ ಈ ಕಾಯ್ದೆಗಳು ನಮಗೆ ಬೇಡ.

- Advertisement -
- Advertisement -

’ನಮ್ಮ ಪಂಜಾಬ್, ಹರಿಯಾಣದ ಅಭಿವೃದ್ಧಿ ಉತ್ತಮ ರಸ್ತೆಗಳು, ಎಪಿಎಂಸಿ ಮಂಡಿಗಳಿಂದ ಆಗಿದೆ. ನಾವು ಎಪಿಎಂಸಿಗೆ ಶೇಕಡಾ 8 ರಷ್ಟು ತೆರಿಗೆ ಪಾವತಿಸುತ್ತೇವೆ. ಇದರಿಂದಾಗಿ ನಮ್ಮ ಗ್ರಾಮದ ರಸ್ತೆಗಳೂ ಇಷ್ಟು ವಿಶಾಲವಾಗಿ, ಉತ್ತಮವಾಗಿವೆ. ಇಂತಹ ರಸ್ತೆಗಳನ್ನು ನೀವು ಬಿಹಾರ, ರಾಜಸ್ಥಾನಗಳಲ್ಲಿ ಕಾಣಲು ಸಾಧ್ಯವಿಲ್ಲ. ಈ ಕಾನೂನುಗಳು ಜಾರಿಗೆ ಬಂದಿದ್ದೇ ಆದರೆ, ಎಪಿಎಂಸಿ ಕೊನೆಗೊಳ್ಳುತ್ತವೆ. ಇದರ ಜೊತೆಗೆ ನಮ್ಮ ಗ್ರಾಮಗಳ ಅಭಿವೃದ್ಧಿಯೂ ಕೊನೆಗೊಳ್ಳುತ್ತದೆ”. ಹೀಗಾಗಿ ಈ ಕರಾಳ ಕಾನೂನುಗಳು ಕೃಷಿ ಕ್ಷೇತ್ರಕ್ಕೆ ಮಾತ್ರವಲ್ಲ ದೇಶದ ಅಭಿವೃದ್ಧಿಗೂ ಮಾರಕವಾಗಿವೆ” ಹೀಗೆ ಕೃಷಿ ಕಾನೂನುಗಳ ಬಗ್ಗೆ ಮಾತನಾಡುತ್ತಾ ಹೋಗಿದ್ದು ಪಂಜಾಬಿನ ಯುವಕ ಬಲ್ಜಿತ್ ಸಿಂಗ್.

24 ವರ್ಷದ ಯುವಕ ಬಲ್ಜಿತ್ ಸಿಂಗ್, ಪಂಜಾಬಿನ ಸಂಗ್ರೂರ್ ಜಿಲ್ಲೆಯ ರೋಜಾವ್ ಗ್ರಾಮದ ನಿವಾಸಿ. ಹರಿಯಾಣದ ಹಿಸಾರ್‌ ಗುರುಜಂಭೇಶ್ವರ ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಎಸ್‌ಸಿ (ಭೌತಶಾಸ್ತ್ರ) ಅಧ್ಯಯನ ಮಾಡುತ್ತಿರುವ ಇವರು ನವೆಂಬರ್ 26 ರಿಂದ ಟಿಕ್ರಿ ಗಡಿಯಲ್ಲಿ ರೈತ ಹೋರಾಟದ ಭಾಗವಾಗಿದ್ದರು. 83 ದಿನಗಳ ಕಾಲ ಹೋರಾಟದ ಭಾಗವಾಗಿದ್ದ ಇವರಿಗೆ ಈಗ ಗ್ರಾಮದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ.

ಮುಂದಿನ ತಿಂಗಳು ಊರಿನ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಇಷ್ಟು ದಿನಗಳ ಕಾಲ ರೈತ ಹೋರಾಟದಲ್ಲಿ ಭಾಗಿಯಾಗಿ ರೈತರ ಪರವಾಗಿದ್ದ ಬಲ್ಜಿತ್‌ ಸಿಂಗ್ ಅವರನ್ನು ಈಗಾಗಲೇ ಅವಿರೋಧವಾಗಿ ಗ್ರಾಮ ಪಂಚಾಯಿತಿಯ ಸರ್‌ಪಂಚ್ ಆಗಿ ಆಯ್ಕೆ ಮಾಡಲಾಗಿದೆ. ಚುನಾವಣೆಗೆ ಯಾರು ನಾಮಪತ್ರ ಸಲ್ಲಿಸದಿರುವಂತೆ ಗ್ರಾಮದಲ್ಲಿ ಹೇಳಲಾಗಿದ್ದು, ಊರಿನ ಮುಖಂಡರು ಇವರನ್ನು ಸರ್‌ಪಂಚ್ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಲ್ಜಿತ್ ಸಿಂಗ್, ’ಈ ಕೃಷಿ ಕಾನೂನುಗಳ ಬಗ್ಗೆ ನಮಗೆ ತಿಳಿದಿದೆ. ಇವುಗಳು ನಮ್ಮ ಜೀವನಮಟ್ಟ, ನಮ್ಮ ಗ್ರಾಮಗಳ ಅಭಿವೃದ್ಧಿಯನ್ನು ಬಲಿ ಪಡೆಯಲಿವೆ. ಈ ಕಾನೂನುಗಳ ಪ್ರಕಾರ ರೈತರು ನ್ಯಾಯಾಲಯದ ಮೊರೆ ಹೋಗುವಂತಿಲ್ಲ. ತಮ್ಮ ಜಿಲ್ಲೆಯ ಡಿಸಿ, ಎಸ್‌ಡಿಎಂ ಅಧಿಕಾರಿ ಬಳಿ ಹೋಗಬೇಕಾಗಿದೆ. ನೀವೇ ಯೋಚನೆ ಮಾಡಿ ಒಬ್ಬ ರೈತ, ಅಂಬಾನಿ, ಅದಾನಿಯಂತಹ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಹೋರಾಡಲು ಸಾಧ್ಯವೇ..? ಈ ಅಧಿಕಾರಿಗಳು ಸಹ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಮಾತನಾಡಲು ಸಾಧ್ಯವೆ..? ಕಂಪನಿಗಳು ತಮಗೆ ಬೇಕಾದವರನ್ನು ಅಧಿಕಾರಿಗಳನ್ನಾಗಿ ಮಾಡುವುದಿಲ್ಲವೇ…? ಎಂದು ಬಲ್ಜಿತ್ ಸಿಂಗ್ ಪ್ರಶ್ನಿಸುತ್ತಾರೆ.

’ಕಾಂಟ್ಯ್ರಾಕ್ಟ್ ಫಾರ್ಮಿಂಗ್ ಬಗ್ಗೆ ನೀವೇ ಹೇಳಿ, ಒಪ್ಪಂದ ಎಂಬುದು ಯಾವಾಗಲೂ ಇಬ್ಬರು ಸಮಾನರ ನಡುವೆ ನಡೆಯುವಂತಹದ್ದು. ಆದರೆ ನಮ್ಮ ಮತ್ತು ಕಾರ್ಪೊರೇಟ್‌ಗಳ ಮಧ್ಯೆ ಸಮಾನವಾದದ್ದು ಯಾವುದು ಇಲ್ಲ. ಒಪ್ಪಂದದ ಕೃಷಿ ಪ್ರಕಾರ ಕಂಪನಿಗಳೇ ರೈತರು ಏನು ಬೆಳೆಯಬೇಕೆಂದು ಹೇಳುತ್ತಾರೆ. ತಾವೇ ಬಿತ್ತನೆ ಬೀಜಗಳನ್ನು ನೀಡುತ್ತಾರೆ. ಅಲ್ಲಿ ನಾವು ನಮ್ಮ ಹೊಲದಲ್ಲೇ ಕೇವಲ ಕಾರ್ಮಿಕರಾಗಿ ಕೆಲಸ ಮಾಡಬೇಕಾಗುತ್ತದೆ’ ಎಂದು ತಿಳಿಸುತ್ತಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

’ಈ ಕಂಪನಿಗಳು ಹೇಗೆ ಕೆಲಸ ಮಾಡುತ್ತವೆ ಎಂದರೆ ಉದಾಹರಣೆಗೆ, ಅಮೆರಿಕಾದಲ್ಲಿ ಹಂದಿ ಮಾಂಸ ಹೆಚ್ಚು ಬಳಕೆಯಾಗುತ್ತದೆ. ಹಂದಿಗಳಿಗೆ ಆಹಾರವಾಗಿ ಸೋಯಾಬೀನ್ ನೀಡಲಾಗುತ್ತದೆ. ಸೋಯಾಬೀನ್‌ ಗಿಡದ ಬೇರುಗಳು ಭೂಮಿಯ ಆಳಕ್ಕೆ ಹೋಗುತ್ತವೆ. ಸತತವಾಗಿ 5 ವರ್ಷಗಳ ಕಾಳ ಸೋಯಾಬೀನ್ ಬೆಳೆದರೆ ಆ ಭೂಮಿ ಬಂಜರುಗೊಳ್ಳುತ್ತದೆ. ಇದೇ ರೀತಿಯಲ್ಲಿ ಒಪ್ಪಂದದ ಕೃಷಿಯಲ್ಲಿ ನಾವು ಕಂಪನಿಗಳು ಹೇಳಿದನ್ನು ಬೆಳೆಯಬೇಕಾಗುತ್ತದೆ. ನಮ್ಮ ಭೂಮಿಯ ಫಲವತ್ತತೆ ಹಾಳಾಗುತ್ತದೆ. ನಮ್ಮ ರೈತರಿಗೆ ಏನು ಬೆಳೆಯಬೇಕೆಂಬ ನಗ್ಗೆ ತಿಳುವಳಿಕೆ ಇದೆ. ಕಂಪನಿಗಳಿಗೆ ಹಣ, ಉತ್ಪಾದನೆ ಮಾತ್ರ ಬೇಕು. ಭೂಮಿಯ ಬಗ್ಗೆ ಯೋಚಿಸುವುದಿಲ್ಲ. ಹೀಗಾಗಿ ನಾವು ಈ ಕಾನೂನುಗಳನ್ನು ವಿರೋಧಿಸುತ್ತೇವೆ’ ಎಂದು ವಿಸ್ತಾರವಾಗಿ ತಿಳಿಸುತ್ತಾರೆ.

ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್: ರೈತಹೋರಾಟದ ತವರು ಪಂಜಾಬ್‌ನಲ್ಲಿ ತೀವ್ರಗೊಳ್ಳುತ್ತಿರುವ ಚಳವಳಿ

“ಖಾಸಗಿ ಕ್ಷೇತ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಈಗಾಗಲೇ ನಾವು ಶಿಕ್ಷಣ ಕ್ಷೇತ್ರದಲ್ಲಿ ಅನುಭವಿಸಿದ್ದೆವೆ. ಸರ್ಕಾರಿ ಶಾಲಾ-ಕಾಲೇಜುಗಳ ಸ್ಥಿತಿಗತಿಗಳು ಹೇಗಾಗಿವೆ? ಸರ್ಕಾರಿ ಶಾಲೆಗಳು ಮುಚ್ಚಿಹೋಗುತ್ತಿರುವುದು, ಖಾಸಗಿ ಶಿಕ್ಷಣ ಕ್ಷೇತ್ರದ ಧನದಾಹ ನೋಡಿದ್ದೇವೆ. ಅಂದೇ ನಾವು ಎಚ್ಚೆತ್ತುಕೊಂಡಿದ್ದರೆ ಇಂದು ಸರ್ಕಾರಿ ಶಿಕ್ಷಣ ಕ್ಷೇತ್ರ ಹಾಳಾಗುತ್ತಿರಲಿಲ್ಲ. ಈಗ ಕೃಷಿ ಕ್ಷೇತ್ರವನ್ನು ಖಾಸಗಿಯವರಿಗೆ ಬಿಟ್ಟು ನಾವು ಮುಂದೆ ಮತ್ತಷ್ಟು ಹೀನಾಯ ಸ್ಥಿತಿಗೆ ತಲುಪಲು ಸಿದ್ಧರಿಲ್ಲ. ಹೀಗಾಗಿ ಈ ಹೋರಾಟ ನಡೆಸುತ್ತಿದ್ದೇವೆ. ಇದು ಕಾನೂನುಗಳು ರದ್ದಾಗುವವರೆಗೂ ನಡೆಯಲಿದೆ” ಎಂದು ವಿಶ್ವಾಸದಲ್ಲಿ ಮಾತನಾಡುತ್ತಾರೆ 24 ವರ್ಷದ ಬಲ್ಜಿತ್ ಸಿಂಗ್.

’ಊರಿನಲ್ಲಿ ಈಗ ಗೋಧಿ ಕೂಡ ಕಟಾವಿಗೆ ಬರುತ್ತಿದೆ. ಕೆಲಸಗಳು ಹೆಚ್ಚಿರುವುದರಿಂದ ಇಲ್ಲಿಯೂ ಜನರ ಅವಶ್ಯಕತೆ ಇದೆ. ಹಾಗೆಂದು ಪ್ರತಿಭಟನಾ ಸ್ಥಳದಲ್ಲಿ ಜನ ಕಡಿಮೆಯಾಗುವಂತಿಲ್ಲ. ಅದು ಕೂಡ ನಮ್ಮ ಜೀವನದ ಅಂಗವಾಗಿದೆ. ಹೀಗಾಗಿ ಊರಿನಲ್ಲಿ ವಾರಕ್ಕೆ 5 ಮಂದಿಯ ತಂಡ ಗಡಿ ಭಾಗಗಳಿಗೆ ಹೋಗಲಿದೆ. ಮಿಕ್ಕವರು ಊರಿನಲ್ಲಿ ಹೊಲದ ಕೆಲಸ ಮಾಡಲಿದ್ದಾರೆ. ಹೋಗದವರಿಗೆ ದಂಡ ವಿಧಿಸುವ ನಿರ್ಣಯ ಮಾಡಲಾಗಿದೆ. ಹೋಗಲು ಆಗದವರು ತಮ್ಮ ಬದಲಿಗೆ ಮತ್ತೊಬ್ಬರನ್ನು ಕಳುಹಿಸಲು ತಿಳಿಸಲಾಗಿದೆ’ ಎಂದರು.

ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

’ಈಗಾಗಲೇ ಚಳಿ ಕಡಿಮೆಯಾಗುತ್ತಿದ್ದು, ಬಿಸಿಲು ಹೆಚ್ಚಾಗುತ್ತಿದೆ. ಹೀಗಾಗಿ ಎಸಿ, ಕೂಲರ್‌ಗಳ ಅವಶ್ಯಕತೆ ಇದೆ. ಊರಿನಿಂದ ಹೋಗುವ ನಮಗೆ ಮೂಲಸೌಲಭ್ಯಗಳ ಅವಶ್ಯಕತೆ ಇದೆ. ಹೀಗಾಗಿ ಊರಿನಲ್ಲಿ ಹಣ ಸಂಗ್ರಹಿಸುತ್ತಿದ್ದೇವೆ. ಒಂದು ಎಕರೆಗೆ 100 ರೂಪಾಯಿಯಂತೆ ಸಂಗ್ರಹಿಸಲಾಗುತ್ತಿದೆ. ಕನಿಷ್ಟ ಒಂದು ಲಕ್ಷ ನಮ್ಮ ಖರ್ಚಿಗೆ ತೆಗೆದುಕೊಂಡು ಹೋಗಬೇಕು’ ಎನ್ನುತ್ತಾರೆ.

ಏಳು ಜನರ ಬಲ್ಜಿತ್ ಸಿಂಗ್ ಕುಟುಂಬದಲ್ಲಿ ಕೃಷಿ ಪ್ರಮುಖ ಕೆಲಸವಾಗಿದೆ. ಮೂವರು ಸಹೋದರಿಯರ ಮದುವೆಯಾಗಿದ್ದು, ಅಣ್ಣ ಮಹಿಂದ್ರಾ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ತಂದೆ-ತಾಯಿ ಕೃಷಿ ಕೆಲಸವನ್ನು ಮಾಡುತ್ತಾರೆ. ಗೋದಿ ಮತ್ತು ಭತ್ತದ ಜೊತೆಗೆ ತರಕಾರಿಯನ್ನು ಬೆಳೆಯುತ್ತಾರೆ.

ರೈತ ಹೋರಾಟ 88 ದಿನಗಳತ್ತ ಸಾಗುತ್ತಿದೆ. ಇತ್ತ ಪಂಜಾಬ್ ಮತ್ತು ಹರಿಯಾಣದಲ್ಲಿ ಗೋಧಿ ಬೆಳೆದಿರುವ ರೈತರು ತಮ್ಮ ಹೊಲಗಳ ಕಡೆಗೂ ಗಮನ ನೀಡಬೇಕಾಗಿದೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂಬ ನಿಲುವು ಬದಲಾಗುವುದಿಲ್ಲ. ಎಲ್ಲವೂ ನಮಗೆ ಮುಖ್ಯ, ಹಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಈಗ ಸರ್‌ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಜವಾಬ್ದಾರಿ ಕೂಡ ಹೆಚ್ಚಾಗಿದೆ. ನನ್ನ ಮೇಲೆ ಗ್ರಾಮದವರು ಇಟ್ಟ ನಂಬಿಕೆ ಉಳಿಸಿಕೊಳ್ಳಬೇಕಿದೆ. ಆದಷ್ಟು ಬೇಗ ಮತ್ತೆ ಹೋರಾಟದ ಕಣಗಳಿಗೆ ತೆರಳುತ್ತೇನೆ ಎನ್ನುತ್ತಾರೆ ಯುವಕ ಬಲ್ಜಿತ್ ಸಿಂಗ್.


ಇದನ್ನೂ ಓದಿ: 3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...