Homeಕರ್ನಾಟಕನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ - ಎ.ಕೆ.ಸುಬ್ಬಯ್ಯ

ನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ – ಎ.ಕೆ.ಸುಬ್ಬಯ್ಯ

- Advertisement -
ಎ.ಕೆ.ಸುಬ್ಬಯ್ಯ, ಹಿರಿಯ ಚಿಂತಕರು. 
ನರೇಂದ್ರ ಮೋದಿ ಮತ್ತು ಅವರ ಪರಿವಾರದವರ ಕೈಯಲ್ಲಿ ಈ ದೇಶದ ಆಡಳಿತ ಇರುವುದಕ್ಕಿಂತ  ಅಪಾಯಕಾರಿ ಸಂದರ್ಭ ಈ ದೇಶಕ್ಕೆ ಹಿಂದೆಂದೂ ಬಂದಿರಲಿಲ್ಲ. ಈ ಚುನಾವಣಾ ಸಮಯದಲ್ಲಿ ಇನ್‍ಕಂ ಟ್ಯಾಕ್ಸ್ ಇಲಾಖೆಯ ದಾಳಿಗಳೇ ದೊಡ್ಡ ಭ್ರಷ್ಟಾಚಾರವಾಗಿದೆ.
ಮೋದಿಯವರು ಮೊನ್ನೆ ಬೆಂಗಳೂರಿನ ಭಾಷಣದಲ್ಲಿ ಎರಡು ತಪ್ಪು ಸಂದೇಶಗಳನ್ನು ಕೊಡುವುದಕ್ಕೆ ಬುದ್ಧಿಪೂರ್ವಕ ಪ್ರಯತ್ನವನ್ನು ಮಾಡಿದ್ದಾರೆ. ಮೊದಲನೆಯದು ಮೋದಿಯನ್ನು ಟೀಕೆ ಮಾಡುವವರೆಲ್ಲರೂ ದೇಶ ದ್ರೋಹಿಗಳು. ಅವರು ದೇಶದ ವಿರುದ್ಧ ಮಾತಾಡುತ್ತಾರೆ. ಎರಡನೆಯದು ತನ್ನ ಭ್ರಷ್ಟಾಚಾರದ ಹೋರಾಟ. ಈ ಉದ್ಯಮಿಗಳ ಮನೆ ಮೇಲೆ  ಇನ್‍ಕಂಟ್ಯಾಕ್ಸ್ ನವರು ಏನು ದಾಳಿ ನಡೆಸುತ್ತಿದ್ದಾರೆ, ಅದು ಭ್ರಷ್ಟಾಚಾರದ ಹೋರಾಟ. ಅದರಿಂದ ವಿರೋಧ ಪಕ್ಷಗಳು ಗಾಬರಿ ಆಗುತ್ತಿದ್ದಾರೆ. ಒಂದು ಕಡೆ ಭ್ರಷ್ಟಾಚಾರದ ಹೋರಾಟ, ಇನ್ನೊಂದು ಕಡೆ ತಾನೇ ದೇಶಭಕ್ತ, ತನ್ನ ಪರಿವಾರದವೇ ದೇಶಭಕ್ತರು ಎಂಬ ತಪ್ಪು ಸಂದೇಶವನ್ನು ಜನರಿಗೆ ಕೊಡುವ ಮೂಲಕ ಜನರ ದಾರಿ ತಪ್ಪಿಸುವ ಬುದ್ಧಿಪೂರ್ವಕ ಪ್ರಯತ್ನವನ್ನು ನರೇಂದ್ರ ಮೋದಿಯವರು ಇಲ್ಲಿ ಮಾಡಿದ್ದಾರೆ. ಈ ಎರಡೂ ಸಹ ಸುಳ್ಳುಗಳು. ಒಂದು ದೇಶ ಅಂದ್ರೆ ಏನು? ನರೇಂದ್ರ  ಮೋದಿಯ ಮಾತಿನ ಪ್ರಕಾರವೇ ದೇಶವೆಂದರೆ ನರೇಂದ್ರ ಮೋದಿ, ಮೋದಿ ಬಿಟ್ಟು ದೇಶ ಇಲ್ಲ.  ನರೇಂದ್ರ ಮೋದಿಯನ್ನ  ಟೀಕೆ ಮಾಡುವ ಎಲ್ಲರೂ ದೇಶದ್ರೋಹಿಗಳು. ಇಂತಹ ಒಂದು ಸಂದೇಶವನ್ನು ಆತ ಜನಕ್ಕೆ ಕೊಡುತ್ತಿದ್ದಾನೆ.
ದೇಶಕ್ಕಾಗಿ ನಾವು ಎಂಬ ಆಂದೋಲನ ನಡೆಸುತ್ತಿರುವವರ ಪೈಕಿ ನಾನೂ ಒಬ್ಬ. ನಮಗೆ ದೇಶ ಅಂದರೆ, ಈ ಭಾರತದ ಭೂಪಟದಲ್ಲಿ ವಿಶಾಲವಾದ ಭೂ ಪ್ರದೇಶ. ಅಲ್ಲಿ ಇರುವಂತ ವೈವಿಧ್ಯಮಯವಾದಂತಹ ಜನರ ಸೌಹಾರ್ದಯುತವಾದಂತಹ ಬದುಕು. ವೈವಿಧ್ಯಮಯವಾದ ಜೀವ ಸಂಸ್ಕøತಿ. ಇವೆಲ್ಲವೂ ಸೇರಿ ನಮಗೆ ದೇಶ.  ಅವೆಲ್ಲವನ್ನೂ ಉಳಿಸಿಕೊಳ್ಳಲಿಕ್ಕಾಗಿ ದೇಶಕ್ಕಾಗಿ ನಾವು ಜನಾಂದೋಲನವನ್ನು ಮಾಡುತ್ತಿದ್ದೇವೆ. ನಾವು ಯಾವುದೇ ಕ್ಷುಲ್ಲಕವಾದಂತಹ ಚಳವಳಿಯೂ ಅಲ್ಲ. .. .. ಸ್ವಾರ್ಥದಿಂದ ಮಾಡುತ್ತಿರುವ ಚಳವಳಿಯೂ ಅಲ್ಲ. ಇದು ನಮ್ಮ ನಿಜವಾದ ದೇಶವನ್ನು ಉಳಿಸಿಕೊಳ್ಳಬೇಕು ಎಂದು ಮಾಡುತ್ತಿರುವ ಚಳವಳಿ ಇದಾಗಿದೆ. ನಮ್ಮ ದೇಶದ ಪರಿಕಲ್ಪನೆ ನರೇಂದ್ರ ಮೋದಿ ದೇಶದ ಪರಿಕಲ್ಪನೆಯಂತಲ್ಲ. ನಮ್ಮ ದೃಷ್ಟಿಯಲ್ಲಿ ಅತ್ಯಂತ ದೇಶದ್ರೋಹಿಗಳು ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ  ಮತ್ತು ಅವನ ಪರಿವಾರದವರು.
ನಮಗೆ ಮಹಾತ್ಮ ಗಾಂಧಿ ದೇಶದ ಶ್ರೇಷ್ಠ ಮಾರ್ಗದರ್ಶಕ. ನರೇಂದ್ರ ಮೋದಿಗೆ ಮಹಾತ್ಮ ಗಾಂಧಿಯನ್ನು ಕೊಂದವರು ದೇಶಭಕ್ತರು. ನಮಗೆ ಮಹಾತ್ಮ ಗಾಂಧಿ ದೇಶಭಕ್ತ. ನಮಗೆ ವಿವೇಕಾನಂದರ ದೇಶ ಬೇಕು. ನರೇಂದ್ರ ಮೋದಿಗೆ ಗೋಡ್ಸೆಯ ದೇಶ ಬೇಕು. ನಮಗೆ ನಾರಾಯಣ ಗುರು, ಮಹಾತ್ಮ ಫುಲೆ, ಬಾಬಾ ಸಾಹೆಬ್ ಅಂಬೇಢ್ಕರ್, ಗೌತಮ ಬುದ್ದ ಇಂತಹ ಮಹಾ ಮಾನವರ ಜೀವಪರ ವ್ಯಕ್ತಿಗಳ ದೇಶ ಬೇಕು. ಈ ದೇಶವನ್ನು ಉಳಿಸಲಿಕ್ಕೆ ನಾವು ದೇಶಭಕ್ತಿಯ ಚಳವಳಿಯನ್ನು ನಾವು ಮಾಡುತ್ತಿದ್ದೇವೆ.
ಆದರೆ ಈ ದೇಶವನ್ನ ಗಾಂಧಿಯವರನ್ನು ಕೊಂದವರ ದೇಶ ಮಾಡಬೇಕು. ಗೌರಿ ಲಂಕೇಶರನ್ನು  ಕೊಂದವರ ದೇಶವನ್ನಾಗಿ ಮಾಡಬೇಕು, ಹಾಗೆಯೇ ಧಾಬೋಲ್ಕರ್, ಪನ್ಸಾರೆ, ಕಲ್ಬುರ್ಗಿಯವರನ್ನ ಕೊಂದವರ  ರೀತಿಯ ದೇಶ ಮಾಡಲು ಹೊರಟಿದ್ದಾರೆ. ನರೇಂದ್ರ ಮೋದಿ ಮತ್ತು ಅವರ ಪರಿವಾರದವರ ಕೈಯಲ್ಲಿ ಈ ದೇಶದ ಆಡಳಿತ ಇರುವುದಕ್ಕಿಂತ  ಅಪಾಯಕಾರಿ ಸಂದರ್ಭ ಈ ದೇಶಕ್ಕೆ ಹಿಂದೆಂದೂ ಬಂದಿರಲಿಲ್ಲ ಅನ್ನಿಸುತ್ತೆ. ಇಂದು ನಮ್ಮ ದೇಶದ ಮುಂದೆ  ಇಂತ ಅಪಾಯದಿಂದ ಇಡೀ ದೇಶವನ್ನು ಪಾರುಮಾಡುವಂತಹ ಹೊಣೆಗಾರಿಕೆ  ಬೇರೆ ಬೇರೆ ರಾಜಕೀಯ ಪಕ್ಷಗಳಿಗಿಂತ  ಹೆಚ್ಚಾಗಿ ನಮ್ಮಂತೆ ಚಿಂತನೆ ಮಾಡುವವರ ಹೆಗಲ ಮೇಲೆ ಹೆಚ್ಚಾಗಿ ಇದೆ. ಅದರಿಂದಾಗಿ ನಾವು ವಿಚಲಿತರಾಗಿದ್ದೇವೆ.
ಚುನಾವಣೆಯ ಸಂಧರ್ಭದಲ್ಲಿ ನಡೆಯುತ್ತಿರುವ ಐಟಿ ದಾಳಿಗಳನ್ನೇ  ಭ್ರಷ್ಟಾಚಾರಿ ವಿರೋಧಿ ಹೋರಾಟ ಮತ್ತು ತಾನೇ ಮಾಡಿಸುತ್ತಿದ್ದೇನೆ ಎಂದು ಪರೋಕ್ಷವಾಗಿ  ಹೇಳುತ್ತಿದ್ದಾರೆ. ಐಟಿ ಸಂಸ್ಥೆ ಇಲಾಖೆಯ ವತಿಯಿಂದ ಅದರ ಪಾಡಿಗೆ ಅದರ ಕೆಲಸ ಮಾಡುತ್ತಿದೆ ಎಂದು ಹೇಳುತ್ತಿಲ್ಲ. ಇದನ್ನು ವಿರೋಧಿಸಿದವರು ದೇಶದ್ರೋಹಿಗಳು. ನರೇಂದ್ರ ಮೋದಿ ಈ ದಾಳಿಗಳನ್ನು ಮಾಡಿಸುತ್ತಿರುವುದಾದರೂ ಏಕೆ. ವಿರೋಧ ಪಕ್ಷಗಳಿಗೆ ಚುನಾವಣಾ ಪ್ರಚಾರ ಮಾಡಲು ಸಾಧ್ಯವಾಗದಂತಹ ಏಕಮಾತ್ರ ಬಿಕ್ಕಟ್ಟು ನಿರ್ಮಾಣ ಮಾಡುವ ಏಕಮಾತ್ರ ಉದ್ದೇಶದಿಂದ ಈ ದಾಳಿಗಳನ್ನು ನಡೆಸುತ್ತಿದ್ದಾರೆ. ಇಂತಹ ದಾಳಿಗಳನ್ನು ಚುನಾವಣೆಗೆ ಮೊದಲು ಮುಗಿಸಬಹುದಿತ್ತು. ಚುನಾವಣೆಯ ನಂತರದ ಇಪ್ಪತ್ತು ದಿನ ಕಾದಿದ್ದರೂ ಆಕಾಶವೇನೂ ಕೆಳಗೆ ಬೀಳುತ್ತಿರಲಿಲ್ಲ. ಚುನಾವಣೆಯಲ್ಲಿ ಹಣದ ದುವ್ರ್ಯವಹಾರಗಳು ನಡೆಯುತ್ತಿದ್ದರೆ, ಚುನಾವಣಾ ಆಯೋಗ ದಾಳಿಗಳನ್ನು ಮಾಡಬಹುದಿತ್ತು. ಇನ್‍ಕಂ ಟ್ಯಾಕ್ಸ್‍ನವರು ಬರುವ ಅವಶ್ಯಕತೆ ಏನಿತ್ತು. ಈ ಚುನಾವಣಾ ಸಮಯದಲ್ಲಿ ಇನ್‍ಕಂ ಟ್ಯಾಕ್ಸ್ ಇಲಾಖೆಯ ದಾಳಿಗಳೇ ದೊಡ್ಡ ಭ್ರಷ್ಟಾಚಾರವಾಗಿದೆ. ಇದು  ಭ್ರಷ್ಟಾಚಾರ ತಡೆಯುವುದಲ್ಲ. ಆದರೆ ಮೋದಿ ಯತಾ ಪ್ರಕಾರ ಇದನ್ನು ಭ್ರಷ್ಟಾಚಾರ ವಿರೋಧಿ ಚಳವಳಿ ಎಂದು ಬಿಂಬಿಸಲು ಹೊರಟಿದ್ದಾರೆ. ಆದರೆ ನಮ್ಮ ದೇಶದ ಜನ ಅಷ್ಟು ದಡ್ಡರಲ್ಲ. ಜನರ ಮೇಲೆ ಭರವಸೆ ಇಟ್ಟೇ ನಾವು ದೇಶಕ್ಕಾಗಿ ನಾವು ಚಳವಳಿಯನ್ನು ಮುಂದುವರೆಸುತ್ತೇವೆ. ಈ ರೀತಿ ಯೋಚನೆ ಮಾಡುವಂತ ಇಡೀ ದೇಶದ ಪ್ರಗತಿಪರ ಮತದಾರರು, ಈ ಚುನಾವಣೆಯಲ್ಲಿ ತಮ್ಮಿಂದ ತಾವೇ ಇದನ್ನು ಅರಿತು ತನು, ಮನ, ಧನಗಳನ್ನು ಅರ್ಪಿಸಿ ಈ ನರೇಂದ್ರ ಮೋದಿಯಂತಹ ದೇಶದ್ರೋಹಿ ಕೋಮು ಶಕ್ತಿಗಳಿಂದ  ದೇಶವನ್ನು ಈ ಚುನಾವಣೆಯಲ್ಲಿ ಪಾರು ಮಾಡುವಂತಹ ಸುವರ್ಣ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನಾನು ಪ್ರಾರ್ಥನೆ ಮಾಡುತ್ತೇನೆ.
(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...