Homeಕರ್ನಾಟಕನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ - ಎ.ಕೆ.ಸುಬ್ಬಯ್ಯ

ನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ – ಎ.ಕೆ.ಸುಬ್ಬಯ್ಯ

- Advertisement -
ಎ.ಕೆ.ಸುಬ್ಬಯ್ಯ, ಹಿರಿಯ ಚಿಂತಕರು. 
ನರೇಂದ್ರ ಮೋದಿ ಮತ್ತು ಅವರ ಪರಿವಾರದವರ ಕೈಯಲ್ಲಿ ಈ ದೇಶದ ಆಡಳಿತ ಇರುವುದಕ್ಕಿಂತ  ಅಪಾಯಕಾರಿ ಸಂದರ್ಭ ಈ ದೇಶಕ್ಕೆ ಹಿಂದೆಂದೂ ಬಂದಿರಲಿಲ್ಲ. ಈ ಚುನಾವಣಾ ಸಮಯದಲ್ಲಿ ಇನ್‍ಕಂ ಟ್ಯಾಕ್ಸ್ ಇಲಾಖೆಯ ದಾಳಿಗಳೇ ದೊಡ್ಡ ಭ್ರಷ್ಟಾಚಾರವಾಗಿದೆ.
ಮೋದಿಯವರು ಮೊನ್ನೆ ಬೆಂಗಳೂರಿನ ಭಾಷಣದಲ್ಲಿ ಎರಡು ತಪ್ಪು ಸಂದೇಶಗಳನ್ನು ಕೊಡುವುದಕ್ಕೆ ಬುದ್ಧಿಪೂರ್ವಕ ಪ್ರಯತ್ನವನ್ನು ಮಾಡಿದ್ದಾರೆ. ಮೊದಲನೆಯದು ಮೋದಿಯನ್ನು ಟೀಕೆ ಮಾಡುವವರೆಲ್ಲರೂ ದೇಶ ದ್ರೋಹಿಗಳು. ಅವರು ದೇಶದ ವಿರುದ್ಧ ಮಾತಾಡುತ್ತಾರೆ. ಎರಡನೆಯದು ತನ್ನ ಭ್ರಷ್ಟಾಚಾರದ ಹೋರಾಟ. ಈ ಉದ್ಯಮಿಗಳ ಮನೆ ಮೇಲೆ  ಇನ್‍ಕಂಟ್ಯಾಕ್ಸ್ ನವರು ಏನು ದಾಳಿ ನಡೆಸುತ್ತಿದ್ದಾರೆ, ಅದು ಭ್ರಷ್ಟಾಚಾರದ ಹೋರಾಟ. ಅದರಿಂದ ವಿರೋಧ ಪಕ್ಷಗಳು ಗಾಬರಿ ಆಗುತ್ತಿದ್ದಾರೆ. ಒಂದು ಕಡೆ ಭ್ರಷ್ಟಾಚಾರದ ಹೋರಾಟ, ಇನ್ನೊಂದು ಕಡೆ ತಾನೇ ದೇಶಭಕ್ತ, ತನ್ನ ಪರಿವಾರದವೇ ದೇಶಭಕ್ತರು ಎಂಬ ತಪ್ಪು ಸಂದೇಶವನ್ನು ಜನರಿಗೆ ಕೊಡುವ ಮೂಲಕ ಜನರ ದಾರಿ ತಪ್ಪಿಸುವ ಬುದ್ಧಿಪೂರ್ವಕ ಪ್ರಯತ್ನವನ್ನು ನರೇಂದ್ರ ಮೋದಿಯವರು ಇಲ್ಲಿ ಮಾಡಿದ್ದಾರೆ. ಈ ಎರಡೂ ಸಹ ಸುಳ್ಳುಗಳು. ಒಂದು ದೇಶ ಅಂದ್ರೆ ಏನು? ನರೇಂದ್ರ  ಮೋದಿಯ ಮಾತಿನ ಪ್ರಕಾರವೇ ದೇಶವೆಂದರೆ ನರೇಂದ್ರ ಮೋದಿ, ಮೋದಿ ಬಿಟ್ಟು ದೇಶ ಇಲ್ಲ.  ನರೇಂದ್ರ ಮೋದಿಯನ್ನ  ಟೀಕೆ ಮಾಡುವ ಎಲ್ಲರೂ ದೇಶದ್ರೋಹಿಗಳು. ಇಂತಹ ಒಂದು ಸಂದೇಶವನ್ನು ಆತ ಜನಕ್ಕೆ ಕೊಡುತ್ತಿದ್ದಾನೆ.
ದೇಶಕ್ಕಾಗಿ ನಾವು ಎಂಬ ಆಂದೋಲನ ನಡೆಸುತ್ತಿರುವವರ ಪೈಕಿ ನಾನೂ ಒಬ್ಬ. ನಮಗೆ ದೇಶ ಅಂದರೆ, ಈ ಭಾರತದ ಭೂಪಟದಲ್ಲಿ ವಿಶಾಲವಾದ ಭೂ ಪ್ರದೇಶ. ಅಲ್ಲಿ ಇರುವಂತ ವೈವಿಧ್ಯಮಯವಾದಂತಹ ಜನರ ಸೌಹಾರ್ದಯುತವಾದಂತಹ ಬದುಕು. ವೈವಿಧ್ಯಮಯವಾದ ಜೀವ ಸಂಸ್ಕøತಿ. ಇವೆಲ್ಲವೂ ಸೇರಿ ನಮಗೆ ದೇಶ.  ಅವೆಲ್ಲವನ್ನೂ ಉಳಿಸಿಕೊಳ್ಳಲಿಕ್ಕಾಗಿ ದೇಶಕ್ಕಾಗಿ ನಾವು ಜನಾಂದೋಲನವನ್ನು ಮಾಡುತ್ತಿದ್ದೇವೆ. ನಾವು ಯಾವುದೇ ಕ್ಷುಲ್ಲಕವಾದಂತಹ ಚಳವಳಿಯೂ ಅಲ್ಲ. .. .. ಸ್ವಾರ್ಥದಿಂದ ಮಾಡುತ್ತಿರುವ ಚಳವಳಿಯೂ ಅಲ್ಲ. ಇದು ನಮ್ಮ ನಿಜವಾದ ದೇಶವನ್ನು ಉಳಿಸಿಕೊಳ್ಳಬೇಕು ಎಂದು ಮಾಡುತ್ತಿರುವ ಚಳವಳಿ ಇದಾಗಿದೆ. ನಮ್ಮ ದೇಶದ ಪರಿಕಲ್ಪನೆ ನರೇಂದ್ರ ಮೋದಿ ದೇಶದ ಪರಿಕಲ್ಪನೆಯಂತಲ್ಲ. ನಮ್ಮ ದೃಷ್ಟಿಯಲ್ಲಿ ಅತ್ಯಂತ ದೇಶದ್ರೋಹಿಗಳು ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ  ಮತ್ತು ಅವನ ಪರಿವಾರದವರು.
ನಮಗೆ ಮಹಾತ್ಮ ಗಾಂಧಿ ದೇಶದ ಶ್ರೇಷ್ಠ ಮಾರ್ಗದರ್ಶಕ. ನರೇಂದ್ರ ಮೋದಿಗೆ ಮಹಾತ್ಮ ಗಾಂಧಿಯನ್ನು ಕೊಂದವರು ದೇಶಭಕ್ತರು. ನಮಗೆ ಮಹಾತ್ಮ ಗಾಂಧಿ ದೇಶಭಕ್ತ. ನಮಗೆ ವಿವೇಕಾನಂದರ ದೇಶ ಬೇಕು. ನರೇಂದ್ರ ಮೋದಿಗೆ ಗೋಡ್ಸೆಯ ದೇಶ ಬೇಕು. ನಮಗೆ ನಾರಾಯಣ ಗುರು, ಮಹಾತ್ಮ ಫುಲೆ, ಬಾಬಾ ಸಾಹೆಬ್ ಅಂಬೇಢ್ಕರ್, ಗೌತಮ ಬುದ್ದ ಇಂತಹ ಮಹಾ ಮಾನವರ ಜೀವಪರ ವ್ಯಕ್ತಿಗಳ ದೇಶ ಬೇಕು. ಈ ದೇಶವನ್ನು ಉಳಿಸಲಿಕ್ಕೆ ನಾವು ದೇಶಭಕ್ತಿಯ ಚಳವಳಿಯನ್ನು ನಾವು ಮಾಡುತ್ತಿದ್ದೇವೆ.
ಆದರೆ ಈ ದೇಶವನ್ನ ಗಾಂಧಿಯವರನ್ನು ಕೊಂದವರ ದೇಶ ಮಾಡಬೇಕು. ಗೌರಿ ಲಂಕೇಶರನ್ನು  ಕೊಂದವರ ದೇಶವನ್ನಾಗಿ ಮಾಡಬೇಕು, ಹಾಗೆಯೇ ಧಾಬೋಲ್ಕರ್, ಪನ್ಸಾರೆ, ಕಲ್ಬುರ್ಗಿಯವರನ್ನ ಕೊಂದವರ  ರೀತಿಯ ದೇಶ ಮಾಡಲು ಹೊರಟಿದ್ದಾರೆ. ನರೇಂದ್ರ ಮೋದಿ ಮತ್ತು ಅವರ ಪರಿವಾರದವರ ಕೈಯಲ್ಲಿ ಈ ದೇಶದ ಆಡಳಿತ ಇರುವುದಕ್ಕಿಂತ  ಅಪಾಯಕಾರಿ ಸಂದರ್ಭ ಈ ದೇಶಕ್ಕೆ ಹಿಂದೆಂದೂ ಬಂದಿರಲಿಲ್ಲ ಅನ್ನಿಸುತ್ತೆ. ಇಂದು ನಮ್ಮ ದೇಶದ ಮುಂದೆ  ಇಂತ ಅಪಾಯದಿಂದ ಇಡೀ ದೇಶವನ್ನು ಪಾರುಮಾಡುವಂತಹ ಹೊಣೆಗಾರಿಕೆ  ಬೇರೆ ಬೇರೆ ರಾಜಕೀಯ ಪಕ್ಷಗಳಿಗಿಂತ  ಹೆಚ್ಚಾಗಿ ನಮ್ಮಂತೆ ಚಿಂತನೆ ಮಾಡುವವರ ಹೆಗಲ ಮೇಲೆ ಹೆಚ್ಚಾಗಿ ಇದೆ. ಅದರಿಂದಾಗಿ ನಾವು ವಿಚಲಿತರಾಗಿದ್ದೇವೆ.
ಚುನಾವಣೆಯ ಸಂಧರ್ಭದಲ್ಲಿ ನಡೆಯುತ್ತಿರುವ ಐಟಿ ದಾಳಿಗಳನ್ನೇ  ಭ್ರಷ್ಟಾಚಾರಿ ವಿರೋಧಿ ಹೋರಾಟ ಮತ್ತು ತಾನೇ ಮಾಡಿಸುತ್ತಿದ್ದೇನೆ ಎಂದು ಪರೋಕ್ಷವಾಗಿ  ಹೇಳುತ್ತಿದ್ದಾರೆ. ಐಟಿ ಸಂಸ್ಥೆ ಇಲಾಖೆಯ ವತಿಯಿಂದ ಅದರ ಪಾಡಿಗೆ ಅದರ ಕೆಲಸ ಮಾಡುತ್ತಿದೆ ಎಂದು ಹೇಳುತ್ತಿಲ್ಲ. ಇದನ್ನು ವಿರೋಧಿಸಿದವರು ದೇಶದ್ರೋಹಿಗಳು. ನರೇಂದ್ರ ಮೋದಿ ಈ ದಾಳಿಗಳನ್ನು ಮಾಡಿಸುತ್ತಿರುವುದಾದರೂ ಏಕೆ. ವಿರೋಧ ಪಕ್ಷಗಳಿಗೆ ಚುನಾವಣಾ ಪ್ರಚಾರ ಮಾಡಲು ಸಾಧ್ಯವಾಗದಂತಹ ಏಕಮಾತ್ರ ಬಿಕ್ಕಟ್ಟು ನಿರ್ಮಾಣ ಮಾಡುವ ಏಕಮಾತ್ರ ಉದ್ದೇಶದಿಂದ ಈ ದಾಳಿಗಳನ್ನು ನಡೆಸುತ್ತಿದ್ದಾರೆ. ಇಂತಹ ದಾಳಿಗಳನ್ನು ಚುನಾವಣೆಗೆ ಮೊದಲು ಮುಗಿಸಬಹುದಿತ್ತು. ಚುನಾವಣೆಯ ನಂತರದ ಇಪ್ಪತ್ತು ದಿನ ಕಾದಿದ್ದರೂ ಆಕಾಶವೇನೂ ಕೆಳಗೆ ಬೀಳುತ್ತಿರಲಿಲ್ಲ. ಚುನಾವಣೆಯಲ್ಲಿ ಹಣದ ದುವ್ರ್ಯವಹಾರಗಳು ನಡೆಯುತ್ತಿದ್ದರೆ, ಚುನಾವಣಾ ಆಯೋಗ ದಾಳಿಗಳನ್ನು ಮಾಡಬಹುದಿತ್ತು. ಇನ್‍ಕಂ ಟ್ಯಾಕ್ಸ್‍ನವರು ಬರುವ ಅವಶ್ಯಕತೆ ಏನಿತ್ತು. ಈ ಚುನಾವಣಾ ಸಮಯದಲ್ಲಿ ಇನ್‍ಕಂ ಟ್ಯಾಕ್ಸ್ ಇಲಾಖೆಯ ದಾಳಿಗಳೇ ದೊಡ್ಡ ಭ್ರಷ್ಟಾಚಾರವಾಗಿದೆ. ಇದು  ಭ್ರಷ್ಟಾಚಾರ ತಡೆಯುವುದಲ್ಲ. ಆದರೆ ಮೋದಿ ಯತಾ ಪ್ರಕಾರ ಇದನ್ನು ಭ್ರಷ್ಟಾಚಾರ ವಿರೋಧಿ ಚಳವಳಿ ಎಂದು ಬಿಂಬಿಸಲು ಹೊರಟಿದ್ದಾರೆ. ಆದರೆ ನಮ್ಮ ದೇಶದ ಜನ ಅಷ್ಟು ದಡ್ಡರಲ್ಲ. ಜನರ ಮೇಲೆ ಭರವಸೆ ಇಟ್ಟೇ ನಾವು ದೇಶಕ್ಕಾಗಿ ನಾವು ಚಳವಳಿಯನ್ನು ಮುಂದುವರೆಸುತ್ತೇವೆ. ಈ ರೀತಿ ಯೋಚನೆ ಮಾಡುವಂತ ಇಡೀ ದೇಶದ ಪ್ರಗತಿಪರ ಮತದಾರರು, ಈ ಚುನಾವಣೆಯಲ್ಲಿ ತಮ್ಮಿಂದ ತಾವೇ ಇದನ್ನು ಅರಿತು ತನು, ಮನ, ಧನಗಳನ್ನು ಅರ್ಪಿಸಿ ಈ ನರೇಂದ್ರ ಮೋದಿಯಂತಹ ದೇಶದ್ರೋಹಿ ಕೋಮು ಶಕ್ತಿಗಳಿಂದ  ದೇಶವನ್ನು ಈ ಚುನಾವಣೆಯಲ್ಲಿ ಪಾರು ಮಾಡುವಂತಹ ಸುವರ್ಣ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನಾನು ಪ್ರಾರ್ಥನೆ ಮಾಡುತ್ತೇನೆ.
(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...