Homeಮುಖಪುಟಆಟೋ ಚಾಲಕನ ಮಗಳು ಮಿಸ್ ಇಂಡಿಯಾ ರನ್ನರ್ ಅಪ್ ಆದ ಕಥೆ

ಆಟೋ ಚಾಲಕನ ಮಗಳು ಮಿಸ್ ಇಂಡಿಯಾ ರನ್ನರ್ ಅಪ್ ಆದ ಕಥೆ

ರನ್ನರ್‌ ಅಪ್ ಆಗಿ ಸನ್ಮಾನ ಸಮಾರಂಭಕ್ಕೆ ಬರಲು ಈಕೆ ಬಳಸಿದ್ದು ತಮ್ಮ ಮನೆಗೆ ಬೆಂಬಲವಾಗಿ ನಿಂತಿದ್ದ ಅಪ್ಪನ ಆಟೋರಿಕ್ಷಾವನ್ನು.

- Advertisement -
- Advertisement -

ಬಡತನದ ಬೆಂಕಿಯಲ್ಲಿ ಬೆಂದು ಚಿನ್ನವಾಗಿ ಹೊರಹೊಮ್ಮಿದ ದಿಟ್ಟೆ ಈ ಬಾರಿಯ ಮಿಸ್ ಇಂಡಿಯಾ 2020 ರ ರನ್ನರ್ ಅಪ್ ಮಾನ್ಯಾ ಸಿಂಗ್. ಹೌದು, ಸಾಧಿಸುವ ಛಲವಿದ್ದರೇ, ಕಂಡ ಕನಸುಗಳನ್ನು ನನಸು ಮಾಡಿಕೊಳ್ಳುವ ಧೃಡ ಇಚ್ಛೆ ಇದ್ದಲ್ಲಿ ಅದು ಸಾಧ್ಯ ಎಂಬುದಕ್ಕೆ ಉದಾಹರಣೆಯಾಗಿ ನಿಂತಿದ್ದಾರೆ ಈಕೆ.

ಮಿಸ್ ಇಂಡಿಯಾ  2020 ರ ಕಿರೀಟ ಪಡೆದ 23 ವರ್ಷದ ತೆಲಂಗಾಣದ ಮಾನಸಾ ವಾರಣಾಸಿ ಅವರಿಗಿಂತ ಹೆಚ್ಚು ಸುದ್ದಿಯಾಗಿದ್ದು, ರನ್ನರ್‌ ಅಪ್ ಆದ 19 ವರ್ಷದ ಉತ್ತರ ಪ್ರದೇಶದ ಮಾನ್ಯಾ ಸಿಂಗ್.

ಖುಷಿ ನಗರದ ಆಟೋ ಡ್ರೈವರ್ ಓಂಪ್ರಕಾಶ್ ಸಿಂಗ್ ಮತ್ತು ಮನೋರಮಾ ಸಿಂಗ್ ಮಗಳಾಗಿದ್ದ ಮಾನ್ಯಾ ಸಿಂಗ್, ತೀವ್ರ ಬಡತನದಲ್ಲಿ ಬೆಳೆದವರು. ಆಟೋ ಓಡಿಸಿ ಬರುತ್ತಿದ್ದ ಹಣವೇ ಇವರ ಕುಟುಂಬದ ಆದಾಯವಾಗಿತ್ತು. ಇಂತಹ ಕುಟುಂಬದಲ್ಲಿ ಬೆಳೆದ ಮಾನ್ಯಾ ತನ್ನ ಕನಸುಗಳನ್ನು ಕಟ್ಟಿಕೊಂಡು ರೈಲು ಹತ್ತಿದ್ದು ಕನಸಿನ ನಗರ ಮುಂಬೈಗೆ.

ಇದನ್ನೂ ಓದಿ:  ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

“ನಾನು ನಿಲ್ದಾಣದಿಂದ ಹೊರನಡೆದಾಗ, ನಾನು ನೋಡಿದ ಮೊದಲ ಸ್ಥಳ ಪಿಜ್ಜಾ ಹಟ್. ನಾನು ಅಲ್ಲಿ ಅರೆಕಾಲಿಕ ಉದ್ಯೋಗ ಮತ್ತು ತಾತ್ಕಾಲಿಕ ಉಳಿದುಕೊಳ್ಳುವ ಅವಕಾಶ ಪಡೆದುಕೊಂಡೆ. ಎರಡು ದಿನಗಳ ನಂತರ, ನಾನು ನನ್ನ ತಂದೆಗೆ ಕರೆ ಮಾಡಿದಾಗ, ಅವರು ಅಳತೊಡಗಿದರು. ಆದರೆ ನಾನು ಇದೆ ನನ್ನ ಸ್ಥಳ ಎಂದು ಧೈರ್ಯ ತುಂಬಿದೆ. ಮರುದಿನವೇ ನನ್ನ ತಂದೆ ತಾಯಿ ಮುಂಬೈಗೆ ಬಂದು ನಿನ್ನ ಕನಸಿಗೆ ನಾನು ಬೆಂಬಲವಾಗಿ ನಿಲ್ಲುತ್ತೇವೆ ಎಂದರು” ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾನ್ಯಾ ತಿಳಿಸಿದ್ದಾರೆ.

“ನನ್ನ ತಂದೆ ಜೀವನ ಸಾಗಿಸಲು ಆಟೋ ಓಡಿಸಿದರು. ಆದರೂ ನನ್ನನ್ನು ಉತ್ತಮ ಶಾಲೆಗೆ ಕಳುಹಿಸಿದರು. ಜೊತೆಗೆ, ನಾನು ಅರೆಕಾಲಿಕ ಉದ್ಯೋಗಗಳನ್ನು ಮಾಡಿದ್ದೇನೆ” ಎನ್ನುತ್ತಾರೆ ಮಾನ್ಯಾ.

Image result for manya singh

ಮಾನ್ಯಾ ಹೇಳುವಂತೆ, ಆಕೆ ತನ್ನ ಪದವಿ ದಿನಗಳಲ್ಲಿ, ಹತ್ತಾರು ಸ್ಪರ್ಧೆಗಳಿಗೆ ಆಡಿಷನ್ ಮಾಡಿದ್ದಳು, ಆದರೆ ಅವರು “ಶಕಲ್ ಅಚಿ ನಹಿ ಹೈ” (ನಿಮ್ಮ ಮುಖ ಚೆನ್ನಾಗಿ ಕಾಣುತ್ತಿಲ್ಲ) ಅಥವಾ “ನಿಮಗೆ ಇಂಗ್ಲಿಷ್ ಕೂಡ ತಿಳಿದಿಲ್ಲ” ಎಂದು ವಾಪಸ್ ಕಳಿಸುತ್ತಿದ್ದರಂತೆ.

“ಪ್ರತಿ ಬಾರಿ ನಾನು ಸೋತಾಗ ಅಂದುಕೊಳ್ಳುತ್ತಿದ್ದು, ಇನ್ನೆರಡು ಹೆಜ್ಜೆ ಮುಂದಕ್ಕೆ, ಮತ್ತೆರಡು ಹೆಜ್ಜೆ ಮುಂದಕ್ಕೆ ಎಂಬ ಮಾತುಗಳನ್ನು. ಇದು ನನ್ನನ್ನು ಇಲ್ಲಿಗೆ ತಂದಿರಿಸಿದೆ” ಎಂದು ಹೇಳುತ್ತಾರೆ ಮಾನ್ಯಾ ಸಿಂಗ್.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

View this post on Instagram

 

A post shared by Manya Singh (@manyasingh993)

“ನನ್ನ ಕಾಲೇಜು ಶುಲ್ಕವನ್ನು ಪಾವತಿಸಲು ಅಪ್ಪ ನಮ್ಮ ಆಭರಣಗಳನ್ನು ಅಡಮಾನ ಇಟ್ಟಿದ್ದರು. ಸ್ಫರ್ಧೆಗಳಿಗಾಗಿ ಬಟ್ಟೆಗಳನ್ನು ಖರೀದಿಸಲು ನನಗೆ ಹಣದ ಅಗತ್ಯವಿದ್ದರಿಂದ ನಾನು ಪಿಜ್ಜಾ ಹಟ್‌ನಲ್ಲಿ ನೆಲವನ್ನು ಒರೆಸುವ ಕೆಲಸ ಮಾಡಿದ್ದೇನೆ. ಅಲ್ಲಿ ಜನ ಇಂಗ್ಲಿಷ್ ಮಾತಾಡುವುದನ್ನು, ಕಾಲೇಜಿನಲ್ಲಿ ಸ್ನೇಹಿತರು ಹೇಗೆ ಮಾತನಾಡುತ್ತಾರೆ ಎಂಬುದನ್ನು ಹೆಚ್ಚು ಗಮನಿಸುತ್ತಿದೆ”. ನನ್ನ ತಂದೆ ಆಟೋ ಚಾಲಕರು ಎಂದು ನನ್ನ ವಿಡಿಯೋಗಳಲ್ಲಿ ಹೇಳಿದಾಗ ಜನ ಪ್ರಚಾರಕ್ಕಾಗಿ ಎಂದುಕೊಂಡರು. ಆದರೆ ನನಗೆ ನನ್ನ ಮೂಲದ ಬಗ್ಗೆ, ನನ್ನ ತಂದೆಯ ಬಗ್ಗೆ ಹೆಮ್ಮೆಯಿದೆ ಎನ್ನುತ್ತಾರೆ ಈಕೆ.

Image result for manya singh

ರನ್ನರ್‌ ಅಪ್ ಆಗಿ ಸನ್ಮಾನ ಸಮಾರಂಭಕ್ಕೆ ಬರಲು ಈಕೆ ಬಳಸಿದ್ದು ತಮ್ಮ ಮನೆಗೆ ಬೆಂಬಲವಾಗಿ ನಿಂತಿದ್ದ ಅಪ್ಪನ ಆಟೋರಿಕ್ಷಾವನ್ನು.

ಬಡತನ ಎಂದು ಕೈಕಟ್ಟಿ ಕುಳಿತ್ತಿದ್ದರೆ ತನ್ನ ಕನಸು ನನಸಾಗುತ್ತಿರಲಿಲ್ಲ ಎನ್ನುತ್ತಾರೆ ಮಾನ್ಯ. ಇಷ್ಟು ದಿನ ತನಗೆ ಬೆಂಬಲವಾಗಿ ನಿಂತ ತಂದೆ ತಾಯಿಗೆ ಮನೆ ಖರೀದಿಸಿಕೊಡುವ ಮೂಲಕ ನಾನು ಅವರಿಗೆ ಸಹಾಯ ಮಾಡಲು ಆರಂಭಿಸುವೆ. ನನ್ನ ತಂದೆ ನನ್ನಲ್ಲಿ ವಿಶ್ವಾಸವಿರಿಸಿದ್ದರು ಹಾಗಾಗಿ ಇಂದು ಆಟೋ ಚಾಲಕನ ಮಗಳು ತಲೆ ಮೇಲೆ ಕಿರೀಟ ಧರಿಸಿದ್ದಾಳೆ. ಎಂದು ಹೆಮ್ಮೆಯಿಂದ ಹೇಳುತ್ತಾರೆ ಮಾನ್ಯ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...