Homeಮುಖಪುಟನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

- Advertisement -
- Advertisement -

| ಎ.ಕೆ.ಸುಬ್ಬಯ್ಯ | ಹಿರಿಯ ಚಿಂತಕರು.

ನರೇಂದ್ರ ಮೋದಿಯ ವ್ಯಕ್ತಿಚಿತ್ರದ ಎದುರಾಗಿ ರಾಹುಲ್ ಗಾಂಧಿಯನ್ನು ನಿಲ್ಲಿಸೋಣ. ರಾಹುಲ್ ಗಾಂಧಿಯನ್ನು ನರೇಂದ್ರ ಮೋದಿಗಿಂತ ಕೆಟ್ಟವನು ಎಂದು ಹೇಳಲು ಸಾಧ್ಯವೇ ಇಲ್ಲ. ಅಥವಾ ನರೇಂದ್ರ ಮೋದಿ ರಾಹುಲ್ ಗಾಂಧಿಯಷ್ಟು ಒಳ್ಳೆಯವನು ಎಂದು ಹೇಳಲು ಸಾಧ್ಯವಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ರಾಹುಲ್ ಗಾಂಧಿಯಿಂದ ನರೇಂದ್ರ ಮೋದಿ ಆಗಲು ಸಾಧ್ಯವಿಲ್ಲ. ನರೇಂದ್ರ ಮೋದಿಯಿಂದ ರಾಹುಲ್ ಗಾಂಧಿ ಆಗಲು ಸಾಧ್ಯವಿಲ್ಲ.

ನರೇಂದ್ರ ಮೋದಿಯ ಸ್ಥಾನದಲ್ಲಿ ರಾಹುಲ್ ಗಾಂಧಿ ಇದ್ದಿದ್ದರೆ ಗುಜರಾತ್ ಹತ್ಯಾಕಾಂಡ ನಡೆಯುತ್ತಿತ್ತೇ? ಅದರ ನಂತರ ಸಿಬಿಐ ಅನ್ನು ವಶ ಮಾಡಿಕೊಂಡು ಅದರ ಮೂಲಕ ಕ್ರಿಮಿನಲ್‍ಗಳನ್ನೆಲ್ಲಾ ಪಾರು ಮಾಡುವ ಮಟ್ಟಕ್ಕೆ ರಾಹುಲ್ ಗಾಂಧಿ ಹೋಗುತ್ತಿದ್ದರಾ? ಯಾವ ಕಾರಣದಿಂದಲೂ, ಯಾವ ದೃಷ್ಟಿಕೋನದಿಂದಲೂ ನರೇಂದ್ರ ಮೋದಿಯಷ್ಟು ದುಷ್ಟತನದಿಂದ ಕೂಡಿದ, ಕ್ರೋಧ, ಅಸೂಯೆ, ಪ್ರತಿಕಾರ ಮನೋಭಾವನೆಯಿಂದ ಕೂಡಿದ ಒಬ್ಬ ವ್ಯಕ್ತಿ ಆಗಲು ರಾಹುಲ್ ಗಾಂಧಿಗೆ ಸಾಧ್ಯವೇ ಇಲ್ಲ.

ರಾಹುಲ್ ಗಾಂಧಿ ಎಂದೊಡನೆ ಕುಟುಂಬ ರಾಜಕಾರಣ, ಅಪ್ಪು, ಪಪ್ಪು ಎಂದು ಗೇಲಿ ಮಾಡುತ್ತಾ ಆತನ ನೈತಿಕ ಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಉದ್ದೇಶಪೂರ್ವಕವಾಗಿ ಮಾಡುತ್ತಿದ್ದಾರೆಂದುದನ್ನು ಬಿಟ್ಟರೆ, ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಲು ಬೇರೆನೂ ಇಲ್ಲದೇ ಇದನ್ನೇ ಪದೇ ಪದೇ ಹೇಳುತ್ತಿದ್ದಾರೆ ಎಂದರೆ ಏನು ಅರ್ಥ?


ಭ್ರಷ್ಟಾಚಾರ ವಿರೋಧಿ ನರೇಂದ್ರ ಮೋದಿ ಎಂದು ಹೇಳುತ್ತಿದ್ದಾರಲ್ಲ, ರಾಫೇಲ್ ಪ್ರಕರಣದಲ್ಲಿ ಮೋದಿ ಇಂದು ಬೆತ್ತಲಾಗಿ ಬೀದಿಯಲ್ಲಿ ನಿಂತಿದ್ದಾರಲ್ಲವೇ? ದೇಶದ ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರಲ್ಲವೇ? ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ, ಈ ಹಿಂದೆ ಯುಪಿಎ ಸಂದರ್ಭದಲ್ಲಿ ಜೈಲಿಗೆ ಹೋದ ಹಲವರು ಹೊರಗೆ ಬಂದರು. ಅವರು ರಾಬರ್ಟ್ ವಾದ್ರಾ ಸೇರಿದಂತೆ ಯಾರ್ಯಾರ ಮೇಲೆ ಆರೋಪವನ್ನು ಮಾಡಿದರೋ ಅವರ್ಯಾರೂ ಜೈಲಿಗೆ ಹೋಗಲಿಲ್ಲ.

ಎಲ್ಲ ರಾಷ್ಟ್ರೀಯ ಪಕ್ಷಗಳೂ ದೇಶವನ್ನು ಆಳಿದ್ದಾರೆ. ಅಧಿಕಾರ ಅನುಭವಿಸಿದಂತಹ ಪಕ್ಷಗಳೇ ಇರುವುದು. ಇವರೆಲ್ಲರ ಪೈಕಿ ಇಡೀ ದೇಶ ಗುರುತಿಸುವಂತಹ ಒಬ್ಬ ರಾಷ್ಟ್ರ ನಾಯಕ ಅಂದ್ರೆ ಯಾರಿದಾರೆ? ಮೋದಿ, ಮೋದಿಯ ನಂತರ.. .. ರಾಹುಲ್ ಗಾಂಧಿ ಬಿಟ್ಟರೆ ಇನ್ಯಾರಾದರೂ ಕಣ್ಣಿಗೆ ಕಾಣುತ್ತಾರಾ? ಇದ್ದಾರೆ, ವಾಮಪಂಥೀಯರಿದಾರೆ. ಸದ್ಗುಣ ಸಂಪನ್ನರಿದಾರೆ. ಆದರೆ ಅವರು ಸಮಾಜದಲ್ಲಿ ಹೆಚ್ಚು ಚಲಾವಣೆ ಆಗುತ್ತಿಲ್ಲ. ಅವರು ಅವರನ್ನು ತಿದ್ದಿಕೊಂಡು, ಇಡೀ ಇಂಡಿಯಾದ ನೇತೃತ್ವವನ್ನು ತಮ್ಮದಾಗಿಸಿಕೊಳ್ಳುವಂತಹ ಪ್ರಯತ್ನವನ್ನೇ ಮಾಡುವುದಿಲ್ಲವಲ್ಲ. ಈ ರೀತಿ ನಾವು ತುಂಬ ಅಸಹಾಯಕರಾಗಿದ್ದೀವಿ. ಆ ದೃಷ್ಟಿಯಲ್ಲಿ ರಾಹುಲ್ ಗಾಂಧಿಯೇ ನಮಗೆ ಸ್ವೀಕಾರಾರ್ಹ.


ವ್ಯಕ್ತಿಚಿತ್ರವನ್ನು ತೆಗೆದುಕೊಂಡು ರಾಹುಲ್ ಗಾಂಧಿಯನ್ನು ಪದೇ ಪದೇ ಗೇಲಿ ಮಾಡೋದರ ಅರ್ಥ ರಾಹುಲ್ ಗಾಂಧಿ ಅಷ್ಟು ಸಣ್ಣವ ಅಂತಲ್ಲ. ರಾಹುಲ್ ಗಾಂಧಿಯನ್ನು ಸಣ್ಣದು ಮಾಡುವ ಪ್ರಯತ್ನ ಅದು. ಸಣ್ಣದು ಮಾಡುವುದರ ಹಿಂದೆ ಇರುವಂತದ್ದು ಭಯ, ರಾಹುಲ್ ಗಾಂಧಿಯ ಬಗ್ಗೆ ಇರುವ ಭಯ. ಇಷ್ಟೊಂದು ಸಣ್ಣ ವ್ಯಕ್ತಿಯ ಬಗ್ಗೆ ಭಯ ಏಕೆ? ಮೋದಿ ರಾಹುಲ್ ಗಾಂಧಿಯ ಭಜನೆ ಮಾಡದೇ ಯಾವುದಾದರೊಂದು ಭಾಷಣವನ್ನು ಅಂತ್ಯ ಮಾಡುತ್ತಾರಾ? ಒಬ್ಬ ಅಪ್ಪು, ಪಪ್ಪು, ಕೆಲಸಕ್ಕೆ ಬಾರದ ಸಣ್ಣ ವ್ಯಕ್ತಿಯ ಬಗ್ಗೆ ಯಾಕೆ ಭಯ ಪಡಬೇಕು? ಇದು ರಾಹುಲ್ ಗಾಂಧಿಯ ಬಗ್ಗೆ ಒಳಗೆ ಅಡಗಿಸಿಟ್ಟುಕೊಂಡಿರುವ ಭಯ. ಆದ್ದರಿಂದ ಇಡೀ ದೇಶದಲ್ಲಿ ನರೇಂದ್ರ ಮೋದಿಯ ವಿರುದ್ಧ ಗೆಲ್ಲಿಸಬೇಕಾದಂತಹ, ಸ್ವೀಕರಿಸಬೇಕಾದಂತಹ ಏಕೈಕ ವ್ಯಕ್ತಿ, ಎಲ್ಲ ಕೋನಗಳಿಂದ ರಾಹುಲ್ ಗಾಂಧೀ ಎಂದು ನನಗೆ ಅನಿಸುತ್ತದೆ.


ನಾನು ರಾಹುಲ್ ಗಾಂಧಿಯನ್ನು ಭಾರಿ ಪುರುಷೋತ್ತಮ ಎಂದು ಭಾವಿಸುತ್ತಿಲ್ಲ. ಮನುಷ್ಯನಲ್ಲಿ ಅಡಗಿರುವಂತಹ ಕೆಲವು ದೌರ್ಬಲ್ಯಗಳು ಅವನಲ್ಲಿಯೂ ಇವೆ. ಆದರೆ ನರೇಂದ್ರ ಮೋದಿಗೆ ಹೋಲಿಸಿದರೆ ರಾಹುಲ್ ಗಾಂಧಿ ಅಪರಂಜಿಯಾಗಿ ವಿಜೃಂಭಿಸುತ್ತಾನೆ. ಇದನ್ನು ಜನ ಆಳವಾಗಿ ಯೋಚನೆ ಮಾಡಿ, ಚಿಂತನೆ ಮಾಡಿ ಸರಿಕಂಡರೆ ಒಪ್ಪಿಕೊಳ್ಳಿ, ಇಲ್ಲವೆಂದರೆ ಬಿಟ್ಟುಬಿಡಿ. ಆದರೆ ಒಂದಂತೂ ನಿಜ, ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...