Homeಮುಖಪುಟಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

- Advertisement -
- Advertisement -

ಉನ್ನಾವೊ ಜಿಲ್ಲೆಯ ಮೂವರು ದಲಿತ ಬಾಲಕಿಯರಿಗೆ ವಿಷಪ್ರಾಶನ ಮಾಡಿಸಿದ ಆರೋಪದಲ್ಲಿ 28 ವರ್ಷದ ಯುವಕನನ್ನು ಬಂಧಿಸಿ, ಅವನ ಜೊತೆಗಿದ್ದ ಇನ್ನೊಬ್ಬ ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆದಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಹೇಳಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನೀರಿನಲ್ಲಿ ಕೀಟನಾಶಕವನ್ನು ಬೆರೆಸಿದ್ದಾಗಿ ಆರೋಪಿ ವಿನಯ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಬಾಲಕಿಯರಲ್ಲಿ ಹಿರಿಯಳಾದ 17 ವರ್ಷದ ಬಾಲಕಿಯನ್ನು ಗುರಿಯಾಗಿಸಿಕೊಂಡು ನೀರಿನಲ್ಲಿ ಕ್ರಿಮಿನಾಶಕ ಬೆರಸಿ ನೀಡಿದ್ದಾಗಿ ವಿನಯ್ ಹೇಳಿದ್ದಾನೆ. ಅವಳು ತನ್ನ ಪ್ರೀತಿಯನ್ನು ನಿರಾಕರಿಸಿ, ಮೊಬೈಲ್ ನಂಬರ್ ಕೊಡಲೂ ಒಪ್ಪದಿದ್ದಾಗ ಸಿಟ್ಟು ಬಂದು ಈ ಕೃತ್ಯ ಎಸಗಿದ್ದಾಗಿ ವಿನಯ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.. ಉಳಿದ ಇಬ್ಬರು ಬಾಲಕಿಯರೂ ಅದೇ ನೀರನ್ನು ಕುಡಿದಿದ್ದರು ಎನ್ನಲಾಗಿದೆ.

13 ಮತ್ತು 16 ವರ್ಷದ ದಲಿತ ಬಾಲಕಿಯರು ಬುಧವಾರ ಸಂಜೆ ಶವವಾಗಿ ಪತ್ತೆಯಾಗಿದ್ದರೆ, 17 ವರ್ಷದ ಬಾಲಕಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಂಬಂಧಿಕರ ಪ್ರಕಾರ ಮೂವರೂ ಮೇವು ಸಂಗ್ರಹಿಸಲು ಕುಟುಂಬದ ಜಮೀನುಗಳಿಗೆ ಹೋಗಿದ್ದರು.

ಬಾಲಕಿಯರ ಪಕ್ಕದ ಹಳ್ಳಿಯವನಾದ ವಿನಯ್ ಜಮೀನು ಬಾಲಕಿಯರ ಜಮೀನಿನ ಪಕ್ಕದಲ್ಲೇ ಇದೆ. ಲಾಕ್‌ಡೌನ್ ಸಮಯದಿಂದ ವಿನಯ್ ಬಾಲಕಿಯರ ಜೊತೆ ಸ್ನೇಹ ಬೆಳೆಸಿದ್ದ. ಆಗಾಗ ಜಮೀನಿನಲ್ಲಿ ಅವರನ್ನು ಭೇಟಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿನಯ್ ಮತ್ತು ಇನ್ನೊಬ್ಬ ಅಪ್ರಾಪ್ತ ಆರೋಪಿ ಕೂಡ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಶುಕ್ರವಾರ ಸಂಜೆ ಉನ್ನಾವೊದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಲಕ್ನೋ ರೇಂಜ್ ಇನ್ಸ್ಪೆಕ್ಟರ್ ಜನರಲ್ (ಐಜಿ) ಲಕ್ಷ್ಮಿ ಸಿಂಗ್, “ಆರೋಪಿಗಳನ್ನು ಹತ್ತಿರದ ಕ್ರಾಸ್ ಬಳಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರು ವಿನಯ್ ಅಲಿಯಾಸ್ ಲಂಬು ಮತ್ತು ಇನ್ನೊಬ್ಬರು ಮೈನರ್. ವಿಚಾರಣೆಯ ನಂತರ, ವಿನಯ್ ಅಪರಾಧವನ್ನು ಒಪ್ಪಿಕೊಂಡ ಮತ್ತು ಘಟನೆಗಳ ಸಂಪೂರ್ಣ ಅನುಕ್ರಮವನ್ನು ನಮಗೆ ತಿಳಿಸಿದ” ಎಂದಿದ್ದಾರೆ.

ಹಲ್ಲೆ ನಡೆಸಿದ ಯಾವುದೇ ಪುರಾವೆಗಳು ದೊರೆತಿಲ್ಲ ಎಂದು ಪೊಲೀಸರು ಪುನರಾವರ್ತಿಸಿದರು. “ಶವಪರೀಕ್ಷೆಯ ವರದಿಯ ಪ್ರಕಾರ, ಹುಡುಗಿಯರ ಮೇಲೆ ಯಾವುದೇ ಬಾಹ್ಯ ಅಥವಾ ಆಂತರಿಕ ಗಾಯಗಳು ಕಂಡುಬಂದಿಲ್ಲ. ಹಲ್ಲೆಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಮತ್ತು ಆರೋಪಿ ನೀಡಿದ ಹೇಳಿಕೆಯಲ್ಲಿ ಬಾಲಕಿಯರ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಐಜಿ ಹೇಳಿದ್ದಾರೆ, ಕುಟುಂಬದ ಕೆಲವು ಸದಸ್ಯರು ಆರೋಪಿಸಿರುವಂತೆ ವಿನಯ್ ಹುಡುಗಿಯರ ಕೈಕಾಲು ಕಟ್ಟಿಹಾಕಿದ್ದನ್ನು ನಿರಾಕರಿಸಿದ್ದಾನೆ ಎಂದು ಹೇಳಿದರು.

“17 ವರ್ಷದ ಬಾಲಕಿಗೆ ಪ್ರೀತಿಸುವಂತೆ ವಿನಯ್ ಒತ್ತಾಯಿಸಿ ವಿಫಲನಾಗಿದ್ದ. ಅವನು ಕೋಪದಿಂದ ಅಪರಾಧ ಮಾಡಿದ್ದಾನೆ. ತನ್ನ ಜಮೀನಿನಲ್ಲಿ ಇಟ್ಟಿದ್ದ ಕೀಟನಾಶಕವನ್ನು ನೀರಿನಲ್ಲಿ ಬೆರೆಸಿ ಕೃತ್ಯ ಎಸಗಿದ್ದಾನೆ ಎಮದು ಐಜಿ ವಿವರಿಸಿದ್ದಾರೆ.
ಅಪ್ರಾಪ್ತ ವಯಸ್ಕನು ವಿನಯ್‌ಗೆ ಸಮೀಪದ ಅಂಗಡಿಯಿಂದ ತಿಂಡಿ ತಂದು ಕೊಟ್ಟಿದ್ದಾನೆ. ಹುಡುಗಿಯರು ಅಂಗಡಿಯಿಂದ ಕೆಲವು ತಿಂಡಿಗಳನ್ನು ತಂದಿದ್ದಾರೆ. ಅವರು ವಿನಯ್ ಜಮೀನಿನ ಬಳಿ ಭೇಟಿಯಾಗಿ ಸ್ವಲ್ಪ ಹೊತ್ತು ಮಾತನಾಡಿದ್ದಾರೆ. ತದನಂತರ ವಿನಯ್ 17 ವರ್ಷದ ಬಾಲಕಿಗೆ (ಕೀಟನಾಶಕದೊಂದಿಗೆ) ನೀರನ್ನು ನೀಡಿದ. ಅವಳು ನೀರು ಕುಡಿದ ನಂತರ, ಇತರ ಇಬ್ಬರು ಹುಡುಗಿಯರು ಬಾಟಲಿಯನ್ನು ಕಿತ್ತುಕೊಂಡು ತಾವೂ ಕುಡಿದರು. ವಿನಯ್ ಇತರ ಹುಡುಗಿಯರಿಗೆ ನೀರು ಕುಡಿಯದಿರಲು ಒತ್ತಾಯಿಸಿದ್ದಾನೆ. ಆದರೆ ಅವರು ಕೇಳಲಿಲ್ಲ…’ ಎಂದು ಐಜಿ ಹೇಳಿದ್ದಾರೆ.

“ನೀರನ್ನು ಕುಡಿದ ನಂತರ, ಅವರು ಪ್ರಜ್ಞಾಹೀನರಾದರು ಮತ್ತು ನೊರೆ ಪದಾರ್ಥವು ಅವರ ಬಾಯಿಯಿಂದ ಹೊರಬರಲು ಪ್ರಾರಂಭಿಸಿತು. ವಿನಯ್ ಮತ್ತು ಅವನ ಸಹಚರ ಭಯಭೀತರಾಗಿ ಓಡಿಹೋದರು” ಎಂದು ಐಜಿ ತಿಳಿಸಿದ್ದಾರೆ.

ಇತರ ಜನರು ಭಾಗಿಯಾಗಿರಬಹುದೇ ಎಂದು ಕೇಳಿದಾಗ, ಐಜಿ, “ಇಲ್ಲಿಯವರೆಗೆ, ನಾವು ಸಂಗ್ರಹಿಸಿದ ಸಾಕ್ಷ್ಯಗಳು ಮತ್ತು ಸಮೀಪದ ಮನೆಗಳವರು ನಮಗೆ ನೀಡಿದ ಮಾಹಿತಿಯು ಈ ಇಬ್ಬರು ಮಾತ್ರ ಅಪರಾಧ ಎಸಗಿರುವುದನ್ನು ಸೂಚಿಸುತ್ತದೆ. ಅಲ್ಲದೆ, ಪ್ರಶ್ನಿಸುವಾಗ ಅವರು ಬೇರೆ ಯಾರನ್ನೂ ಹೆಸರಿಸಿಲ್ಲ’ ಎಂದಿದ್ದಾರೆ.

ಅಪರಾಧದ ಸ್ಥಳದಿಂದ ಕೆಲವು ಸ್ನ್ಯಾಕ್ ಪ್ಯಾಕೆಟ್, ಸಿಗರೇಟ್ ತುಂಡು ಮತ್ತು ನೀರಿನ ಬಾಟಲಿಯನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪ ಮಾಡಿದವರು ಕ್ರಮ ಎದುರಿಸಬೇಕಾಗುತ್ತದೆ ಎಂದು ಸರ್ಕಾರದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...