Homeಮುಖಪುಟ‘ಪ್ರತಿಭಟಿಸುವ ಹಕ್ಕು ಪ್ರಜಾಪ್ರಭುತ್ವದ ಮೂಲಧ್ಯೇಯ': ದಿಶಾ ಬೆಂಬಲಿಸಿ ಗ್ರೆಟಾ ಟ್ವೀಟ್

‘ಪ್ರತಿಭಟಿಸುವ ಹಕ್ಕು ಪ್ರಜಾಪ್ರಭುತ್ವದ ಮೂಲಧ್ಯೇಯ’: ದಿಶಾ ಬೆಂಬಲಿಸಿ ಗ್ರೆಟಾ ಟ್ವೀಟ್

ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರು ದಿಶಾ ರವಿ ಅವರಿಗೆ ಬೆಂಬಲ ನೀಡಿದ್ದಾರೆ.

- Advertisement -
- Advertisement -

ಆಗಸ್ಟ್ 2018 ರಲ್ಲಿ ಗ್ರೆಟಾ ಥನ್ಬರ್ಗ್ 15 ವರ್ಷದವರಾಗಿದ್ದಾಗ ಸ್ಥಾಪಿಸಿದ ಫ್ರೈಡೇಸ್ ಫಾರ್ ಫ್ಯೂಚರ್ (ಎಫ್‌ಎಫ್‌ಎಫ್), “ಎಲ್ಲರಿಗೂ ನ್ಯಾಯವನ್ನು ಖಾತ್ರಿಪಡಿಸಿಕೊಳ್ಳಲು ಹೋರಾಡಿದವರ ಪರ ನಮ್ಮ ಧ್ವನಿಯನ್ನು ಶಾಂತಿಯುತವಾಗಿ ಮತ್ತು ಗೌರವದಿಂದ ಎತ್ತುತ್ತೇವೆ” ಎಂದು ಟ್ವೀಟ್ ಮಾಡಿದೆ.

“ವಾಕ್ ಸ್ವಾತಂತ್ರ‍್ಯ ಮತ್ತು ಶಾಂತಿಯುತ ಪ್ರತಿಭಟನೆ ಮತ್ತು ಸಭೆ ಸೇರುವ ಹಕ್ಕು ಚರ್ಚೆಯ ವಿಷಯವೇ ಅಲ್ಲದ ಮಾನವ ಹಕ್ಕುಗಳು. ಇವು ಯಾವುದೇ ಪ್ರಜಾಪ್ರಭುತ್ವದ ಮೂಲಧ್ಯೇಯವಾಗಿರಬೇಕು. # ಸ್ಟ್ಯಾಂಡ್‌ವಿತ್‌ದಿಶಾರವಿ” ಎಂದು ಟ್ವೀಟ್ ಮಾಡಿರುವ ಗ್ರೇಟಾ, ಎಫ್‌ಎಫ್‌ಎಫ್ ಪೋಸ್ಟ್ ಮಾಡಿದ ಎಳೆಯನ್ನು ಇಷ್ಟಪಟ್ಟಿದ್ದಾರೆ.

ರೈತರ ಪ್ರತಿಭಟನೆ ಹೇಗೆ ನಡೆಯಬೇಕು ಎಂದು ಯೋಜಿಸಲು ನಿಕಿತಾ ಜಾಕೋಬ್, ಶಾಂತನು ಮುಲುಕ್ ಅವರೊಂದಿಗೆ ದಿಶಾ “ಟೂಲ್ಕಿಟ್” ಅನ್ನು ಸಂಪಾದಿಸಿದ್ದಾರೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ದಿಶಾರನ್ನು ಬಂಧಿಸಿದ್ದರು. ಇಂತಹ ಕೃತ್ಯವು ದೇಶದ್ರೋಹಕ್ಕೆ ಸಮನಾಗಿರುತ್ತದೆ ಎಂದು ಪೊಲೀಸರು ಹೇಳಿದ್ದರು. ಯಾವುದೇ ಸಾಮಾಜಿಕ ಹೋರಾಟಕ್ಕೂ ಪ್ರಚಾರಕ್ಕೂ ಇಂತಹ ಯೋಜನೆ ಸಾಮಾನ್ಯವಾಗಿದೆ ಎಂಬ ವ್ಯಾಪಕ ಟೀಕೆಗಳು ಪೊಲೀಸರ ವಿರುದ್ಧ ಕೇಳಿಬಂದಿವೆ.

“ದಿಶಾ ಎಫ್‌ಎಫ್‌ಎಫ್ ಚಳವಳಿಯ ಅವಿಭಾಜ್ಯ ಅಂಗವಾಗಿದ್ದಾರೆ. ಅವರು ಭಾರತದಲ್ಲಿ ಪರಿಸರ ಕಾಳಜಿಯನ್ನು ವ್ಯಕ್ತಪಡಿಸುತ್ತಿರುವುದು ಮಾತ್ರವಲ್ಲದೆ ಜಾಗತಿಕ ಹವಾಮಾನ ಚಳವಳಿಯ ನಿರೂಪಣೆಯಲ್ಲಿ ದೇಶದ ಹೆಚ್ಚು ಪೀಡಿತ ಮತ್ತು ಅಂಚಿನಲ್ಲಿರುವ ಗುಂಪುಗಳ ಸಮಾನತೆ ಮತ್ತು ಪ್ರಾತಿನಿಧ್ಯಕ್ಕಾಗಿ ಶ್ರಮಿಸಿದ್ದಾರೆ” ಎಂದು ಎಫ್‌ಎಫ್‌ಎಫ್ ಟ್ವೀಟ್ ಮಾಡಿದೆ.

ದಿಶಾ ಅವರ ಜಾಮೀನು ಅರ್ಜಿಯನ್ನು ಶನಿವಾರ ವಿಚಾರಣೆ ನಡೆಸಲಾಗುವುದು. “ಸಾಕ್ಷ್ಯವನ್ನು ಹಾಳುಮಾಡುವ” ಸಾಧ್ಯತೆಯನ್ನು ಒತ್ತಿಹೇಳಿದ ಪೊಲೀಸರು ಶುಕ್ರವಾರ ದಿಶಾರಿಗೆ ಇನ್ನೂ ಮೂರು ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸುವಲ್ಲಿ ಸಫಲರಾಗಿದ್ದಾರೆ.

ದಿಶಾ ಮೂರು ಸುದ್ದಿ ವಾಹಿನಿಗಳ ವಿರುದ್ಧ ಕ್ರಮಕೈಗೊಳ್ಳಲು ಮತ್ತು ಅವರ ಖಾಸಗಿ ಚಾಟ್‌ಗಳ ವಿಷಯ ಸೇರಿದಂತೆ ತನಿಖಾ ಸಾಮಗ್ರಿಗಳನ್ನು ಪೊಲೀಸರು ಸೋರಿಕೆ ಮಾಡದಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ನಂತರ, ದೆಹಲಿ ಹೈಕೋರ್ಟ್ ಸೆನ್ಸೆಷಲಿಸಂ ವಿರುದ್ಧ ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದೆ. ಯಾವುದೇ ಖಾಸಗಿ ಚಾಟ್‌ಗಳನ್ನು ವರದಿಗಾರರಿಗೆ ಸೋರಿಕೆ ಮಾಡಿರುವುದನ್ನು ತನಿಖಾಧಿಕಾರಿಗಳು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...