Homeಮುಖಪುಟಮಾದಕವಸ್ತು ಮಾರಾಟ ಆರೋಪದಡಿ ಬಿಜೆಪಿ ನಾಯಕಿಯ ಬಂಧನವಾಗಿದ್ದು ಹೇಗೆ?

ಮಾದಕವಸ್ತು ಮಾರಾಟ ಆರೋಪದಡಿ ಬಿಜೆಪಿ ನಾಯಕಿಯ ಬಂಧನವಾಗಿದ್ದು ಹೇಗೆ?

100 ಗ್ರಾಂ ಕೊಕೇನ್ ಸಾಗಿಸಿದ ಆರೋಪದ ಮೇಲೆ ಬಂಗಾಳದ ಕೋಲ್ಕತ್ತಾದಲ್ಲಿ ಬಿಜೆಪಿ ಯುವ ನಾಯಕಿಯನ್ನು ಶುಕ್ರವಾರ ಸಂಜೆ ಬಂಧಿಸಲಾಗಿದೆ.

- Advertisement -
- Advertisement -

ಬಂಗಾಳದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ಅವರ ಪರ್ಸ್‌ನಲ್ಲಿ ಮತ್ತು ಅವರು ಇದ್ದ ಕಾರಿನ ಸೀಟಿನಲ್ಲಿ ಕೆಲವು ಲಕ್ಷ ಮೌಲ್ಯದ ಕೊಕೇನ್ ಸಿಕ್ಕಿದ್ದಕ್ಕಾಗಿ ಬಂಧಿಸಲಾಗಿದೆ. ಕಾರಿನಲ್ಲಿದ್ದ ಅವರ ಸ್ನೇಹಿತ ಮತ್ತು ಯುವ ಮೋರ್ಚಾದ ಸಹೋದ್ಯೋಗಿ ಪ್ರಬೀರ್ ಕುಮಾರ್ ಡೇಯನ್ನು ಕೂಡ ಬಂಧಿಸಲಾಗಿದೆ.

ಈ ಘಟನೆ ಶುಕ್ರವಾರ ಮುಂಜಾನೆ ನ್ಯೂ ಅಲಿಪೋರ್ ಪ್ರದೇಶದಲ್ಲಿ ನಡೆದಿದೆ. ಪಮೇಲಾ ಗೋಸ್ವಾಮಿ ಮತ್ತು ಅವರ ಸಹವರ್ತಿ ಎನ್.ಆರ್ ಅವೆನ್ಯೂದ ಕೆಫೆಯೊಂದಕ್ಕೆ ತೆರಳಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.

ಪಮೇಲಾ ಗೋಸ್ವಾಮಿಯ ಪರ್ಸ್ ಮತ್ತು ಕಾರ್ ಸೀಟಿನ ಕೆಳಗಿರುವ ಚೀಲಗಳಲ್ಲಿ ತ್ವರಿತ ಶೋಧ ನಡೆಸಿದಾಗ ಸುಮಾರು 100 ಗ್ರಾಂ ಕೊಕೇನ್ ಕಂಡುಬಂದಿದೆ. ಕೂಡಲೇ ಅವರನ್ನು ಪೊಲೀಸರು ಕರೆದೊಯ್ದರು. ಪೊಲೀಸರು ಕರೆದೊಯ್ಯುತ್ತಿದ್ದಂತೆ ಪಮೇಲಾ ಗೋಸ್ವಾಮಿ ಅರಚಾಡಿದ್ದಾರೆ. ಪಮೇಲಾ ಗೋಸ್ವಾಮಿಗೆ ನಿಯೋಜಿಸಲಾದ ಸೆಕ್ಯುರಿಟಿ ಗಾರ್ಡ್ ಸಹ ಬಂಧಿಸಲ್ಪಟ್ಟಿದ್ದಾನೆ, ಏಕೆಂದರೆ ಅವನು ಸಹ ಕಾರಿನಲ್ಲಿದ್ದ ಎಂದು ವರದಿಯಾಗಿದೆ.

ಬಿಜೆಪಿಯ ಸಮಿಕ್ ಭಟ್ಟಾಚಾರ್ಯ ಪ್ರತಿಕ್ರಿಯಿಸಿ, “ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ. ಆದರೆ ಕೊಕೇನ್ ಅನ್ನು ಯಾರೋ ಕಾರಿನಲ್ಲಿ ಹಾಕಿದ್ದಾರೆಯೇ? ಮಾದರಿ ನೀತಿ ಸಂಹಿತೆಯನ್ನು ಇನ್ನೂ ಪ್ರಾರಂಭಿಸಿಲ್ಲ. ಮತ್ತು ಪೊಲೀಸರು ರಾಜ್ಯ ನಿಯಂತ್ರಣದಲ್ಲಿದ್ದಾರೆ. ಏನಾದರೂ ಆಗಿರಲು ಸಾಧ್ಯ” ಎಂದು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕಿ ಚಂದ್ರಿಮಾ ಭಟ್ಟಾಚಾರ್ಯ ಅವರು, “ಬಂಗಾಳದಲ್ಲಿ ಈ ರೀತಿಯ ಏನಾದರೂ ಸಂಭವಿಸಬಹುದು ಎಂದು ನನಗೆ ನಾಚಿಕೆಯಾಗಿದೆ. ಇದು ಬಂಗಾಳದಲ್ಲಿ ಬಿಜೆಪಿಯಿಂದ ಹೊರಹೊಮ್ಮುತ್ತಿರುವ ನಿಜವಾದ ಚಿತ್ರ. ಈ ಹಿಂದೆ ಕೆಲವು ಬಿಜೆಪಿ ನಾಯಕರನ್ನು ಮಕ್ಕಳ ಕಳ್ಳಸಾಗಣೆ ಪ್ರಕರಣದಲ್ಲಿ ಹೆಸರಿಸಲಾಗಿದೆ” ಎಂದು ಹೇಳಿದರು.

ಪೊಲೀಸ್ ಮೂಲಗಳ ಪ್ರಕಾರ, ಪಮೇಲಾ ಗೋಸ್ವಾಮಿ ಮತ್ತು ಪ್ರಬೀರ್ ಅವರು ನಿರ್ದಿಷ್ಟ ಕೆಫೆಗೆ ಪದೇ ಪದೇ ಭೇಟಿ ನೀಡುತ್ತಿರುವುದು, ನಿಲುಗಡೆ ಮಾಡಿದ ಕಾರಿನಲ್ಲಿ ಕುಳಿತುಕೊಳ್ಳುವುದು, ಮೋಟಾರ್ ಸೈಕಲ್‌ಗಳಲ್ಲಿ ಕಾರಿನತ್ತ ಬರುವ ಯುವಕರೊಂದಿಗೆ ವಹಿವಾಟು ನಡೆಸುತ್ತಿರುವುದು ಕಂಡುಬಂದ ನಂತರ ಅವರ ಮೇಲೆ ನಿಗಾ ಇಡಲಾಯಿತು ಎನ್ನಲಾಗಿದೆ.

ಮಾದಕವಸ್ತು ವ್ಯವಹಾರವನ್ನು ಅನುಮಾನಿಸಿದ ಪೊಲೀಸರು, ಶುಕ್ರವಾರ ಪಮೇಲಾರನ್ನು ರೆಡ್ ಹ್ಯಾಂಡ್ ಹಿಡಿಯಲು ಕಾಯುತ್ತಿದ್ದರು ಎಂದು ತಿಳಿಸಿದ್ದಾರೆ.

ಪಮೇಲಾ ಗೋಸ್ವಾಮಿ ಅವರು 2019 ರಲ್ಲಿ ಬಿಜೆಪಿಗೆ ಸೇರುವ ಮೊದಲು ಏರ್ ಹೊಸ್ಟೆಸ್, ಮಾಡೆಲ್ ಮತ್ತು ಟಿವಿ ಧಾರಾವಾಹಿ ನಟಿಯಾಗಿ ಕೆಲಸ ಮಾಡಿದ್ದಾರೆಂದು ಹೇಳಲಾಗಿದೆ. ನಂತರ ಅವರನ್ನು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಹೂಗ್ಲಿ ಜಿಲ್ಲೆಯ ಯುವ ಮೋರ್ಚಾ ವೀಕ್ಷಕರಾಗಿ ನೇಮಿಸಲಾಯಿತು.

ಬಂಧನದ ನಂತರ ವಿವಿಧ ಬಿಜೆಪಿ ನಾಯಕರೊಂದಿಗೆ ಇರುವ ಪಮೇಲಾರ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ರಭಸವಾಗಿ ಹರಿದಾಡಿದವು. 24 ಗಂಟೆಗಳ ಹಿಂದೆ ಫೇಸ್‌ಬುಕ್‌ನಲ್ಲಿ ಅವರ ಕೊನೆಯ ಪೋಸ್ಟ್‌ನಲ್ಲಿ ಅವರ ಫೋಟೋ ಮತ್ತು ಒಂದು ಉಲ್ಲೇಖವಿದೆ, “ನೀವು ಬಲಶಾಲಿಯಾಗಿರುವಾಗ ದುರ್ಬಲರಾಗಿ, ಮತ್ತು ನೀವು ದುರ್ಬಲವಾಗಿದ್ದಾಗ ಬಲವಾಗಿ ಕಾಣಿಸಿಕೊಳ್ಳಿ. – ಸನ್ ಟ್ಸು, ದಿ ಆರ್ಟ್ ಆಫ್ ವಾರ್ !” ಎಂದು ಬರೆಯಲಾಗಿದೆ.


ಇದನ್ನೂ ಓದಿ: ಮತ್ತೆ ಮುಖಭಂಗ – ಆಂಧ್ರದ 3,221 ಪಂಚಾಯತ್‌ಗಳಲ್ಲಿ‌ BJP ಗೆ‌‌‌ ಕೇವಲ 13 ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...