Homeಮುಖಪುಟಆತ್ಮನಿರ್ಭರ ಭಾರತಕ್ಕಾಗಿ ಖಾಸಗಿ ವಲಯಕ್ಕೆ ಉತ್ತೇಜನ ನೀಡಿ: ಪ್ರಧಾನಿ ಮೋದಿ

ಆತ್ಮನಿರ್ಭರ ಭಾರತಕ್ಕಾಗಿ ಖಾಸಗಿ ವಲಯಕ್ಕೆ ಉತ್ತೇಜನ ನೀಡಿ: ಪ್ರಧಾನಿ ಮೋದಿ

- Advertisement -
- Advertisement -

ಕೊರೊನಾ ವೈರಸ್‌‌ನಿಂದಾಗಿ ಉಂಟಾದ ಆರ್ಥಿಕ ಹಿಂಜರಿತದಿಂದ ದೇಶವನ್ನು ಮೇಲೆತ್ತಲು ದೃಡವಾದ ನೀತಿ ಚೌಕಟ್ಟಿನ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದು, ಈ ಹಿನ್ನಲೆಯಲ್ಲಿ ಖಾಸಗಿ ವಲಯವು ಬೆಳೆಯಲು ಅವಕಾಶ ನೀಡಬೇಕು ಹಾಗೂ ಕೇಂದ್ರ ಮತ್ತು ರಾಜ್ಯಗಳು ಇದಕ್ಕೆ ಸಹಕರಿಸಬೇಕು ಎಂದು ಹೇಳಿದ್ದಾರೆ.

ನೀತಿ ಆಯೋಗದ ಆರನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಸರ್ಕಾರಗಳಾದ ನಾವು ಆತ್ಮನಿರ್ಭರ ಭಾರತದ ಧ್ಯೇಯವನ್ನು ಸಾಕಾರಗೊಳಿಸಲು, ಖಾಸಗಿ ವಲಯಕ್ಕೆ ಅವಕಾಶಗಳನ್ನು ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿಗಳು, ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

“ಕೊರೊನಾ ಅವಧಿಯಲ್ಲಿ, ಕೇಂದ್ರ ಮತ್ತು ರಾಜ್ಯಗಳು ಹೇಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾವು ನೋಡಿದ್ದೇವೆ. ಇದರಿಂದಾಗಿ ರಾಷ್ಟ್ರವು ಯಶಸ್ವಿಯಾಗಿದ್ದು, ಭಾರತದ ಉತ್ತಮ ಚಿತ್ರಣವನ್ನು ಇಡೀ ಪ್ರಪಂಚದ ಮುಂದೆ ಇಡಲಾಯಿತು” ಎಂದು ಅವರು ಹೇಳಿದ್ದಾರೆ.

“ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಿ ಒಂದು ನಿರ್ದಿಷ್ಟ ದಿಕ್ಕಿನತ್ತ ಸಾಗುವುದು ಮತ್ತು ಸಹಕಾರಿ ಫೆಡರಲಿಸಂ ಅನ್ನು ಇನ್ನಷ್ಟು ಅರ್ಥಪೂರ್ಣವಾಗಿಸುವುದು ಭಾರತದ ಅಭಿವೃದ್ಧಿಯ ಅಡಿಪಾಯವಾಗಿದೆ. ಇದು ಮಾತ್ರವಲ್ಲದೆ, ಸ್ಪರ್ಧಾತ್ಮಕ, ಸಹಕಾರಿ ಫೆಡರಲಿಸಂ ಅನ್ನು ರಾಜ್ಯಗಳ ನಡುವೆ ಮಾತ್ರವಲ್ಲದೆ ಜಿಲ್ಲೆಗಳಲ್ಲೂ ತರಲು ನಾವು ಪ್ರಯತ್ನಿಸಬೇಕು” ಎಂದು ಪ್ರಧಾನಿ ಹೇಳಿದ್ದಾರೆ.

ಈ ಸಭೆಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೈರು ಹಾಜರಿಯಾಗಿದ್ದಾರೆ. ಮಮತಾ ಬ್ಯಾನರ್ಜಿ ಅವರು ಈ ಹಿಂದೆಯು ನೀತಿ ಆಯೋಗದ ಸಭೆಗಳಲ್ಲಿ ಗೈರು ಹಾಜರಿಯಾಗಿದ್ದರು. ಈ ಸಭೆಗಳನ್ನು “ಫಲಪ್ರದವಲ್ಲದ” ಕಾರ್ಯಕ್ರಮವಾಗಿದೆ ಎಂದಿದ್ದ ಅವರು, ನೀತಿ ಆಯೋಗಕ್ಕೆ, “ಯಾವುದೇ ಆರ್ಥಿಕ ಶಕ್ತಿ ಇಲ್ಲದೆ ಇರುವುದಿಂದ ರಾಜ್ಯಗಳ ಯೋಜನೆಗಳನ್ನು ಬೆಂಬಲಿಸಲು ಅದಕ್ಕೆ ಸಾಧ್ಯವಿಲ್ಲ” ಎಂದು ಅವರು ಆರೋಪಿಸಿದ್ದರು. ಆದರೆ ಅಮರಿಂದರ್‌ ಸಿಂಗ್ ಅವರು ತಮ್ಮ ಅನಾರೋಗ್ಯದ ಕಾರಣಕ್ಕೆ ಹಾಜರಿರಲಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ: ಕಾರಿನಲ್ಲಿ ಕೊಕೇನ್ ಸಾಗಾಟ – ಪಶ್ಚಿಮ ಬಂಗಾಳದ ಬಿಜೆಪಿ ನಾಯಕಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...