Homeಮುಖಪುಟಮಹಾರಾಷ್ಟ್ರ: ಅಂತರರಾಜ್ಯ ಡೀಸೆಲ್ ಕಳ್ಳರ ಗ್ಯಾಂಗ್‌ನ 14 ಸದಸ್ಯರ ಬಂಧನ

ಮಹಾರಾಷ್ಟ್ರ: ಅಂತರರಾಜ್ಯ ಡೀಸೆಲ್ ಕಳ್ಳರ ಗ್ಯಾಂಗ್‌ನ 14 ಸದಸ್ಯರ ಬಂಧನ

ಟ್ರಕ್‌ಗಳಲ್ಲಿ ತಲಾ 35 ರಿಂದ 40 ಲೀಟರ್ ಡೀಸೆಲ್ ತುಂಬಿದ ಸುಮಾರು 40 ಕಂಟೇನರ್‌ಗಳು ಪತ್ತೆಯಾಗಿವೆ

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಕನ್ನಡ ತಾಲ್ಲೂಕಿನಲ್ಲಿ ಅಂತರರಾಜ್ಯ ಡೀಸೆಲ್ ಕಳ್ಳರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್‌ನ 14 ಸದಸ್ಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫೆಬ್ರವರಿ 17 ರಂದು ನಡೆದ ಕಾರ್ಯಾಚರಣೆಯಲ್ಲಿ ನಾಲ್ಕು ಲಾರಿಗಳು, ಡೀಸೆಲ್ ತುಂಬಿದ್ದ ಸುಮಾರು 40 ಕಂಟೇನರ್‌ಗಳು,‌ ನಗದು ಸೇರಿ ಒಟ್ಟಾರೆಯಾಗಿ 98 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಫೆಬ್ರವರಿ 16 ರಂದು ಚಿಟೆಗಾಂವ್‌ನ ಪೆಟ್ರೋಲ್ ಪಂಪ್‌ನಿಂದ 3,480 ಲೀಟರ್ ಡೀಸೆಲ್ ಕಳವು ಮಾಡಲಾಗಿದೆ ಎಂದು ಚಿಕಲ್ಥಾನ ಪೊಲೀಸ್ ಠಾಣೆಯಲ್ಲಿ ದಾಳಲಾಗಿದ್ದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ಕಳ್ಳರ ಗ್ಯಾಂಗ್ ಇದರಲ್ಲಿ ಭಾಗಿಯಾಗಿದೆ ಎಂದು ಸ್ಥಳೀಯ ಅಪರಾಧ ವಿಭಾಗಕ್ಕೆ ಮಾಹಿತಿ ಸಿಕ್ಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಮೋಕ್ಷದಾ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

ಈ ಗ್ಯಾಂಗ್ ಸದಸ್ಯರು ಗುಜರಾತ್‌ನ ಟ್ಯಾಪಿ ಜಿಲ್ಲೆಯಿಂದ ಮರಳು ತುಂಬಿಸಿಕೊಂಡು ಉಸ್ಮಾನಾಬಾದ್‌ನಲ್ಲಿ ಮಾರಾಟ ಮಾಡುತ್ತಾರೆ ಎಂದು ಪೊಲೀಸರಿಗೆ ತಿಳಿದಿತ್ತು. ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ ಎಂದು ಹೇಳಿದ್ದಾರೆ.

“ಈ ಗ್ಯಾಂಗ್ ಸದಸ್ಯರು ರಾತ್ರಿಯಲ್ಲಿ ವಿವಿಧ ಪೆಟ್ರೋಲ್ ಪಂಪ್‌ಗಳ ಬಳಿ ಟ್ರಕ್ ನಿಲ್ಲಿಸುತ್ತಿದ್ದರು. ಬಂಕ್‌ನಲ್ಲಿನ ಹ್ಯಾಂಡ್ ಪಂಪ್‌ಗಳನ್ನು ಬಳಸಿಕೊಂಡು ಟ್ಯಾಂಕ್‌ಗಳಿಂದ ಡೀಸೆಲ್ ಕದಿಯುತ್ತಿದ್ದರು. ಕದ್ದ ಡೀಸೆಲ್ ಅನ್ನು ತಮ್ಮ ವೈಯಕ್ತಿಕ ಬಳಕೆಗಾಗಿ ಬಳಸಿದ ನಂತರ, ಉಳಿದ ಇಂಧನವನ್ನು ಇತರ ಟ್ರಕ್ ಚಾಲಕರಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು’ ಎಂದು ಅಧಿಕಾರಿ ತಿಳಿಸಿದ್ದಾರೆ.

ಗುಜರಾತ್‌ನಿಂದ ಬರುತ್ತಿದ್ದ ಟ್ರಕ್‌ಗಳನ್ನು ಪರಿಶೀಲಿಸುವಾಗ ಪೊಲೀಸರು ಮರಳು ಸಾಗಿಸುತ್ತಿದ್ದ ಮೂರು ವಾಹನಗಳನ್ನು ಹಿಡಿದಿದ್ದರು. ಈ ಟ್ರಕ್‌ಗಳಲ್ಲಿ ತಲಾ 35 ರಿಂದ 40 ಲೀಟರ್ ಡೀಸೆಲ್ ತುಂಬಿದ ಸುಮಾರು 40 ಕಂಟೇನರ್‌ಗಳು ಪತ್ತೆಯಾಗಿವೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

“ಈ ಹದಿನಾಲ್ಕು ಜನರಿಂದ ನಾಲ್ಕು ಟ್ರಕ್, 1,540 ಲೀಟರ್ ಡೀಸೆಲ್, ಮೂರು ಹ್ಯಾಂಡ್ ಪಂಪ್ ಜೊತೆಗೆ 220 ಅಡಿ ಪೈಪ್, 42,700 ರೂ. ನಗದು ಮತ್ತು ಎಂಟು ಮೊಬೈಲ್ ಪೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೊತ್ತ 98. 49 ಲಕ್ಷ ರೂಪಾಯಿಗಳು” ಮತ್ತೊಬ್ಬ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಗುಜರಾತ್, ಕರ್ನಾಟಕ ಮತ್ತು ಮಹಾರಾಷ್ಟ್ರದ ಇತರ ಭಾಗಗಳಲ್ಲಿ ಇದೇ ರೀತಿಯ ದೂರುಗಳು ದಾಖಲಾಗಿವೆ. ಡೀಸೆಲ್ ಕಳ್ಳತನದ 36 ಅಪರಾಧಗಳಲ್ಲಿ ತಾವು ಭಾಗಿಯಾಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈ ಗ್ಯಾಂಗ್ ಕಳೆದ ಐದು ವರ್ಷಗಳಿಂದ ಡೀಸೆಲ್ ಕದಿಯುತ್ತಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...