Homeಮುಖಪುಟದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ದಿಶಾ ರವಿ ವಿರುದ್ಧದ ಆರೋಪಗಳು ಯಾವುವು? ಆಕೆಯ ವಿರುದ್ಧದ ಸಾಕ್ಷ್ಯಗಳು ಯಾವುವು?" ಎಂಬ ಪ್ರಶ್ನೆಗಳನ್ನು ನ್ಯಾಯಾಲಯ ಕೇಳಿದೆ

- Advertisement -
- Advertisement -

ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಪರಿಸರ ಹೋರಾಟಗಾರ್ತಿ ದಿಶಾರವಿ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸುತ್ತಿದೆ. ಈ ವೇಳೆ ದಿಶಾ ರವಿ ಮನವಿಯನ್ನು ಆಲಿಸಿದ ನ್ಯಾಯಾಲಯ, “ಟೂಲ್‌ಕಿಟ್ ಎಂದರೇನು?” ಎಂದು ದೆಹಲಿ ಪೊಲೀಸರನ್ನು ಪ್ರಶ್ನಿಸಿದೆ.

ಟೂಲ್‌ಕಿಟ್ ಆರೋಪದಲ್ಲಿ ಬಂಧಿಸಲಾಗಿರುವ ದಿಶಾ ರವಿಗೆ ಜಾಮೀನು ನೀಡುವುದನ್ನು ತಡೆಯುತ್ತಿರುವ ಕಾನೂನು ಯಾವುದು ಎಂದು ನ್ಯಾಯಾಧೀಶರು ಕೇಳಿದ್ದಾರೆ. ಜೊತೆಗೆ “ಪ್ರಾಸಿಕ್ಯೂಷನ್ ಕಥೆ ಏನು? ದಿಶಾ ರವಿ ವಿರುದ್ಧದ ಆರೋಪಗಳು ಯಾವುವು? ಆಕೆಯ ವಿರುದ್ಧದ ಸಾಕ್ಷ್ಯಗಳು ಯಾವುವು?” ಎಂಬ ಮೂರು ಪ್ರಶ್ನೆಗಳನ್ನು ನ್ಯಾಯಾಲಯ ಪೊಲೀಸರನ್ನು ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿರುವ ದೆಹಲಿ ಪೊಲೀಸರು, ಕೆನಡಾ ಮೂಲದ ಪಿಜೆಎಫ್ ಸಂಘಟನೆ ಖಲಿಸ್ತಾನ್ ರಾಜ್ಯವನ್ನು ರಚಿಸುವುದನ್ನು ಸಮರ್ಥಿಸುತ್ತದೆ. “ಪ್ರತ್ಯೇಕತಾವಾದಿ ಸಂಘಟನೆಯ” ಟ್ವೀಟ್‌ಗಳು ಅವರ ಕಾರ್ಯಸೂಚಿಯಿಂದ ಸ್ಪಷ್ಟವಾಗಿವೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಪೊಲೀಸರ ಟೂಲ್‌ಕಿಟ್‌ನಲ್ಲಿ 124(A), 153(A), 120(B), UAPA! – ಟೂಲ್‌ಕಿಟ್ ಕೊಟ್ಟವರಾರು?

“ಖಲಿಸ್ತಾನಿಗಳು ರೈತರ ಪ್ರತಿಭಟನೆಯ ಲಾಭವನ್ನು ಪಡೆಯಲು ಬಯಸಿದ್ದರು. ಅವರಿಗೆ ಭಾರತೀಯ ಮುಖ ಬೇಕಿತ್ತು. ಅವರು ದಿಶಾ ರವಿ ಸೇರಿದಂತೆ ಕೆಲವೇ ಜನರೊಂದಿಗೆ ಸಂಪರ್ಕ ಹೊಂದಿದ್ದರು. ಒಂದು ವ್ಯವಸ್ಥೆಯನ್ನು ರೂಪಿಸಲಾಯಿತು. ಈ ಟೂಲ್ಕಿಟ್ ತಯಾರಿಸುವ ಸಂಪೂರ್ಣ ಉದ್ದೇಶ ಪಿತೂರಿಯಾಗಿದೆ” ಎಂದು ಪೊಲೀಸರು ವಾದಿಸಿದ್ದಾರೆ.

“ನಿರಂತರವಾಗಿ ದಿಶಾ ರವಿ ತನಿಖೆಗೆ ಸಹಕರಿಸಲು ನಿರಾಕರಿಸುತ್ತಿದ್ದಾರೆ. ಆಕೆಯ ಎಲೆಕ್ಟ್ರಾನಿಕ್ ಸಾಧನಗಳನ್ನು ಎಫ್‌ಎಸ್‌ಎಲ್ ತಜ್ಞರಿಗೆ ಕಳುಹಿಸಲಾಗಿದೆ. ಪ್ರಾಥಮಿಕ ಸಂಶೋಧನೆಗಳ ಪ್ರಕಾರ ಕೆಲವು ವಿಷಯಗಳನ್ನು ಅಳಿಸಲಾಗಿದೆ ಎಂದು ತೋರಿಸುತ್ತದೆ. ಅದು ಸಾಕ್ಷ್ಯಗಳ ನಾಶ. ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ” ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು “ದೆಹಲಿ ಪೊಲೀಸರ ವಾದವನ್ನು ಒಪ್ಪದೆ, ನನ್ನ ಆತ್ಮಸಾಕ್ಷಿಗೆ ಒಪ್ಪಿಗೆಯಾಗದ ಹೊರತು ಮುಂದುವರಿಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಜನವರಿ 26 ರ ಗಣರಾಜ್ಯೋತ್ಸವದಂದು ನಡೆದ ಅಹಿತಕರ ಘಟನೆಯಲ್ಲಿ ಪೊಲೀಸರ ತನಿಖೆಯ ಒಂದು ಅಂಗವಾದ ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 13 ರಂದು ದಿಶಾ ರವಿಯನ್ನು ಬೆಂಗಳೂರಿನಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ‘ಹೊಸ ಧರ್ಮಗಳ ಉದಯ’ ಪಾಠ ಮಾಡಬೇಡಿ: ಶಾಲೆಗಳಿಗೆ ಆದೇಶ ನೀಡಿದ ಶಿಕ್ಷಣ ಇಲಾಖೆ!

ಆ ದಿನದ ಘಟನೆಗಳಲ್ಲಿ ವಿದೇಶಿ ಪ್ರತ್ಯೇಕತಾವಾದಿ ಶಕ್ತಿಗಳು ಭಾಗಿಯಾಗಿವೆ ಎಂದು ಅಧಿಕಾರಿಗಳು ಆರೋಪಿಸಿದ್ದು, ಈ ಸಂಬಂಧ ದಿಶಾ ರವಿ ಜೊತೆಗೆ ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ಎಂಬ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದರು. ಇವರಿಬ್ಬರಿಗೂ ಜಾಮೀನು ನೀಡಲಾಗಿದೆ.

ಈ ಮೂವರು ಭಾರತದ ವಿರುದ್ಧ ಅಂತರರಾಷ್ಟ್ರೀಯ ಅಭಿಯಾನವನ್ನು ಆಯೋಜಿಸಲು ಟೂಲ್‌ಕಿಟ್ ರಚಿಸಿದ್ದಾರೆ ಎಂಬ ಆರೋಪವಿದೆ. ದೆಹಲಿ ಪೊಲೀಸರ ಕೋರಿಕೆಯ ಮೇರೆಗೆ ದೆಹಲಿ ನ್ಯಾಯಾಲಯವು ದಿಶಾ ರವಿ ಅವರನ್ನು ಮೂರು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಫೆಬ್ರವರಿ 22 ರಂದು ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಬಯಸಿದ್ದರಿಂದ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡಬೇಕೆಂದು ಪೊಲೀಸರು ನ್ಯಾಯಾಧೀಶರನ್ನು ಕೋರಿದ್ದರಿಂದ ನ್ಯಾಯಾಲಯವು ಈ ಆದೇಶ ನೀಡಿದೆ.


ಇದನ್ನೂ ಓದಿ: ಟೂಲ್ಕಿಟ್ ಪ್ರಕರಣ – ದಿಶಾ ರವಿಗೆ ಮೂರು ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...