Homeಕರ್ನಾಟಕ'ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು' - ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

- Advertisement -
- Advertisement -

6 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿನ ‘ಹೊಸ ಧರ್ಮಗಳ ಉದಯ’ ಪಾಠವನ್ನು ಬೋಧಿಸದಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. “ರಾಜ್ಯದ ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಬೌದ್ಧ, ಜೈನ ಧರ್ಮಗಳ ಪರಿಚಯ ಪಾಠಗಳನ್ನು ಕೈ ಬಿಟ್ಟಿಲ್ಲ” ಎಂದು ಹೇಳಿದ್ದಾರೆ.

ತಮ್ಮ ಈ ಕ್ರಮವನ್ನು ಸಮರ್ಥಿಸಿಕೊಳ್ಳಲು ಸುರೇಶ್‌ ಕುಮಾರ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ವೀಡಿಯೋದಲ್ಲಿ ಪ್ರಮುಖವಾಗಿ 3 ಕಾರಣಗಳನ್ನು ನೀಡಿದ್ದಾರೆ. ಮೊದಲನೆಯದಾಗಿ, “6ನೇ ತರಗತಿಯ ಸಮಾಜವಿಜ್ಞಾನ ಭಾಗ–1ರ ಪಾಠದ ಪೀಠಿಕೆಯಲ್ಲಿ ಅನಗತ್ಯ ಮತ್ತು ‘6ನೇ ತಗರತಿಯ ಮಕ್ಕಳ ವಯೋಮಾನಕ್ಕೆ ಮೀರಿದ ಪಠ್ಯಾಂಶ ಇದೆ’ ಎಂಬ ಅನೇಕರ ಅಭಿಪ್ರಾಯಗಳಿಗೆ ಪೂರಕವಾಗಿ, ಅದನ್ನು ಕೈಬಿಡಲು ನಿರ್ಧರಿಸಿ ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಭೌದ್ಧ, ಜೈನ ಧರ್ಮಗಳ ಪರಿಚಯ ಪಾಠಗಳಿಗೆ ಕೊಕ್‌ ನೀಡಿಲ್ಲ. ಆ ಪಾಠಗಳು ಪೂರ್ಣವಾಗಿ ಇವೆ, ಇರುತ್ತವೆ. ಬೌಧ ಧರ್ಮ ಮತ್ತು ಜೈನ ಧರ್ಮದ ಕುರಿತ ಪಾಠವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

“ಸುಮಾರು 2 ತಿಂಗಳ ಹಿಂದೆ ನನಗೆ ಮಂತ್ರಾಲಯದ ಸ್ವಾಮಿಗಳು ಫೋನ್ ಮಾಡಿ ಖೇದ ವ್ಯಕ್ತಪಡಿಸಿದ್ದರು. 6 ನೇ ತರಗತಿ ಮಕ್ಕಳಿಗೆ ಈ ಪದಗಳು ಏನು ಅರ್ಥವಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು. ಅಲ್ಲಿಯವರೆಗೂ ಆ ಪಾಠದಲ್ಲಿ ಏನಿದೆ ಎಂದು ನನಗೂ ಗೊತ್ತಿರಲಿಲ್ಲ. ಇದಾದ ನಂತರ ನಾನು ಇದನ್ನು ಓದಿದೆ. ಇದು ಈ ವಯೋಮಾನದ ಮಕ್ಕಳಿಗೆ ಇದು ಸರಿಯಾದ ಪಠ್ಯವಲ್ಲ ಎಂದು ತಿಳಿಯಿತು” ಎಂದು ಹೇಳಿದರು.

ಎರಡನೆಯದಾಗಿ, “2016–17ನೇ ಸಾಲಿನಲ್ಲಿ ಪಠ್ಯಪುಸ್ತಕ ಪರಿಷ್ಕರಣೆಗೊಂಡಂದಿನಿಂದ ಈ ಪಠ್ಯಗಳು ಜಾರಿಯಲ್ಲಿವೆ. ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ತರಬಾರದು. ವಿಶೇಷವಾಗಿ ಒಂದು ಜಾತಿಯ ಬಗ್ಗೆ, ಒಂದು ಸಮುದಾಯದ ಬಗ್ಗೆ ನಮ್ಮ ಮಕ್ಕಳಲ್ಲಿ ಅನಗತ್ಯ ದ್ವೇಷದ ಭಾವನೆ ಬಿತ್ತಬಾರದು ಎನ್ನುವ ಉದ್ದೇಶದಿಂದ ಈ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಭೌದ್ಧ ಧರ್ಮ ಹಾಗೂ ಜೈನ ಧರ್ಮ ಅಥವಾ ಇನ್ಯಾವುದೇ ಧರ್ಮದ ಅವಹೇಳನವನ್ನು ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ” ಎಂದು ಅವರು ಹೇಳಿದ್ದಾರೆ.

ಮೂರನೆಯದಾಗಿ, “ಈ ಪಾಠಕ್ಕಿಂತ ಮೊದಲು ಇರುವ ‘ಕ್ರೈಸ್ತ ಧರ್ಮ ಮತ್ತು ಇಸ್ಲಾಂ ಧರ್ಮಗಳ ಉದಯ’ ಪಾಠದಲ್ಲಿ ಈ ರೀತಿಯ ಅನಗತ್ಯ ಪೀಠಿಕೆಯನ್ನು ನೀಡಿಲ್ಲ. ಈ ಪಾಠಗಳಿಗೆ ಇರದ ಪೀಠಿಕೆ ಹೊಸ ಧರ್ಮಗಳ ಉದಯ ಪಾಠಕ್ಕೆ ಯಾಕೆ? ಹಾಗಾಗಿ ಇದನ್ನು ಬೋಧಿಸಬಾರದು ಎಂದು ಆದೇಶ ನೀಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಒಬ್ಬನೇ ಒಬ್ಬ ಪ್ರೇಕ್ಷಕನಿಗೆ ಐವರು ಭಾಷಣಕಾರರು!: ಬಿಜೆಪಿ ಕಾಲೆಳೆದ ಸಂಸದ ಶಶಿ ತರೂರ್

ಶಿಕ್ಷಣ ಇಲಾಖೆಯ ಆದೇಶ:

2020-21 ನೇ ಸಾಲಿನ 6 ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ 7 ನೇ ಪಾಠವನ್ನು (ಹೊಸ ಧರ್ಮಗಳ ಉದಯ) ಬೋಧಿಸದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. “6 ನೇ ತರಗತಿ ಸಮಾಜ ವಿಜ್ಞಾನ- ಭಾಗ 1 ರಲ್ಲಿನ ಪಾಠ-7 ‘ಹೊಸ ಧರ್ಮಗಳ ಉದಯ’ ಈ ಪಾಠದಲ್ಲಿನ ಪುಟ ಸಂಖ್ಯೆ: 82 ಹಾಗು 83ರಲ್ಲಿನ ವಿಷಯಾಂಶಗಳನ್ನು, 2020-21ನೆ ಶೈಕ್ಷಣಿಕ ಸಾಲಿಗೆ ಬೋಧನೆ-ಕಲಿಕೆ/ ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಸಂಬಂಧಿಸಿದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯ ಶಿಕ್ಷಕರಿಗೆ ಸೂಕ್ತ ಸೂಚನೆ ನೀಡಲು ತಿಳಿಸಿದೆ. ಇದರ ಕುರಿತು ಕೈಗೊಂಡ ಕ್ರಮಗಳನ್ನು ಫೆ. 28ರೊಳಗೆ ವರದಿ ಮಾಡಲು ತಿಳಿಸಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪಾಠದಲ್ಲಿ ಏನಿದೆ?

“ಉತ್ತರ ವೇದಗಳ ಕಾಲದಲ್ಲಿ ಆಚರಿಸುತ್ತಿದ್ದ ಯಜ್ಞ, ಯಾಗಗಳಲ್ಲಿ ಆಹಾರ ಧಾನ್ಯ, ಹಾಲು, ತುಪ್ಪವನ್ನು ಹವಿಸ್ಸು ಎಂದು ದಹಿಸುತ್ತಿದ್ದುದರಿಂದ ಆಹಾರದ ಅಭಾವ ಸೃಷ್ಟಿಯಾಯಿತು. ವೈದಿಕೆ ಆಚರಣೆಗಳು ದುಬಾರಿಯಾಗಿದ್ದು, ಸಂಸ್ಕೃತ ಮಂತ್ರದ ಮೂಲಕ ನಡೆಸುತ್ತಿದ್ದುದರಿಂದ ಜನಸಾಮಾನ್ಯರಿಗೆ ಲಭ್ಯವಾಗುತ್ತಿರಲಿಲ್ಲ ಹಾಗೂ ಅರ್ಥ ಆಗುತ್ತಿರಲಿಲ್ಲ. ವರ್ಣ ವ್ಯವಸ್ಥೆಯಿಂದ ಸಾಮಾಜಿಕ ವಿಘಟನೆಯಾಯಿತು. ಈ ಎಲ್ಲಾ ಕಾರಣಗಳು ಹೊಸ ಧರ್ಮಗಳ ಉದಯಕ್ಕೆ ಪುಷ್ಠಿ ನೀಡಿದವು” ಎಂದು ಪಾಠದಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಿಕ್ಷಣ ಸಚಿವರು ಕುವೆಂಪು ಅವರ ಮಕ್ಕಳಿಗೇಕೆ ವೈಚಾರಿಕತೆ ಎಂಬ ಲೇಖನ ಓದಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ. ಚಾರಿತ್ರಿಕ ಸತ್ಯಗಳನ್ನು ಬೋಧಿಸುವುದು ಮಕ್ಕಳಲ್ಲಿ ದ್ವೇಷ ಭಾವನೆ ಬಿತ್ತಿದಂತೆ ಹೇಗಾಗುತ್ತದೆ ಸಚಿವರೇ?

  2. ಮನುವಾದಿಗಳ ಆಡಳಿತದಲ್ಲಿ, ನಮ್ಮ ಮಕ್ಕಳಿಗೆ ಯಾವ ಪಾಠವನ್ನು ಮಾಡಬೇಕು ಎಂಬ ವಿಚಾರವನ್ನು ಬ್ರಾಹ್ಮಣ ದರ್ಮದ ಮಟಾದೀಶರು ನಿರ್ದರಿಸುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...