Homeಕರ್ನಾಟಕ2ಎ ಮೀಸಲಾತಿಗಾಗಿ ಬೃಹತ್ ರ‍್ಯಾಲಿ: ಪಂಚಮಸಾಲಿ ಸಮುದಾಯದ 10 ಲಕ್ಷ ಜನ ಸೇರುವ ನಿರೀಕ್ಷೆ

2ಎ ಮೀಸಲಾತಿಗಾಗಿ ಬೃಹತ್ ರ‍್ಯಾಲಿ: ಪಂಚಮಸಾಲಿ ಸಮುದಾಯದ 10 ಲಕ್ಷ ಜನ ಸೇರುವ ನಿರೀಕ್ಷೆ

ಸರ್ಕಾರಕ್ಕೆ ಮಾರ್ಚ್‌ 4ರವರೆಗೆ ಗಡುವು ನೀಡುತ್ತೆವೆ. ಒಪ್ಪದಿದ್ದರೆ ಮಾರ್ಚ್ 5ರಿಂದ ವಿಧಾನಸೌಧ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು- ಬಸವಜಯ ಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

ಕ್ಯಾಟಗರಿ 2ಎ ಮೀಸಲಾತಿಗೆ ಒತ್ತಾಯಿಸಿ ಬೃಹತ್‌ ಪಾದಯಾತ್ರೆ ನಡೆಸಿರುವ ಲಿಂಗಾಯತ ಪಂಚಮಸಾಲಿ ಸಮುದಾಯವು ಬೆಂಗಳೂರಿನಲ್ಲಿ ಭಾನುವಾರ ಮಹಾರ‍್ಯಾಲಿ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದೆ. ಈ ರ‍್ಯಾಲಿಯಲ್ಲಿ ಸಮುದಾಯದ ಸುಮಾರು 10 ಲಕ್ಷ ಜನ ಸೇರಬಹುದು ಎಂದು ಮುಖಂಡರು ಅಂದಾಜಿಸಿದ್ದಾರೆ.

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ 38 ದಿನಗಳ ಪಾದಯಾತ್ರೆ ಶನಿವಾರ ಅಂತಿಮ ಘಟ್ಟಕ್ಕೆ ಬಂದಿದ್ದು, ಇಂದು (ಪೆ. 21) ಬೆಂಗಳೂರಿನ ಅರಮನೆ ಮೈದಾನದಲ್ಲಿ 21ರಂದು ಮಹಾರ‍್ಯಾಲಿ ಮೂಲಕ ಮುಕ್ತಾಯಗೊಳ್ಳಲಿದೆ.

2 ಲಕ್ಷಕ್ಕೂ ಹೆಚ್ಚು ಕುರ್ಚಿಗಳನ್ನು ಹಾಕಲಾಗಿದ್ದು, ಇದಕ್ಕಿಂತ ಹೆಚ್ಚು ಜನ ಸೇರಿದರೂ ಕುಳಿತುಕೊಳ್ಳಲು ತೊಂದರೆಯಾಗದಂತೆ ಮ್ಯಾಟ್‌ಗಳನ್ನು ಹಾಕಲಾಗಿದೆ. ಒಟ್ಟು ಮೂರು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಮಧ್ಯದಲ್ಲಿ ಅತಿಗಣ್ಯರಿಗೆ ಅಂದರೆ ಜನಪ್ರತಿನಿಧಿಗಳಿಗೆ, ಬಲ ಮತ್ತು ಎಡಭಾಗದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಪದಾಧಿಕಾರಿಗಳಿಗೆ ಮೀಸಲಿಡಲಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

“ಮಹಾರ‍್ಯಾಲಿಯಲ್ಲಿ ಹತ್ತು ಲಕ್ಷ ಜನ ಸೇರಿದರೂ ಊಟದ ಕೊರತೆಯಾಗದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ. ಉತ್ತರ ಕರ್ನಾಟಕದಿಂದ ನಮ್ಮ ಸಮಾಜದವರು 2.5 ಲಕ್ಷ ರೊಟ್ಟಿ ತಂದಿದ್ದಾರೆ. ಜೊತೆಗೆ ಪಲಾವ್ ಮತ್ತು ಮಜ್ಜಿಗೆ ನೀಡಲಾಗುತ್ತದೆ. 18 ಜಿಲ್ಲೆಗಳಿಂದ 10 ಲಕ್ಷಕ್ಕೂ ಹೆಚ್ಚಿನ ಜನ ಭಾಗವಹಿಸುವ ನಿರೀಕ್ಷೆಯಿದೆ” ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, “ಸುಮಾರು 600 ಕಿ.ಮೀ. ಪಾದಯಾತ್ರೆಯು ಮುಕ್ತಾಯವಾಗಿದೆ. ಆದರೂ ಬೇಡಿಕೆ ಈಡೇರಿಸುವ ಬಗ್ಗೆ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಮೀಸಲಾತಿಗಾಗಿ ಮಹಾರ‍್ಯಾಲಿಯಲ್ಲಿ ಮತ್ತೊಮ್ಮೆ ಒತ್ತಾಯಿಸಲಾಗುವುದು. ನಂತರ ವಿಧಾನಸೌಧದವರೆಗೆ ತೆರಳಿ ಧರಣಿ ನಡೆಸಲಾಗುವುದು. ಸರ್ಕಾರಕ್ಕೆ ಮಾರ್ಚ್‌ 4ರವರೆಗೆ ಗಡುವು ನೀಡುತ್ತೆವೆ. ಒಪ್ಪದಿದ್ದರೆ ಮಾರ್ಚ್ 5ರಿಂದ ವಿಧಾನಸೌಧ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಸಚಿವ ಮುರುಗೇಶ ನಿರಾಣಿ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ಅನಿಲ ಬೆನಕೆ, ಶಿವಾನಂದ ಪಾಟೀಲ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿದಂತೆ ಹಲವು ಪ್ರಮುಖರು ವೇದಿಕೆಯಲ್ಲಿದ್ದಾರೆ.


ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...