Homeಕರ್ನಾಟಕ2ಎ ಮೀಸಲಾತಿಗಾಗಿ ಬೃಹತ್ ರ‍್ಯಾಲಿ: ಪಂಚಮಸಾಲಿ ಸಮುದಾಯದ 10 ಲಕ್ಷ ಜನ ಸೇರುವ ನಿರೀಕ್ಷೆ

2ಎ ಮೀಸಲಾತಿಗಾಗಿ ಬೃಹತ್ ರ‍್ಯಾಲಿ: ಪಂಚಮಸಾಲಿ ಸಮುದಾಯದ 10 ಲಕ್ಷ ಜನ ಸೇರುವ ನಿರೀಕ್ಷೆ

ಸರ್ಕಾರಕ್ಕೆ ಮಾರ್ಚ್‌ 4ರವರೆಗೆ ಗಡುವು ನೀಡುತ್ತೆವೆ. ಒಪ್ಪದಿದ್ದರೆ ಮಾರ್ಚ್ 5ರಿಂದ ವಿಧಾನಸೌಧ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು- ಬಸವಜಯ ಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

ಕ್ಯಾಟಗರಿ 2ಎ ಮೀಸಲಾತಿಗೆ ಒತ್ತಾಯಿಸಿ ಬೃಹತ್‌ ಪಾದಯಾತ್ರೆ ನಡೆಸಿರುವ ಲಿಂಗಾಯತ ಪಂಚಮಸಾಲಿ ಸಮುದಾಯವು ಬೆಂಗಳೂರಿನಲ್ಲಿ ಭಾನುವಾರ ಮಹಾರ‍್ಯಾಲಿ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದೆ. ಈ ರ‍್ಯಾಲಿಯಲ್ಲಿ ಸಮುದಾಯದ ಸುಮಾರು 10 ಲಕ್ಷ ಜನ ಸೇರಬಹುದು ಎಂದು ಮುಖಂಡರು ಅಂದಾಜಿಸಿದ್ದಾರೆ.

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ 38 ದಿನಗಳ ಪಾದಯಾತ್ರೆ ಶನಿವಾರ ಅಂತಿಮ ಘಟ್ಟಕ್ಕೆ ಬಂದಿದ್ದು, ಇಂದು (ಪೆ. 21) ಬೆಂಗಳೂರಿನ ಅರಮನೆ ಮೈದಾನದಲ್ಲಿ 21ರಂದು ಮಹಾರ‍್ಯಾಲಿ ಮೂಲಕ ಮುಕ್ತಾಯಗೊಳ್ಳಲಿದೆ.

2 ಲಕ್ಷಕ್ಕೂ ಹೆಚ್ಚು ಕುರ್ಚಿಗಳನ್ನು ಹಾಕಲಾಗಿದ್ದು, ಇದಕ್ಕಿಂತ ಹೆಚ್ಚು ಜನ ಸೇರಿದರೂ ಕುಳಿತುಕೊಳ್ಳಲು ತೊಂದರೆಯಾಗದಂತೆ ಮ್ಯಾಟ್‌ಗಳನ್ನು ಹಾಕಲಾಗಿದೆ. ಒಟ್ಟು ಮೂರು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಮಧ್ಯದಲ್ಲಿ ಅತಿಗಣ್ಯರಿಗೆ ಅಂದರೆ ಜನಪ್ರತಿನಿಧಿಗಳಿಗೆ, ಬಲ ಮತ್ತು ಎಡಭಾಗದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಪದಾಧಿಕಾರಿಗಳಿಗೆ ಮೀಸಲಿಡಲಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

“ಮಹಾರ‍್ಯಾಲಿಯಲ್ಲಿ ಹತ್ತು ಲಕ್ಷ ಜನ ಸೇರಿದರೂ ಊಟದ ಕೊರತೆಯಾಗದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ. ಉತ್ತರ ಕರ್ನಾಟಕದಿಂದ ನಮ್ಮ ಸಮಾಜದವರು 2.5 ಲಕ್ಷ ರೊಟ್ಟಿ ತಂದಿದ್ದಾರೆ. ಜೊತೆಗೆ ಪಲಾವ್ ಮತ್ತು ಮಜ್ಜಿಗೆ ನೀಡಲಾಗುತ್ತದೆ. 18 ಜಿಲ್ಲೆಗಳಿಂದ 10 ಲಕ್ಷಕ್ಕೂ ಹೆಚ್ಚಿನ ಜನ ಭಾಗವಹಿಸುವ ನಿರೀಕ್ಷೆಯಿದೆ” ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, “ಸುಮಾರು 600 ಕಿ.ಮೀ. ಪಾದಯಾತ್ರೆಯು ಮುಕ್ತಾಯವಾಗಿದೆ. ಆದರೂ ಬೇಡಿಕೆ ಈಡೇರಿಸುವ ಬಗ್ಗೆ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಮೀಸಲಾತಿಗಾಗಿ ಮಹಾರ‍್ಯಾಲಿಯಲ್ಲಿ ಮತ್ತೊಮ್ಮೆ ಒತ್ತಾಯಿಸಲಾಗುವುದು. ನಂತರ ವಿಧಾನಸೌಧದವರೆಗೆ ತೆರಳಿ ಧರಣಿ ನಡೆಸಲಾಗುವುದು. ಸರ್ಕಾರಕ್ಕೆ ಮಾರ್ಚ್‌ 4ರವರೆಗೆ ಗಡುವು ನೀಡುತ್ತೆವೆ. ಒಪ್ಪದಿದ್ದರೆ ಮಾರ್ಚ್ 5ರಿಂದ ವಿಧಾನಸೌಧ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಸಚಿವ ಮುರುಗೇಶ ನಿರಾಣಿ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ಅನಿಲ ಬೆನಕೆ, ಶಿವಾನಂದ ಪಾಟೀಲ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿದಂತೆ ಹಲವು ಪ್ರಮುಖರು ವೇದಿಕೆಯಲ್ಲಿದ್ದಾರೆ.


ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...