Homeಚಳವಳಿರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

ರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

’ಫೆ. 23 ರಂದು ನಡೆಯುತ್ತಿರುವ ಪಗಡಿ ಸಂಭಾಲ್ ದಿನಕ್ಕೆ ಸಾಕ್ಷಿಯಾಗುತ್ತಿರುವುದಕ್ಕೆ ಹೆಮ್ಮೆಯಿದೆ’

- Advertisement -
- Advertisement -

ರೈತ ಹೋರಾಟಕ್ಕೆ ವಿಶ್ವದಾದ್ಯಂತ ಸಾವಿರಾರು ಸಂಘಟನೆಗಳು ಬೆಂಬಲ ನೀಡುತ್ತಿದೆ. ದಕ್ಷಿಣ ಭಾರತದ ರೈತರು ಈಗಾಗಲೇ ಸಾವಿರಾರು ಮಂದಿ ದೆಹಲಿಯ ಗಡಿಗಳಿಗೆ ತೆರಳಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಈಗ ರೈತರ ಹೋರಾಟಗಳಲ್ಲಿ ಸಕ್ರಿಯವಾಗಿರುವ ದಕ್ಷಿಣ ಭಾರತದ 140ಕ್ಕೂ ಹೆಚ್ಚು ಸಾಮಾಜಿಕ ಹೋರಾಟಗಾರರು ಮತ್ತು ಮುಖಂಡರು ರೈತ ಹೋರಾಟಕ್ಕೆ ಬೆಂಬಲ ನೀಡಲು ತೆರಳುತ್ತಿದ್ದಾರೆ.

ದಕ್ಷಿಣ ಭಾರತದಲ್ಲಿಯೂ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು, ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣದ ಸಾಮಾಜಿಕ ಹೋರಾಟಗಾರರು ಮತ್ತು ಅವರ ತಂಡ ಐಕ್ಯತೆ ಮತ್ತು ಒಗ್ಗಟ್ಟಿನ ಬೆಂಬಲ ನೀಡಲು ಫೆಬ್ರವರಿ 23 ರಂದು ದೆಹಲಿ ಪ್ರತಿಭಟನಾ ಸ್ಥಳಗಳಿಗೆ ತೆರಳುತ್ತಿದೆ.

ಈ ಹೋರಾಟಗಾರರು ಮತ್ತು ತಂಡದಲ್ಲಿ ಕರ್ನಾಟಕದ 64 ಸದಸ್ಯರು, ಆಂಧ್ರ ಪ್ರದೇಶದ ವಿವಿಧ ಸಂಘ ಸಂಸ್ಥೆಗಳಿಂದ 28 ಸದಸ್ಯರು, ತೆಲಂಗಾಣದಿಂದ 30 ಮತ್ತು ತಮಿಳುನಾಡಿನ ಸಂಸ್ಥೆಗಳಿಂದ 8 ಸದಸ್ಯರು ದೆಹಲಿಗೆ ಹೋರಟಿದ್ದಾರೆ. ಫೆಬ್ರವರಿ 23 ರ ನಂತರ ಇನ್ನೂ ಅನೇಕ ಮಂದಿ ಈ ತಂಡವನ್ನು ಸೇರಲಿದ್ದಾರೆ. ಇದರಲ್ಲಿ ಕರ್ನಾಟಕದ ಜನಶಕ್ತಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯ ಭಾಗವಾಗಲಿದ್ದಾರೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಕರ್ನಾಟಕ ಜನಶಕ್ತಿ ಕಾರ್ಯಕರ್ತರು ಇಂದು ಬೆಂಗಳೂರಿನಿಂದ ಹೊರಟಿದ್ದು, ಫೆ.23 ರಂದು ದೆಹಲಿ ಸೇರಲಿದ್ದಾರೆ.

ಫೆಬ್ರವರಿ 23 ರಂದು ನಡೆಯಲಿರುವ ಪಗಡಿ ಸಂಭಾಲ್ ದಿನದಂದು ಈ ಹೋರಟಗಾರರ ತಂಡ ಸಿಂಘು ಗಡಿಯನ್ನು ತಲುಪಲಿದೆ. ಫೆಬ್ರವರಿ 24 ರಂದು ಟಿಕ್ರಿ ಬಾರ್ಡರ್, ಫೆಬ್ರವರಿ 25 ರಂದು ಶಹಜಹಾನಪುರ ಗಡಿ ಭಾಗ, ಫೆಬ್ರವರಿ 26 ರಂದು ಗಾಝಿಪುರ್‌ ಗಡಿಗೆ ಭೇಟಿ ನೀಡಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಐತಿಹಾಸಿಕ ರೈತ ಹೋರಾಟದ 100 ನೇ ದಿನ ಈ ತಂಡ ಸಿಂಘು ಪ್ರತಿಭಟನಾ ಸ್ಥಳಕ್ಕೆ ಹಿಂತಿರುಗಿ ಅಲ್ಲಿಂದ ತಮ್ಮ ಸ್ಥಳಗಳಿಗೆ ವಾಪಸ್ ಬರುತ್ತದೆ. ಫೆ. 23 ರಂದು ನಡೆಯುತ್ತಿರುವ ಪಗಡಿ ಸಂಭಾಲ್ ದಿನಕ್ಕೆ ಸಾಕ್ಷಿಯಾಗುತ್ತಿರುವುದಕ್ಕೆ ಮತ್ತು 100 ನೇ ದಿನದ ಹೋರಾಟದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ತಿಳಿಸಲು ಸಂತೋಷವಾಗುತ್ತಿದೆ ಎಂದು ಈ ಹೋರಾಟಗಾರರು ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಈ ಸಾಮಾಜಿಕ ಕಾರ್ಯಕರ್ತರ ಅಭಿಯಾನವು ಪ್ರಯಾಣದಿಂದಲೇ ಆರಂಭವಾಗುತ್ತದೆ ಎಂದು ಹೇಳಲಾಗಿದೆ. ಹಗಲಿನ ವೇಳೆಯಲ್ಲಿ ದೀರ್ಘಾವಧಿಯ ನಿಲುಗಡೆ ಇರುವ ಕಡೆಯಲೆಲ್ಲಾ ಘೋಷಣೆಗಳು ಮತ್ತು ಹಾಡುಗಳೊಂದಿಗೆ ಪ್ರತಿರೋಧವನ್ನು ಪ್ರಾರಂಭಿಸಲಿದ್ದಾರೆ.

ರೈತ ನಾಯಕರೊಂದಿಗೆ ಸಾಧ್ಯವಾದಷ್ಟು ಸಂಕ್ಷಿಪ್ತ ಸಂವಹನ ನಡೆಸುತ್ತೇವೆ. ವೇದಿಕೆಗಳಲ್ಲಿ ಸಣ್ಣ ಭಾಷಣಗಳನ್ನು ಮಾಡಲು ತಯಾರು ಮಾಡಿಕೊಳ್ಳಲಾಗಿದೆ. ಇದರ ಜೊತೆಗೆ ಹೋರಾಟದ ಹಾಡುಗಳನ್ನು ಮುಖ್ಯ ವೇದಿಕೆಯ ಹೊರತಾಗಿ ಬೇರೆ ಬೇರೆ ಸ್ಥಳಗಳಲ್ಲಿ ಪ್ರಸ್ತುತ ಪಡಿಸಲು ಈ ತಂಡ ಸಿದ್ಧತೆ ಮಾಡಿಕೊಂಡಿದೆ.

ಒಟ್ಟಾರೆ, ದೇಶದ ರೈತರು ಈ ವಿವಾದಿತ ಕೃಷಿ ಕಾನೂನಿನ ವಿರುದ್ಧ ನಡೆಸುತ್ತಿರುವ ಹೋರಾಟದಲ್ಲಿ ಒಗ್ಗಟ್ಟು ಮತ್ತು ಬೆಂಬಲ ನೀಡುವುದು ಇವರ ಉದ್ದೇಶವಾಗಿದೆ.

https://youtu.be/XVLbUUgKylw


ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...