Homeಚಳವಳಿರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

ರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

’ಫೆ. 23 ರಂದು ನಡೆಯುತ್ತಿರುವ ಪಗಡಿ ಸಂಭಾಲ್ ದಿನಕ್ಕೆ ಸಾಕ್ಷಿಯಾಗುತ್ತಿರುವುದಕ್ಕೆ ಹೆಮ್ಮೆಯಿದೆ’

- Advertisement -
- Advertisement -

ರೈತ ಹೋರಾಟಕ್ಕೆ ವಿಶ್ವದಾದ್ಯಂತ ಸಾವಿರಾರು ಸಂಘಟನೆಗಳು ಬೆಂಬಲ ನೀಡುತ್ತಿದೆ. ದಕ್ಷಿಣ ಭಾರತದ ರೈತರು ಈಗಾಗಲೇ ಸಾವಿರಾರು ಮಂದಿ ದೆಹಲಿಯ ಗಡಿಗಳಿಗೆ ತೆರಳಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಈಗ ರೈತರ ಹೋರಾಟಗಳಲ್ಲಿ ಸಕ್ರಿಯವಾಗಿರುವ ದಕ್ಷಿಣ ಭಾರತದ 140ಕ್ಕೂ ಹೆಚ್ಚು ಸಾಮಾಜಿಕ ಹೋರಾಟಗಾರರು ಮತ್ತು ಮುಖಂಡರು ರೈತ ಹೋರಾಟಕ್ಕೆ ಬೆಂಬಲ ನೀಡಲು ತೆರಳುತ್ತಿದ್ದಾರೆ.

ದಕ್ಷಿಣ ಭಾರತದಲ್ಲಿಯೂ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು, ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣದ ಸಾಮಾಜಿಕ ಹೋರಾಟಗಾರರು ಮತ್ತು ಅವರ ತಂಡ ಐಕ್ಯತೆ ಮತ್ತು ಒಗ್ಗಟ್ಟಿನ ಬೆಂಬಲ ನೀಡಲು ಫೆಬ್ರವರಿ 23 ರಂದು ದೆಹಲಿ ಪ್ರತಿಭಟನಾ ಸ್ಥಳಗಳಿಗೆ ತೆರಳುತ್ತಿದೆ.

ಈ ಹೋರಾಟಗಾರರು ಮತ್ತು ತಂಡದಲ್ಲಿ ಕರ್ನಾಟಕದ 64 ಸದಸ್ಯರು, ಆಂಧ್ರ ಪ್ರದೇಶದ ವಿವಿಧ ಸಂಘ ಸಂಸ್ಥೆಗಳಿಂದ 28 ಸದಸ್ಯರು, ತೆಲಂಗಾಣದಿಂದ 30 ಮತ್ತು ತಮಿಳುನಾಡಿನ ಸಂಸ್ಥೆಗಳಿಂದ 8 ಸದಸ್ಯರು ದೆಹಲಿಗೆ ಹೋರಟಿದ್ದಾರೆ. ಫೆಬ್ರವರಿ 23 ರ ನಂತರ ಇನ್ನೂ ಅನೇಕ ಮಂದಿ ಈ ತಂಡವನ್ನು ಸೇರಲಿದ್ದಾರೆ. ಇದರಲ್ಲಿ ಕರ್ನಾಟಕದ ಜನಶಕ್ತಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯ ಭಾಗವಾಗಲಿದ್ದಾರೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಕರ್ನಾಟಕ ಜನಶಕ್ತಿ ಕಾರ್ಯಕರ್ತರು ಇಂದು ಬೆಂಗಳೂರಿನಿಂದ ಹೊರಟಿದ್ದು, ಫೆ.23 ರಂದು ದೆಹಲಿ ಸೇರಲಿದ್ದಾರೆ.

ಫೆಬ್ರವರಿ 23 ರಂದು ನಡೆಯಲಿರುವ ಪಗಡಿ ಸಂಭಾಲ್ ದಿನದಂದು ಈ ಹೋರಟಗಾರರ ತಂಡ ಸಿಂಘು ಗಡಿಯನ್ನು ತಲುಪಲಿದೆ. ಫೆಬ್ರವರಿ 24 ರಂದು ಟಿಕ್ರಿ ಬಾರ್ಡರ್, ಫೆಬ್ರವರಿ 25 ರಂದು ಶಹಜಹಾನಪುರ ಗಡಿ ಭಾಗ, ಫೆಬ್ರವರಿ 26 ರಂದು ಗಾಝಿಪುರ್‌ ಗಡಿಗೆ ಭೇಟಿ ನೀಡಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಐತಿಹಾಸಿಕ ರೈತ ಹೋರಾಟದ 100 ನೇ ದಿನ ಈ ತಂಡ ಸಿಂಘು ಪ್ರತಿಭಟನಾ ಸ್ಥಳಕ್ಕೆ ಹಿಂತಿರುಗಿ ಅಲ್ಲಿಂದ ತಮ್ಮ ಸ್ಥಳಗಳಿಗೆ ವಾಪಸ್ ಬರುತ್ತದೆ. ಫೆ. 23 ರಂದು ನಡೆಯುತ್ತಿರುವ ಪಗಡಿ ಸಂಭಾಲ್ ದಿನಕ್ಕೆ ಸಾಕ್ಷಿಯಾಗುತ್ತಿರುವುದಕ್ಕೆ ಮತ್ತು 100 ನೇ ದಿನದ ಹೋರಾಟದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ತಿಳಿಸಲು ಸಂತೋಷವಾಗುತ್ತಿದೆ ಎಂದು ಈ ಹೋರಾಟಗಾರರು ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಈ ಸಾಮಾಜಿಕ ಕಾರ್ಯಕರ್ತರ ಅಭಿಯಾನವು ಪ್ರಯಾಣದಿಂದಲೇ ಆರಂಭವಾಗುತ್ತದೆ ಎಂದು ಹೇಳಲಾಗಿದೆ. ಹಗಲಿನ ವೇಳೆಯಲ್ಲಿ ದೀರ್ಘಾವಧಿಯ ನಿಲುಗಡೆ ಇರುವ ಕಡೆಯಲೆಲ್ಲಾ ಘೋಷಣೆಗಳು ಮತ್ತು ಹಾಡುಗಳೊಂದಿಗೆ ಪ್ರತಿರೋಧವನ್ನು ಪ್ರಾರಂಭಿಸಲಿದ್ದಾರೆ.

ರೈತ ನಾಯಕರೊಂದಿಗೆ ಸಾಧ್ಯವಾದಷ್ಟು ಸಂಕ್ಷಿಪ್ತ ಸಂವಹನ ನಡೆಸುತ್ತೇವೆ. ವೇದಿಕೆಗಳಲ್ಲಿ ಸಣ್ಣ ಭಾಷಣಗಳನ್ನು ಮಾಡಲು ತಯಾರು ಮಾಡಿಕೊಳ್ಳಲಾಗಿದೆ. ಇದರ ಜೊತೆಗೆ ಹೋರಾಟದ ಹಾಡುಗಳನ್ನು ಮುಖ್ಯ ವೇದಿಕೆಯ ಹೊರತಾಗಿ ಬೇರೆ ಬೇರೆ ಸ್ಥಳಗಳಲ್ಲಿ ಪ್ರಸ್ತುತ ಪಡಿಸಲು ಈ ತಂಡ ಸಿದ್ಧತೆ ಮಾಡಿಕೊಂಡಿದೆ.

ಒಟ್ಟಾರೆ, ದೇಶದ ರೈತರು ಈ ವಿವಾದಿತ ಕೃಷಿ ಕಾನೂನಿನ ವಿರುದ್ಧ ನಡೆಸುತ್ತಿರುವ ಹೋರಾಟದಲ್ಲಿ ಒಗ್ಗಟ್ಟು ಮತ್ತು ಬೆಂಬಲ ನೀಡುವುದು ಇವರ ಉದ್ದೇಶವಾಗಿದೆ.

https://youtu.be/XVLbUUgKylw


ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...