Homeಚಳವಳಿರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಮನವಿ ಮಾಡಿದ್ದಾರೆ.

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸುವ ರೈತರು ದೇಶಾದ್ಯಂತ ಪ್ರತಿಭಟನೆ ವಿಸ್ತರಿಸುವ ಯೋಜನೆಯ ಭಾಗವಾಗಿ ದಲಿತರೊಂದಿಗೆ ಕೈಜೋಡಿಸುತ್ತಿದ್ದಾರೆ. ರೈತ ಪ್ರತಿಭಟನೆ, ಮಹಾಪಂಚಾಯತ್ ಜಾತಿ ಕಟ್ಟುಪಾಡು ಮುರಿಯುತ್ತಿವೆ. ಜೊತೆಗೆ ಪ್ರತಿಭಟನೆಗೆ ವಿಶಾಲವಾದ ನೆಲೆಯನ್ನು ನೀಡುವುದು ಇವುಗಳ ಉದ್ದೇಶವಾಗಿದೆ.

ಹರಿಯಾಣದ ಹಿಸಾರ್ ಜಿಲ್ಲೆಯ ಬಾರ್ವಾಲಾ ಪಟ್ಟಣದಲ್ಲಿ ಶನಿವಾರ(ಫೆ.20) ದಲಿತರೊಂದಿಗೆ ಮಹಾಪಂಚಾಯತ್ ನಡೆಯಿತು. ಇದರಲ್ಲಿ ಕೃಷಿ ಒಕ್ಕೂಟದ ಮುಖಂಡ ಗುರ್ನಮ್ ಚಧುನಿ ಭಾಗವಹಿಸಿದ್ದರು. ಹರಿಯಾಣದ ಜನಸಂಖ್ಯೆಯಲ್ಲಿ ಶೇಕಡಾ 20 ರಷ್ಟು ಜನ ಪರಿಶಿಷ್ಟ ಜಾತಿಗೆ  ಸೇರಿದವರಿದ್ದಾರೆ.

ಮಹಾಪಂಚಾಯತ್‌ನಲ್ಲಿ ರೈತರು ತಮ್ಮ ಮನೆಗಳಲ್ಲಿ ಅಂಬೇಡ್ಕರ್ ಫೋಟೊ, ದಲಿತರು ತಮ್ಮ ಮನೆಗಳಲ್ಲಿ  ಸರ್ ಛೋಟು ರಾಮ್ ಫೋಟೊ ಹಾಕುವಂತೆ ಮನವಿ ಮಾಡಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಮಹಾಪಂಚಾಯತ್‌ನಲ್ಲಿ ಮಾತನಾಡಿದ ರೈತ ಮುಖಂಡ ಗುರ್ನಾಮ್ ಚಧುನಿ, ರೈತರು ಮತ್ತು ದಲಿತರ ನಡುವೆ ಹೆಚ್ಚಿನ ಒಗ್ಗಟ್ಟು ಮೂಡಿಸಬೇಕೆಂದು ಕರೆ ನೀಡಿದರು. ರೈತರು ತಮ್ಮ ಮನೆಗಳಲ್ಲಿ ದಲಿತ ಐಕಾನ್ ಬಿ.ಆರ್.ಅಂಬೇಡ್ಕರ್ ಅವರ ಚಿತ್ರಗಳನ್ನು ಹೊಂದುವಂತೆ ನಿರ್ಣಯವನ್ನು ಅಂಗೀಕರಿಸಲಾಯಿತು. ಬ್ರಿಟೀಷ್ ಭಾರತದ ಪ್ರಮುಖ ರೈತ ಮುಖಂಡ ಸರ್ ಛೋಟು ರಾಮ್ ಅವರ ಚಿತ್ರಗಳನ್ನು ದಲಿತರು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುವಂತೆ ಕೇಳಲಾಯಿತು.

“ನಮ್ಮ ಹೋರಾಟವು ಸರ್ಕಾರದ ವಿರುದ್ಧ ಮಾತ್ರವಲ್ಲದೆ ಬಂಡವಾಳಶಾಹಿಗಳ ವಿರುದ್ಧವೂ ಆಗಿದೆ” ಎಂದು ಚಧುನಿ ಹೇಳಿದರು. “ಸರ್ಕಾರವು ಇಲ್ಲಿಯವರೆಗೆ ನಮ್ಮನ್ನು ವಿಭಜಿಸುತ್ತ ಬಂದಿದೆ. ಕೆಲವೊಮ್ಮೆ ಜಾತಿಯ ಹೆಸರಿನಲ್ಲಿ ಅಥವಾ ಕೆಲವೊಮ್ಮೆ ಧರ್ಮದ ಹೆಸರಿನಲ್ಲಿ ಈ ವಿಭಜನೆ ನಡೆಯುತ್ತಿದೆ. ಸರ್ಕಾರದ ಈ ಪಿತೂರಿಯನ್ನು ಅರ್ಥಮಾಡಿಕೊಳ್ಳಿ” ಎಂದು ರೈತರಿಗೆ ಕಿವಿಮಾತು ಹೇಳಿದರು.

’ಇನ್ನು ಮುಂದೆ ಹರಿಯಾಣ ಮತ್ತು ಪಂಜಾಬ್‌ನಲ್ಲಿ ಇಂತಹ ಮಹಾಪಂಚಾಯತ್‌ಗಳ ಅಗತ್ಯವಿಲ್ಲ. ಪಂಜಾಬ್ ಮತ್ತು ಹರಿಯಾಣಗಳಿಗೆ ಕೃಷಿ ಕಾನೂನುಗಳ ಬಗ್ಗೆ ತಿಳಿದಿದೆ. ಈಗ ಇತರ ರಾಜ್ಯಗಳತ್ತ ಗಮನ ಹರಿಸಬೇಕಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಮೂರು ಕೃಷಿ ಕಾನೂನುಗಳ ವಿರುದ್ಧದ ಯುದ್ಧವು ರೈತರಿಗೆ ಮಾತ್ರವಲ್ಲ ಎಂದು ಕಾರ್ಮಿಕರು ಅರ್ಥಮಾಡಿಕೊಳ್ಳಬೇಕು. ಕಾರ್ಮಿಕ ವರ್ಗವು ಹೆಚ್ಚು ತೊಂದರೆ ಅನುಭವಿಸುತ್ತಿದೆ. ಆದ್ದರಿಂದ, ಈ ಆಂದೋಲನಕ್ಕೆ ಹೆಚ್ಚು ಹೆಚ್ಚು ಕೊಡುಗೆ ನೀಡುವಂತೆ ನಾನು ಕಾರ್ಮಿಕ ವರ್ಗವನ್ನು ವಿನಂತಿಸುತ್ತೇನೆ ” ಎಂದು ಮನವಿ ಮಾಡಿದ್ದಾರೆ.

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಕೇಳಿಕೊಂಡರು.

ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗೊಳಿಸುವ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ದೆಹಲಿ ಗಡಿಗಳ ಜೊತೆಗೆ ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ಪಂಜಾಬ್‌ಗಳಲ್ಲಿ ರೈತರ ಬೃಹತ್ ಮಹಾಪಂಚಾಯತ್  ನಡೆಯುತ್ತಿವೆ.

ರಾಜ್ಯದಲ್ಲಿಯೂ ಸಮಾಜವಾದಿ ಹೋರಾಟದ ಜಿಲ್ಲೆ, ಮುಖ್ಯಮಂತ್ರಿಗಳ ತವರೂರು ಶಿವಮೊಗ್ಗದಲ್ಲಿ ಮೊದಲ ಬೃಹತ್ ‘ರೈತ ಮಹಾಪಂಚಾಯತ್’ ನಡೆಸಲು ವೇದಿಕೆ ಸಜ್ಜಾಗಿದೆ. ರೈತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಮಹಾಸಭೆ ನಡೆದಿದ್ದು, ಮಾರ್ಚ್ 15 ರಂದು ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾ ಪಂಚಾಯತ್ ನಡೆಸಲು ತೀರ್ಮಾನಿಸಲಾಗಿದೆ.


ಇದನ್ನೂ ಓದಿ: ಮಾರ್ಚ್ 15 ಕ್ಕೆ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾಪಂಚಾಯತ್: ಚಳವಳಿ ಬಲಪಡಿಸಲು ರೈತಮುಖಂಡರ ಒಕ್ಕೊರಲ ಸಂಕಲ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...