Homeಚಳವಳಿರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಮನವಿ ಮಾಡಿದ್ದಾರೆ.

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸುವ ರೈತರು ದೇಶಾದ್ಯಂತ ಪ್ರತಿಭಟನೆ ವಿಸ್ತರಿಸುವ ಯೋಜನೆಯ ಭಾಗವಾಗಿ ದಲಿತರೊಂದಿಗೆ ಕೈಜೋಡಿಸುತ್ತಿದ್ದಾರೆ. ರೈತ ಪ್ರತಿಭಟನೆ, ಮಹಾಪಂಚಾಯತ್ ಜಾತಿ ಕಟ್ಟುಪಾಡು ಮುರಿಯುತ್ತಿವೆ. ಜೊತೆಗೆ ಪ್ರತಿಭಟನೆಗೆ ವಿಶಾಲವಾದ ನೆಲೆಯನ್ನು ನೀಡುವುದು ಇವುಗಳ ಉದ್ದೇಶವಾಗಿದೆ.

ಹರಿಯಾಣದ ಹಿಸಾರ್ ಜಿಲ್ಲೆಯ ಬಾರ್ವಾಲಾ ಪಟ್ಟಣದಲ್ಲಿ ಶನಿವಾರ(ಫೆ.20) ದಲಿತರೊಂದಿಗೆ ಮಹಾಪಂಚಾಯತ್ ನಡೆಯಿತು. ಇದರಲ್ಲಿ ಕೃಷಿ ಒಕ್ಕೂಟದ ಮುಖಂಡ ಗುರ್ನಮ್ ಚಧುನಿ ಭಾಗವಹಿಸಿದ್ದರು. ಹರಿಯಾಣದ ಜನಸಂಖ್ಯೆಯಲ್ಲಿ ಶೇಕಡಾ 20 ರಷ್ಟು ಜನ ಪರಿಶಿಷ್ಟ ಜಾತಿಗೆ  ಸೇರಿದವರಿದ್ದಾರೆ.

ಮಹಾಪಂಚಾಯತ್‌ನಲ್ಲಿ ರೈತರು ತಮ್ಮ ಮನೆಗಳಲ್ಲಿ ಅಂಬೇಡ್ಕರ್ ಫೋಟೊ, ದಲಿತರು ತಮ್ಮ ಮನೆಗಳಲ್ಲಿ  ಸರ್ ಛೋಟು ರಾಮ್ ಫೋಟೊ ಹಾಕುವಂತೆ ಮನವಿ ಮಾಡಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಮಹಾಪಂಚಾಯತ್‌ನಲ್ಲಿ ಮಾತನಾಡಿದ ರೈತ ಮುಖಂಡ ಗುರ್ನಾಮ್ ಚಧುನಿ, ರೈತರು ಮತ್ತು ದಲಿತರ ನಡುವೆ ಹೆಚ್ಚಿನ ಒಗ್ಗಟ್ಟು ಮೂಡಿಸಬೇಕೆಂದು ಕರೆ ನೀಡಿದರು. ರೈತರು ತಮ್ಮ ಮನೆಗಳಲ್ಲಿ ದಲಿತ ಐಕಾನ್ ಬಿ.ಆರ್.ಅಂಬೇಡ್ಕರ್ ಅವರ ಚಿತ್ರಗಳನ್ನು ಹೊಂದುವಂತೆ ನಿರ್ಣಯವನ್ನು ಅಂಗೀಕರಿಸಲಾಯಿತು. ಬ್ರಿಟೀಷ್ ಭಾರತದ ಪ್ರಮುಖ ರೈತ ಮುಖಂಡ ಸರ್ ಛೋಟು ರಾಮ್ ಅವರ ಚಿತ್ರಗಳನ್ನು ದಲಿತರು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುವಂತೆ ಕೇಳಲಾಯಿತು.

“ನಮ್ಮ ಹೋರಾಟವು ಸರ್ಕಾರದ ವಿರುದ್ಧ ಮಾತ್ರವಲ್ಲದೆ ಬಂಡವಾಳಶಾಹಿಗಳ ವಿರುದ್ಧವೂ ಆಗಿದೆ” ಎಂದು ಚಧುನಿ ಹೇಳಿದರು. “ಸರ್ಕಾರವು ಇಲ್ಲಿಯವರೆಗೆ ನಮ್ಮನ್ನು ವಿಭಜಿಸುತ್ತ ಬಂದಿದೆ. ಕೆಲವೊಮ್ಮೆ ಜಾತಿಯ ಹೆಸರಿನಲ್ಲಿ ಅಥವಾ ಕೆಲವೊಮ್ಮೆ ಧರ್ಮದ ಹೆಸರಿನಲ್ಲಿ ಈ ವಿಭಜನೆ ನಡೆಯುತ್ತಿದೆ. ಸರ್ಕಾರದ ಈ ಪಿತೂರಿಯನ್ನು ಅರ್ಥಮಾಡಿಕೊಳ್ಳಿ” ಎಂದು ರೈತರಿಗೆ ಕಿವಿಮಾತು ಹೇಳಿದರು.

’ಇನ್ನು ಮುಂದೆ ಹರಿಯಾಣ ಮತ್ತು ಪಂಜಾಬ್‌ನಲ್ಲಿ ಇಂತಹ ಮಹಾಪಂಚಾಯತ್‌ಗಳ ಅಗತ್ಯವಿಲ್ಲ. ಪಂಜಾಬ್ ಮತ್ತು ಹರಿಯಾಣಗಳಿಗೆ ಕೃಷಿ ಕಾನೂನುಗಳ ಬಗ್ಗೆ ತಿಳಿದಿದೆ. ಈಗ ಇತರ ರಾಜ್ಯಗಳತ್ತ ಗಮನ ಹರಿಸಬೇಕಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಮೂರು ಕೃಷಿ ಕಾನೂನುಗಳ ವಿರುದ್ಧದ ಯುದ್ಧವು ರೈತರಿಗೆ ಮಾತ್ರವಲ್ಲ ಎಂದು ಕಾರ್ಮಿಕರು ಅರ್ಥಮಾಡಿಕೊಳ್ಳಬೇಕು. ಕಾರ್ಮಿಕ ವರ್ಗವು ಹೆಚ್ಚು ತೊಂದರೆ ಅನುಭವಿಸುತ್ತಿದೆ. ಆದ್ದರಿಂದ, ಈ ಆಂದೋಲನಕ್ಕೆ ಹೆಚ್ಚು ಹೆಚ್ಚು ಕೊಡುಗೆ ನೀಡುವಂತೆ ನಾನು ಕಾರ್ಮಿಕ ವರ್ಗವನ್ನು ವಿನಂತಿಸುತ್ತೇನೆ ” ಎಂದು ಮನವಿ ಮಾಡಿದ್ದಾರೆ.

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಕೇಳಿಕೊಂಡರು.

ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗೊಳಿಸುವ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ದೆಹಲಿ ಗಡಿಗಳ ಜೊತೆಗೆ ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ಪಂಜಾಬ್‌ಗಳಲ್ಲಿ ರೈತರ ಬೃಹತ್ ಮಹಾಪಂಚಾಯತ್  ನಡೆಯುತ್ತಿವೆ.

ರಾಜ್ಯದಲ್ಲಿಯೂ ಸಮಾಜವಾದಿ ಹೋರಾಟದ ಜಿಲ್ಲೆ, ಮುಖ್ಯಮಂತ್ರಿಗಳ ತವರೂರು ಶಿವಮೊಗ್ಗದಲ್ಲಿ ಮೊದಲ ಬೃಹತ್ ‘ರೈತ ಮಹಾಪಂಚಾಯತ್’ ನಡೆಸಲು ವೇದಿಕೆ ಸಜ್ಜಾಗಿದೆ. ರೈತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಮಹಾಸಭೆ ನಡೆದಿದ್ದು, ಮಾರ್ಚ್ 15 ರಂದು ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾ ಪಂಚಾಯತ್ ನಡೆಸಲು ತೀರ್ಮಾನಿಸಲಾಗಿದೆ.


ಇದನ್ನೂ ಓದಿ: ಮಾರ್ಚ್ 15 ಕ್ಕೆ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾಪಂಚಾಯತ್: ಚಳವಳಿ ಬಲಪಡಿಸಲು ರೈತಮುಖಂಡರ ಒಕ್ಕೊರಲ ಸಂಕಲ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...