Homeಮುಖಪುಟ'ಗೋ-ವಿಜ್ಞಾನ' ಪರೀಕ್ಷೆ ಬರೆಯಲಿರುವ 5 ಲಕ್ಷ ಜನ - ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

‘ಗೋ-ವಿಜ್ಞಾನ’ ಪರೀಕ್ಷೆ ಬರೆಯಲಿರುವ 5 ಲಕ್ಷ ಜನ – ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ- ಪ್ರಾಧ್ಯಾಪಕ ಪಾರ್ಥ ರಾಯ್

- Advertisement -
- Advertisement -

ದೇಶದ 5 ಲಕ್ಷಕ್ಕೂ ಹೆಚ್ಚು ಜನರು ಗುರುವಾರ “ಪವಿತ್ರ ಹಸು” ಕುರಿತು ಆನ್‌ಲೈನ್ ಪರೀಕ್ಷೆಯನ್ನು ತೆಗೆದುಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ “ಸ್ಥಳೀಯ ಹಸು ವಿಜ್ಞಾನ” ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗವು ದೇಶದ 900 ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಬರೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಾಧವಪುರ ವಿವಿ ಸೇರಿದಂತೆ ಹಲವಾರು ವಿವಿಗಳ ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ಯುಜಿಸಿ ಕಳಿಸಿದ ಪತ್ರ ನೋಡಿ ಗಾಬರಿಯಾಗಿದ್ದಾರೆ. ಒಂದು ಅವೈಜ್ಞಾನಿಕ ಪಠ್ಯವುಳ್ಳ, ಒಂದು ಪಕ್ಷದ ಸಿದ್ಧಾಂತಕ್ಕೆ ಪೂರಕವಾದ ಸಿಲಬಸ್ ಇರುವ ಈ ಪರೀಕ್ಷೆ ಅವೈಜ್ಞಾನಿಕ ಕ್ರಮವನ್ನು ಪ್ರಚೋದಿಸುತ್ತದೆ ಎಂದು ಟೀಕಿಸಿದ್ದಾರೆ.

ಕೇಂದ್ರೀಯ ಪಶುಸಂಗೋಪನಾ ಸಚಿವಾಲಯದ ಅಡಿಯಲ್ಲಿ 2019 ರಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಕಾಮಧೇನು ಆಯೋಗ್‌ನ ಮೆದುಳಿನ ಕೂಸು ಈ ಪರೀಕ್ಷೆ. ಅದರ ವೆಬ್‌ಸೈಟ್‌ನಲ್ಲಿನ ಅಧ್ಯಯನ ಸಾಮಗ್ರಿಗಳು ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದನ್ನು ಬಹುತೇಕ ಹೇಳುತ್ತವೆ. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿ ವಿಶೇಷವಾದದ್ದನ್ನು ಹೊಂದಿದ್ದು ಅದು ಸೂರ್ಯನ ಬೆಳಕನ್ನು ಚಿನ್ನವಾಗಿ ಪರಿವರ್ತಿಸುತ್ತದೆ ಮತ್ತು ಅದು ಅವುಗಳ ಹಾಲಿಗೆ ಹಳದಿ ಬಣ್ಣವನ್ನು ನೀಡುತ್ತದೆ” ಎಂಬ ಅವೈಜ್ಞಾನಿಕ ಮಾಹಿತಿ ಈ ಪಠ್ಯಕ್ರಮದಲ್ಲಿದೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ಭಾರತ ಮತ್ತು ರಷ್ಯಾದ ಪರಮಾಣು ಕೇಂದ್ರಗಳಲ್ಲಿ ವಿಕಿರಣಗಳ ವಿರುದ್ಧ ರಕ್ಷಣೆಯಾಗಿ ಗೋವಿನ ಸಗಣಿ ಬಳಸಲಾಗುತ್ತದೆ ಎಂದು ರಾಷ್ಟ್ರೀಯ ಕಾಮಧೇನು ಆಯೋಗ್ ಹಂಚಿಕೊಂಡ ಅಧ್ಯಯನ ವಸ್ತು ಹೇಳುತ್ತದೆ. ಇದು ಭೋಪಾಲ್ ನಿವಾಸಿಗಳನ್ನು ಅನಿಲ ಸೋರಿಕೆಯಿಂದ ರಕ್ಷಿಸಿತ್ತು. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿರುವ ಸೌರ ನಾಡಿಯ ಸಹಾಯದಿಂದ ಸೂರ್ಯನ ಶಕ್ತಿಯನ್ನು ಹೀರಿಕೊಳ್ಳುವ ವಿಶೇಷ ಶಕ್ತಿಯನ್ನು ಹೊಂದಿವೆ ಎಂದು ಸಿಲಬಸ್ ಹೇಳುತ್ತದೆ. ಇದರ ಪರಿಣಾಮವಾಗಿ, ಭಾರತೀಯ ಹಸುವಿನ ಹಾಲು, ಹಸುವಿನ ಸಗಣಿ ಮತ್ತು ಹಸುವಿನ ಮೂತ್ರಗಳು ಪೌಷ್ಟಿಕಾಂಶಗಳನ್ನು ಹೊಂದಿವೆ ಎಂದು ಸಿಲಬಸ್ ಹೇಳಿದೆ.

“ಇದರ ಬಗ್ಗೆ ಅವೈಜ್ಞಾನಿಕ ಏನೂ ಇಲ್ಲ. ನಾವು ಹಸುವಿನ ಭಾರತೀಯ ತಳಿಯ ಪ್ರಾಮುಖ್ಯತೆಯನ್ನು ತೋರಿಸಲು ಬಯಸುತ್ತೇವೆ. ಆದ್ದರಿಂದ, ನಾವು ಈ ಪರೀಕ್ಷೆಯನ್ನು ನಡೆಸುತ್ತಿದ್ದೇವೆ” ಎಂದು ಕಾಮಧೇನು ಆಯೋಗ್ ಅಧ್ಯಕ್ಷ ವಲ್ಲಭಾಯಿ ಕಥಿರಿಯಾ ಹೇಳಿದರು.

ಜನವರಿ 5 ರಂದು ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಪರೀಕ್ಷೆಗಳನ್ನು ಘೋಷಿಸಿದ್ದರು. ಫೆಬ್ರವರಿ 12 ರಂದು, ಯುಜಿಸಿ ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ “ಕಾಮಧೇನು ಗೋ ವಿಜಯಾನ್ ಪ್ರಚಾರ್ ಪ್ರಸಾರ್” ಪರೀಕ್ಷೆಯಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸುವಂತೆ ವಿವಿಗಳನ್ನು ಕೋರಿತ್ತು.

ಕೋಲ್ಕತ್ತಾದ ಎಬಿವಿಪಿ ಉಪಾಧ್ಯಕ್ಷ ಆದಿತ್ಯ ದಾಸ್, “ನಮ್ಮ ಕಲ್ಪನೆಯಲ್ಲಿ ನಾವು ತುಂಬಾ ಸ್ಪಷ್ಟವಾಗಿದ್ದೇವೆ. ನಮ್ಮ ಜ್ಞಾನ, ಮಾಹಿತಿ ಮತ್ತು ಹಸುವಿನ ಪವಿತ್ರತೆ ಮತ್ತು ಆರ್ಥಿಕ ಲಾಭಗಳೊಂದಿಗೆ ನಾವು ಸಾರ್ವಜನಿಕರ ಬಳಿಗೆ ಹೋಗುತ್ತೇವೆ. ಜನರು ನಿರ್ಧರಿಸುತ್ತಾರೆ. ಪ್ರಾಧ್ಯಾಪಕರದು ಏಕೆ ಅತಿಯಾದ ಪ್ರತಿಕ್ರಿಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳಕ್ಕೆ ಸ್ವಂತ ಮಗಳು ಬೇಕು: ಟಿಎಂಸಿಯ ಚುನಾವಣಾ ಘೋಷವಾಕ್ಯ

ಜಾದವ್‌ಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಯುಜಿಸಿಯ ಕೋರಿಕೆಯಿಂದ ಬೆರಗಾಗಿದ್ದಾರೆ. ಪರೀಕ್ಷೆಯನ್ನು ಉತ್ತೇಜಿಸಲು ಕೇಳಲಾಗಿರುವ 900 ವಿಶ್ವವಿದ್ಯಾಲಯಗಳಲ್ಲಿ ಜಾಧವ್‌ಪುರ ವಿವಿ ಕೂಡ ಒಂದು.

“ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ” ಎಂದು ಜಾಧವ್‌ಪುರ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪಾರ್ಥ ರಾಯ್ ಹೇಳಿದರು.

ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕರಾದ ಸಮಂತಕ್ ದಾಸ್ “ಇದರ ಹಿಂದೆ ಸಾಕಷ್ಟು ಚೆನ್ನಾಗಿ ಯೋಚಿಸಿದ ಯೋಜನೆ ಇದೆ ಎಂದು ನಾನು ಆತಂಕಿತನಾಗಿರುವೆ. ಅಸತ್ಯಗಳನ್ನು ನ್ಯಾಯಸಮ್ಮತಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಿಡಿ ಕಿರಿದ್ದಾರೆ.

13 ಭಾಷೆಗಳಲ್ಲಿ ನಡೆಯಲಿರುವ ಪರೀಕ್ಷೆಗಳ ನೋಂದಣಿ 2021 ರ ಜನವರಿ 15 ರಂದು ಪ್ರಾರಂಭವಾಯಿತು. ಆಯೋಗ್‌ನ ವಕ್ತಾರ ಪುರೀಶ್ ಕುಮಾರ್, “5 ಲಕ್ಷ, 10,000 ಜನರು ಈವರೆಗೆ ದಾಖಲಾಗಿದ್ದಾರೆ. ಇದೇ ಮೊದಲ ಬಾರಿಗೆ ಇಂತಹ ಪರೀಕ್ಷೆ ನಡೆಯುತ್ತಿದೆ. ಮುಂದಿನ ವರ್ಷಗಳಲ್ಲಿ ಪರೀಕ್ಷಕರು ಮತ್ತು ಹಸುಗಳ ಸಂಖ್ಯೆಯು ಹೆಚ್ಚಾಗುತ್ತದೆ” ಎಂದು ಆಶಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಮೆಚ್ಚುಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಲಾಗಿದೆ.


ಇದನ್ನೂ ಓದಿ: ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತ ಹೀಗೆಯೇ ಮುಂದುವರಿದರೆ, ಬಾರತ ಶಿಲಾಯುಗಕ್ಕೆ ಮರಳಲಿದೆ.

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...