Homeಮುಖಪುಟನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

ನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

ಕೋಲ್ಕತ್ತಾ ಪೊಲೀಸರು ಮತ್ತು ಆಡಳಿತಾರೂಢ ಟಿಎಂಸಿ ಪಮೇಲಾ ಗೋಸ್ವಾಮಿ ಅವರಿಗೆ "ಬ್ರೈನ್ ವಾಶ್" ಮಾಡಿದ್ದಾರೆ- ರಾಕೇಶ್ ಸಿಂಗ್

- Advertisement -
- Advertisement -

ಕೊಕೇನ್ ಹೊಂದಿದ್ದ ಆರೋಪದ ಮೇಲೆ ಬಂಧಿತರಾಗಿರುವ ಬಂಗಾಳದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ತನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಕೈಲಾಶ್ ವಿಜಯವರ್ಗಿಯಾ ಅವರ ಆಪ್ತ ರಾಕೇಶ್ ಸಿಂಗ್ ಪಿತೂರಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪಮೇಲಾ ಗೋಸ್ವಾಮಿ ಪರ್ಸ್‌ ಮತ್ತು ಅವರು ಇದ್ದ ಕಾರಿನ ಸೀಟಿನಲ್ಲಿ ಕೆಲವು ಲಕ್ಷ ಮೌಲ್ಯದ ಕೊಕೇನ್ ಸಿಕ್ಕಿದ್ದಕ್ಕಾಗಿ ಕೊಲ್ಕತ್ತಾ ಪೊಲೀಸರು ಶುಕ್ರವಾರ (ಫೆ.19) ಬಂಧಿಸಿದ್ದಾರೆ. ಕಾರಿನಲ್ಲಿದ್ದ ಅವರ ಸ್ನೇಹಿತ ಮತ್ತು ಯುವ ಮೋರ್ಚಾದ ಸಹೋದ್ಯೋಗಿ ಪ್ರಬೀರ್ ಕುಮಾರ್ ಡೇ ಮತ್ತು ಭದ್ರತಾ ಸಿಬ್ಬಂದಿ ಸೋಮನಾಥ್ ಚಟರ್ಜಿಯನ್ನು ಕೂಡ ಬಂಧಿಸಲಾಗಿದೆ.

“ನಾನು ಸಿಐಡಿ ತನಿಖೆಯನ್ನು ಬಯಸುತ್ತೇನೆ. ಕೈಲಾಶ್ ವಿಜಯವರ್ಗಿಯಾ ಅವರ ಆಪ್ತ ರಾಕೇಶ್ ಸಿಂಗ್ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಬಂಧಿಸಿ. ಇದು ಅವರದ್ದೇ ಪಿಯೂರಿ. ಅವರ ವಿರುದ್ಧ ನನ್ನ ಬಳಿ ಎಲ್ಲ ಪುರಾವೆಗಳಿವೆ” ಎಂದು  ಪಮೇಲಾ ಗೋಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಮಾದಕವಸ್ತು ಮಾರಾಟ ಆರೋಪದಡಿ ಬಿಜೆಪಿ ನಾಯಕಿಯ ಬಂಧನವಾಗಿದ್ದು ಹೇಗೆ?

ಇದಕ್ಕೆ ಪ್ರತಿಕ್ರಿಯಿಸಿರುವ ರಾಕೇಶ್ ಸಿಂಗ್, ’ಕೋಲ್ಕತ್ತಾ ಪೊಲೀಸರು ಮತ್ತು ಆಡಳಿತಾರೂಢ ಟಿಎಂಸಿ ಪಮೇಲಾ ಗೋಸ್ವಾಮಿ ಅವರಿಗೆ “ಬ್ರೈನ್ ವಾಶ್” ಮಾಡಿದ್ದಾರೆ. ನಾನು ಕಳೆದ ಒಂದು ವರ್ಷದಿಂದ ಅವರೊಂದಿಗೆ ಯಾವುದೇ ಸಂಪರ್ಕದಲ್ಲಿಲ್ಲ. ಯಾವುದೇ ಏಜೆನ್ಸಿಯ ತನಿಖೆಯನ್ನು ಎದುರಿಸಲು ತಾನು ಸಿದ್ಧ. ನಾನು ಭಾಗಿಯಾಗಿದ್ದರೆ, ನನ್ನನ್ನು ಅಥವಾ ಕೈಲಾಶ್ ವಿಜಯವರ್ಗಿಯಾ ಅಥವಾ ಅಮಿತ್ ಶಾ ಅವರನ್ನು ತನಿಖೆಗೆ ಕರೆಯಬಹುದು’ ಎಂದು ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

“ಕೋಲ್ಕತ್ತಾ ಪೊಲೀಸರು ತೃಣಮೂಲ ಕಾಂಗ್ರೆಸ್ ಸೂಚನೆಗಳನ್ನು ಪಾಲಿಸುವ ಸಾಧ್ಯತೆಯಿದೆ. ಅವರು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಇವು ಆಧಾರರಹಿತ ಆರೋಪ ಮತ್ತು ಯಾವುದೇ ಸವಾಲನ್ನು ಎದುರಿಸಲು ನಾನು ಸಿದ್ಧ” ಎಂದು ಹೇಳಿದ್ದಾರೆ.

ಕೈಲಾಶ್ ವಿಜಯವರ್ಗಿಯಾ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಉಸ್ತುವಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಈ ಘಟನೆಯ ಬಗ್ಗೆ ನನಗೆ ತಿಳಿದಿಲ್ಲ ಮತ್ತು ಆದ್ದರಿಂದ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಕಾನೂನು ಕ್ರಮ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಪಮೇಲಾ ಗೋಸ್ವಾಮಿ ತಂದೆ ನೀಡಿದ ದೂರಿನ ನಂತರ ಆಕೆ ಮತ್ತು ಆಕೆಯ ಸ್ನೇಹಿತ ಪ್ರಬೀರ್ ಕುಮಾರ್‌ ಡೇ ಇಬ್ಬರ ಮೇಲೂ ಕಣ್ಣಿಡಲಾಗಿತ್ತು ಎಂದು ಕೋಲ್ಕತಾ ಪೊಲೀಸರು ತಿಳಿಸಿದ್ದಾರೆ. ಪ್ರಬೀರ್ ಪಮೇಲಾರನ್ನು ಮಾದಕ ವ್ಯಸನಿಯನ್ನಾಗಿ ಮಾಡಿದ್ದಾನೆ ಎಂದು ನಗರ ಪೊಲೀಸ್ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕೌಶಿಕ್ ಗೋಸ್ವಾಮಿ ಆರೋಪಿಸಿದ್ದರು. ಸದ್ಯ ಆರೋಪಿಗಳನ್ನು ಫೆ.25ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪಮೇಲಾ ಗೋಸ್ವಾಮಿ ಅವರು 2019 ರಲ್ಲಿ ಬಿಜೆಪಿಗೆ ಸೇರುವ ಮೊದಲು ಏರ್ ಹೊಸ್ಟೆಸ್, ಮಾಡೆಲ್ ಮತ್ತು ಟಿವಿ ಧಾರಾವಾಹಿ ನಟಿಯಾಗಿ ಕೆಲಸ ಮಾಡಿದ್ದಾರೆಂದು ಹೇಳಲಾಗಿದೆ. ನಂತರ ಅವರನ್ನು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಹೂಗ್ಲಿ ಜಿಲ್ಲೆಯ ಯುವ ಮೋರ್ಚಾ ವೀಕ್ಷಕರಾಗಿ ನೇಮಿಸಲಾಯಿತು.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...