Homeಕರ್ನಾಟಕಗಾಂಧಿಯನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?- ಸಿದ್ದರಾಮಯ್ಯ ಪ್ರಶ್ನೆ

ಗಾಂಧಿಯನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?- ಸಿದ್ದರಾಮಯ್ಯ ಪ್ರಶ್ನೆ

ಹೆಡ್ಗೇವಾರ್, ಗೊಲ್ವಾಲ್ಕರ್‌‌ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದದ್ದು ಯಾಕೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು. ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಾದಯಾತ್ರೆಯ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಒಂದು ಕಾಲದಲ್ಲಿ ಸರ್ವಧರ್ಮ ಸಮನ್ವಯತೆಯ ತವರಾಗಿದ್ದ ದಕ್ಷಿಣ ಕನ್ನಡವನ್ನು ಬಿಜೆಪಿ ನಾಯಕರು ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ. ಇಲ್ಲಿನ ಜನ ಪರಸ್ಪರ ಅಪನಂಬಿಕೆಯಿಂದ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಆರೆಸ್ಸೆಸ್ ಮತ್ತು ಬಿಜೆಪಿಯೇ ಕಾರಣ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನರಿಗೆ ಗುರುತು ಸಿಗಬಾರದು ಅಂತ ಗಡ್ಡ ಬೆಳೆಸಿದ್ದಾರೆ: ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯ

“ದೇಶಪ್ರೇಮದ ಪಾಠ ಮಾಡುವ ಬಿಜೆಪಿ ನಾಯಕರು ತಮ್ಮ ಇತಿಹಾಸವನ್ನೊಮ್ಮೆ ನೆನಪು ಮಾಡಿಕೊಳ್ಳಲಿ. ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಕಾಂಗ್ರೆಸ್ ನಾಯಕರು ತ್ಯಾಗ, ಬಲಿದಾನಗೈದಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣಾರ್ಪಣೆ ಮಾಡಿದ ಒಬ್ಬನೇ ಒಬ್ಬ ಆರೆಸ್ಸೆಸ್ ನಾಯಕನ ಹೆಸರನ್ನು ಬಿಜೆಪಿಯವರು ಹೇಳಲಿ ನೋಡೋಣ” ಎಂದು ಸವಾಲು ಹಾಕಿದ್ದಾರೆ.

“ಹೆಡ್ಗೇವಾರ್, ಗೊಲ್ವಾಲ್ಕರ್ ಇವರೆಲ್ಲ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದದ್ದು ಯಾಕೆ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿಯವರನ್ನು ಕೊಂದವರು ಇವತ್ತು ದೇಶಪ್ರೇಮದ ಪಾಠ ಮಾಡುತ್ತಾರೆ. ಇಂಥವರ ದೇಶಪ್ರೇಮದ ಪಾಠ ಯಾರಿಗೆ ಬೇಕಿದೆ ಸ್ವಾಮಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

“ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ. ಮಹಾತ್ಮ ಗಾಂಧಿಯವರಂತೆ ನಾನು ರಾಮ ಭಕ್ತನೆ. ದೇಶಕ್ಕೆ ಬೇಕಿರುವುದು ಗಾಂಧಿಯವರ ಆದರ್ಶ ಪುರುಷ ರಾಮ. ಗಾಂಧಿಯವರನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ ಇಲ್ಲ. ರಾಮಭಕ್ತರೆಂದರೆ ಕಾಯುವವರೋ? ಕೊಲ್ಲುವವರೋ?’’ ಎಂದು ಕೇಳಿದ್ದಾರೆ.

“ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು 3 ಕೆ.ಜಿ ಗೆ ಇಳಿಸಿ ಬಡಜನರ ಊಟ ಕಸಿದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸ ನನಗಿದೆ. ಆಗ ಪ್ರತೀ ವ್ಯಕ್ತಿಗೆ ಉಚಿತವಾಗಿ ತಲಾ 10 ಕೆ.ಜಿ ಅಕ್ಕಿ ನೀಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

“ಕೇಂದ್ರ ಸರ್ಕಾರದ ಕೆಟ್ಟ ಆರ್ಥಿಕ ನೀತಿಗಳಿಂದಾಗಿ ಇಂದು ದೇಶದ ಉತ್ಪಾದನಾ ವಲಯ ನಿಷ್ಕ್ರಿಯಗೊಂಡಿದೆ. ದಕ್ಷಿಣ ಕನ್ನಡ ಭಾಗದಲ್ಲಿ ಬೀಡಿ ಉದ್ಯಮವನ್ನು ನಂಬಿಕೊಂಡಿದ್ದ 50,000 ಜನರ ಬದುಕು ಬೀದಿಪಾಲಾಗಿದೆ. ಇದರ ಪುನಶ್ಚೇತನಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...