Homeಕರ್ನಾಟಕರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ಕಾವೇರಿಯ ನೀರು ಬಳಸಿಕೊಂಡು ತಮಿಳುನಾಡು ಸರ್ಕಾರ ನದಿ ಜೋಡನೆ ಮಾಡುತ್ತಿರುವುದನ್ನು ಇಬ್ಬರು ಮಾಜಿ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ.

- Advertisement -
- Advertisement -

ಕಾವೇರಿಯ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅದನ್ನು ವೈಗೈ, ವೆಲ್ಲಾರು, ಗುಂಡಾರು ನದಿಗಳಿಗೆ ಜೋಡಣೆ ಮಾಡುವ ತಮಿಳುನಾಡಿನ ಯೋಜನೆ ಮತ್ತು ಅದಕ್ಕೆ ಕೇಂದ್ರ ಸರ್ಕಾರವೇ ಹಣಕಾಸಿನ ನೆರವು ನೀಡುತ್ತಿರುವ ವಿಚಾರ ರಾಜ್ಯ ಸರ್ಕಾರದ ಅರಿವಿಗೇ ಬಾರದೇ ಹೋಗಿದ್ದು ಆಶ್ಚರ್ಯಕರ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದು, “ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ನಾನು ಸಿಎಂ ಆಗಿದ್ದಾಗ ರೂಪಿಸಲಾದ ಮೇಕೆದಾಟು ಯೋಜನೆಗೆ ತಮಿಳುನಾಡಿನ ಎಐಎಡಿಎಂಕೆ ಸರ್ಕಾರ ಅಡಿಗಡಿಗೂ ಕಾಡಿತು. ತನ್ನ ಮಿತ್ರ ಪಕ್ಷ ಬಿಜೆಪಿಯ ನೆರವಿನಿಂದ ಆಕ್ಷೇಪಿಸುತ್ತಲೇ ಬಂದಿತ್ತು. ಅದರ ಆತಂಕಕ್ಕೆ ಕಾರಣವಾಗಿದ್ದದ್ದು ಇದೇ ಹೆಚ್ಚುವರಿ ನೀರು. ಮೇಕೆದಾಟು ಜಲಾಶಯ ನಿರ್ಮಾಣವಾದರೆ ಹೆಚ್ಚುವರಿ ನೀರು ಅಲಭ್ಯ ಎಂಬ ಕಾರಣಕ್ಕೆ ವಿರೋಧಿಸಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗಾಂಧಿಯನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?- ಸಿದ್ದರಾಮಯ್ಯ ಪ್ರಶ್ನೆ

“ಈಗ ಅದೇ ಹೆಚ್ಚುವರಿ 6 ಕ್ಯೂಬಿಕ್‌ ಫೀಟ್‌ ನೀರು ಬಳಸಿಕೊಂಡು ಎಐಎಡಿಎಂಕೆ ಸರ್ಕಾರ 342 ಕೆರೆ, 42,170 ಎಕರೆಗೆ ನೀರು ಪೂರೈಸುತ್ತಿದೆ. ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಲಾಗಿದೆಯಾದರೂ, ಸಂಕಷ್ಟದ ಪರಿಸ್ಥಿತಿಯಲ್ಲಿ ಹೆಚ್ಚುವರಿ ನೀರನ್ನೂ ತಮಿಳುನಾಡು ತನ್ನ ಹಕ್ಕೆಂದು ಪ್ರತಿಪಾದಿಸುವ ಅಪಾಯವಿದೆ” ಎಂದು ಅವರು ಎಚ್ಚರಿಸಿದ್ದಾರೆ.

“ವಿಚಾರ ಈಗ ಮಾಧ್ಯಮಗಳಿಂದ ಬಹಿರಂಗವಾಗುತ್ತಲೇ ಎಚ್ಚೆತ್ತುಕೊಂಡಿರುವ ಸರ್ಕಾರ, ಜಲಸಂಪನ್ಮೂಲ ಸಚಿವರು ಅಧಿಕಾರಿಗಳ ಸಭೆ ನಡೆಸಿದ್ದಾರೆ. ರಾಜ್ಯಕ್ಕೆ ತೊಂದರೆಯಾಗದಂತೆ ಯೋಜನೆ ರೂಪಿಸಲು ಕೋರುವುದಾಗಿ ಹೇಳಿದ್ದಾರೆ. ರಾಜ್ಯಕ್ಕೆ ತೊಂದರೆ ಆಗದಂತೆ ಯೋಜನೆ ರೂಪಿಸುವುದು ಎಂದರೇನು? ಹೆಚ್ಚುವರಿ ನೀರೆಂಬುದು ಮುಂದೊಂದುದಿನ ರಾಜ್ಯಕ್ಕೆ ಮಾರಕವಾಗಲಿದೆ” ಎಂದು ಹೇಳಿದ್ದಾರೆ.

“ಗಮನಿಸಬೇಕಾದ ಮತ್ತೊಂದು ವಿಚಾರವೆಂದರೆ, ಮೇಕೆದಾಟು ಜಲಾಶಯದ ವಿಚಾರದಲ್ಲಿ ಎಐಎಡಿಎಂಕೆಯ ಚಾಡಿ ಮಾತನ್ನು ಕಿವಿಕೊಟ್ಟು ಕೇಳಿ ಕರ್ನಾಟಕವನ್ನು ಹಿಂಸಿಸಿದ ಕೇಂದ್ರ ಸರ್ಕಾರ, ತಮಿಳುನಾಡಿನ ಯೋಜನೆಗೆ ಈಗ ಧನಸಹಾಯ ನೀಡುತ್ತಿದೆ. ರಾಜ್ಯದಿಂದ ಎಲ್ಲ ಪಡೆದುಕೊಂಡ ಪಕ್ಷವೊಂದು ಹೇಗೆ ಅದೇ ರಾಜ್ಯವನ್ನು ಶೋಷಿಸುತ್ತಿದೆ ಎಂಬುದಕ್ಕೆ ಇದು ತಾಜಾ ಉದಾಹರಣೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

“ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ದೀರ್ಘಾವಧಿಯ ಹೋರಾಟದಲ್ಲಿ ತಕ್ಕಮಟ್ಟಿನ ಯಶಸ್ಸು ಸಿಕ್ಕಿದೆ. ಈ ವರೆಗೆ ಜಲಸಂಪನ್ಮೂಲ ನಿರ್ವಹಿಸಿದವರ ಬದ್ಧತೆಯೂ ಇದಕ್ಕೆ ಕಾರಣ ಇರಬಹುದು. ಆದರೆ, ಈ ಸರ್ಕಾರದಲ್ಲಿ ಅದು ಕಾಣುತ್ತಿಲ್ಲ. ಇಲಾಖೆಯ ಕಚೇರಿಯಲ್ಲಿ ನಾನು ಕೂರಬೇಕೆಂಬುದಷ್ಟೇ ಸಚಿವರ ಇಚ್ಚೆಯಾಗಿತ್ತು. ಅದು ಈಡೇರಿದ ಮೇಲೆ ಇಲಾಖೆ ನಗಣ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಕೇಂದ್ರದಲ್ಲೂ ಬಿಜೆಪಿಯದ್ದೇ ಸರ್ಕಾರವಿದೆ. ರಾಜ್ಯದಿಂದ ಬಿಜೆಪಿಗೆ ಅತ್ಯಧಿಕ ಸಂಸದರು ಸಿಕ್ಕಿದ್ದಾರೆ. ಹೀಗಾಗಿ ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಗೌರವಯುತವಾಗಿ, ನ್ಯಾಯಯುತವಾಗಿ ಕರ್ನಾಟಕದ ಹಿತ ಕಾಯಬೇಕು. ಇದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಕಾವೇರಿ ವಿಚಾರದಲ್ಲಿ ಬಿಸಿಮುಟ್ಟಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಂಥದ್ದೊಂದು ಯೋಜನೆ ಬಗ್ಗೆ ಅರಿವಿಲ್ಲದೇ ಇದ್ದದ್ದು ರಾಜ್ಯದ ಜಲಸಂಪನ್ಮೂಲ ಸಚಿವರ ವೈಫಲ್ಯವೇ ಸರಿ. ಅವರು ಚಾಲೆಂಜ್‌ ರಾಜಕೀಯ ಮಾಡುವುದು ಬಿಟ್ಟು, ಅವರನ್ನು ಸೋಲಿಸುತ್ತೇನೆ, ಇವರನ್ನು ಸೋಲಿಸುತ್ತೇನೆ ಎನ್ನುವುದನ್ನು ಬಿಟ್ಟು ರಾಜ್ಯದ ಹಿತಕ್ಕಾಗಿ ಚಾಲೆಂಜ್‌ ಮಾಡಲಿ. ಕನಿಷ್ಠ ಜಲಸಂಪನ್ಮೂಲ ಇಲಾಖೆ ಏನು ಬೇಡುತ್ತದೆಯೋ ಅದನ್ನು ಗಳಿಸಿಕೊಳ್ಳಲಿ” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಸಿದ್ದರಾಮಯ್ಯ ವಿರೋಧ

ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯ. ಈ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕು ಎಂದು ಸಿದ್ದರಾಮಯ್ಯ ತಮಿಳುನಾಡಿನ ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.

“ತಮಿಳುನಾಡು ಸರ್ಕಾರ ಕಾವೇರಿ ನದಿನೀರನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸುತ್ತಿರುವ ನದಿಜೋಡಣೆ ಯೋಜನೆಯನ್ನು ಮುಖ್ಯಮಂತ್ರಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವ ಜೊತೆಯಲ್ಲಿ ಆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಯೋಜನೆಯನ್ನು ಕೈಬಿಡಲು ಒತ್ತಾಯಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: PM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...