Homeಕರ್ನಾಟಕರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ಕಾವೇರಿಯ ನೀರು ಬಳಸಿಕೊಂಡು ತಮಿಳುನಾಡು ಸರ್ಕಾರ ನದಿ ಜೋಡನೆ ಮಾಡುತ್ತಿರುವುದನ್ನು ಇಬ್ಬರು ಮಾಜಿ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ.

- Advertisement -
- Advertisement -

ಕಾವೇರಿಯ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅದನ್ನು ವೈಗೈ, ವೆಲ್ಲಾರು, ಗುಂಡಾರು ನದಿಗಳಿಗೆ ಜೋಡಣೆ ಮಾಡುವ ತಮಿಳುನಾಡಿನ ಯೋಜನೆ ಮತ್ತು ಅದಕ್ಕೆ ಕೇಂದ್ರ ಸರ್ಕಾರವೇ ಹಣಕಾಸಿನ ನೆರವು ನೀಡುತ್ತಿರುವ ವಿಚಾರ ರಾಜ್ಯ ಸರ್ಕಾರದ ಅರಿವಿಗೇ ಬಾರದೇ ಹೋಗಿದ್ದು ಆಶ್ಚರ್ಯಕರ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದು, “ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ನಾನು ಸಿಎಂ ಆಗಿದ್ದಾಗ ರೂಪಿಸಲಾದ ಮೇಕೆದಾಟು ಯೋಜನೆಗೆ ತಮಿಳುನಾಡಿನ ಎಐಎಡಿಎಂಕೆ ಸರ್ಕಾರ ಅಡಿಗಡಿಗೂ ಕಾಡಿತು. ತನ್ನ ಮಿತ್ರ ಪಕ್ಷ ಬಿಜೆಪಿಯ ನೆರವಿನಿಂದ ಆಕ್ಷೇಪಿಸುತ್ತಲೇ ಬಂದಿತ್ತು. ಅದರ ಆತಂಕಕ್ಕೆ ಕಾರಣವಾಗಿದ್ದದ್ದು ಇದೇ ಹೆಚ್ಚುವರಿ ನೀರು. ಮೇಕೆದಾಟು ಜಲಾಶಯ ನಿರ್ಮಾಣವಾದರೆ ಹೆಚ್ಚುವರಿ ನೀರು ಅಲಭ್ಯ ಎಂಬ ಕಾರಣಕ್ಕೆ ವಿರೋಧಿಸಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗಾಂಧಿಯನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?- ಸಿದ್ದರಾಮಯ್ಯ ಪ್ರಶ್ನೆ

“ಈಗ ಅದೇ ಹೆಚ್ಚುವರಿ 6 ಕ್ಯೂಬಿಕ್‌ ಫೀಟ್‌ ನೀರು ಬಳಸಿಕೊಂಡು ಎಐಎಡಿಎಂಕೆ ಸರ್ಕಾರ 342 ಕೆರೆ, 42,170 ಎಕರೆಗೆ ನೀರು ಪೂರೈಸುತ್ತಿದೆ. ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಲಾಗಿದೆಯಾದರೂ, ಸಂಕಷ್ಟದ ಪರಿಸ್ಥಿತಿಯಲ್ಲಿ ಹೆಚ್ಚುವರಿ ನೀರನ್ನೂ ತಮಿಳುನಾಡು ತನ್ನ ಹಕ್ಕೆಂದು ಪ್ರತಿಪಾದಿಸುವ ಅಪಾಯವಿದೆ” ಎಂದು ಅವರು ಎಚ್ಚರಿಸಿದ್ದಾರೆ.

“ವಿಚಾರ ಈಗ ಮಾಧ್ಯಮಗಳಿಂದ ಬಹಿರಂಗವಾಗುತ್ತಲೇ ಎಚ್ಚೆತ್ತುಕೊಂಡಿರುವ ಸರ್ಕಾರ, ಜಲಸಂಪನ್ಮೂಲ ಸಚಿವರು ಅಧಿಕಾರಿಗಳ ಸಭೆ ನಡೆಸಿದ್ದಾರೆ. ರಾಜ್ಯಕ್ಕೆ ತೊಂದರೆಯಾಗದಂತೆ ಯೋಜನೆ ರೂಪಿಸಲು ಕೋರುವುದಾಗಿ ಹೇಳಿದ್ದಾರೆ. ರಾಜ್ಯಕ್ಕೆ ತೊಂದರೆ ಆಗದಂತೆ ಯೋಜನೆ ರೂಪಿಸುವುದು ಎಂದರೇನು? ಹೆಚ್ಚುವರಿ ನೀರೆಂಬುದು ಮುಂದೊಂದುದಿನ ರಾಜ್ಯಕ್ಕೆ ಮಾರಕವಾಗಲಿದೆ” ಎಂದು ಹೇಳಿದ್ದಾರೆ.

“ಗಮನಿಸಬೇಕಾದ ಮತ್ತೊಂದು ವಿಚಾರವೆಂದರೆ, ಮೇಕೆದಾಟು ಜಲಾಶಯದ ವಿಚಾರದಲ್ಲಿ ಎಐಎಡಿಎಂಕೆಯ ಚಾಡಿ ಮಾತನ್ನು ಕಿವಿಕೊಟ್ಟು ಕೇಳಿ ಕರ್ನಾಟಕವನ್ನು ಹಿಂಸಿಸಿದ ಕೇಂದ್ರ ಸರ್ಕಾರ, ತಮಿಳುನಾಡಿನ ಯೋಜನೆಗೆ ಈಗ ಧನಸಹಾಯ ನೀಡುತ್ತಿದೆ. ರಾಜ್ಯದಿಂದ ಎಲ್ಲ ಪಡೆದುಕೊಂಡ ಪಕ್ಷವೊಂದು ಹೇಗೆ ಅದೇ ರಾಜ್ಯವನ್ನು ಶೋಷಿಸುತ್ತಿದೆ ಎಂಬುದಕ್ಕೆ ಇದು ತಾಜಾ ಉದಾಹರಣೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

“ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ದೀರ್ಘಾವಧಿಯ ಹೋರಾಟದಲ್ಲಿ ತಕ್ಕಮಟ್ಟಿನ ಯಶಸ್ಸು ಸಿಕ್ಕಿದೆ. ಈ ವರೆಗೆ ಜಲಸಂಪನ್ಮೂಲ ನಿರ್ವಹಿಸಿದವರ ಬದ್ಧತೆಯೂ ಇದಕ್ಕೆ ಕಾರಣ ಇರಬಹುದು. ಆದರೆ, ಈ ಸರ್ಕಾರದಲ್ಲಿ ಅದು ಕಾಣುತ್ತಿಲ್ಲ. ಇಲಾಖೆಯ ಕಚೇರಿಯಲ್ಲಿ ನಾನು ಕೂರಬೇಕೆಂಬುದಷ್ಟೇ ಸಚಿವರ ಇಚ್ಚೆಯಾಗಿತ್ತು. ಅದು ಈಡೇರಿದ ಮೇಲೆ ಇಲಾಖೆ ನಗಣ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಕೇಂದ್ರದಲ್ಲೂ ಬಿಜೆಪಿಯದ್ದೇ ಸರ್ಕಾರವಿದೆ. ರಾಜ್ಯದಿಂದ ಬಿಜೆಪಿಗೆ ಅತ್ಯಧಿಕ ಸಂಸದರು ಸಿಕ್ಕಿದ್ದಾರೆ. ಹೀಗಾಗಿ ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಗೌರವಯುತವಾಗಿ, ನ್ಯಾಯಯುತವಾಗಿ ಕರ್ನಾಟಕದ ಹಿತ ಕಾಯಬೇಕು. ಇದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಕಾವೇರಿ ವಿಚಾರದಲ್ಲಿ ಬಿಸಿಮುಟ್ಟಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಂಥದ್ದೊಂದು ಯೋಜನೆ ಬಗ್ಗೆ ಅರಿವಿಲ್ಲದೇ ಇದ್ದದ್ದು ರಾಜ್ಯದ ಜಲಸಂಪನ್ಮೂಲ ಸಚಿವರ ವೈಫಲ್ಯವೇ ಸರಿ. ಅವರು ಚಾಲೆಂಜ್‌ ರಾಜಕೀಯ ಮಾಡುವುದು ಬಿಟ್ಟು, ಅವರನ್ನು ಸೋಲಿಸುತ್ತೇನೆ, ಇವರನ್ನು ಸೋಲಿಸುತ್ತೇನೆ ಎನ್ನುವುದನ್ನು ಬಿಟ್ಟು ರಾಜ್ಯದ ಹಿತಕ್ಕಾಗಿ ಚಾಲೆಂಜ್‌ ಮಾಡಲಿ. ಕನಿಷ್ಠ ಜಲಸಂಪನ್ಮೂಲ ಇಲಾಖೆ ಏನು ಬೇಡುತ್ತದೆಯೋ ಅದನ್ನು ಗಳಿಸಿಕೊಳ್ಳಲಿ” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಸಿದ್ದರಾಮಯ್ಯ ವಿರೋಧ

ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯ. ಈ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕು ಎಂದು ಸಿದ್ದರಾಮಯ್ಯ ತಮಿಳುನಾಡಿನ ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.

“ತಮಿಳುನಾಡು ಸರ್ಕಾರ ಕಾವೇರಿ ನದಿನೀರನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸುತ್ತಿರುವ ನದಿಜೋಡಣೆ ಯೋಜನೆಯನ್ನು ಮುಖ್ಯಮಂತ್ರಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವ ಜೊತೆಯಲ್ಲಿ ಆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಯೋಜನೆಯನ್ನು ಕೈಬಿಡಲು ಒತ್ತಾಯಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: PM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...