Homeಕರ್ನಾಟಕಈ ದೇಶದ ನಾಯಕರಿಗಿಂತ ಜನ ಹೆಚ್ಚು ಬುದ್ಧಿವಂತರು ಅನ್ನೋ ಮಾತಿನಾಗ ನನಗ ನಂಬಿಕೆ ಅದ.. -...

ಈ ದೇಶದ ನಾಯಕರಿಗಿಂತ ಜನ ಹೆಚ್ಚು ಬುದ್ಧಿವಂತರು ಅನ್ನೋ ಮಾತಿನಾಗ ನನಗ ನಂಬಿಕೆ ಅದ.. – ಡಿ.ಆರ್.ಪಾಟೀಲ

- Advertisement -
- Advertisement -

ಸಂದರ್ಶನ:| ಪಿ.ಕೆ ಮಲ್ಲನಗೌಡರ್ |

ಧಗಧಗ ಝಳದ ನಡುವೆ ಒಂದು ‘ತಣ್ಣನೆ’ ಸಂದರ್ಶನ
ಈ ಸಲ ಹಾವೇರಿ-ಗದಗು ಸೇರಿದಂತೆ ಈ ಕಡೆಯಲ್ಲಿ ಎಂದಿಗಿಂತ ಜಾಸ್ತಿ ಬಿಸಿಲು. ಚುನಾವಣೆಯ ಕಾಳಗದಲ್ಲೂ ಉರಿ ಉರಿ. ರಾತ್ರಿ ಹತ್ತೂವರೆ ಹೊತ್ತಿಗೆ ಬಯಲಿನಲ್ಲಿ ಈ ಸಂದರ್ಶನ ನಡೆದಾಗ ಝಳ ಝಳ. ಪತ್ರಿಕೆಯ ಪ್ರಶ್ನೆಗಳಿಗೆ ಅಭ್ಯರ್ಥಿ ಕೊಡುತ್ತಿದ್ದ ತಣ್ಣನೆಯ ಉತ್ತರಗಳಲ್ಲಿ ವ್ಯವಸ್ಥೆಯ ವಿರುದ್ಧದ ‘ಕಾವು’ ಕಾಣತೊಡಗಿತ್ತು… ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲರೊಂದಿಗಿನ ಸಂದರ್ಶನ ಇಲ್ಲಿದೆ…

ಪತ್ರಿಕೆ: ಈ ಚುನಾವಣೆ ಮಹತ್ತದ್ದು, ಭಿನ್ನವಾದುದು ಎಂದು ವಿವಿಧ ಪಾರ್ಟಿಗಳು ತಮ್ಮ ಧಾಟಿಯಲ್ಲಿ ಹೇಳ್ತಾ ಇವೆ. ವೈಯಕ್ತಿಕವಾಗಿ ಈ ಚುನಾವಣೆ ಬಗ್ಗೆ ನಿಮ್ಮ ಅಭಿಪ್ರಾಯ?
ಡಿ.ಆರ್.ಪಾಟೀಲ್: ಇಲ್ಲಿ ವೈಯಕ್ತಿಕ ಅಭಿಪ್ರಾಯವು ಸಾರ್ವಜನಿಕ ಅಭಿಪ್ರಾಯವೂ ಅಗಬಹುದಲ್ಲ? ನಮ್ಮ ಪಕ್ಷದ ಮಟ್ಟಿಗೆ ಇದು ಚಾಲೆಂಜಿಂಗ್ ಚುನಾವಣೆ. ನನಗಂತೂ ಈ ಚುನಾವಣೆ ಪ್ರಜಾಪ್ರಭುತ್ವದ ಮೌಲ್ಯಗಳ ಜೀವನ್ಮರಣದ ಪ್ರಶ್ನೆ ಅನಿಸ್ತಾ ಇದೆ. ಇನ್ನೊಮ್ಮೆ ಅಧಿಕಾರ ಸಿಕ್ಕರೆ ಅವರೆಲ್ಲ (ಬಿಜೆಪಿ) ಸಂವಿಧಾನವನ್ನೇ ಬದಲಿಸಬಹುದು. ಇದು ಆತಂಕದ ವಿಷಯ. ಆ ಕಾರಣಕ್ಕಾಗಿ ಬಿಜೆಪಿಗೆ ಅಧಿಕಾರ ಸಿಗಲೇಬಾರದು.

ಪತ್ರಿಕೆ: ಈಗ ಮೋದಿ ಮತ್ತೊಮ್ಮೆ ಎನ್ನುವ ಸದ್ದು ಜೋರಾಗಿದೆಯಲ್ಲ?
ಡಿ.ಆರ್.ಪಾಟೀಲ್: ಜೋರಾಗಿ ಇರುವುದು ಮಾಧ್ಯಮ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಅಷ್ಟೇ. ಕಾಂಗ್ರೆಸ್ ತಪ್ಪು ಮಾಡಿದಾಗೆಲ್ಲ ಜನ ಶಿಕ್ಷೆ ಕೊಟ್ಟಿದ್ದಾರೆ. ಆದರೆ ಆ ಕಾರಣಕ್ಕೆ ಬಂದ ಇತರ ಸರ್ಕಾರಗಳನ್ನು ಎಂದೂ ಮರು ಆಯ್ಕೆ ಮಾಡಿಯೇ ಇಲ್ಲ. ವಾಜಪೇಯಿ 13 ತಿಂಗಳ ನಂತರ ಮತ್ತೆ ಸರ್ಕಾರ ಮಾಡಿದ್ದನ್ನು ಬಿಟ್ಟರೆ, ಇಲ್ಲಿ ಯಾವ ಕಾಂಗ್ರೆಸ್ಸೇತರ ಸರ್ಕಾರ ಮರು ಆಯ್ಕೆ ಆಗಿಲ್ಲ. ಈ ಸಲವೂ ಅದೇ ಘಟಿಸಲಿದೆ.


ಪತ್ರಿಕೆ: ಸದ್ಯದ ಸರ್ಕಾರದ ಕುರಿತು ಹೇಳಿ.
ಡಿ.ಆರ್. ಪಾಟೀಲ್: ಮೋದಿ ಒಬ್ಬ ಜನದ್ರೋಹಿ ನಾಯಕ. ಇಂತಹ ಮನುಷ್ಯನಿಂದ ಒಳ್ಳೆ ಕೆಲಸ ಅಪೇಕ್ಷಿಸುವುದೇ ಮೂರ್ಖತನ. 2014ರಲ್ಲಿ ಈ ಮನುಷ್ಯ ಸಿಕ್ಕಾಪಟ್ಟೆ ಭರವಸೆ ಕೊಟ್ರು. ಒಂದಾದರೂ ಈಡೇರಿತಾ? ಕಪ್ಪುಹಣ ತರ್ತೀನಿ ಅಂದವ್ರು ಕಪ್ಪುಹಣ ಹೊಂದಿದವರ ಪೋಷಣೆ ಮಾಡಿದರು. 15 ಲಕ್ಷದ ಬಗ್ಗೆ ಮಾತಾಡೊಕ್ಕೆ ಅಸಹ್ಯ ಆಗುತ್ತೆ. ಮೋದಿ ಗೆಲುವಿಗೆ ಕಾರಣವಾಗಿದ್ದು ದೊಡ್ಡ ಯುವ ಸಮೂಹ. ಅವರಿಗೆ ಉದ್ಯೋಗ ಕೊಡುವುದಿರಲಿ, ನೋಟು ರದ್ಧತಿಯಂತಹ ಮೂರ್ಖ ಯೋಜನೆಯಿಂದ ಇದ್ದ ಉದ್ಯೋಗಗಳನ್ನು ನಾಶ ಮಾಡಿಬಿಟ್ಟರು. ನಮ್ಮ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು ಮೂರಾಬಟ್ಟೆ ಮಾಡಿದ್ದಾರೆ. ದೇಶದ ಗ್ರಾಮೀಣ ಭಾಗ ಅದರಲ್ಲೂ ಕೃಷಿ ಆಧಾರಿತ ವ್ಯವಸ್ಥೆ ಇವತ್ತು ತೀವ್ರ ಸಂಕಷ್ಟದಲ್ಲಿದೆ. ಅಂಬಾನಿ, ಅದಾನಿಗಳನ್ನು ಪಕ್ಕಕ್ಕೆ ಇಟ್ಟುಕೊಂಡು ಜಗತ್ತು ಸುತ್ತಿದರೆ ಇನ್ನೇನಾಗುತ್ತೇ?

ಪತ್ರಿಕೆ: ‘ನ್ಯಾಯ್’ ಯೋಜನೆ ಲೆಫ್ಟ್‍ನ ಪ್ರಭಾವದಿಂದ ಬಂದಿದ್ದು ಅನಿಸುತ್ತಿದೆ. 90ರ ದಶಕದ ಆರಂಭದಲ್ಲಿ ಜಾಗತೀಕರಣವನ್ನು ಇಂಟ್ರುಡ್ಯೂಸ್ ಮಾಡಿದ ಕಾಂಗ್ರೆಸ್‍ಗೆ ಈಗ ಎಚ್ಚರವಾಯಿತಾ?
ಡಿ.ಆರ್.ಪಾಟೀಲ್: ಒಂದು ಮಾತು ಹೇಳ್ತೇನೆ. ಇದು ಕಾಂಗ್ರೆಸ್‍ನ ನಿಲುವೂ ಹೌದು, ಅದಕ್ಕಿಂತ ಮುಖ್ಯವಾಗಿ ನನ್ನ ನಿಲುವಂತೂ ಹೌದೇ ಹೌದು. ನೀವು ಅದು ಲೆಫ್ಟ್ ಅಂತ ಪ್ರಸ್ತಾಪ ಮಾಡಿದರಲ್ಲ, ಆ ಎಡ ಚಿಂತನೆಗಳಲ್ಲಿ ಸದಾ ಸಮಷ್ಠಿ ಕಲ್ಯಾಣದ ಅಂಶಗಳು ಇವೆ. ಸಮಾಜವಾದಿ ಸಿದ್ದಾಂತಗಳೂ, ಗಾಂಧಿಯ ಸ್ವರಾಜ್ಯ ಕನಸೂ ನಮ್ಮ ಪಕ್ಷದೊಳಗೆ ಅಂತರ್ಗತವಾಗಿದೆ. ನೆಹರೂಗೆ ಸಮಾಜವಾದದ ಒಲವಿತ್ತು. ಇಂದಿರಾ ಗಾಂಧಿಯವರು ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದ್ದು, ಉಳುವವನೇ ಒಡೆಯ ಕಾಯ್ದೆ ಜಾರಿಗೆ ತಂದಿದ್ದು-ಇವೆಲ್ಲ ಲೆಫ್ಟ್ ಚಿಂತನೆ ಅನ್ನುವುದಾದರೆ ಅನ್ನಲಿ. ಎಲ್ಲ ಚಿಂತನೆಗಳಲ್ಲಿರುವ ಸಮಾಜಮುಖಿ ಆಶಯಗಳನ್ನು ಕಾಂಗ್ರೆಸ್ ಗೌರವಿಸುತ್ತದೆ.

ಹಾಂ, ನೀವು ಜಾಗತೀಕರಣದ ಬಗ್ಗೆಯೂ ಕೇಳಿದಿರಿ. ಅಲ್ಲಿ ಖಾಸಗೀಕರಣವೂ ಇದೆ ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡೇ ಹೇಳುವೆ. ದೇಶದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳನ್ನು ಹುಟ್ಟು ಹಾಕಿದ್ದು, ಅವಕ್ಕೆ ಬಲ ತುಂಬಿದ್ದು ನಮ್ಮ ಪಕ್ಷವೇ. 90ರ ಆರಂಭದಲ್ಲಿ ಜಾಗತಿಕ ಅರ್ಥವ್ಯವಸ್ಥೆಯ ಜೊತೆ ಹೆಜ್ಜೆ ಹಾಕುವ ಆಶಯದಲ್ಲಿ ಜಾಗತೀಕರಣವನ್ನು ಬರ ಮಾಡಿಕೊಂಡೆವಷ್ಟೇ. ಅದರೆ ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಹಿತಕ್ಕೆ ನಾವೆಂದೂ ಅನ್ಯಾಯ ಮಾಡಿಲ್ಲ. ನಮ್ಮ ಆದ್ಯತೆ ಎಚ್‍ಎಎಲ್, ಬಿಎಸ್‍ಎನ್‍ಎಲ್‍ಗೆ ಹೊರತು ರಿಲಾಯನ್ಸ್ ಡಿಫೆನ್ಸ್, ಜಿಯೋಗಳಿಗೆ ಅಲ್ಲ. ‘ನ್ಯಾಯ್’ ಎಂಬುದು ಇವತ್ತಿನ ತುರ್ತು ಅಗತ್ಯ. ಅದು ಬಡವರ, ಅದರಲ್ಲೂ ಹಳ್ಳಿಗಳ ಬಡವರ ಬದುಕಿಗೆ ಘನತೆ, ಗೌರವ ತರುವ ಕೆಲಸ. ಹಿಂದೆ ನಾವು ನರೇಗಾ ಜಾರಿಗೆ ತಂದಿದ್ದೂ ಇದೇ ಉದ್ದೇಶದಿಂದಲೇ…

ಪತ್ರಿಕೆ: ಎರಡು ಸಲ ಗದಗಿನಿಂದ ಶಾಸಕರಾಗಿ, ನಿಮ್ಮ ಸಹೋದರನಿಗೆ ಸೀಟು ಬಿಟ್ಟುಕೊಟ್ಟ ನೀವು ಈಗ ಮೊದಲ ಸಲ ಲೋಕಸಭೆ ಚುನಾವಣೆಗೆ ನಿಲ್ತಾ ಇದ್ದೀರಿ. ಹೇಗಿದೆ ಜನರ ಪ್ರತಿಕ್ರಿಯೆ?
ಡಿ.ಆರ್.ಪಾಟೀಲ್: ಇಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಗೆಲ್ತಾವು ಅಂತ ಜನರು ಹೇಳ್ತಾ ಇದ್ದಾರ.., ಹಾಲಿ ಸಂಸದರ ಕೆಲಸ ಅಷ್ಟಕ್ಕಷ್ಟೇ. ಆದರೆ ನಮ್ಮ ಹೋರಾಟ ಎದುರಿನ ಅಭ್ಯರ್ಥಿ ವಿರುದ್ಧ ಮಾತ್ರವಲ್ಲ. ಈ ದೇಶದ ಸಂವಿಧಾನ, ಸೌಹಾರ್ದತೆ ಕಾಪಾಡುವುದರ ಪರ ಇದೆ.

ಪತ್ರಿಕೆ: ಪಂಚಾಯತ್‍ರಾಜ್ ವ್ಯವಸ್ಥೆಯಲ್ಲಿ ಹಲವು ಕ್ರಾಂತಿಕಾರಿ ಬದಲಾವಣೆಗೆ, ಗ್ರಾಮೀಣ ಅಭಿವೃದ್ಧಿಗೆ ತಾವು ತೆರೆಮರೆಯಲ್ಲಿ ಸಾಕಷ್ಟು ಕೆಲಸ ಮಾಡಿದವರು. ಗದಗ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿಮಗಿರುವ ಸಪೋರ್ಟು ಹಾವೇರಿ ಭಾಗದಲ್ಲಿ ಸಿಗ್ತಾ ಇದೆಯಾ?
ಡಿ.ಆರ್.ಪಾಟೀಲ್: ಆರಂಭದಲ್ಲಿ ನನಗೂ ಡೌಟೇ ಇತ್ತರಿ. ಬಟ್, ಹಾವೇರಿ ಭಾಗದಲ್ಲೂ ಜನ ಬೆಂಬಲ ಸಿಗ್ತಾ ಇದೆ. ಈ ದೇಶದ ನಾಯಕರಿಗಿಂತ ಜನ ಹೆಚ್ಚು ಬುದ್ಧಿವಂತರು ಅನ್ನೋ ಮಾತಿನಾಗ ನನಗ ನಂಬಿಕೆ ಅದ..

ಪತ್ರಿಕೆ: ನೀವು 101 ಕಿ.ಮೀ. ‘ಗಾಂಧಿಯಾನ’ ಮಾಡಿದಿರಿ. ಆದರೆ ಈ ವಿಷಯ ತುಂಗಭದ್ರಾ ತಟ ದಾಟಿ ಆಚೆ ಮುಟ್ಟಲೇ ಇಲ್ಲವಲ್ಲ?
ಡಿ.ಆರ್.ಪಾಟೀಲ್: ನಮ್ಮ ಕೆಲಸ ನಾವು ಮಾಡಿದ್ದೇವೆ. ನಿಮ್ಮ ಈ ಪ್ರಶ್ನೆಯನ್ನೇ ನೆಪ ಮಾಡಿಕೊಂಡು ಒಂದು ವಿಷಯ ಹೇಳ್ತೇನೆ ಕೇಳಿ: ಮೋದಿ ಪೌರ ಕಾರ್ಮಿಕರ ಕಾಲು ತೊಳೆದ ನಾಟಕೀಯ ಪ್ರಸಂಗ ಈ ದೇಶದಲ್ಲಿ ಇವತ್ತು ಟಿಆರ್‍ಪಿ ಸರಕು ಎಂಬುದೇ ಅಸಹ್ಯದ ವಿಷಯ. ಬಹುಪಾಲು ಮಾಧ್ಯಮಗಳನ್ನು ಮೋದಿ-ಶಾ ಖರೀದಿಸಿದ್ದಾರೆ ಎಂಬ ಮಾತು ನಿಜ ಅನಿಸುತ್ತ ಅಲ್ರಿ? ನಂಗಿಂತಲೂ ನಿಮ್ಗ ಆ ವಿಷಯ ಜಾಸ್ತಿ ಗೊತ್ತಿರತೈತಿ ಅಲ್ಲೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...