Homeಮುಖಪುಟಸುಳ್ಳು ಹೇಳಿದ ಬಾಬಾ ರಾಮ್‌ದೇವ್! - ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

ಸುಳ್ಳು ಹೇಳಿದ ಬಾಬಾ ರಾಮ್‌ದೇವ್! – ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

#COVID19 ಚಿಕಿತ್ಸೆಗಾಗಿ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು WHO ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ" ಎಂದು WHO ಆಗ್ನೇಯ ಏಷ್ಯ ಟ್ವೀಟ್ ಮಾಡಿದೆ.

- Advertisement -
- Advertisement -

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಯೋಗ ಗುರು ರಾಮದೇವ್ “ಕೊವಿಡ್-19 ಗಾಗಿ ಮೊದಲ ಸಾಕ್ಷ್ಯ ಆಧಾರಿತ ಔಷಧ” ಎಂದು ಪತಂಜಲಿಯ ಕೊರೊನಿಲ್ ಕುರಿತು ಸಮರ್ಥಿಸಿಕೊಂಡಿದ್ದನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ತೀವ್ರವಾಗಿ ಟೀಕಿಸಿದೆ. ಆರೋಗ್ಯ ಸಚಿವರು ದೇಶದ ಮುಂದೆ “ಸುಳ್ಳು ಕಟ್ಟುಕಥೆ, ಅವೈಜ್ಞಾನಿಕ ಉತ್ಪನ್ನ”ವನ್ನು ಉತ್ತೇಜಿಸಲು ಹೇಗೆ ಸಾಧ್ಯ ಎಂದು ವೈದ್ಯಕೀಯ ಸಂಸ್ಥೆ ಪ್ರಶ್ನಿಸಿದೆ.

ಶುಕ್ರವಾರ, ರಾಮದೇವ್ ಅವರು ಪತಂಜಲಿ ಉತ್ಪನ್ನ ಕೊರೊನಿಲ್ ಅನ್ನು ಆರೋಗ್ಯ ಸಚಿವ ಹಷ್‌ವರ್ಧನ್ ಮತ್ತು ಮತ್ತೊಬ್ಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಮ್ಮುಖದಲ್ಲಿ ಬಿಡುಗಡೆ ಮಾಡಿದ್ದರು. ಈ ಮೂವರ ಹಿಂದಿರುವ ದೊಡ್ಡ ಪೋಸ್ಟರ್‌ನಲ್ಲಿ “ಔಷಧಿಯು CoPP ಮತ್ತು WHO- ಜಿಎಂಪಿ ಪ್ರಮಾಣೀಕರಿಸಲ್ಪಟ್ಟಿದೆ ಎಂದು ಬರೆಯಲ್ಪಟ್ಟಿತ್ತು. ಅಂದರೆ ಇದು ಔಷಧೀಯ ಉತ್ಪನ್ನದ ಪ್ರಮಾಣಪತ್ರವನ್ನು (CoPP) ಹೊಂದಿದೆ ಮತ್ತು ಇದನ್ನು ವಿಶ್ವ ಆರೋಗ್ಯ ಸಂಸ್ಥೆಯ ಉತ್ತಮ ಉತ್ಪಾದನಾ ಪ್ರಾಕ್ಟೀಸಸ್ (ಜಿಎಂಪಿ) ಗುರುತಿಸಿದೆ ಎಂದರ್ಥ.

ಈ ಎರಡೂ ಮಾನದಂಡಗಳು ಔಷಧೀಯ ಉತ್ಪನ್ನಗಳಲ್ಲಿ ಗುಣಮಟ್ಟದ ಭರವಸೆಯನ್ನು ಬಹುಪಾಲು ವ್ಯಾಖ್ಯಾನಿಸುತ್ತವೆ.

ಇದನ್ನೂ ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ಆದರೆ, ಕೊವಿಡ್-19 ಗೆ ಚಿಕಿತ್ಸೆ ನೀಡಲು ಅಥವಾ ತಡೆಗಟ್ಟಲು ಯಾವುದೇ ಸಾಂಪ್ರದಾಯಿಕ ಔಷಧಿಯನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ ಎಂದು ಡಬ್ಲೂಎಚ್‌ಒ ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿದೆ. #COVID19 ಚಿಕಿತ್ಸೆಗಾಗಿ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು WHO ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ” ಎಂದು WHO ಆಗ್ನೇಯ ಏಷ್ಯ ಟ್ವೀಟ್ ಮಾಡಿದೆ.

ಸ್ವತ: ವೈದ್ಯರೂ ಆಗಿರುವ ಆರೋಗ್ಯ ಸಚಿವರ ಸಮ್ಮುಖದಲ್ಲಿ ಅನಾವರಣಗೊಂಡ “ರಹಸ್ಯ ಔಷಧ”ಕ್ಕೆ WHO ಪ್ರಮಾಣೀಕರಣದ ಹಸಿ ಸುಳ್ಳು ಕಾಣಿಸಿಕೊಂಡಿದ್ದನ್ನು ಗಮನಿಸಿದಾಗ ಆಘಾತವಾಯಿತು ಎಂದು ಐಎಂಎ ಹೇಳಿದೆ. ದೇಶಕ್ಕೆ ಸಚಿವರ ವಿವರಣೆಯ ಅಗತ್ಯವಿದೆ ಎಂದು ಅದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

“ದೇಶದ ಆರೋಗ್ಯ ಮಂತ್ರಿಯಾಗಿ, ಇಂತಹ ಸುಳ್ಳು ಪ್ರಕ್ಷೇಪಗಳನ್ನು, ಪ್ರಮಾಣೀಕೃತವಲ್ಲದ ಔಷಧಿಗಳನ್ನು ಇಡೀ ದೇಶದ ಮುಂದೆ ಬಿಡುಗಡೆ ಮಾಡುವುದು ಎಷ್ಟು ಸೂಕ್ತ ಮತ್ತು ತರ್ಕಬದ್ಧವಾಗಿದೆ? ಇಂತಹ ಸುಳ್ಳು ಕಟ್ಟುಕಥೆಯ ಅವೈಜ್ಞಾನಿಕ ಉತ್ಪನ್ನವನ್ನು ಜನರಿಗೆ ಬಿಡುಗಡೆ ಮಾಡುವುದು ಎಷ್ಟು ಸಮರ್ಥನೀಯ? ಇಡೀ ದೇಶದ ಆರೋಗ್ಯ ಮಂತ್ರಿಯಾಗಿ, ಉತ್ಪನ್ನವನ್ನು ಅನೈತಿಕ, ತಪ್ಪು ಮತ್ತು ಸುಳ್ಳು ರೀತಿಯಲ್ಲಿ ಉತ್ತೇಜಿಸುವುದು ಎಷ್ಟು ನೈತಿಕವಾಗಿದೆ? ದೇಶದ ಆರೋಗ್ಯ ಸಚಿವರಾಗಿ ಮತ್ತು ಆಧುನಿಕ ವೈದ್ಯರಾಗಿ ಇಂತಹ ಆಧಾರರಹಿತ, ಪ್ರಮಾಣೀಕೃತವಲ್ಲದ ಉತ್ಪನ್ನವನ್ನು ಉತ್ತೇಜಿಸುವುದು ಎಷ್ಟು ನೈತಿಕವಾಗಿದೆ”ಎಂದು ವೈದ್ಯಕೀಯ ಸಂಸ್ಥೆ ಕಟುವಾಗಿ ಪ್ರಶ್ನಿಸಿದೆ.

ಇದನ್ನೂ ಓದಿ: ರಣಕೇಕೆಯ ಮಾಧ್ಯಮಗಳ ನಡುವೆ ನಮ್ಮ ಕರ್ತವ್ಯ; ನ್ಯಾಯಪಥ ಸಂಪಾದಕೀಯ

“ಆರೋಗ್ಯ ಸಚಿವರು ಒಂದು ಅವೈಜ್ಞಾನಿಕ ಔಷಧದ ಸುಳ್ಳು ಮತ್ತು ಕಲ್ಪಿತ ಪ್ರಕ್ಷೇಪಣವನ್ನು ಬೆಂಬಲಿಸುವುದು ಮತ್ತು WHO ಇದನ್ನು ತಿರಸ್ಕರಿಸುವುದು- ದೇಶದ ಜನರಿಗೆ ಮಾಡಿದ ಕಪಾಳಮೋಕ್ಷ ಮತ್ತು ಅವಮಾನ” ಎಂದು ಐಎಂಎ ಟೀಕಿಸಿದೆ.

ಕೊವಿಡ್ ತಡೆಗಟ್ಟಲು ಕೊರೊನಿಲ್ ಪರಿಣಾಮಕಾರಿಯಾಗಿದ್ದರೆ, ವ್ಯಾಕ್ಸಿನೇಷನ್‌ಗಾಗಿ ಸರ್ಕಾರ 35,000 ಕೋಟಿ ರೂ.ಗಳನ್ನು ಏಕೆ ಖರ್ಚು ಮಾಡಿದೆ ಎಂದು ಐಎಂಎ ಕೇಳಿದೆ.

ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು WHO ಟ್ವೀಟ್‌ಗೆ ಸ್ವಲ್ಪ ಮೊದಲು ಸ್ಪಷ್ಟನೆ ನೀಡಿದ್ದರು.

“ಕೊರೊನಿಲ್‌ಗೆ WHO ಜಿಎಂಪಿ ಕಂಪ್ಲೈಂಟ್ CoPP ಪ್ರಮಾಣಪತ್ರವನ್ನು ಭಾರತ ಸರ್ಕಾರದ ಡಿಸಿಜಿಐ ನೀಡಿದೆ. WHO ಯಾವುದೇ ಔಷಧಿಗಳನ್ನು ಅನುಮೋದಿಸುವುದಿಲ್ಲ ಅಥವಾ ನಿರಾಕರಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಜನರಿಗೆ ಉತ್ತಮ, ಆರೋಗ್ಯಕರ ಭವಿಷ್ಯವನ್ನು ನಿರ್ಮಿಸಲು WHO ಕೆಲಸ ಮಾಡುತ್ತದೆ ಎಂದು ಬಾಲಕೃಷ್ಣ ಟ್ವೀಟ್ ಮಾಡಿದ್ದರು.

ಕಳೆದ ವರ್ಷ, ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ಲಸಿಕೆಗಳು ಇನ್ನೂ ಪ್ರಯೋಗದ ಹಂತದಲ್ಲಿದ್ದವು, ಕೊರೊನಿಲ್ ಕೊರೊನಾವೈರಸ್ ವಿರುದ್ಧ ಬಲವಾದ ರಕ್ಷಣೆ ನೀಡಬಹುದೆಂದು ಪತಂಜಲಿ ಆಯುರ್ವೇದ ಹೇಳಿಕೊಂಡಿತ್ತು. ಅದರ ಸಮರ್ಥನೆಗಳ ಬಗ್ಗೆ ದೊಡ್ಡ ವಿವಾದದ ನಂತರ, ಆಯುಷ್ ಸಚಿವಾಲಯವು ಕೊರೊನಿಲ್ ಅನ್ನು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಧನವಾಗಿ ಮಾತ್ರ ಮಾರಾಟ ಮಾಡಬಹುದೆಂದು ಹೇಳಿತ್ತು.


ಇದನ್ನೂ ಓದಿ: ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...