Homeಮುಖಪುಟಸುಳ್ಳು ಹೇಳಿದ ಬಾಬಾ ರಾಮ್‌ದೇವ್! - ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

ಸುಳ್ಳು ಹೇಳಿದ ಬಾಬಾ ರಾಮ್‌ದೇವ್! – ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

#COVID19 ಚಿಕಿತ್ಸೆಗಾಗಿ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು WHO ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ" ಎಂದು WHO ಆಗ್ನೇಯ ಏಷ್ಯ ಟ್ವೀಟ್ ಮಾಡಿದೆ.

- Advertisement -
- Advertisement -

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಯೋಗ ಗುರು ರಾಮದೇವ್ “ಕೊವಿಡ್-19 ಗಾಗಿ ಮೊದಲ ಸಾಕ್ಷ್ಯ ಆಧಾರಿತ ಔಷಧ” ಎಂದು ಪತಂಜಲಿಯ ಕೊರೊನಿಲ್ ಕುರಿತು ಸಮರ್ಥಿಸಿಕೊಂಡಿದ್ದನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ತೀವ್ರವಾಗಿ ಟೀಕಿಸಿದೆ. ಆರೋಗ್ಯ ಸಚಿವರು ದೇಶದ ಮುಂದೆ “ಸುಳ್ಳು ಕಟ್ಟುಕಥೆ, ಅವೈಜ್ಞಾನಿಕ ಉತ್ಪನ್ನ”ವನ್ನು ಉತ್ತೇಜಿಸಲು ಹೇಗೆ ಸಾಧ್ಯ ಎಂದು ವೈದ್ಯಕೀಯ ಸಂಸ್ಥೆ ಪ್ರಶ್ನಿಸಿದೆ.

ಶುಕ್ರವಾರ, ರಾಮದೇವ್ ಅವರು ಪತಂಜಲಿ ಉತ್ಪನ್ನ ಕೊರೊನಿಲ್ ಅನ್ನು ಆರೋಗ್ಯ ಸಚಿವ ಹಷ್‌ವರ್ಧನ್ ಮತ್ತು ಮತ್ತೊಬ್ಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಮ್ಮುಖದಲ್ಲಿ ಬಿಡುಗಡೆ ಮಾಡಿದ್ದರು. ಈ ಮೂವರ ಹಿಂದಿರುವ ದೊಡ್ಡ ಪೋಸ್ಟರ್‌ನಲ್ಲಿ “ಔಷಧಿಯು CoPP ಮತ್ತು WHO- ಜಿಎಂಪಿ ಪ್ರಮಾಣೀಕರಿಸಲ್ಪಟ್ಟಿದೆ ಎಂದು ಬರೆಯಲ್ಪಟ್ಟಿತ್ತು. ಅಂದರೆ ಇದು ಔಷಧೀಯ ಉತ್ಪನ್ನದ ಪ್ರಮಾಣಪತ್ರವನ್ನು (CoPP) ಹೊಂದಿದೆ ಮತ್ತು ಇದನ್ನು ವಿಶ್ವ ಆರೋಗ್ಯ ಸಂಸ್ಥೆಯ ಉತ್ತಮ ಉತ್ಪಾದನಾ ಪ್ರಾಕ್ಟೀಸಸ್ (ಜಿಎಂಪಿ) ಗುರುತಿಸಿದೆ ಎಂದರ್ಥ.

ಈ ಎರಡೂ ಮಾನದಂಡಗಳು ಔಷಧೀಯ ಉತ್ಪನ್ನಗಳಲ್ಲಿ ಗುಣಮಟ್ಟದ ಭರವಸೆಯನ್ನು ಬಹುಪಾಲು ವ್ಯಾಖ್ಯಾನಿಸುತ್ತವೆ.

ಇದನ್ನೂ ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ಆದರೆ, ಕೊವಿಡ್-19 ಗೆ ಚಿಕಿತ್ಸೆ ನೀಡಲು ಅಥವಾ ತಡೆಗಟ್ಟಲು ಯಾವುದೇ ಸಾಂಪ್ರದಾಯಿಕ ಔಷಧಿಯನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ ಎಂದು ಡಬ್ಲೂಎಚ್‌ಒ ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿದೆ. #COVID19 ಚಿಕಿತ್ಸೆಗಾಗಿ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು WHO ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ” ಎಂದು WHO ಆಗ್ನೇಯ ಏಷ್ಯ ಟ್ವೀಟ್ ಮಾಡಿದೆ.

ಸ್ವತ: ವೈದ್ಯರೂ ಆಗಿರುವ ಆರೋಗ್ಯ ಸಚಿವರ ಸಮ್ಮುಖದಲ್ಲಿ ಅನಾವರಣಗೊಂಡ “ರಹಸ್ಯ ಔಷಧ”ಕ್ಕೆ WHO ಪ್ರಮಾಣೀಕರಣದ ಹಸಿ ಸುಳ್ಳು ಕಾಣಿಸಿಕೊಂಡಿದ್ದನ್ನು ಗಮನಿಸಿದಾಗ ಆಘಾತವಾಯಿತು ಎಂದು ಐಎಂಎ ಹೇಳಿದೆ. ದೇಶಕ್ಕೆ ಸಚಿವರ ವಿವರಣೆಯ ಅಗತ್ಯವಿದೆ ಎಂದು ಅದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

“ದೇಶದ ಆರೋಗ್ಯ ಮಂತ್ರಿಯಾಗಿ, ಇಂತಹ ಸುಳ್ಳು ಪ್ರಕ್ಷೇಪಗಳನ್ನು, ಪ್ರಮಾಣೀಕೃತವಲ್ಲದ ಔಷಧಿಗಳನ್ನು ಇಡೀ ದೇಶದ ಮುಂದೆ ಬಿಡುಗಡೆ ಮಾಡುವುದು ಎಷ್ಟು ಸೂಕ್ತ ಮತ್ತು ತರ್ಕಬದ್ಧವಾಗಿದೆ? ಇಂತಹ ಸುಳ್ಳು ಕಟ್ಟುಕಥೆಯ ಅವೈಜ್ಞಾನಿಕ ಉತ್ಪನ್ನವನ್ನು ಜನರಿಗೆ ಬಿಡುಗಡೆ ಮಾಡುವುದು ಎಷ್ಟು ಸಮರ್ಥನೀಯ? ಇಡೀ ದೇಶದ ಆರೋಗ್ಯ ಮಂತ್ರಿಯಾಗಿ, ಉತ್ಪನ್ನವನ್ನು ಅನೈತಿಕ, ತಪ್ಪು ಮತ್ತು ಸುಳ್ಳು ರೀತಿಯಲ್ಲಿ ಉತ್ತೇಜಿಸುವುದು ಎಷ್ಟು ನೈತಿಕವಾಗಿದೆ? ದೇಶದ ಆರೋಗ್ಯ ಸಚಿವರಾಗಿ ಮತ್ತು ಆಧುನಿಕ ವೈದ್ಯರಾಗಿ ಇಂತಹ ಆಧಾರರಹಿತ, ಪ್ರಮಾಣೀಕೃತವಲ್ಲದ ಉತ್ಪನ್ನವನ್ನು ಉತ್ತೇಜಿಸುವುದು ಎಷ್ಟು ನೈತಿಕವಾಗಿದೆ”ಎಂದು ವೈದ್ಯಕೀಯ ಸಂಸ್ಥೆ ಕಟುವಾಗಿ ಪ್ರಶ್ನಿಸಿದೆ.

ಇದನ್ನೂ ಓದಿ: ರಣಕೇಕೆಯ ಮಾಧ್ಯಮಗಳ ನಡುವೆ ನಮ್ಮ ಕರ್ತವ್ಯ; ನ್ಯಾಯಪಥ ಸಂಪಾದಕೀಯ

“ಆರೋಗ್ಯ ಸಚಿವರು ಒಂದು ಅವೈಜ್ಞಾನಿಕ ಔಷಧದ ಸುಳ್ಳು ಮತ್ತು ಕಲ್ಪಿತ ಪ್ರಕ್ಷೇಪಣವನ್ನು ಬೆಂಬಲಿಸುವುದು ಮತ್ತು WHO ಇದನ್ನು ತಿರಸ್ಕರಿಸುವುದು- ದೇಶದ ಜನರಿಗೆ ಮಾಡಿದ ಕಪಾಳಮೋಕ್ಷ ಮತ್ತು ಅವಮಾನ” ಎಂದು ಐಎಂಎ ಟೀಕಿಸಿದೆ.

ಕೊವಿಡ್ ತಡೆಗಟ್ಟಲು ಕೊರೊನಿಲ್ ಪರಿಣಾಮಕಾರಿಯಾಗಿದ್ದರೆ, ವ್ಯಾಕ್ಸಿನೇಷನ್‌ಗಾಗಿ ಸರ್ಕಾರ 35,000 ಕೋಟಿ ರೂ.ಗಳನ್ನು ಏಕೆ ಖರ್ಚು ಮಾಡಿದೆ ಎಂದು ಐಎಂಎ ಕೇಳಿದೆ.

ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು WHO ಟ್ವೀಟ್‌ಗೆ ಸ್ವಲ್ಪ ಮೊದಲು ಸ್ಪಷ್ಟನೆ ನೀಡಿದ್ದರು.

“ಕೊರೊನಿಲ್‌ಗೆ WHO ಜಿಎಂಪಿ ಕಂಪ್ಲೈಂಟ್ CoPP ಪ್ರಮಾಣಪತ್ರವನ್ನು ಭಾರತ ಸರ್ಕಾರದ ಡಿಸಿಜಿಐ ನೀಡಿದೆ. WHO ಯಾವುದೇ ಔಷಧಿಗಳನ್ನು ಅನುಮೋದಿಸುವುದಿಲ್ಲ ಅಥವಾ ನಿರಾಕರಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಜನರಿಗೆ ಉತ್ತಮ, ಆರೋಗ್ಯಕರ ಭವಿಷ್ಯವನ್ನು ನಿರ್ಮಿಸಲು WHO ಕೆಲಸ ಮಾಡುತ್ತದೆ ಎಂದು ಬಾಲಕೃಷ್ಣ ಟ್ವೀಟ್ ಮಾಡಿದ್ದರು.

ಕಳೆದ ವರ್ಷ, ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ಲಸಿಕೆಗಳು ಇನ್ನೂ ಪ್ರಯೋಗದ ಹಂತದಲ್ಲಿದ್ದವು, ಕೊರೊನಿಲ್ ಕೊರೊನಾವೈರಸ್ ವಿರುದ್ಧ ಬಲವಾದ ರಕ್ಷಣೆ ನೀಡಬಹುದೆಂದು ಪತಂಜಲಿ ಆಯುರ್ವೇದ ಹೇಳಿಕೊಂಡಿತ್ತು. ಅದರ ಸಮರ್ಥನೆಗಳ ಬಗ್ಗೆ ದೊಡ್ಡ ವಿವಾದದ ನಂತರ, ಆಯುಷ್ ಸಚಿವಾಲಯವು ಕೊರೊನಿಲ್ ಅನ್ನು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಧನವಾಗಿ ಮಾತ್ರ ಮಾರಾಟ ಮಾಡಬಹುದೆಂದು ಹೇಳಿತ್ತು.


ಇದನ್ನೂ ಓದಿ: ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...