Homeಮುಖಪುಟದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! - 80 ವರ್ಷದ...

ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! – 80 ವರ್ಷದ ಗುರುಮುಖ್ ಸಿಂಗ್ ವಿಷಾದ

- Advertisement -
- Advertisement -

“ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೇನೆ; ಆದರೆ ಈಗ ನಾನು ಭಯೋತ್ಪಾಕ ಅಂತೆ” ಎಂದು ರೈತ ಹೋರಾಟದಲ್ಲಿ ಪಾಲ್ಗೊಂಡು ಬಂಧನವಾಗಿದ್ದ 80 ವರ್ಷದ ಮಾಜಿ ಯೋಧ ಗುರುಮುಖ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ. 15 ದಿನಗಳಿಂದ ಜೈಲಿನಲ್ಲಿದ್ದ ಇವರು ಕೊನೆಗೂ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದಾರೆ.

ಪಂಜಾಬಿನ ಫತೇಗಡ ಸಾಹಿಬ್ ಗ್ರಾಮದ ನಿವಾಸಿ ಸಿಂಗ್ 1962ರ ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ ಸೇನೆಗೆ ಸೇರ್ಪಡೆಗೊಂಡಿದ್ದರು. ತರಬೇತಿಯ ಬಳಿಕ 1962, ನವಂಬರ್ ತಿಂಗಳಿನಲ್ಲಿ ಉಭಯ ದೇಶಗಳು ಕದನ ವಿರಾಮವನ್ನು ಘೋಷಿಸುವವರೆಗೆ ಸಿಕ್ಕಿಮ್ ನ ನಾಥು ಲಾ ಪಾಸ್ ನಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು. 1965ರ ಭಾರತ-ಪಾಕಿಸ್ತಾನ ಯುದ್ಧ ಮತ್ತು ಆರು ವರ್ಷಗಳ ಬಳಿಕ ಬಾಂಗ್ಲಾದೇಶ ವಿಮೋಚನಾ ಸಮರದಲ್ಲಿಯೂ ಅವರು ಹೋರಾಡಿದ್ದರು. 22 ವರ್ಷಗಳ ಸುದೀರ್ಘ ಸೇವೆಯ ಬಳಿಕ 1984ರಲ್ಲಿ ಅವರು ಸೇನೆಯಿಂದ ನಿವೃತ್ತಗೊಂಡಿದ್ದರು. ಉತ್ತಮ ಕುಸ್ತಿ ಮತ್ತು ಬಾಕ್ಸಿಂಗ್ ಪಟುವಾಗಿದ್ದ ಸಿಂಗ್ ಒಳ್ಳೆಯ ಕಬಡ್ಡಿ ಆಟಗಾರರೂ ಆಗಿದ್ದರು ಎಂದು ನ್ಯೂಸ್ ಲಾಂಡ್ರಿಯು ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

“ಸೇನೆಯು ನನಗೆ ತುಂಬ ಪ್ರೀತಿ ಮತ್ತು ಗೌರವವನ್ನು ನೀಡಿತ್ತು. ಈ ದೇಶಕ್ಕಾಗಿ ಮೂರು ಯುದ್ಧಗಳಲ್ಲಿ ನಾನು ಹೋರಾಡಿದ್ದೇನೆ. 10 ಪದಕಗಳನ್ನೂ ಪಡೆದಿದ್ದೇನೆ. ಈಗ ಅವರು ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಈ ಅವಮಾನವನ್ನು ಸಹಿಸಿಕೊಳ್ಳಲು ನನ್ನಿಂದ ಸಾಧ್ಯವಾಗುತ್ತಿಲ್ಲ” ಎಂದು ಗುರುಮುಖ್ ಸಿಂಗ್ ಹೇಳಿದ್ದಾರೆ.

ಜ.25ರಂದು ಗುರುಮುಖ್ ಸಿಂಗ್ ಗಣರಾಜ್ಯೋತ್ಸವ ದಿನದಂದು ಆಯೋಜಿಸಲಾಗಿದ್ದ ರೈತರ ಟ್ರಾಕ್ಟರ್ ರ್ಯಾಲಿಯಲ್ಲಿ ಪಾಲ್ಗೊಳ್ಳಲೆಂದು ತನ್ನ ಗ್ರಾಮದ 25 ರೈತರೊಂದಿಗೆ ದಿಲ್ಲಿ ಗಡಿಯನ್ನು ತಲುಪಿದ್ದರು. ಆದರೆ ಪ್ರಯಾಣದಿಂದ ಸುಸ್ತಾಗಿದ್ದ ಅವರು ಬುರಾರಿಯ ನಿರಂಕಾರಿ ಮೈದಾನದಲ್ಲಿಯ ಟೆಂಟ್‌ನಲ್ಲಿ ಉಳಿದುಕೊಂಡಿದ್ದರು. ಟ್ರಾಕ್ಟರ್ ರ್ಯಾಲಿಗಾಗಲೀ ಕೆಂಪು ಕೋಟೆಗಾಗಲೀ ಅವರು ಹೋಗಿರಲಿಲ್ಲ. ಟ್ರಾಕ್ಟರ್ ರ್ಯಾಲಿ ಸಂದರ್ಭದಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫೆ.1ರ ವೇಳೆಗೆ 122 ರೈತರನ್ನು ಪೊಲೀಸರು ಬಂಧಿಸಿದ್ದರು ಮತ್ತು ಅವರಲ್ಲಿ ಗುರುಮುಖ್ ಸಿಂಗ್ ಸೇರಿದ್ದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಟ್ರಾಕ್ಟರ್ ರ್ಯಾಲಿಯ ಮೂರು ದಿನಗಳ ಬಳಿಕ ನಿರಂಕಾರಿ ಮೈದಾನದಲ್ಲಿ ನಿಯೋಜಿತರಾಗಿದ್ದ ಪೊಲೀಸರು ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ರೈತರಿಗೆ ಬೆದರಿಕೆಯೊಡ್ಡಿದ್ದರು. ಜನವರಿ 28ರಂದು ಸಮುದಾಯ ಪಾಕಶಾಲೆಯಲ್ಲಿ ಅಡಿಗೆ ಕೆಲಸಕ್ಕೆ ನೆರವಾದ ಬಳಿಕ ಗುರುಮುಖ್ ಸಿಂಗ್ ತನ್ನ ಟೆಂಟ್‌ಗೆ ಮರಳಿದ್ದರು. ರಾತ್ರಿ 11ರ ಸುಮಾರಿಗೆ ರೈತರು ಮಲಗಲು ಸಜ್ಜಾಗುತ್ತಿದ್ದಾಗ ಏಕಾಏಕಿ ವಿದ್ಯುತ್ ನಿಲುಗಡೆಗೊಂಡಿತ್ತು. ಆಗ ಗುರುಮುಖ್ ಸಿಂಗ್ ಟೆಂಟ್‌ನಿಂದ ಹೊರಬಂದಾಗ ಅವರ ಮೇಲೆ ಮುಗಿಬಿದ್ದ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿ ಎಳೆದೊಯ್ದು ಪೊಲೀಸ್ ವ್ಯಾನ್‌ನಲ್ಲಿ ತಳ್ಳಿದ್ದರು. ಅವರೊಂದಿಗೆ ಇನ್ನೂ ಕೆಲವು ರೈತರನ್ನು ಬಂಧಿಸಲಾಗಿತ್ತು ಎಂದು ನ್ಯೂಸ್‌ ಲಾಂಡ್ರಿಯು ವರದಿ ಮಾಡಿದೆ.

ಪೊಲೀಸರು ಗುರುಮುಖ್ ಸಿಂಗ್ ವಿರುದ್ಧ ದಾಖಲಿಸಿರುವ ಎಫ್ಐಆರ್ನಲ್ಲಿ ಅವರು ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದಾರೆ. ಆದರೆ ಅವರು ಇದನ್ನು ನಿರಾಕರಿಸಿದ್ದಾರೆ.

ಜಾಮೀನು ಕೋರಿ ಗುರುಮುಖ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ತನಿಖೆಯು ಇನ್ನೂ ಪ್ರಗತಿಯಲ್ಲಿದೆ ಎಂಬ ಕಾರಣವನ್ನು ನೀಡಿ ಫೆ.9ರಂದು ನ್ಯಾಯಾಲಯವು ತಿರಸ್ಕರಿಸಿತ್ತು. ಆದಾಗ್ಯೂ ಮೂರು ದಿನಗಳ ಬಳಿಕ ಅವರ ವಯಸ್ಸು ಮತ್ತು ಅವರ ವಿರುದ್ಧ ಹಿಂದೆ ಯಾವುದೇ ಪ್ರಕರಣಗಳು ಇಲ್ಲದಿರುವುದನ್ನು ಪರಿಗಣಿಸಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತ್ತು.

ಗುರುಮುಖ್ ಸಿಂಗ್ ಈಗ ಸ್ವಗ್ರಾಮಕ್ಕೆ ಮರಳಿದ್ದಾರೆ. “ಪೊಲೀಸರು ನನಗೆ ಭಯೋತ್ಪಾದಕನ ಹಣೆಪಟ್ಟಿಯನ್ನು ಕಟ್ಟಿದ್ದರು. ಸೇನೆಯಲ್ಲಿ ನಾನು 22 ವರ್ಷಗಳ ಸೇವೆ ಸಲ್ಲಿಸಿದ್ದೇನೆ. ಸಾಯುವ ಮೊದಲು ಇದನ್ನು ನಾನು ಕೇಳಬೇಕಿತ್ತೇ” ಎಂದು ಸಿಂಗ್ ಪ್ರಶ್ನಿಸಿದರು.


ಇದನ್ನೂ ಓದಿ: ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...