Homeಮುಖಪುಟಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

- Advertisement -
- Advertisement -

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಸೋಮವಾರದಂದು ಮಂಗಳ ಗ್ರಹದಲ್ಲಿ ತಮ್ಮ ಬಾಹ್ಯಾಕಾಶ ನೌಕೆ ಇಳಿಯುವ ಮೊದಲ ಉತ್ತಮ-ಗುಣಮಟ್ಟದ ವೀಡಿಯೊವನ್ನು ಬಿಡುಗಡೆ ಮಾಡಿದೆ. ಮೂರು ನಿಮಿಷಗಳ ಈ ವಿಡಿಯೋದಲ್ಲಿ ನೌಕೆಯು ಬಿಳಿ-ಕಿತ್ತಳೆ ಬಣ್ಣದ ಪ್ಯಾರಾಚೂಟ್ ಸಹಾಯದಲ್ಲಿ ಇಳಿಯುತ್ತಿರುವುದು ಮತ್ತು ಇಳಿಯುತ್ತಿದ್ದಂತೆ ಮಂಗಳ ಗ್ರಹದ ಮೇಲ್ಮೈಯಲ್ಲಿನ ದೂಳಿನ ದೃಶ್ಯವನ್ನು ಕೂಡಾ ತೋರಿಸುತ್ತದೆ.

ದೃಶ್ಯವು ತುಂಬಾ ಚೆನ್ನಾಗಿದ್ದು, ನಾವು ಉಸಿರು ಬಿಗಿ ಹಿಡಿದು ನೋಡುತ್ತಾ, ನೌಕೆಯಲ್ಲಿ ನಾವೆ ಸವಾರಿ ಮಾಡುತ್ತಿದ್ದೇವೆ ಎಂಬ ಭಾವನೆಯಲ್ಲಿದ್ದೆವು ಎಂದು ನೌಕೆ ಉಡಾವಣಾ ತಂಡ ಹೇಳಿದೆ.

“ಅದು ಮೈನವಿರೇಳಿಸುವ ಅದ್ಭುತ ದೃಶ್ಯವಾಗಿತ್ತು” ಎಂದು ನೌಕೆಯ ಕ್ಯಾಮೆರಾ ತಂಡದ ಮುಖ್ಯಸ್ಥ ಡೇವ್ ಗ್ರುಯೆಲ್ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ವರುಷದ ಸಂಕ್ರಮಣ; ಗವಿ ಗಂಗಾಧರೇಶ್ವರ ದೇವಸ್ಥಾನದ ಸೂರ್ಯ ಮಜ್ಜನದ ಹಿಂದಿನ ವಿಜ್ಞಾನ ಗೊತ್ತೆ?

ಪರ್ಸೆವೆರೆನ್ಸ್ ರೋವರ್ ಬಾಹ್ಯಾಕಾಶ ನೌಕೆಯು ಮಂಗಳ ಗ್ರಹದ ಮೇಲೆ ಕಳೆದ ಗುರುವಾರ ಗ್ರಹದ ಜೆಜೆರೊ ಕ್ರೇಟರ್ನ ಪುರಾತನ ನದಿ ಮುಖಜ ಭೂಮಿ ಬಳಿ ಇಳಿಯಿತು. ಉಡಾವಣ ತಂಡವು ಸುದ್ದಿಗೋಷ್ಠಿಯಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದೆ.

“ಈ ವೀಡಿಯೊಗಳು ಮತ್ತು ಈ ಚಿತ್ರಣಗಳು ನಮ್ಮ ಕನಸುಗಳಾಗಿದೆ” ಎಂದು ಲ್ಯಾಂಡಿಂಗ್ ತಂಡದ ಉಸ್ತುವಾರಿ ವಹಿಸಿಕೊಂಡಿದ್ದ ಅಲ್ ಚೆನ್ ಹೇಳಿದ್ದಾರೆ.

ಆರು ಕ್ಯಾಮೆರಾಗಳನ್ನು ಪ್ರವೇಶ, ಇಳಿಯುವಿಕೆ ಮತ್ತು ಲ್ಯಾಂಡಿಂಗ್‌ಗೆ ಮೀಸಲಿಡಲಾಗಿತ್ತು, ಇವುಗಳ ಮೂಲಕ ವಿಭಿನ್ನ ದೃಷ್ಟಿಕೋನಗಳಿಂದ ಮೇಲಕ್ಕೆ ಮತ್ತು ಕೆಳಕ್ಕೆ ನೋಡಲಾಯಿತು. ಇವುಗಳಲ್ಲಿ ಒಂದು ಕ್ಯಾಮೆರಾ ಹೊರತುಪಡಿಸಿ ಎಲ್ಲವೂ ಕೆಲಸ ಮಾಡಿದೆ. ಲ್ಯಾಂಡಿಂಗ್‌ಗಾಗಿ ಆನ್ ಮಾಡಿದ ಏಕೈಕ ಮೈಕ್ರೊಫೋನ್ ವಿಫಲವಾಗಿತ್ತಾದರೂ, ನೌಕೆಯು ಇಳಿದ ನಂತರ ನಾಸಾಗೆ ಕೆಲವು ಧ್ವನಿ ತುಣುಕುಗಳು ಸಿಕ್ಕಿದೆ.

ಸಾವಿರಾರು ಚಿತ್ರಗಳನ್ನು ಕಳುಹಿಸಿರುವ ನಾಸಾದ ಅತಿದೊಡ್ಡ ಮತ್ತು ಅತ್ಯಂತ ಸಮರ್ಥ ಉತ್ತಮ ಸ್ಥಿತಿಯ ಬಾಹ್ಯಾಕಾಶ ನೌಕೆ ಇದಾಗಿದೆ. ಇದು ಮುಂದಿನ ಎರಡು ವರ್ಷಗಳನ್ನು ಮಂಗಳ ಗ್ರಹದ ಒಣ ನದಿಯ ಮುಖಜ ಭೂಮಿಯಲ್ಲಿ ಕಳೆಯಲಿದ್ದು, ಅಲ್ಲಿನ  ಬಂಡೆಗಳನ್ನು ಕೊರೆದು 3-4 ಶತಕೋಟಿ ವರ್ಷಗಳ ಹಿಂದೆ ಅಲ್ಲಿ ಜೀವಿಗಳಿದ್ದವೆ ಎಂಬ ಪುರಾವೆಗಳನ್ನು ಅನ್ವೇಷಿಸಲಿದೆ.

ಇದನ್ನೂ ಓದಿ: ಹೊಸ ವರುಷದ ಆವಿಷ್ಕಾರಗಳ ನಿರೀಕ್ಷೆಯಲ್ಲಿ, ಹಳೆ ವರುಷದ ವಿಜ್ಞಾನ ಕಸುವಿನ ನೆನಪುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...