Homeಮುಖಪುಟಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

- Advertisement -
- Advertisement -

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಸೋಮವಾರದಂದು ಮಂಗಳ ಗ್ರಹದಲ್ಲಿ ತಮ್ಮ ಬಾಹ್ಯಾಕಾಶ ನೌಕೆ ಇಳಿಯುವ ಮೊದಲ ಉತ್ತಮ-ಗುಣಮಟ್ಟದ ವೀಡಿಯೊವನ್ನು ಬಿಡುಗಡೆ ಮಾಡಿದೆ. ಮೂರು ನಿಮಿಷಗಳ ಈ ವಿಡಿಯೋದಲ್ಲಿ ನೌಕೆಯು ಬಿಳಿ-ಕಿತ್ತಳೆ ಬಣ್ಣದ ಪ್ಯಾರಾಚೂಟ್ ಸಹಾಯದಲ್ಲಿ ಇಳಿಯುತ್ತಿರುವುದು ಮತ್ತು ಇಳಿಯುತ್ತಿದ್ದಂತೆ ಮಂಗಳ ಗ್ರಹದ ಮೇಲ್ಮೈಯಲ್ಲಿನ ದೂಳಿನ ದೃಶ್ಯವನ್ನು ಕೂಡಾ ತೋರಿಸುತ್ತದೆ.

ದೃಶ್ಯವು ತುಂಬಾ ಚೆನ್ನಾಗಿದ್ದು, ನಾವು ಉಸಿರು ಬಿಗಿ ಹಿಡಿದು ನೋಡುತ್ತಾ, ನೌಕೆಯಲ್ಲಿ ನಾವೆ ಸವಾರಿ ಮಾಡುತ್ತಿದ್ದೇವೆ ಎಂಬ ಭಾವನೆಯಲ್ಲಿದ್ದೆವು ಎಂದು ನೌಕೆ ಉಡಾವಣಾ ತಂಡ ಹೇಳಿದೆ.

“ಅದು ಮೈನವಿರೇಳಿಸುವ ಅದ್ಭುತ ದೃಶ್ಯವಾಗಿತ್ತು” ಎಂದು ನೌಕೆಯ ಕ್ಯಾಮೆರಾ ತಂಡದ ಮುಖ್ಯಸ್ಥ ಡೇವ್ ಗ್ರುಯೆಲ್ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ವರುಷದ ಸಂಕ್ರಮಣ; ಗವಿ ಗಂಗಾಧರೇಶ್ವರ ದೇವಸ್ಥಾನದ ಸೂರ್ಯ ಮಜ್ಜನದ ಹಿಂದಿನ ವಿಜ್ಞಾನ ಗೊತ್ತೆ?

ಪರ್ಸೆವೆರೆನ್ಸ್ ರೋವರ್ ಬಾಹ್ಯಾಕಾಶ ನೌಕೆಯು ಮಂಗಳ ಗ್ರಹದ ಮೇಲೆ ಕಳೆದ ಗುರುವಾರ ಗ್ರಹದ ಜೆಜೆರೊ ಕ್ರೇಟರ್ನ ಪುರಾತನ ನದಿ ಮುಖಜ ಭೂಮಿ ಬಳಿ ಇಳಿಯಿತು. ಉಡಾವಣ ತಂಡವು ಸುದ್ದಿಗೋಷ್ಠಿಯಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದೆ.

“ಈ ವೀಡಿಯೊಗಳು ಮತ್ತು ಈ ಚಿತ್ರಣಗಳು ನಮ್ಮ ಕನಸುಗಳಾಗಿದೆ” ಎಂದು ಲ್ಯಾಂಡಿಂಗ್ ತಂಡದ ಉಸ್ತುವಾರಿ ವಹಿಸಿಕೊಂಡಿದ್ದ ಅಲ್ ಚೆನ್ ಹೇಳಿದ್ದಾರೆ.

ಆರು ಕ್ಯಾಮೆರಾಗಳನ್ನು ಪ್ರವೇಶ, ಇಳಿಯುವಿಕೆ ಮತ್ತು ಲ್ಯಾಂಡಿಂಗ್‌ಗೆ ಮೀಸಲಿಡಲಾಗಿತ್ತು, ಇವುಗಳ ಮೂಲಕ ವಿಭಿನ್ನ ದೃಷ್ಟಿಕೋನಗಳಿಂದ ಮೇಲಕ್ಕೆ ಮತ್ತು ಕೆಳಕ್ಕೆ ನೋಡಲಾಯಿತು. ಇವುಗಳಲ್ಲಿ ಒಂದು ಕ್ಯಾಮೆರಾ ಹೊರತುಪಡಿಸಿ ಎಲ್ಲವೂ ಕೆಲಸ ಮಾಡಿದೆ. ಲ್ಯಾಂಡಿಂಗ್‌ಗಾಗಿ ಆನ್ ಮಾಡಿದ ಏಕೈಕ ಮೈಕ್ರೊಫೋನ್ ವಿಫಲವಾಗಿತ್ತಾದರೂ, ನೌಕೆಯು ಇಳಿದ ನಂತರ ನಾಸಾಗೆ ಕೆಲವು ಧ್ವನಿ ತುಣುಕುಗಳು ಸಿಕ್ಕಿದೆ.

ಸಾವಿರಾರು ಚಿತ್ರಗಳನ್ನು ಕಳುಹಿಸಿರುವ ನಾಸಾದ ಅತಿದೊಡ್ಡ ಮತ್ತು ಅತ್ಯಂತ ಸಮರ್ಥ ಉತ್ತಮ ಸ್ಥಿತಿಯ ಬಾಹ್ಯಾಕಾಶ ನೌಕೆ ಇದಾಗಿದೆ. ಇದು ಮುಂದಿನ ಎರಡು ವರ್ಷಗಳನ್ನು ಮಂಗಳ ಗ್ರಹದ ಒಣ ನದಿಯ ಮುಖಜ ಭೂಮಿಯಲ್ಲಿ ಕಳೆಯಲಿದ್ದು, ಅಲ್ಲಿನ  ಬಂಡೆಗಳನ್ನು ಕೊರೆದು 3-4 ಶತಕೋಟಿ ವರ್ಷಗಳ ಹಿಂದೆ ಅಲ್ಲಿ ಜೀವಿಗಳಿದ್ದವೆ ಎಂಬ ಪುರಾವೆಗಳನ್ನು ಅನ್ವೇಷಿಸಲಿದೆ.

ಇದನ್ನೂ ಓದಿ: ಹೊಸ ವರುಷದ ಆವಿಷ್ಕಾರಗಳ ನಿರೀಕ್ಷೆಯಲ್ಲಿ, ಹಳೆ ವರುಷದ ವಿಜ್ಞಾನ ಕಸುವಿನ ನೆನಪುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...