Homeಕರ್ನಾಟಕಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ 10 ಕೋವಿಡ್ ಕೇಸ್

ಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ 10 ಕೋವಿಡ್ ಕೇಸ್

ಜನರು ನಿರ್ಲಕ್ಷ್ಯ ಮಾಡುವುದನ್ನು ಮುಂದುವರೆಸಿದರೆ, ಲಾಕ್‌ಡೌನ್ ಹೇರುವುದು ಅನಿವಾರ್ಯ ಎಂದು ಬಿಬಿಎಂಪಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಬೆಂಗಳೂರಿನ ಅಪಾರ್ಟ್‌ಮೆಂಟ್ ಒಂದರ 10 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಅಪಾರ್ಟ್‌ಮೆಂಟ್‌ಗೆ ಹೊಂದಿಕೊಂಡ 6 ಬ್ಲಾಕ್‌ಗಳನ್ನು ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿದೆ.

1,500 ನಿವಾಸಿಗಳೊಂದಿಗೆ ಒಂಬತ್ತು ಬ್ಲಾಕ್‌ಗಳನ್ನು ಹೊಂದಿರುವ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ 10 ಕೋವಿಡ್ ಪ್ರಕರಣಗಳು ಫೆಬ್ರವರಿ 15 ಮತ್ತು 22 ರ ನಡುವೆ ಕಂಡುಬಂದಿವೆ ಎಂದು ಬಿಬಿಎಂಪಿಯ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ 10 ದಿನದ ಹಿಂದೆ ಬೆಂಗಳೂರಿನ ಮತ್ತೊಂದು ಅಪಾರ್ಟ್ಮೆಂಟ್ ಸಂಕೀರ್ಣವನ್ನು 113 ಪಾಸಿಟಿವ್ ಕೇಸ್ ಕಂಡು ಬಂದ ನಂತರ ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿತ್ತು.
ಕೋವಿಡ್ ಸುರಕ್ಷತಾ ನಿರ್ಬಂಧಗಳನ್ನು ಅನುಸರಿಸುವಲ್ಲಿ ಜನರು ನಿರ್ಲಕ್ಷ್ಯ ಮಾಡುವುದನ್ನು ಮುಂದುವರೆಸಿದರೆ, ಲಾಕ್‌ಡೌನ್ ಹೇರುವುದು ಮಾತ್ರ ಉಳಿದಿರುವ ಆಯ್ಕೆಯಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳು, ವೈದ್ಯರು ಮತ್ತು ಜಂಟಿ ಮತ್ತು ವಿಶೇಷ ಆಯುಕ್ತರು ಭಾಗವಹಿಸಿದ್ದ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಬಿಬಿಎಂಪಿ ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಒಂದು ನರ್ಸಿಂಗ್ ಕಾಲೇಜ್ ಮತ್ತು ಇನ್ನೆರಡು ವಸತಿ ಸಂಕೀರ್ಣಗಳು ಸೇರಿ ಒಟ್ಟು ಮೂರು ಕೋವಿಡ್ ಕ್ಲಸ್ಟರ್‌ಗಳನ್ನು ಗುರುತಿಸಿದೆ.

ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಕರ್ನಾಟಕದಲ್ಲಿ ಮತ್ತೊಂದು ಲಾಕ್‌ಡೌನ್ ಹಾಕುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು, “ಕೋವಿಡ್ ಪ್ರೋಟೋಕಾಲ್‌ಗಳನ್ನು ಮೇಲ್ವಿಚಾರಣೆ ಮಾಡಲು ಹೆಚ್ಚಿನ ಸಂಖ್ಯೆಯ ಮಾರ್ಷಲ್‌ಗಳನ್ನು ತೊಡಗಿಸಿಕೊಳ್ಳಲು ನಾನು ನಮ್ಮ ಎಲ್ಲ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಪಾಸಿಟಿವ್ ದರದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ. ಇದು ಶೇಕಡಾ 1.27 ರಷ್ಟಿದೆ, ಇದು ಆತಂಕಕಾರಿಯಲ್ಲ ಈ ಸಮಯದಲ್ಲಿ, ಕರ್ನಾಟಕದ ಯಾವುದೇ ಭಾಗದಲ್ಲಿ ಲಾಕ್ ಡೌನ್ ಅಗತ್ಯವಿಲ್ಲ” ಎಂದಿದ್ದಾರೆ.

ಕೊವಿಡ್-19 ಸುರಕ್ಷತಾ ನಿಯಮಗಳನ್ನು ಪಾಲಿಸದಿದ್ದರೆ ಬೆಂಗಳೂರು ಮತ್ತೆ ತೊಂದರೆಗೆ ಒಳಗಾಗಬಹುದು ಎಂದು ಬಿಬಿಎಂಪಿ ಆಯುಕ್ತ ಸೋಮವಾರ ಎನ್‌ಡಿಟಿವಿಗೆ ತಿಳಿಸಿದ್ದಾರೆ.
“ನಗರದಲ್ಲಿ 1 ಕೋಟಿ 30 ಲಕ್ಷ ಜನಸಂಖ್ಯೆಯಿದ್ದು, ನಾವು ದಿನಕ್ಕೆ 200 ರಿಂದ 300 ರಷ್ಟು ಪ್ರಕರಣಗಳ ಏರಿಕೆಯನ್ನು ನೋಡುತ್ತಿದ್ದೇವೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಪ್ರಕರಣಗಳಲ್ಲಿ ಹೆಚ್ಚಳವಿದೆ ಮತ್ತು ಈ ಎರಡು ರಾಜ್ಯಗಳೊಂದಿಗೆ ನಾವು ಗಡಿಗಳನ್ನು ಹಂಚಿಕೊಂಡಿದ್ದೇವೆ” ಎಂದು ಪ್ರಸಾದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗಣನೀಯ ಸಂಖ್ಯೆಯಲ್ಲಿ ಗಡಿ ಪ್ರದೇಶಗಳಿಂದ ಬಂದವರಿದ್ದಾರೆ. ನಗರದ ಜನರು ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿಲ್ಲ. ಜನರು ಕೋವಿಡ್-ಸೂಕ್ತವಾದ ನಡವಳಿಕೆಯನ್ನು ಅನುಸರಿಸದಿದ್ದರೆ, ಮುಂದಿನ ಕೆಲವು ದಿನಗಳಲ್ಲಿ ನಾವು ತೊಂದರೆಯಲ್ಲಿರಲಿದ್ದೇವೆ ಎಂದು ನಾವು ಒತ್ತಿ ಹೇಳುತ್ತಿದ್ದೇವೆ “ಎಂದು ಅವರು ಹೇಳಿದರು.
ಫೆಬ್ರವರಿ 16 ರಂದು ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಶೇ 70 ರಷ್ಟು ಏರಿಕೆ ಕಂಡಿದೆ.


ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭಾರಿ ಸ್ಫೋಟ- 6 ಕಾರ್ಮಿಕರು ಸಾವು; ಮೂವರು ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...