Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

- Advertisement -
- Advertisement -

ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ ಇತ್ತೀಚೆಗೆ ಭಾರತದಲ್ಲಿ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸುವ ಮಾರ್ಗಗಳನ್ನು ವಿವರಿಸುವ ಟೂಲ್ಕಿಟ್ ಅನ್ನು ಟ್ವೀಟ್ ಮಾಡಿದ್ದರು. ಆ ಮೂಲಕ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಬೆಂಗಳೂರು ಮೂಲದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ದೆಹಲಿ ಪೊಲೀಸರು ಟೂಲ್ಕಿಟ್ ಅನ್ನು ‘ಎಡಿಟ್’ ಮಾಡಿದ್ದಾರೆ ಎಂದು ಆರೋಪಿಸಿ ಬಂಧಿಸಿದ್ದರು.

ಈ ನಡುವೆ ರೈಲೊಂದರಲ್ಲಿ ಥನ್ಬರ್ಗ್ ಊಟ ಮಾಡುತ್ತಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದ್ದು, ಗ್ರೇಟಾ ರೈಲಿನೊಳಗೆ ಆಹಾರವನ್ನು ಸೇವಿಸುತ್ತಿರುವುದನ್ನು ಚಿತ್ರ ತೋರಿಸುತ್ತದೆ. ಹೊರಗಡೆ ಪ್ಲಾಟ್‌ಫಾರಂ ಮೇಲೆ ಹಸಿದ ಆಫ್ರಿಕನ್ ಮಕ್ಕಳು ಥನ್‌ಬರ್ಗ್ ಊಟ ಮಾಡುವುದನ್ನು ನೋಡುತ್ತ ನಿಂತಿವೆ. ಟ್ವಿಟರ್ ಬಳಕೆದಾರ @ಬೆಂಬಡೆಪ್ ಈ ಚಿತ್ರವನ್ನು ಪೋಸ್ಟ್ ಮಾಡಿ, “ಭಾರತದ ಈ ವಿರೋಧಿ ಪಡೆಗಳನ್ನು ಕೇಳಿ #AskGretaWhy” ಎಂದು ಬರೆದಿದ್ದಾರೆ. ಸೋಮವಾರದವರೆಗೆ 700 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಟ್ವೀಟ್ ಸಂಗ್ರಹಿಸಿದೆ.

ಟ್ವಿಟರ್ ಬಳಕೆದಾರ ಉಮೇಶ್‌ಸಿಂಗ್ ಎಂಬುವವರು ಇದನ್ನು ಬಹಿರಂಗಪಡಿಸಿದ್ದಕ್ಕಾಗಿ ಝೀ ನ್ಯೂಸ್‌ನ ಮುಖ್ಯ ಸಂಪಾದಕ ಸುಧೀರ್ ಚೌಧರಿಯವರಿಗೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ.

ಎರಡು ವಿಭಿನ್ನ ಫೋಟೊಗಳ ಕೊಲ್ಯಾಜ್!

ಆಲ್ಟ್ ನ್ಯೂಸ್ ಗೂಗಲ್‌ನಲ್ಲಿ ಸರಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ, ಸೆಪ್ಟೆಂಬರ್ 27, 2019 ರಂದು ಬ್ರಿಟಿಷ್ ಪತ್ರಿಕೆ ಮೆಟ್ರೊದಲ್ಲಿ ಲೇಖನವೊಂದರಲ್ಲಿ ಈ ಮೂಲ ಫೋಟೋ ಪ್ರಕಟವಾಗಿದೆ. ವೈರಲ್ ಚಿತ್ರಕ್ಕಿಂತ ಭಿನ್ನವಾಗಿ, ಈ ಫೋಟೋ ಕಿಟಕಿಯ ಹೊರಗೆ ಮರಗಳನ್ನು ತೋರಿಸುತ್ತದೆ ಮತ್ತು ಮಕ್ಕಳ ಗುಂಪನ್ನಲ್ಲ. ಆದ್ದರಿಂದ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವ ಚಿತ್ರವನ್ನು ಎಡಿಟ್‌ ಮಾಡಲಾಗಿದೆ ಎಂಬುದು ಸ್ಪಷ್ಟ. ಚಿತ್ರವನ್ನು ಡೆನ್ಮಾರ್ಕ್‌ನಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಅದರ ಜೊತೆಗಿನ ಲೇಖನವು ಹೇಳುತ್ತದೆ.
ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಪುತ್ರ ಎಡ್ವರ್ಡೊ ಬೋಲ್ಸನಾರೊ ಅವರು ಕೂಡ ಎಡಿಟೆಡ್ ಚಿತ್ರವನ್ನು ಹಂಚಿಕೊಂಡಿದ್ದಾರೆ ಎಂದು ಅದು ಹೇಳುತ್ತದೆ.

ಥನ್ಬರ್ಗ್ ಸ್ವತಃ ಮೂಲ ಫೋಟೋವನ್ನು ಜನವರಿ 22, 2019 ರಂದು ಪೋಸ್ಟ್ ಮಾಡಿದ್ದರು. ಇನ್ನು ಆ ಬಡ ಮಕ್ಕಳ ಛಾಯಾಚಿತ್ರವು ಆಗಸ್ಟ್ 23, 2007 ರ ರಾಯಿಟರ್ಸ್ ಲೇಖನದಲ್ಲಿ ಕಂಡುಬಂದಿದೆ. ಇದನ್ನು ರಾಯಿಟರ್ಸ್ ಛಾಯಾಗ್ರಾಹಕ ಸ್ಟೆಫನಿ ಹ್ಯಾನ್ಕಾಕ್ ಆಫ್ರಿಕಾದಲ್ಲಿ ಚಿತ್ರೀಕರಿಸಿದ್ದಾರೆ. ಲೇಖನವು ಮಧ್ಯ ಆಫ್ರಿಕಾದಲ್ಲಿ ಆಂತರಿಕ ಯುದ್ಧದ ಸಮಯದಲ್ಲಿ ಹಳ್ಳಿಗಳನ್ನು ಬಿಟ್ಟು ಕಾಡುಗಳಿಗೆ ತೆರಳಿದ ಜನರ ಬಗ್ಗೆ ವಿವರಿಸುತ್ತದೆ.

ಅಲ್ಟ್ ನ್ಯೂಸ್‌ ಫ್ಯಾಕ್ಟ್‌ಚೆಕ್ ಲೇಖನದಲ್ಲಿ ಥನ್‌ಬರ್ಗ್‌ಳ ಫೋಟೋವನ್ನು ವಿವಿಧ ರೀತಿಯಲ್ಲಿ ಎಡಿಟ್ ಮಾಡಿ, 2019 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ಕಂಡುಕೊಳ್ಳಲಾಗಿದೆ.

ರೈಲು ಪ್ರಯಾಣದ ಸಮಯದಲ್ಲಿ ಗ್ರೆಟಾ ಥನ್‌ಬರ್ಗ್ ಆಹಾರ ಹೊಂದಿರುವ ಫೋಟೋವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಲಾಗಿದೆ. ಈ ಚಿತ್ರವನ್ನು 2019 ರಿಂದ ಎಡಿಟ್ ಮಾಡಿ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಲಾಗುತ್ತಿದೆ.

ದಿಶಾ ಮತ್ತು 5-7 ಲಕ್ಷ ಲಾಯರ್ ಫೀಸು!

ದಿಶಾ ರವಿಯವರ ಬಗ್ಗೆಯೂ ಇಂತಹ ಸುಳ್ಳು ಪ್ರಚಾರ ನಡೆದಿವೆ. ಅವರು ಕ್ರಿಶ್ಚಿಯನ್ (ಆಕಸ್ಮಾತ್ ಆಗಿದ್ದರೆ ಅದರಲ್ಲೇನು ತಪ್ಪು?) ಎಂದು ಸುಳ್ಳು ಹರಡಲಾಗಿತ್ತು. ವಕೀಲ ಅಖಿಲ್ ಸಿಬಲ್ ಅವರಿಗೆ ಒಮ್ಮೆ ಕೋರ್ಟಿಗೆ ಹಾಜರಾಗಲು ದಿಶಾ 5-7 ಲಕ್ಷ ರೂ ಫೀಸು ಕೊಡುತ್ತಿದ್ದಾರೆ, ಯಾರು ಈ ಫೀಸ್ ತುಂಬುತ್ತಿರುವುದು ಎಂದೆಲ್ಲ ಸುಲ್ಳು ಹರಡಲಾಗಿತ್ತು. ಆದರೆ ಸತ್ಯ ಏನೆಂದರೆ, ಅಖಿಲ್ ಸಿಬಲ್ ದಿಶಾ ವಕೀಲೆ ವೃಂದಾ ಭಂಡಾರಿ ಅವರ ಮನವಿಯ ಮೇರೆಗೆ ಮೀಡಿಯಾ ವರ್ತನೆಗೆ ಸಂಬಂಧಿಸಿದ ಎರಡು ವಿಚಾರಣೆಗಳಿಗೆ ಮಾತ್ರ ಹಾಜರಾಗಿದ್ದು, ಇದಕ್ಕಾಗಿ ಅವರು ಯಾವುದೇ ಫೀಸು ಪಡೆದಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...