Homeಅಂಕಣಗಳುಚುನಾವಣೆ ನಂತವೂ ಪ್ರಜಾತಂತ್ರ ಉಳಿಯಲಿ

ಚುನಾವಣೆ ನಂತವೂ ಪ್ರಜಾತಂತ್ರ ಉಳಿಯಲಿ

- Advertisement -
- Advertisement -

ನಮ್ಮ ಪತ್ರಿಕೆ ನಿಮ್ಮ ಕೈ ಸೇರುವ ವೇಳೆಗೆ ಕರ್ನಾಟಕದ ಮೊದಲ ಸುತ್ತಿನ ಚುನಾವಣೆ ಮತ್ತು ದೇಶದ ಎರಡನೇ ಸುತ್ತಿನ ಚುನಾವಣೆ ಮುಗಿದಿರುತ್ತದೆ. ಹಾಗೆಯೇ ಮುಂದಿನ ಸುತ್ತಿನ ಚುನಾವಣೆಗೆ ದೇಶ ಎದುರು ನೋಡುತ್ತಿರುತ್ತದೆ. ಹೆಚ್ಚು ಜನ ಮತಗಟ್ಟೆಗೆ ಹೋಗಿ ಮತ ಚಲಾಯಿಸುವಂತೆ ಚುನಾವಣಾ ಆಯೋಗ ವಿವಿಧ ಜನ ಸಂಘಟನೆಗಳ ಸಹಯೋಗದಿಂದ ಜನರ ಮನಸ್ಸನ್ನು ಒಲಿಸುವ ಕೆಲಸವನ್ನು ಈ ಬಾರಿ ಹಿಂದೆಂದಿಗಿಂತಲೂ ಭರದಿಂದ ಕೈಗೆತ್ತಿಕೊಂಡಿದೆ. ಹೆಚ್ಚು ಜನ ಮತ ಚಲಾಯಿಸಿದಷ್ಟೂ ನಮ್ಮ ಪ್ರಜಾಪ್ರಭುತ್ವ ಹೆಚ್ಚು ಗಟ್ಟಿಯಾಗುತ್ತದೆ; ಅದು ಪ್ರಜಾತಂತ್ರಕ್ಕೆ ಸಂದ ವಿಜಯ ಎಂಬಂತೆ ಈ ಪ್ರಚಾರ ಸಾಗುತ್ತಿದೆ. ಯಾವುದೇ ಆಮಿಷ, ಬೆದರಿಕೆಗೆ ಒಳಗಾಗದೆ ಮತ ಚಲಾಯಿಸುವಂತೆ ಮಾಡಲು ಈ ಪ್ರಯತ್ನ ಸ್ವಾಗತಾರ್ಹವೇ. ಹಾಗೆಯೇ ‘ಒಳ್ಳೆಯ’ ಅಭ್ಯರ್ಥಿಯನ್ನು ಗೆಲ್ಲಿಸಿ ಎಂಬ ಘೋಷವಾಕ್ಯವೂ ಈ ಪ್ರÀಚಾರದಲ್ಲಿ ಸೇರಿದೆ. ಮತ ಚಲಾವಣೆ ಒಂದು ಹಕ್ಕು ಮಾತ್ರವಲ್ಲ ಅದು ಕರ್ತವ್ಯ ಕೂಡ. ಒಂದು ಆಶಯವಾಗಿ ಇವೆಲ್ಲವೂ ಸರಿಯೇ ಆದರೂ ಇದು ಕೆಲವು ಮುಖ್ಯ ಪ್ರಶ್ನೆಗಳನ್ನು ನಮ್ಮ ಮುಂದಿಡುತ್ತದೆ.
ಒಂದು, ಇಡೀ ಪ್ರಜಾಪ್ರಭುತ್ವವನ್ನೇ ಚುನಾವಣಾ ಪ್ರಕ್ರಿಯೆಗೆ ಸಮೀಕರಿಸುವುದಕ್ಕೆ ಸಂಬಂಧಪಟ್ಟಿದ್ದು. ಇಂದು ಭಾರತ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಎಂದು ಹೇಳಿಕೊಳ್ಳಲು ಚುನಾವಣೆಗಳನ್ನು ಕಾಲಕ್ಕೆ ಸರಿಯಾಗಿ ನಡೆಸುವುದನ್ನೇ ಆಧಾರವಾಗಿಟ್ಟುಕೊಳ್ಳಲಾಗುತ್ತಿದೆ. ಹೀಗಾಗಿ ಇಲ್ಲಿ ಪ್ರಜಾಪ್ರಭುತ್ವದ ಉಳಿವು-ಬೆಳವಣಿಗೆಗೆ ಚುನಾವಣೆಗಳನ್ನೇ ಕಾರಣವಾಗಿಸುವ ಒಂದು ಪ್ರಯತ್ನವಿದೆ. ಚುನಾವಣೆಗಳು ಪ್ರಜಾತಂತ್ರದ ಮುಖ್ಯ ಅಂಗ ನಿಜ. ಆದರೆ ಅದೇ ಅದರ ಜೀವಾಳವಲ್ಲ. ಯಾಕೆಂದರೆ ಇದೇ ಚುನಾವಣೆಯ ಪ್ರಕ್ರಿಯೆಯ ಮೂಲಕವೇ, ಅದನ್ನು ಬಳಸಿಕೊಂಡೇ, ಆಳುವ ರಾಜಕೀಯ ಪಕ್ಷಗಳು ಅಪ್ರಜಾತಾಂತ್ರಿಕವಾದ ಕಾನೂನುಗಳನ್ನು ಮತ್ತು ಅಚರಣೆಗಳನ್ನು ಜಾರಿ ಮಾಡಿರುವುದನ್ನು ನಾವು ಕಂಡಿದ್ದೇವೆ. ಈಗ ಭಾರತದಲ್ಲಿರುವ ರಾಜಕೀಯ ಪರಿಸ್ಥಿತಿಯನ್ನು ನೋಡಿದರೆ ಮುಂದೆ ಇದು ಇನ್ನೂ ಹೆಚ್ಚಾಗುವ ಸಂಭವವೇ ಜಾಸ್ತಿ. ಹೀಗಾಗಿ ಹೆಚ್ಚು ಜನ ಮತ ಚಲಾಯಿಸುವುದನ್ನೇ ಪ್ರಜಾಪ್ರಭಯತ್ವದ ದಿಗ್ವಿಜಯ ಎಂದು ಹೇಳಲಾಗದು. ಚುನಾವಣೆಯನ್ನು ಅಧಿಕಾರಕ್ಕೆ ಬರುವ ಮಾರ್ಗ ಎಂದು ಮಾತ್ರ ಭಾವಿಸುವ ಆಳುವ ಪಕ್ಷಗಳೂ ಕೂಡ ಚುನಾವಣೆಯನ್ನೇ ಪ್ರಜಾಪ್ರಭುತ್ವದ ಒಂದು short hand ಆಗಿ ಭಾವಿಸುತ್ತವೆ. ‘ಯಾರು ಬಂದರೂ ರಾಗಿ ಬೀಸುವುದು ತಪ್ಪದು’ ಎಂಬ ನಿತ್ಯ ಸತ್ಯದ ಗೊಣಗಾಟದಲ್ಲಿ ಮತದಾರರು ತಮ್ಮ ಯಾವತ್ತೂ ಜೀವನಕ್ಕೆ ಮರಳಿದರೆ, ಗೆದ್ದ ಹುರಿಯಾಳುಗಳು ಇನೈದು ವರ್ಷ ಯಾರ ಮುಂದೆಯೂ ಕೈ ಚಾಚ ಬೇಕಿಲ್ಲ ಎಂಬ ಹಮ್ಮಿನೊಂದಿಗೆ ಅಧಿಕಾರ ಹಿಡಿಯುತ್ತಾರೆ. ಮತ್ತೆ ಇನ್ನೊಂದು ಚುನಾವಣೆ ಬರುವವರೆಗೂ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತದೆ.
ಇನ್ನು ‘ಒಳ್ಳೆಯ ವ್ಯಕ್ತಿ’ಯನ್ನು ಗೆಲ್ಲಿಸುವ ವಿಚಾರ. ಚುನಾವಣಾ ಕಣದಲ್ಲಿ ‘ಒಳ್ಳೆಯ ವ್ಯಕ್ತಿ’ಗಳು ಕಾಣಿಸಿಕೊಳ್ಳುವುದೇ ಅಪರೂಪ. ಹೀಗಿರುವಾಗ ಕುರುಡರ ಪೈಕಿ ಮೇಲುಗಣ್ಣರನ್ನು ಆಯುವುದಷ್ಟೇ ಮತದಾರರ ಮುಂದಿರುವ ಆಯ್ಕೆ. ‘ಒಳ್ಳೆಯ ವ್ಯಕ್ತಿ’ ಯಾರು ಎಂದು ನಿರ್ಧರಿಸುವುದಕ್ಕೆ ಆಗದಹಾಗೆ ನಮ್ಮ ಚುನಾವಣಾ ಪ್ರಕ್ರಿಯೆ ಸಜ್ಜುಗೊಂಡಿದೆ. ಹಣವಿರದ ಆದರೆ ಜನಪರ ಕಾಳಜಿ ಇರುವ ಹಾಗೂ ಜನರೊಂದಿಗೆ ಹೋರಾಟದಲ್ಲಿ ತೊಡಗಿರುವ ವ್ಯಕ್ತಿಗಳು ಗೆದ್ದು ಬರಲು ಸಾಧ್ಯವೇ ಇಲ್ಲದ ಹಾಗೆ ಚುನಾವಣಾ ಸ್ವರೂಪವನ್ನು ರಚಿಸಲಾಗಿದೆ. ಇಷ್ಟಾದರೂ ಕಷ್ಟಪಟ್ಟು ಪಕ್ಷೇತರರಾಗಿ ಚುನಾವಣೆಗೆ ನಿಂತ ಹ¯ವಾರು ಖ್ಯಾತನಾಮರು ಠೇವಣಿ ಕಳೆದುಕೊಂಡಿರುವುದೇ ಹೆಚ್ಚು. ಹಣ ಇರುವವರು ಮಾತ್ರ ಚುನಾವಣೆಗೆ ನಿಲ್ಲುವಂಥ ಪರಿಸ್ಥಿತಿಯನ್ನು ಸೃಷ್ಟಿಸಿರುವುದೇ ನಮ್ಮ ಪ್ರಜಾತಂತ್ರದ ದೋಷಗಳಲ್ಲಿ ಒಂದು. ಇಷ್ಟಾದರೂ, ಹಣ-ಜಾತಿ ಆಮಿಷಗಳ ನಡುವೆಯೂ, ಜನ ತೀರಾ ಸಿನಿಕರಾಗದೆ ಮತ ಚಲಾಯಿಸಿಕೊಂಡು ಬಂದಿದ್ದಾರೆ. ಆಳುವ ಪಕ್ಷಗಳನ್ನು ಬದಲಾಯಿಸಿದ್ದಾರೆ. ಒಟ್ಟಾರೆಯಾಗಿ ಚುನಾವಣೆಗಳು ಒಂದು ಸ್ಥೂಲ ಅರ್ಥದಲ್ಲಿ ಜನಾಭಿಪ್ರಾಯದ ಸೂಚನೆಯಾಗಿದೆ. ಆದರೆ ಇವೇ ಚುನಾವಣೆಗಳ ಮೂಲಕವೇ ಮೋದಿಯಂಥವರು ಗೆದ್ದು ಬರಲು ಸಾಧ್ಯವಾಗಿದೆ. ಗೆದ್ದವರು ಐದು ವರ್ಷಗಳ ಕಾಲ ಎಲ್ಲಾ ರಂಗಗಳಲ್ಲೂ ತೀವ್ರ ವೈಫಲ್ಯ ಕಂಡಾಗಲೂ, ವಿರೋಧಿ ಅಲೆ ಎಷ್ಟಿರಬೇಕಿತ್ತೋ ಅಷ್ಟಿಲ್ಲದೇ ಹೋಗಲು ಕಾರಣಗಳಿರಬಹುದು, ಆದರೆ ವಾಸ್ತವ.
ಚುನಾವಣೆಯಲ್ಲಿ ಮತ ಚಲಾಯಿಸುವುದು ಜನರ ಹಕ್ಕು ಮತ್ತು ಕರ್ತವ್ಯ ಸರಿ. ಆದರೆ ಮತ ಚಲಾವಣೆಯಲ್ಲಿ ಭಾಗವಹಿಸದವರು ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆಯೇ? ಅಥವಾ ತಾವು ಮತ ಹಾಕಿದ ಪಕ್ಷ/ವ್ಯಕ್ತಿ ಸೋತುಹೋದರೆ, ತಾವು ಮತಹಾಕದ ಸಂಸದ/ ಶಾಸಕರುಗಳಲ್ಲಿ ನಮ್ಮ ಬೇಡಿಕೆಗಳನ್ನು ಇಟ್ಟು ಹೋರಾಟ ಮಾಡಬಾರದೆ? ಪ್ರಜಾತಂತ್ರದಲ್ಲಿ ಎಷ್ಟೇ ಮತದ ಅಂತರದಿಂದ ಗೆದ್ದರೂ ಆ ಗೆದ್ದ ವ್ಯಕ್ತಿ/ಪಕ್ಷ ಎಲ್ಲರನ್ನೂ- ತಮ್ಮ ವಿರೋಧಿಗಳನ್ನೂ ಒಳಗೊಂಡಂತೆ – ಪ್ರತಿನಿಧಿಸುವುದು ಪ್ರಜಾತಂತ್ರದ ಅವಿಭಾಜ್ಯ ಅಂಗ. ನಮ್ಮ ಆಳುವ ಪಕ್ಷ/ವ್ಯಕ್ತಿಗಳಲ್ಲಿ ಈ ಭಾವನೆ ಮೂಡುವವರೆಗೂ ಪ್ರಜಾತಂತ್ರ ಗಟ್ಟಿಯಾಗುವುದಿಲ್ಲ.
ಹೀಗಾಗಿ ಚುನಾವಣೆಗಳು ಪ್ರತಿನಿಧಿಗಳನ್ನು ಆಯುವ ಪ್ರಕ್ರಿಯೆಯೇ ಹೊರತು ಪ್ರಾತಿನಿಧ್ಯವನ್ನೇ ಮೊಟಕುಗೊಳಿಸುವ ಸಾಧನ ಅಲ್ಲ; ಆಗಬಾರದು. ಈ ಪ್ರಾತಿನಿಧ್ಯದ ಹಕ್ಕನ್ನು ಎಲ್ಲ ಪ್ರಜೆಗಳು, ಮತ ಚಲಾಯಿಸದವರೂ ಸೇರಿದಂತೆ, ಹೊಂದಿರುತ್ತಾರೆ. ಆದರೆ ಈ ಪ್ರಾತಿನಿಧ್ಯ ಹಾಗೆಯೇ ಒದಗಿ ಬರುವುದಿಲ್ಲ. ಅದಕ್ಕೆ ಸದಾಕಾಲ ಎಚ್ಚರದಿಂದ ಇರುವ ಮತ್ತು ಇದು ನಮ್ಮದೇ ಪ್ರಭುತ್ವ ಎಂಬ ಜಾಗೃತಿ ಇರುವ ಪ್ರಜೆಗಳು ಒಟ್ಟಾಗಿ ಹೋರಾಡಬೇಕಾಗುತ್ತದೆ. ಇದು ಚುನಾವಣೆಯ ನಂತರವೂ ಪ್ರಜಾತಂತ್ರವನ್ನ ಉಳಿಸಿಕೊಳ್ಳಲು ಅಗತ್ಯವಾದ ಪ್ರಕ್ರಿಯೆ. ಈ ಬಾರಿಯ ಚುನಾವಣೆಗಳ ನಂತರ ಪ್ರಜಾತಾಂತ್ರಿಕ ಹೋರಾಟದ ಅವಶ್ಯಕತೆ ಇನ್ನೂ ಹೆಚ್ಚಾಗಲಿದೆ. ಪ್ರಜಾಪ್ರಭುತ್ವವನ್ನು ಕಡೆÀಗೂ ಕಾಪಾಡುವುದು ಜನರೇ ಹೊರತು ಇಂಥ ಚುನಾವಣೆಗಳಲ್ಲ. ಇದಕ್ಕೆ ಸಜ್ಜಾಗುವುದೊಂದೇ ನಮ್ಮ ಮುಂದಿರುವ ನಿಜವಾದ ಆಯ್ಕೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...