Homeಅಂಕಣಗಳುಚುನಾವಣೆ ನಂತವೂ ಪ್ರಜಾತಂತ್ರ ಉಳಿಯಲಿ

ಚುನಾವಣೆ ನಂತವೂ ಪ್ರಜಾತಂತ್ರ ಉಳಿಯಲಿ

- Advertisement -
- Advertisement -

ನಮ್ಮ ಪತ್ರಿಕೆ ನಿಮ್ಮ ಕೈ ಸೇರುವ ವೇಳೆಗೆ ಕರ್ನಾಟಕದ ಮೊದಲ ಸುತ್ತಿನ ಚುನಾವಣೆ ಮತ್ತು ದೇಶದ ಎರಡನೇ ಸುತ್ತಿನ ಚುನಾವಣೆ ಮುಗಿದಿರುತ್ತದೆ. ಹಾಗೆಯೇ ಮುಂದಿನ ಸುತ್ತಿನ ಚುನಾವಣೆಗೆ ದೇಶ ಎದುರು ನೋಡುತ್ತಿರುತ್ತದೆ. ಹೆಚ್ಚು ಜನ ಮತಗಟ್ಟೆಗೆ ಹೋಗಿ ಮತ ಚಲಾಯಿಸುವಂತೆ ಚುನಾವಣಾ ಆಯೋಗ ವಿವಿಧ ಜನ ಸಂಘಟನೆಗಳ ಸಹಯೋಗದಿಂದ ಜನರ ಮನಸ್ಸನ್ನು ಒಲಿಸುವ ಕೆಲಸವನ್ನು ಈ ಬಾರಿ ಹಿಂದೆಂದಿಗಿಂತಲೂ ಭರದಿಂದ ಕೈಗೆತ್ತಿಕೊಂಡಿದೆ. ಹೆಚ್ಚು ಜನ ಮತ ಚಲಾಯಿಸಿದಷ್ಟೂ ನಮ್ಮ ಪ್ರಜಾಪ್ರಭುತ್ವ ಹೆಚ್ಚು ಗಟ್ಟಿಯಾಗುತ್ತದೆ; ಅದು ಪ್ರಜಾತಂತ್ರಕ್ಕೆ ಸಂದ ವಿಜಯ ಎಂಬಂತೆ ಈ ಪ್ರಚಾರ ಸಾಗುತ್ತಿದೆ. ಯಾವುದೇ ಆಮಿಷ, ಬೆದರಿಕೆಗೆ ಒಳಗಾಗದೆ ಮತ ಚಲಾಯಿಸುವಂತೆ ಮಾಡಲು ಈ ಪ್ರಯತ್ನ ಸ್ವಾಗತಾರ್ಹವೇ. ಹಾಗೆಯೇ ‘ಒಳ್ಳೆಯ’ ಅಭ್ಯರ್ಥಿಯನ್ನು ಗೆಲ್ಲಿಸಿ ಎಂಬ ಘೋಷವಾಕ್ಯವೂ ಈ ಪ್ರÀಚಾರದಲ್ಲಿ ಸೇರಿದೆ. ಮತ ಚಲಾವಣೆ ಒಂದು ಹಕ್ಕು ಮಾತ್ರವಲ್ಲ ಅದು ಕರ್ತವ್ಯ ಕೂಡ. ಒಂದು ಆಶಯವಾಗಿ ಇವೆಲ್ಲವೂ ಸರಿಯೇ ಆದರೂ ಇದು ಕೆಲವು ಮುಖ್ಯ ಪ್ರಶ್ನೆಗಳನ್ನು ನಮ್ಮ ಮುಂದಿಡುತ್ತದೆ.
ಒಂದು, ಇಡೀ ಪ್ರಜಾಪ್ರಭುತ್ವವನ್ನೇ ಚುನಾವಣಾ ಪ್ರಕ್ರಿಯೆಗೆ ಸಮೀಕರಿಸುವುದಕ್ಕೆ ಸಂಬಂಧಪಟ್ಟಿದ್ದು. ಇಂದು ಭಾರತ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಎಂದು ಹೇಳಿಕೊಳ್ಳಲು ಚುನಾವಣೆಗಳನ್ನು ಕಾಲಕ್ಕೆ ಸರಿಯಾಗಿ ನಡೆಸುವುದನ್ನೇ ಆಧಾರವಾಗಿಟ್ಟುಕೊಳ್ಳಲಾಗುತ್ತಿದೆ. ಹೀಗಾಗಿ ಇಲ್ಲಿ ಪ್ರಜಾಪ್ರಭುತ್ವದ ಉಳಿವು-ಬೆಳವಣಿಗೆಗೆ ಚುನಾವಣೆಗಳನ್ನೇ ಕಾರಣವಾಗಿಸುವ ಒಂದು ಪ್ರಯತ್ನವಿದೆ. ಚುನಾವಣೆಗಳು ಪ್ರಜಾತಂತ್ರದ ಮುಖ್ಯ ಅಂಗ ನಿಜ. ಆದರೆ ಅದೇ ಅದರ ಜೀವಾಳವಲ್ಲ. ಯಾಕೆಂದರೆ ಇದೇ ಚುನಾವಣೆಯ ಪ್ರಕ್ರಿಯೆಯ ಮೂಲಕವೇ, ಅದನ್ನು ಬಳಸಿಕೊಂಡೇ, ಆಳುವ ರಾಜಕೀಯ ಪಕ್ಷಗಳು ಅಪ್ರಜಾತಾಂತ್ರಿಕವಾದ ಕಾನೂನುಗಳನ್ನು ಮತ್ತು ಅಚರಣೆಗಳನ್ನು ಜಾರಿ ಮಾಡಿರುವುದನ್ನು ನಾವು ಕಂಡಿದ್ದೇವೆ. ಈಗ ಭಾರತದಲ್ಲಿರುವ ರಾಜಕೀಯ ಪರಿಸ್ಥಿತಿಯನ್ನು ನೋಡಿದರೆ ಮುಂದೆ ಇದು ಇನ್ನೂ ಹೆಚ್ಚಾಗುವ ಸಂಭವವೇ ಜಾಸ್ತಿ. ಹೀಗಾಗಿ ಹೆಚ್ಚು ಜನ ಮತ ಚಲಾಯಿಸುವುದನ್ನೇ ಪ್ರಜಾಪ್ರಭಯತ್ವದ ದಿಗ್ವಿಜಯ ಎಂದು ಹೇಳಲಾಗದು. ಚುನಾವಣೆಯನ್ನು ಅಧಿಕಾರಕ್ಕೆ ಬರುವ ಮಾರ್ಗ ಎಂದು ಮಾತ್ರ ಭಾವಿಸುವ ಆಳುವ ಪಕ್ಷಗಳೂ ಕೂಡ ಚುನಾವಣೆಯನ್ನೇ ಪ್ರಜಾಪ್ರಭುತ್ವದ ಒಂದು short hand ಆಗಿ ಭಾವಿಸುತ್ತವೆ. ‘ಯಾರು ಬಂದರೂ ರಾಗಿ ಬೀಸುವುದು ತಪ್ಪದು’ ಎಂಬ ನಿತ್ಯ ಸತ್ಯದ ಗೊಣಗಾಟದಲ್ಲಿ ಮತದಾರರು ತಮ್ಮ ಯಾವತ್ತೂ ಜೀವನಕ್ಕೆ ಮರಳಿದರೆ, ಗೆದ್ದ ಹುರಿಯಾಳುಗಳು ಇನೈದು ವರ್ಷ ಯಾರ ಮುಂದೆಯೂ ಕೈ ಚಾಚ ಬೇಕಿಲ್ಲ ಎಂಬ ಹಮ್ಮಿನೊಂದಿಗೆ ಅಧಿಕಾರ ಹಿಡಿಯುತ್ತಾರೆ. ಮತ್ತೆ ಇನ್ನೊಂದು ಚುನಾವಣೆ ಬರುವವರೆಗೂ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತದೆ.
ಇನ್ನು ‘ಒಳ್ಳೆಯ ವ್ಯಕ್ತಿ’ಯನ್ನು ಗೆಲ್ಲಿಸುವ ವಿಚಾರ. ಚುನಾವಣಾ ಕಣದಲ್ಲಿ ‘ಒಳ್ಳೆಯ ವ್ಯಕ್ತಿ’ಗಳು ಕಾಣಿಸಿಕೊಳ್ಳುವುದೇ ಅಪರೂಪ. ಹೀಗಿರುವಾಗ ಕುರುಡರ ಪೈಕಿ ಮೇಲುಗಣ್ಣರನ್ನು ಆಯುವುದಷ್ಟೇ ಮತದಾರರ ಮುಂದಿರುವ ಆಯ್ಕೆ. ‘ಒಳ್ಳೆಯ ವ್ಯಕ್ತಿ’ ಯಾರು ಎಂದು ನಿರ್ಧರಿಸುವುದಕ್ಕೆ ಆಗದಹಾಗೆ ನಮ್ಮ ಚುನಾವಣಾ ಪ್ರಕ್ರಿಯೆ ಸಜ್ಜುಗೊಂಡಿದೆ. ಹಣವಿರದ ಆದರೆ ಜನಪರ ಕಾಳಜಿ ಇರುವ ಹಾಗೂ ಜನರೊಂದಿಗೆ ಹೋರಾಟದಲ್ಲಿ ತೊಡಗಿರುವ ವ್ಯಕ್ತಿಗಳು ಗೆದ್ದು ಬರಲು ಸಾಧ್ಯವೇ ಇಲ್ಲದ ಹಾಗೆ ಚುನಾವಣಾ ಸ್ವರೂಪವನ್ನು ರಚಿಸಲಾಗಿದೆ. ಇಷ್ಟಾದರೂ ಕಷ್ಟಪಟ್ಟು ಪಕ್ಷೇತರರಾಗಿ ಚುನಾವಣೆಗೆ ನಿಂತ ಹ¯ವಾರು ಖ್ಯಾತನಾಮರು ಠೇವಣಿ ಕಳೆದುಕೊಂಡಿರುವುದೇ ಹೆಚ್ಚು. ಹಣ ಇರುವವರು ಮಾತ್ರ ಚುನಾವಣೆಗೆ ನಿಲ್ಲುವಂಥ ಪರಿಸ್ಥಿತಿಯನ್ನು ಸೃಷ್ಟಿಸಿರುವುದೇ ನಮ್ಮ ಪ್ರಜಾತಂತ್ರದ ದೋಷಗಳಲ್ಲಿ ಒಂದು. ಇಷ್ಟಾದರೂ, ಹಣ-ಜಾತಿ ಆಮಿಷಗಳ ನಡುವೆಯೂ, ಜನ ತೀರಾ ಸಿನಿಕರಾಗದೆ ಮತ ಚಲಾಯಿಸಿಕೊಂಡು ಬಂದಿದ್ದಾರೆ. ಆಳುವ ಪಕ್ಷಗಳನ್ನು ಬದಲಾಯಿಸಿದ್ದಾರೆ. ಒಟ್ಟಾರೆಯಾಗಿ ಚುನಾವಣೆಗಳು ಒಂದು ಸ್ಥೂಲ ಅರ್ಥದಲ್ಲಿ ಜನಾಭಿಪ್ರಾಯದ ಸೂಚನೆಯಾಗಿದೆ. ಆದರೆ ಇವೇ ಚುನಾವಣೆಗಳ ಮೂಲಕವೇ ಮೋದಿಯಂಥವರು ಗೆದ್ದು ಬರಲು ಸಾಧ್ಯವಾಗಿದೆ. ಗೆದ್ದವರು ಐದು ವರ್ಷಗಳ ಕಾಲ ಎಲ್ಲಾ ರಂಗಗಳಲ್ಲೂ ತೀವ್ರ ವೈಫಲ್ಯ ಕಂಡಾಗಲೂ, ವಿರೋಧಿ ಅಲೆ ಎಷ್ಟಿರಬೇಕಿತ್ತೋ ಅಷ್ಟಿಲ್ಲದೇ ಹೋಗಲು ಕಾರಣಗಳಿರಬಹುದು, ಆದರೆ ವಾಸ್ತವ.
ಚುನಾವಣೆಯಲ್ಲಿ ಮತ ಚಲಾಯಿಸುವುದು ಜನರ ಹಕ್ಕು ಮತ್ತು ಕರ್ತವ್ಯ ಸರಿ. ಆದರೆ ಮತ ಚಲಾವಣೆಯಲ್ಲಿ ಭಾಗವಹಿಸದವರು ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆಯೇ? ಅಥವಾ ತಾವು ಮತ ಹಾಕಿದ ಪಕ್ಷ/ವ್ಯಕ್ತಿ ಸೋತುಹೋದರೆ, ತಾವು ಮತಹಾಕದ ಸಂಸದ/ ಶಾಸಕರುಗಳಲ್ಲಿ ನಮ್ಮ ಬೇಡಿಕೆಗಳನ್ನು ಇಟ್ಟು ಹೋರಾಟ ಮಾಡಬಾರದೆ? ಪ್ರಜಾತಂತ್ರದಲ್ಲಿ ಎಷ್ಟೇ ಮತದ ಅಂತರದಿಂದ ಗೆದ್ದರೂ ಆ ಗೆದ್ದ ವ್ಯಕ್ತಿ/ಪಕ್ಷ ಎಲ್ಲರನ್ನೂ- ತಮ್ಮ ವಿರೋಧಿಗಳನ್ನೂ ಒಳಗೊಂಡಂತೆ – ಪ್ರತಿನಿಧಿಸುವುದು ಪ್ರಜಾತಂತ್ರದ ಅವಿಭಾಜ್ಯ ಅಂಗ. ನಮ್ಮ ಆಳುವ ಪಕ್ಷ/ವ್ಯಕ್ತಿಗಳಲ್ಲಿ ಈ ಭಾವನೆ ಮೂಡುವವರೆಗೂ ಪ್ರಜಾತಂತ್ರ ಗಟ್ಟಿಯಾಗುವುದಿಲ್ಲ.
ಹೀಗಾಗಿ ಚುನಾವಣೆಗಳು ಪ್ರತಿನಿಧಿಗಳನ್ನು ಆಯುವ ಪ್ರಕ್ರಿಯೆಯೇ ಹೊರತು ಪ್ರಾತಿನಿಧ್ಯವನ್ನೇ ಮೊಟಕುಗೊಳಿಸುವ ಸಾಧನ ಅಲ್ಲ; ಆಗಬಾರದು. ಈ ಪ್ರಾತಿನಿಧ್ಯದ ಹಕ್ಕನ್ನು ಎಲ್ಲ ಪ್ರಜೆಗಳು, ಮತ ಚಲಾಯಿಸದವರೂ ಸೇರಿದಂತೆ, ಹೊಂದಿರುತ್ತಾರೆ. ಆದರೆ ಈ ಪ್ರಾತಿನಿಧ್ಯ ಹಾಗೆಯೇ ಒದಗಿ ಬರುವುದಿಲ್ಲ. ಅದಕ್ಕೆ ಸದಾಕಾಲ ಎಚ್ಚರದಿಂದ ಇರುವ ಮತ್ತು ಇದು ನಮ್ಮದೇ ಪ್ರಭುತ್ವ ಎಂಬ ಜಾಗೃತಿ ಇರುವ ಪ್ರಜೆಗಳು ಒಟ್ಟಾಗಿ ಹೋರಾಡಬೇಕಾಗುತ್ತದೆ. ಇದು ಚುನಾವಣೆಯ ನಂತರವೂ ಪ್ರಜಾತಂತ್ರವನ್ನ ಉಳಿಸಿಕೊಳ್ಳಲು ಅಗತ್ಯವಾದ ಪ್ರಕ್ರಿಯೆ. ಈ ಬಾರಿಯ ಚುನಾವಣೆಗಳ ನಂತರ ಪ್ರಜಾತಾಂತ್ರಿಕ ಹೋರಾಟದ ಅವಶ್ಯಕತೆ ಇನ್ನೂ ಹೆಚ್ಚಾಗಲಿದೆ. ಪ್ರಜಾಪ್ರಭುತ್ವವನ್ನು ಕಡೆÀಗೂ ಕಾಪಾಡುವುದು ಜನರೇ ಹೊರತು ಇಂಥ ಚುನಾವಣೆಗಳಲ್ಲ. ಇದಕ್ಕೆ ಸಜ್ಜಾಗುವುದೊಂದೇ ನಮ್ಮ ಮುಂದಿರುವ ನಿಜವಾದ ಆಯ್ಕೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...