Homeಮುಖಪುಟ‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಸೋಮವಾರ ಸಂವಿಧಾನ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಅಗತ್ಯ ಬಿದ್ದರೆ ಕಳೆದ ವರ್ಷ ಫೆಬ್ರವರಿ 23 ರಂದು ತಾವು ಮಾಡಿದ್ದನ್ನು “ಮತ್ತೆ” ಮಾಡುವುದಾಗಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಆಜ್ ಏಕ್ ಸಾಲ್ ಹೋ ಗಯಾ ಹೈ, ಇಸ್ಲಿಯೆ ಯೆ ಬಾತ್ ದೋಬಾರಾ ಬೊಲ್ನಾ ಚಾಹತಾ ಹೂ- ಫೆಬ್ರವರಿ 23 ಪಿಚ್ಲ್ ಸಾಲ್ ಜೋ ಕಿಯಾ, ಅಗರ್ ಜರೂರತ್ ಪಡೆ ತೋಹ್ ದೋಬಾರಾ ಕರ್ ಲುಂಗಾ (ಈಗ ಒಂದು ವರ್ಷವಾಯಿತು. ಅದಕ್ಕೆ ನಾನು ಈ ಮಾತನ್ನು ಮತ್ತೆ ಹೇಳಲು ಬಯಸುತ್ತೇನೆ. ಫೆಬ್ರವರಿ 23 ರಂದು ನಾನು ಮಾಡಿದ್ದನ್ನು ಮತ್ತೆ ಮಾಡುವ ಅವಶ್ಯಕತೆ ಬಿದ್ದರೆ, ನಾನು ಅದನ್ನು ಮತ್ತೆ ಮಾಡುತ್ತೇನೆ) ” ಎಂದು ಅವರು ಹೇಳಿದ್ದಾರೆ.

‘ದೆಹಲಿ ರಾಯಿಟ್ಸ್: ದಿ ಅನ್ಟೋಲ್ಡ್ ಸ್ಟೋರಿ’ ಪುಸ್ತಕದ ಲೇಖಕರೊಂದಿಗೆ ವೇದಿಕೆ ಹಂಚಿಕೊಂಡು ಮೇಲಿನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೇಬಲ್ ರತನ್ ಲಾಲ್ ಅವರನ್ನು ಉಳಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ಸರಿಯಾಗಿ ಒಂದು ವರ್ಷದ ಹಿಂದೆ ಫೆಬ್ರುವರಿ 23ರಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕಳೆದ ವರ್ಷ ಈಶಾನ್ಯ ದೆಹಲಿಯಲ್ಲಿ ಸಿಎಎ ಪರ ರ‍್ಯಾಲಿಯ ನೇತೃತ್ವ ವಹಿಸಿದ್ದರು ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಈ ಪ್ರದೇಶದಿಂದ ತೆರವುಗೊಳಿಸುವಂತೆ ಪೊಲೀಸರಿಗೆ ಎಚ್ಚರಿಕೆ ನೀಡಿದ್ದರು, ವಿಫಲವಾದರೆ ತಾವು ಬೀದಿಗೀಳಿಯ ಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲೇ ಪೊಲೀಸರಿಗೆ ವಾರ್ನಿಂಗ್ ಮಾಡಿದ್ದರು.

ಕಳೆದ ವರ್ಷ ಫೆಬ್ರವರಿ 23 ರಂದು ಅವರು ಟ್ವೀಟ್ ಮಾಡಿದ ವೀಡಿಯೊದಲ್ಲಿ, ಅವರು ಮೌಜ್ಪುರ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರವಾದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ ಮತ್ತು ಅವರು ಪೊಲೀಸರಿಗೆ ಎಚ್ಚರಿಕೆ ನೀಡಿದಾಗ ಡಿಸಿಪಿ (ಈಶಾನ್ಯ) ವೇದ ಪ್ರಕಾಶ್ ಸೂರ್ಯ ಅವರ ಪಕ್ಕದಲ್ಲೆ ನಿಂತಿದ್ದಾರೆ.

ಮರುದಿನ ಆ ಜಿಲ್ಲೆಯಲ್ಲಿ ಗಲಭೆ-ಹಿಂಸಾಚಾರ ಆರಂಭವಾಗಿ 53 ಮಂದಿ ಸಾವನ್ನಪ್ಪಿದ್ದರು.
“ಜಿಹಾದಿ ಪಡೆಗಳು ದೆಹಲಿಯಲ್ಲಿ ಗಲಭೆಗಳನ್ನು ರೂಪಿಸಿ ಒಂದು ವರ್ಷವಾಗಿದೆ. ಗಣರಾಜ್ಯೋತ್ಸವದಂದು ಏನಾಯಿತು ಎಂಬುದರಂತೆಯೇ ಈಗಲೂ ಅದೇ ಮಾದರಿಯನ್ನು ನೋಡಲಾಗುತ್ತಿದೆ. ವಿಧ್ವಂಸಕರು ಎಂದು ಕರೆಯಲ್ಪಡುವವರು ರಾಜಧಾನಿಯಲ್ಲಿ ಶಾಂತಿಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ, ಭಾರತದ ವಿರೋಧಿ ಪಡೆಗಳ ನೆರವು ಮತ್ತು ಧನಸಹಾಯವನ್ನು ದೇಶದ ಒಳಗೆ ಮತ್ತು ಹೊರಗಿನಿಂದ ಪಡೆಯುತ್ತಿದ್ದಾರೆ. ಮತ್ತು ‘ಪ್ರದರ್ಶನ್ ಸೆ ದಂಗಾ ತಕ್ (ಪ್ರತಿಭಟನೆಯಿಂದ ಗಲಭೆಗಳವರೆಗೆ)’ ಈ ಮಾದರಿ ತುಂಬಾ ಸ್ಪಷ್ಟವಾಗಿದೆ” ಎಂದು ಅವರು ಪರೋಕ್ಷವಾಗಿ ರೈತ ಪ್ರತಿಭಟನೆಯ ಮೇಲೆ ಆರೋಪ ಮಾಡಿದ್ದಾರೆ.

“ನಾವು ಗಲಭೆಯ ಹಿಂದೂ ಸಂತ್ರಸ್ತರಿಗೆ ಪ್ರತ್ಯೇಕವಾಗಿ ಸಹಾಯ ಮಾಡಿದ್ದೇವೆ. ತದನಂತರ ನಾವು ಇನ್ನೊಂದು ಬದಿಗೆ ಏಕೆ ಸಹಾಯ ಮಾಡುವುದಿಲ್ಲ ಎಂದು ಪ್ರಶ್ನಿಸಲಾಗಿತು. ವಕ್ಫ್ ಮಂಡಳಿ, ಇಡೀ ದೆಹಲಿ ಸರ್ಕಾರ ಅವರ ಹಿಂದೆ ನಿಂತಿದೆ. ಮಾಧ್ಯಮ, ಎನ್‌ಜಿಒಗಳು ಎಲ್ಲರೂ ಅವರೊಂದಿಗೆ ಇವೆ. ನಾವೇಕೆ ಸಹಾಯ ಮಾಡಬೇಕು ”ಎಂದು ಮಿಶ್ರಾ ಹೇಳಿದ್ದಾರೆ.

“ಈ ಪುಸ್ತಕವು ಗಲಭೆಯ ಸಂಚುಕೋರರ ಬಗ್ಗೆ ಬಹಳಷ್ಟು ಹೊಂದಿದೆ. ಆದ್ದರಿಂದ ನೀವು ನನ್ನ ಬಗ್ಗೆ ಪುಸ್ತಕದಲ್ಲಿ ಹೆಚ್ಚು ಕಾಣುವುದಿಲ್ಲ” ಎಂದು ಅವರು ನಗುತ್ತಾ ಹೇಳಿದರು.

ಈ ಪುಸ್ತಕವನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಮೋನಿಕಾ ಅರೋರಾ ಇತರ ಕೆಲವರೊಂದಿಗೆ ಸೇರಿ ಬರೆದಿದ್ದಾರೆ. ಕಳೆದ ವರ್ಷ ಬ್ಲೂಮ್ಸ್‌ಬರಿ ಪ್ರಕಟಣೆಯಿಂದ ಹೊರ ಹೋದ ನಂತರ ಇದನ್ನು ಗರುಡ ಪ್ರಕಾಶನ ಪ್ರಕಟಿಸಿದೆ.


ಇದನ್ನೂ ಓದಿ: ಆಪ್ ಮುಖಂಡರ ಮೇಲೆ ಆರೋಪ: ಬೇಷರತ್ ಕ್ಷಮೆ ಕೇಳಿದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...